Homeಮುಖಪುಟಶಾಂತವಾದ ಶಿವಮೊಗ್ಗ: ಬುಧವಾರ ಬೆಳಿಗ್ಗೆಯವರೆಗೂ 144 ಸೆಕ್ಷನ್ ಮುಂದುವರಿಕೆ

ಶಾಂತವಾದ ಶಿವಮೊಗ್ಗ: ಬುಧವಾರ ಬೆಳಿಗ್ಗೆಯವರೆಗೂ 144 ಸೆಕ್ಷನ್ ಮುಂದುವರಿಕೆ

- Advertisement -
- Advertisement -

ಬಜರಂಗದಳದ ಕಾರ್ಯಕರ್ತನ ಕೊಲೆ ಹಿನ್ನೆಲೆಯಲ್ಲಿ ಉದ್ವಿಗ್ನಗೊಂಡಿದ್ದ ಶಿವಮೊಗ್ಗದ ಪರಿಸ್ಥಿತಿ ಈಗ ಶಾಂತವಾಗಿದೆ. ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಬುಧವಾರ ಬೆಳಿಗ್ಗೆಯವರೆಗೂ 144 ಸೆಕ್ಷನ್ ಹೇರಲಾಗಿದೆ. ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ವ್ಯಾಪರ ವಹಿವಾಟು ಬಂದ್ ಆಗಿದೆ.

ಸೋಮವಾರ ಕೊಲೆ ಹಿನ್ನೆಲೆಯಲ್ಲಿ 144 ಸೆಕ್ಷನ್ ಹೇರಿದ್ದರೂ ಸಹ ಶವದ ಮೆರವಣಿಗೆಗೆ ಅವಕಾಶ ಕೊಟ್ಟಿದ್ದು, ಸಚಿವ ಈಶ್ವರಪ್ಪ ಮತ್ತು ಸಂಸದ ರಾಘವೇಂದ್ರ ಮೆರವಣಿಗೆಯ ನೇತೃತ್ವ ವಹಿಸಿದ್ದರಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಬಿಜೆಪಿ-ಆರ್‌ಎಸ್‌ಎಸ್‌ ಕಾರ್ಯಕರ್ತರು ಮುಸ್ಲಿಂ ಮಾಲಿಕತ್ವದ ಸುಮಾರು 300 ಅಂಗಡಿ-ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. 45 ಜನರ ಮೇಲೆ ಹಲ್ಲೆಯಾಗಿದ್ದು, ಇಬ್ಬರೂ ಪತ್ರಕರ್ತರು ಸಹ ಗಾಯಗೊಂಡಿದ್ದಾರೆ. ಶಿವಮೊಗ್ಗದ ಹಳೆ ಟೌನ್‌ನಲ್ಲಿ ದಾಂಧಲೆ ನಡೆಸಿ ಟೈರ್‌ಗಳಿಗೆ ಬೆಂಕಿ ಹಚ್ಚಿದ್ದರು. ಹಾಗಾಗಿ ಪರಿಸ್ಥಿತಿ ಕೈಮೀರಿ ಹೋಗಿತ್ತು. ಈ ಪೊಲೀಸ್ ವೈಫಲ್ಯದ ಕುರಿತು ಸಾರ್ವಜನಿಕರಿಂದ ತೀವ್ರ ಟೀಕೆ ಕೇಳಿಬಂದಿತ್ತು. ಆಡಳಿತ ಸರ್ಕಾರ ಬೇಕಂತಲೆ ಗಲಭೆಗೆ ಅವಕಾಶ ಮಾಡಿಕೊಡುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಲಾಗಿತ್ತು. ಸಚಿವ ಈಶ್ವರಪ್ಪ ಮತ್ತು ಸಂಸದ ರಾಘವೇಂದ್ರರವರು ಬೇಕಂತಲೆ ಪರಿಸ್ಥಿತಿ ಉದ್ವಿಗ್ವಗೊಳಿಸಿದರು. ಅವರು ಸುಮ್ಮನಿದ್ದರೆ ಈ ಅನಾಹುತ ತಡೆಯಬಹುದಿತ್ತು, ಅದೇ ಜಿಲ್ಲೆಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಸಹ ಇದಕ್ಕೆಲ್ಲ ಅವಕಾಶ ಕೊಡಬಾರದಿತ್ತು ಎಂಬ ಅಭಿಪ್ರಾಯಗಳು ಕೇಳಿಬಂದಿವೆ.

ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಬೇರೆ ಜಿಲ್ಲೆಗಳಿಂದ ಹೆಚ್ಚಿನ ಪೊಲೀಸ್ ಬಲ ಕರೆಸಿಕೊಂಡು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದೆ. ರ್ಯಾಪಿಡ್ ಆಕ್ಷನ್ ಫೋರ್ಸ್ ಶಿವಮೊಗ್ಗದಲ್ಲಿ ಬೀಡುಬಿಟ್ಟಿದೆ. ಶಾಲಾ-ಕಾಲೇಜುಗಳಿಗೆ ಮಂಗಳವಾರವೂ ರಜೆ ಮುಂದುವರೆಸಿದೆ. ಹಲವೆಡೆ ಚೆಕ್‌ ಪೋಸ್ಟ್‌ಗಳನ್ನು ನಿರ್ಮಿಸಲಾಗಿದ್ದು ಆಸ್ಪತ್ರೆ-ಔಷಧಿಯಂತಹ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

“ಕೊಲೆ ನಂತರ ನಡೆದಿರುವ ಹಿಂಸಾಚಾರದ ಬಗ್ಗೆ ಮಾಹಿತಿ ಕಲೆ ಹಾಕಿದ್ದೇವೆ. ಸುಮಾರು 13 ಸ್ಥಳಗಳಲ್ಲಿ ಅಹಿತಕರ ಘಟನೆಗಳು ನಡೆದಿವೆ. ಕೆಲವೆಡೆ ವಾಹನಗಳಿಗೆ ಬೆಂಕಿ ಹಾಕಿದ್ದು, ಸಂಪೂರ್ಣ ಭಸ್ಮಗೊಂಡಿವೆ. ಹಾಗಾಗಿ ವಾಹನ ಮಾಲೀಕರನ್ನು ಗುರುತಿಸುವ ಕೆಲಸ ನಡೆದಿದೆ. ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತೇವೆ, ಹಿಂಸಾಚಾರದಲ್ಲಿ ಭಾಗಿಯಾದವರನ್ನು ಬಂಧಿಸುತ್ತೇವೆ” ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬುಧವಾರ ಬೆಳಗಿನ ಜಾವ 6 ಗಂಟೆಯ ತನಕ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಸೆಲ್ಪಮಣಿ ಆದೇಶ ಹೊರಡಿಸಿದ್ದಾರೆ. ಜನರು ಶಾಂತ ರೀತಿಯಿಂದ ವರ್ತಿಸಬೇಕೆಂದು ಮನವಿ ಮಾಡಿದ್ದಾರೆ. ಇನ್ನೊಂದೆಡೆ ಪೊಲೀಸರು ತನಿಖಾ ಕಾರ್ಯದಲ್ಲಿ ನಿರತರಾಗಿದ್ದು, ಇದುವರೆಗೂ ಮೂವರನ್ನು ಬಂಧಿಸಿದ್ದಾರೆ.

ಕೊಲೆ ಪ್ರಕರಣದಲ್ಲಿ ಐವರು ಭಾಗಿಯಾಗಿದ್ದಾರೆಂಬ ಮಾಹಿತಿ ಇದೆ. ಶಿವಮೊಗ್ಗ ಬುದ್ಧನಗರದ ಖಾಸಿಫ್‌ (30), ಜೆಪಿ ನಗರದ ಸೈಯದ್ ನದೀಂ (20) ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಇತರ 12 ಮಂದಿಯನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

ಮೃತನ ಸಹೋದರಿ ಮಾಧ್ಯಮಗಳೊಂದಿಗೆ ಮಾತನಾಡಿರುವ ವಿಡಿಯೊ ವೈರಲ್ ಆಗಿದ್ದು, “ಹಿಂದೂ, ಹಿಂದುತ್ವ ಎಂದಿದ್ದಕ್ಕೆ ನನ್ನ ತಮ್ಮ ಆ ಪರಿಸ್ಥಿತಿಯಲ್ಲಿ ಬಿದ್ದಿದ್ದಾನೆ. ದಯವಿಟ್ಟು ಎಲ್ಲರೂ ಒಂದು ಸಲ ನೋಡಿ, ಎಲ್ಲಾ ನನ್ನ ಅಣ್ಣ-ತಮ್ಮಂದಿರಿಗೂ ಕೈಮುಗಿದು ಬೇಡಿಕೊಳ್ಳುತ್ತೇನೆ, ಮುಸ್ಲಿಂ, ಹಿಂದೂ ಎಲ್ಲಾ ಸಹೋದರರಿಗೆ ಬೇಡಿಕೊಳ್ಳುತ್ತೇನೆ. ನಿಮ್ಮ ಅಪ್ಪ ಅಮ್ಮನಿಗೆ ಒಳ್ಳೆಯ ಮಕ್ಕಳಾಗಿರಿ ಹೊರತು, ಇದನ್ನೆಲ್ಲ ಮಾಡಿಕೊಳ್ಳಲು ಹೋಗಬೇಡಿ” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ; ಹರ್ಷ ಕೊಲೆ ಪ್ರಕರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...