Homeದಲಿತ್ ಫೈಲ್ಸ್ದಲಿತ ಬಾಲಕ ದೇವರು ಮುಟ್ಟಿದ ಪ್ರಕರಣ: ಮನೆಯಲ್ಲಿ ದೇವರ ಫೋಟೋ ಇದ್ದ ಜಾಗದಲ್ಲಿ ಈಗ ಅಂಬೇಡ್ಕರ್‌...

ದಲಿತ ಬಾಲಕ ದೇವರು ಮುಟ್ಟಿದ ಪ್ರಕರಣ: ಮನೆಯಲ್ಲಿ ದೇವರ ಫೋಟೋ ಇದ್ದ ಜಾಗದಲ್ಲಿ ಈಗ ಅಂಬೇಡ್ಕರ್‌ ಭಾವಚಿತ್ರ

ವೆಂಕಟೇಶ್ವರನ ಫೋಟೋ ತೆರವು ಮಾಡಿ ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಫೋಟೋ ಇರಿಸುತ್ತಿರುವ ವಿಡಿಯೊ ವೈರಲ್ ಆಗಿದೆ.

- Advertisement -
- Advertisement -

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಉಳ್ಳೇರಹಳ್ಳಿಯಲ್ಲಿ ಗ್ರಾಮದೇವತೆ ಭೂತಮ್ಮನ ಮೆರವಣಿಗೆಯ ವೇಳೆ ದಲಿತ ಬಾಲಕ ದೇವರಿಗೆ ಸಂಬಂಧಿಸಿದ ಗುಜ್ಜಕೋಲನ್ನು ಮುಟ್ಟಿದನೆಂದು ಆರೋಪಿಸಿ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿದ ಘಟನೆ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ಸಂತ್ರಸ್ತ ಬಾಲಕನ ಕುಟುಂಬವು ತನ್ನ ಮನೆಯಲ್ಲಿದ್ದ ದೇವರ ಫೋಟೋಗಳನ್ನು ತೆರವು ಮಾಡಿದೆ.

ಘಟನೆಯ ಬಳಿಕ ಸ್ಥಳಕ್ಕೆ ಧಾವಿಸಿದ ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ (ಎಎಸ್‌ಎಸ್‌ಕೆ) ಸಂಘಟನೆಯ  ಯುವಕರು, ಕುಟುಂಬಕ್ಕೆ ಅರಿವು ಮೂಡಿಸಿದ್ದಾರೆ. “ನಿಮ್ಮ ಮನೆಯಲ್ಲಿ ಇರಬೇಕಾದದ್ದು ಈ ದೇವರ ಫೋಟೋಗಳಲ್ಲ. ನಿಮಗೆ ನ್ಯಾಯ ದೊರಕಿಸಿಕೊಟ್ಟ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋ” ಎಂದು ಹೇಳಿದ್ದಾರೆ.

ಸಿಮೆಂಟ್‌ ಕಲ್ಲಿನಿಂದ ನಿರ್ಮಿಸಲಾದ, ಇನ್ನೂ ಕಾಂಕ್ರೀಟ್ ಕಾಣದಿರುವ ಮನೆಯಲ್ಲಿ ಪುಟ್ಟ ಬಾಲಕನೊಂದಿಗೆ ದಂಪತಿ ಶೋಭಾ ಹಾಗೂ ರಮೇಶ್ ವಾಸವಿದ್ದಾರೆ. ಸಂತ್ರಸ್ತ ಬಾಲಕನ ಮನೆಗೆ ತೆರಳಿದ ಸಂಘಟಕರು ಜಾಗೃತಿ ಮೂಡಿಸಿದ್ದಾರೆ.

ಮನೆಯಲ್ಲಿದ್ದ ವೆಂಕಟೇಶ್ವರನ ಫೋಟೋಗಳನ್ನು ತೆಗೆದ ಶೋಭಾ ದಂಪತಿ, ಬಾಬಾ ಸಾಹೇಬ್‌ ಅಂಬೇಡ್ಕರ್‌ರವರ ಭಾವಚಿತ್ರ ಇಟ್ಟಿದ್ದಾರೆ. ಜೊತೆಗೆ ಬುದ್ಧನ ವಿಗ್ರಹವನ್ನು ಪಕ್ಕದಲ್ಲಿ ಇರಿಸಿದ್ದಾರೆ. ಫೋಟೋ ತೆರವಿನ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿದೆ.

