Homeದಲಿತ್ ಫೈಲ್ಸ್ದಲಿತ ಬಾಲಕ ದೇವರು ಮುಟ್ಟಿದ ಪ್ರಕರಣ: ಮನೆಯಲ್ಲಿ ದೇವರ ಫೋಟೋ ಇದ್ದ ಜಾಗದಲ್ಲಿ ಈಗ ಅಂಬೇಡ್ಕರ್‌...

ದಲಿತ ಬಾಲಕ ದೇವರು ಮುಟ್ಟಿದ ಪ್ರಕರಣ: ಮನೆಯಲ್ಲಿ ದೇವರ ಫೋಟೋ ಇದ್ದ ಜಾಗದಲ್ಲಿ ಈಗ ಅಂಬೇಡ್ಕರ್‌ ಭಾವಚಿತ್ರ

ವೆಂಕಟೇಶ್ವರನ ಫೋಟೋ ತೆರವು ಮಾಡಿ ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಫೋಟೋ ಇರಿಸುತ್ತಿರುವ ವಿಡಿಯೊ ವೈರಲ್ ಆಗಿದೆ.

- Advertisement -
- Advertisement -

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಉಳ್ಳೇರಹಳ್ಳಿಯಲ್ಲಿ ಗ್ರಾಮದೇವತೆ ಭೂತಮ್ಮನ ಮೆರವಣಿಗೆಯ ವೇಳೆ ದಲಿತ ಬಾಲಕ ದೇವರಿಗೆ ಸಂಬಂಧಿಸಿದ ಗುಜ್ಜಕೋಲನ್ನು ಮುಟ್ಟಿದನೆಂದು ಆರೋಪಿಸಿ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿದ ಘಟನೆ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ಸಂತ್ರಸ್ತ ಬಾಲಕನ ಕುಟುಂಬವು ತನ್ನ ಮನೆಯಲ್ಲಿದ್ದ ದೇವರ ಫೋಟೋಗಳನ್ನು ತೆರವು ಮಾಡಿದೆ.

ಘಟನೆಯ ಬಳಿಕ ಸ್ಥಳಕ್ಕೆ ಧಾವಿಸಿದ ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ (ಎಎಸ್‌ಎಸ್‌ಕೆ) ಸಂಘಟನೆಯ  ಯುವಕರು, ಕುಟುಂಬಕ್ಕೆ ಅರಿವು ಮೂಡಿಸಿದ್ದಾರೆ. “ನಿಮ್ಮ ಮನೆಯಲ್ಲಿ ಇರಬೇಕಾದದ್ದು ಈ ದೇವರ ಫೋಟೋಗಳಲ್ಲ. ನಿಮಗೆ ನ್ಯಾಯ ದೊರಕಿಸಿಕೊಟ್ಟ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋ” ಎಂದು ಹೇಳಿದ್ದಾರೆ.

ಸಿಮೆಂಟ್‌ ಕಲ್ಲಿನಿಂದ ನಿರ್ಮಿಸಲಾದ, ಇನ್ನೂ ಕಾಂಕ್ರೀಟ್ ಕಾಣದಿರುವ ಮನೆಯಲ್ಲಿ ಪುಟ್ಟ ಬಾಲಕನೊಂದಿಗೆ ದಂಪತಿ ಶೋಭಾ ಹಾಗೂ ರಮೇಶ್ ವಾಸವಿದ್ದಾರೆ. ಸಂತ್ರಸ್ತ ಬಾಲಕನ ಮನೆಗೆ ತೆರಳಿದ ಸಂಘಟಕರು ಜಾಗೃತಿ ಮೂಡಿಸಿದ್ದಾರೆ.

ಮನೆಯಲ್ಲಿದ್ದ ವೆಂಕಟೇಶ್ವರನ ಫೋಟೋಗಳನ್ನು ತೆಗೆದ ಶೋಭಾ ದಂಪತಿ, ಬಾಬಾ ಸಾಹೇಬ್‌ ಅಂಬೇಡ್ಕರ್‌ರವರ ಭಾವಚಿತ್ರ ಇಟ್ಟಿದ್ದಾರೆ. ಜೊತೆಗೆ ಬುದ್ಧನ ವಿಗ್ರಹವನ್ನು ಪಕ್ಕದಲ್ಲಿ ಇರಿಸಿದ್ದಾರೆ. ಫೋಟೋ ತೆರವಿನ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿದೆ.

