Homeಮುಖಪುಟಕಾಲಾನುಕ್ರಮವನ್ನು ಅರ್ಥಮಾಡಿಕೊಳ್ಳಿ: ಎನ್‌ಪಿಆರ್-ಎನ್ಆರ್‌ಸಿಯ ನಕಲಿ ಮುಖ!

ಕಾಲಾನುಕ್ರಮವನ್ನು ಅರ್ಥಮಾಡಿಕೊಳ್ಳಿ: ಎನ್‌ಪಿಆರ್-ಎನ್ಆರ್‌ಸಿಯ ನಕಲಿ ಮುಖ!

ಎನ್‌ಪಿಆರ್ ಮತ್ತು ಎನ್‌ಆರ್‌ಸಿ ನಡುವಿನ ಸಂಬಂಧವನ್ನು ಬಿಜೆಪಿ ನಾಯಕರುಗಳೇ ಸಂಸತ್ತಿನಲ್ಲಿಯೇ ಏನಿಲ್ಲವೆಂದರೂ ಒಂಭತ್ತು ಸಲ ಉಲ್ಲೇಖಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆ ಎತ್ತಿತೋರಿಸಿದೆ.

- Advertisement -
- Advertisement -

ಗೌತಮ್ ಭಾಟಿಯಾ

ಅನುವಾದ: ನಿಖಿಲ್ ಕೋಲ್ಪೆ

ಎಪ್ರಿಲ್ ತಿಂಗಳಲ್ಲಿ ಆರಂಭಿಸಲು ಉದ್ದೇಶಿಸಲಾಗಿರುವ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್)ಗಾಗಿ ಕೇಂದ್ರ ಸಂಪುಟವು 3,900 ಕೋಟಿ ರೂ.ಗಳ ಬಜೆಟನ್ನು ಅಂಗೀಕರಿಸಿದೆ. ತಕ್ಷಣವೇ ಕೇಂದ್ರ ಗೃಹಸಚಿವ ಅಮಿತ್ ಶಾ ಮತ್ತು ಸಚಿವ ಪ್ರಕಾಶ್ ಜಾವ್ಡೇಕರ್ ಅವರು ಹೇಳಿಕೆ ನೀಡಿ, ಇದು ಕೇವಲ ಒಂದು ಗಣತಿ ಕಾರ್ಯಕ್ರಮವಾಗಿದ್ದು, ಅದಕ್ಕೂ ವಿವಾದಾತ್ಮಕ ಮತ್ತು ಎಲ್ಲರೂ ಭಯಪಟ್ಟಿರುವ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಗೂ ಸಂಬಂಧವಿಲ್ಲ ಎಂದರು.

ರಾಷ್ಟ್ರವ್ಯಾಪಿ ಪೌರತ್ವ ನೋಂದಣಿಯ ಕುರಿತು ಕೇಂದ್ರ ಸರಕಾರವು ಈ ತನಕ ಚರ್ಚಿಸಿಯೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸಭೆಯೊಂದರಲ್ಲಿ ಹೇಳಿದ ಬೆನ್ನಲ್ಲೇ ಈ ಮಂತ್ರಿಗಳು, ಎನ್‌ಪಿಆರ್ ಜನಗಣತಿಯಂತೆಯೇ ಒಂದು ನಿರುಪದ್ರವಿ ಕಾರ್ಯಕ್ರಮ ಎಂದು ವಾದಿಸಿದರು. ಇದಕ್ಕೆ ಯಾವುದೇ ದಾಖಲೆಗಳ ಅಗತ್ಯವಿಲ್ಲ; ಇದನ್ನು ಸರಕಾರಿ ಕಾರ್ಯಕ್ರಮಗಳ ಪರಿಣಾಮಕಾರಿ ನಿರ್ವಹಣೆಗಾಗಿ ಮಾಡಲಾಗುತ್ತಿದೆ ಎಂದೂ ಅವರು ಹೇಳಿದರು.