ಕುಟುಂಬದೊಂದಿಗೆ ಎಎಸ್‌ಎಸ್‌ಕೆಯ ಮುಖಂಡರಾದ ಸಂದೇಶ್‌ ಮಾತನಾಡಿ, “ರಾಮಕೃಷ್ಣ, ಭೂತಮ್ಮ, ಇನ್ಯಾರೂ ಇಲ್ಲ. ಅಂಬೇಡ್ಕರ್‌ ಒಬ್ಬರೇ ನಮಗೆ ದೇವರು. ನಿಮಗೆ ನ್ಯಾಯ ಸಿಕ್ಕಿದೆ ಎಂದರೆ ಅಂಬೇಡ್ಕರ್‌ ಕಾರಣ. ಅವರನ್ನು ಸ್ಮರಿಸಬೇಕು. ಮಕ್ಕಳಿಗೆ ಅವರ ಬಗ್ಗೆ ತಿಳಿಸಿಕೊಡಬೇಕೇ ಹೊರತು ದೇವರುಗಳ ಬಗ್ಗೆ ಅಲ್ಲ” ಎಂದು ತಿಳಿಸಿದ್ದಾರೆ.

“ನಿಮಗೆ ಎಲ್ಲರೂ ಸಹಾಯ ಮಾಡುತ್ತಾರೆ. ಹಾಗೆಂದು ಕಾನೂನು ಮೀರುವ ಕೆಲಸವನ್ನು ನಾವು ಮಾಡಬಾರದು” ಎಂದಿದ್ದಾರೆ.

ದೇವರಿಗೆ ಅಪವಿತ್ರವಾಗಿತೆಂದು ಆರೋಪಿಸಿ ಆ ಬಾಲಕನ ಕುಟುಂಬವನ್ನು ಊರಿನ ಸವರ್ಣೀಯರು ಬಹಿಷ್ಕಾರ ಹಾಕಿದ್ದರು. ಈ ಬಡ ಕುಟುಂಬಕ್ಕೆ ಅರವತ್ತು ಸಾವಿರ ರೂ. ದಂಡವನ್ನೂ ವಿಧಿಸಿದ್ದರು. ಗ್ರಾಮದ ದಲಿತ ಬಾಲಕ ದೇವರ ಮೆರವಣಿಗೆಯ ವೇಳೆ ದೇವರ ಕೋಲನ್ನು ಮುಟ್ಟಿ ಮೈಲಿಗೆ ಮಾಡಿದ್ದಾನೆ ಎಂದು ಆರೋಪಿಸಿ ಹೊಡೆಯಲು ಮುಂದಾಗಿದ್ದರು.

ಅಟ್ರಾಸಿಟಿ ಪ್ರಕರಣ ದಾಖಲು

ಸಾಮಾಜಿಕ ಬಹಿಷ್ಕಾರದ ಸುದ್ದಿ ವೈರಲ್ ಆದ ಬೆನ್ನಲ್ಲೇ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ಗ್ರಾಮದ ಸವರ್ಣೀಯ ಸಮುದಾಯಕ್ಕೆ ಸೇರಿದ ಜಿ.ನಾರಾಯಣಸ್ವಾಮಿ ಬಿನ್ ಗೋಪಾಲಪ್ಪ, ಜಿ.ರಮೇಶ್, ಗೋಪಾಲಪ್ಪ, ವೆಂಕಟೇಶಪ್ಪ, ಕೋಟೆಪ್ಪ, ನಾರಾಯಣಸ್ವಾಮಿ, ಚಲಪತಿ, ಮೋಹನ್ ರಾವ್‌, ಚಿನ್ನಯ್ಯ ವಿರುದ್ಧ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆಯ ಕಾಯ್ದೆ 1989 ಅಡಿ ಹಾಗೂ ಐಪಿಸಿ ಕಲಂ 143, 147, 148, 149 504, 506 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಒಳ್ಳೆಯ ಮಾಹಿತಿ ಅಸ್ಪೃಶ್ಯತೆ ಆಚರಣೆ ಮಾಡುವವರಿಗೆ ಕಾನೂನು ರೀತಿಯಲ್ಲೇ ಶಿಕ್ಷೆ ವಿಧಿಸಿದೆ.ಜೈ ಭೀಮ್

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...