ಕುಟುಂಬದೊಂದಿಗೆ ಎಎಸ್‌ಎಸ್‌ಕೆಯ ಮುಖಂಡರಾದ ಸಂದೇಶ್‌ ಮಾತನಾಡಿ, “ರಾಮಕೃಷ್ಣ, ಭೂತಮ್ಮ, ಇನ್ಯಾರೂ ಇಲ್ಲ. ಅಂಬೇಡ್ಕರ್‌ ಒಬ್ಬರೇ ನಮಗೆ ದೇವರು. ನಿಮಗೆ ನ್ಯಾಯ ಸಿಕ್ಕಿದೆ ಎಂದರೆ ಅಂಬೇಡ್ಕರ್‌ ಕಾರಣ. ಅವರನ್ನು ಸ್ಮರಿಸಬೇಕು. ಮಕ್ಕಳಿಗೆ ಅವರ ಬಗ್ಗೆ ತಿಳಿಸಿಕೊಡಬೇಕೇ ಹೊರತು ದೇವರುಗಳ ಬಗ್ಗೆ ಅಲ್ಲ” ಎಂದು ತಿಳಿಸಿದ್ದಾರೆ.

“ನಿಮಗೆ ಎಲ್ಲರೂ ಸಹಾಯ ಮಾಡುತ್ತಾರೆ. ಹಾಗೆಂದು ಕಾನೂನು ಮೀರುವ ಕೆಲಸವನ್ನು ನಾವು ಮಾಡಬಾರದು” ಎಂದಿದ್ದಾರೆ.

ದೇವರಿಗೆ ಅಪವಿತ್ರವಾಗಿತೆಂದು ಆರೋಪಿಸಿ ಆ ಬಾಲಕನ ಕುಟುಂಬವನ್ನು ಊರಿನ ಸವರ್ಣೀಯರು ಬಹಿಷ್ಕಾರ ಹಾಕಿದ್ದರು. ಈ ಬಡ ಕುಟುಂಬಕ್ಕೆ ಅರವತ್ತು ಸಾವಿರ ರೂ. ದಂಡವನ್ನೂ ವಿಧಿಸಿದ್ದರು. ಗ್ರಾಮದ ದಲಿತ ಬಾಲಕ ದೇವರ ಮೆರವಣಿಗೆಯ ವೇಳೆ ದೇವರ ಕೋಲನ್ನು ಮುಟ್ಟಿ ಮೈಲಿಗೆ ಮಾಡಿದ್ದಾನೆ ಎಂದು ಆರೋಪಿಸಿ ಹೊಡೆಯಲು ಮುಂದಾಗಿದ್ದರು.

ಅಟ್ರಾಸಿಟಿ ಪ್ರಕರಣ ದಾಖಲು

ಸಾಮಾಜಿಕ ಬಹಿಷ್ಕಾರದ ಸುದ್ದಿ ವೈರಲ್ ಆದ ಬೆನ್ನಲ್ಲೇ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ಗ್ರಾಮದ ಸವರ್ಣೀಯ ಸಮುದಾಯಕ್ಕೆ ಸೇರಿದ ಜಿ.ನಾರಾಯಣಸ್ವಾಮಿ ಬಿನ್ ಗೋಪಾಲಪ್ಪ, ಜಿ.ರಮೇಶ್, ಗೋಪಾಲಪ್ಪ, ವೆಂಕಟೇಶಪ್ಪ, ಕೋಟೆಪ್ಪ, ನಾರಾಯಣಸ್ವಾಮಿ, ಚಲಪತಿ, ಮೋಹನ್ ರಾವ್‌, ಚಿನ್ನಯ್ಯ ವಿರುದ್ಧ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆಯ ಕಾಯ್ದೆ 1989 ಅಡಿ ಹಾಗೂ ಐಪಿಸಿ ಕಲಂ 143, 147, 148, 149 504, 506 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಒಳ್ಳೆಯ ಮಾಹಿತಿ ಅಸ್ಪೃಶ್ಯತೆ ಆಚರಣೆ ಮಾಡುವವರಿಗೆ ಕಾನೂನು ರೀತಿಯಲ್ಲೇ ಶಿಕ್ಷೆ ವಿಧಿಸಿದೆ.ಜೈ ಭೀಮ್

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...