ಅಲ್ಪ ಪರಿಶೀಲನೆಯಲ್ಲಿಯೇ ಇವರಿಬ್ಬರ ಹೇಳಿಕೆಗಳನ್ನು ಚಿಂದಿ ಉಡಾಯಿಸಬಹುದು. ಎನ್‌ಪಿಆರ್ ಮತ್ತು ಎನ್‌ಆರ್‌ಸಿ ನಡುವಿನ ಸಂಬಂಧವನ್ನು ಬಿಜೆಪಿ ನಾಯಕರುಗಳೇ ಸಂಸತ್ತಿನಲ್ಲಿಯೇ ಏನಿಲ್ಲವೆಂದರೂ ಒಂಭತ್ತು ಸಲ ಉಲ್ಲೇಖಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆ ಎತ್ತಿತೋರಿಸಿದೆ. ಅದಕ್ಕಿಂತಲೂ ಮುಖ್ಯವಾಗಿ ಇವೆರಡರ ನಡುವಿನ ಸಂಬಂಧವನ್ನು ಕಾನೂನು ಮೂಲಕವೂ ಗಟ್ಟಿಗೊಳಿಸಲಾಗಿದೆ. ವಾಜಪೇಯಿ ಸರಕಾರವು 2003ರಲ್ಲಿಯೇ ಭಾರತೀಯ ಪೌರತ್ವ ಕಾಯಿದೆಯನ್ನು ತಿದ್ದುಪಡಿ ಮಾಡಿ, ವಿಧಿ 14(ಎ)ಯನ್ನು ತರುವುದರ ಮೂಲಕ ಇದಕ್ಕೆ ಕಾನೂನಿನ ನೆಲೆಗಟ್ಟು ಒದಗಿಸಿತ್ತು.

ಇದನ್ನು ಎಷ್ಟು ಸಾಧ್ಯವೋ ಅಷ್ಟು ಷೇರ್ ಮಾಡುವ ಅಗತ್ಯವಿದೆ. ಏಕೆಂದರೆ ಎನ್‌‌ಆರ್‌ಸಿ ಸಿಎಎ ಒಪ್ಪುವುದು ಬಿಡುವುದು ಬೇರೆ ಮಾತು. ಆದರೆ ದೇಶದ ಪ್ರಧಾನಿಯೊಬ್ಬರು ಈ ರೀತಿ ಹಸೀ ಸುಳ್ಳನ್ನು ಸಾರ್ವಜನಿಕವಾಗಿ ಗಟ್ಟಿ ಗಂಟಲಲ್ಲಿ ಕಿರುಲುವುದು ದೇಶಕ್ಕೇ ಅಪಮಾನವಲ್ಲವೇ? ಸಂಸತ್ತಿನಲ್ಲೇ ತನ್ನ ಗೃಹ ಸಚಿವ ಹೇಳಿದ್ದನ್ನು, ತಾನೇ ಮಾಧ್ಯಮ‌ ಸಂದರ್ಶನದಲ್ಲಿ ಹೇಳಿದ್ದನ್ನು ಮರೆತಿರಲು ಸಾಧ್ಯವೇ? ಆ ಪಾಟಿ ಮರೆವಿನ ಖಾಯಿಲೆ ಇದ್ದರೆ ಮೊದಲು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಿ ಚಿಕಿತ್ಸೆ ಕೊಡಿಸಬೇಕು. ಇಲ್ಲ ಎಂದಾದರೆ ಇಂತಹ ಸುಳ್ಳು ಹೇಳಿದ್ದಕ್ಕೆ ಕ್ಷಮೆ ಯಾಚಿಸಬೇಕು.ಯಾವುದಾದರೂ ಮೀಡಿಯಾದಲ್ಲಿ ಯಾರಾದರೂ ಇದನ್ನು ಬಯಲುಗೊಳಿಸಿ ಛೀಮಾರಿ‌ ಹಾಕಿದ್ದಾರೆಯೇ? ಇಲ್ಲದಿದ್ದರೆ ಅವರು ಮಾಧ್ಯಮ ಹೇಗಾಗುತ್ತಾರೆ?

Posted by Vasu Hv on Tuesday, December 24, 2019

ಇದಕ್ಕೆ ಮುಂಚಿತವಾಗಿ 2002ರಲ್ಲಿಯೇ ಪೌರತ್ವ ನಿಯಮಾವಳಿಗಳನ್ನು ರೂಪಿಸಲಾಗಿದ್ದು, ಎನ್‌ಪಿಆರ್ ಎಂಬುದು ಎನ್‌ಆರ್‌ಸಿಯತ್ತ ಒಂದು ಖಂಡಿತವಾದ ಹೆಜ್ಜೆ ಎಂದು ಸ್ಪಷ್ಟಪಡಿಸಲಾಗಿದೆ. ಇದು ಪೌರತ್ವ ನಿಯಮಾವಳಿಗಳ ನಿಯಮ 4(3)ರ ಸಾಲೊಂದರಲ್ಲಿ ಅಡಗಿದೆ. “ಪ್ರತಿಯೊಂದು ಕುಟುಂಬ ಮತ್ತು ವ್ಯಕ್ತಿಯ ವಿವರಗಳನ್ನು ಸ್ಥಳೀಯ ಜನಸಂಖ್ಯಾ ರಿಜಿಸ್ಟರ್‌ನಲ್ಲಿ ನಮೂದಿಸಬೇಕು ಮತ್ತು ಅದನ್ನು ಸ್ಥಳೀಯ ರಿಜಿಸ್ಟ್ರಾರ್ ತನಿಖೆಗೆ ಒಳಪಡಿಸಿ ಪರಿಶೀಲಿಸಬೇಕು” ಎಂದು ಅದರಲ್ಲಿ ಹೇಳಲಾಗಿದೆ. ಬೇರೆಯೇ ರೀತಿಯಲ್ಲಿ ಹೇಳುವುದಾದರೆ, ಎನ್‌ಪಿಆರ್‌ಗಾಗಿ ವ್ಯಕ್ತಿಗಳು ಮತ್ತು ಕುಟುಂಬಗಳಿಂದ ಸಂಗ್ರಹಿಸಲಾದ ಮಾಹಿತಿಗಳನ್ನು ಎನ್‌ಆರ್‌ಸಿಗಾಗಿ ನಿಯೋಜಿತರಾದ ಸರಕಾರಿ ಅಧಿಕಾರಿಗಳು ಪರಿಶೀಲಿಸಲು ಕಾನೂನು ಅವಕಾಶ ಮಾಡಿಕೊಡುತ್ತದೆ.

ನಿಯಮ 4(4) ಈ ನಿಯಮಾವಳಿಗಳ ಉದ್ದೇಶವನ್ನು ಇನ್ನಷ್ಟು ಸ್ಪಷ್ಟವಾಗಿ ತಿಳಿಸುತ್ತದೆ. ಅದರ ಪ್ರಕಾರ ಯಾರ ಪೌರತ್ವ ಸಂಶಯಾಸ್ಪದವಾಗಿದೆಯೋ ಅಂತವರ ವಿವರಗಳನ್ನು ಸ್ಥಳೀಯ ರಿಜಿಸ್ಟ್ರಾರರು ಜನಸಂಖ್ಯಾ ನೋಂದಣಿಯಲ್ಲಿ ಸೂಕ್ತ ಟಿಪ್ಪಣಿಯೊಂದಿಗೆ  ಮುಂದಿನ ತನಿಖೆಗಾಗಿ ನೋಂದಾಯಿಸುತ್ತಾರೆ. ಇಲ್ಲಿ ಎನ್‌ಪಿಆರ್ ಮತ್ತು ಎನ್‌ಆರ್‌ಸಿಗಳ ಪ್ರಕ್ರಿಯೆಗಳು ಒಂದರೊಳಗೊಂದು ಕಲಸಿಹೋಗುತ್ತವೆ. ಎನ್‌ಪಿಆರ್ ಪ್ರಕ್ರಿಯೆಯಲ್ಲಿ ನೀಡಲಾದ ಮಾಹಿತಿಗಳ ಆಧಾರದಲ್ಲಿ ಒಬ್ಬ ವ್ಯಕ್ತಿ ‘ಸಂಶಯಾಸ್ಪದ ನಾಗರಿಕ’ನೇ ಎಂದು ನಿರ್ಧರಿಸಲು ಪೌರತ್ವ ನಿಯಮಾವಳಿಗಳು ಸ್ಥಳೀಯ ಸರಕಾರಿ ಅಧಿಕಾರಿಗಳಿಗೆ ಅವಕಾಶ ಒದಗಿಸಿಕೊಡುತ್ತವೆ.

ಅಸ್ಸಾಮಿನಲ್ಲಿ ನಡೆದ ಎನ್‌ಆರ್‌ಸಿ ಪ್ರಕ್ರಿಯೆಯಲ್ಲಿ ಸ್ಪಷ್ಟವಾಗಿರುವಂತೆ ಲಕ್ಷಾಂತರ ‘ಸಂಶಯಾಸ್ಪದ’ ನಾಗರಿಕರು ದಪ್ಪ ಚರ್ಮದ, ನಿಷ್ಕರುಣಿ ಅಧಿಕಾರಿಗಳ ಮುಂದೆ ತಮ್ಮ ಪೌರತ್ವವನ್ನು ಸಾಬೀತುಪಡಿಸಬೇಕಾಗಿದೆ. ಕತೆ ಇಲ್ಲಿಗೆ ಮುಗಿಯುವುದಿಲ್ಲ.  ಈ ಬೆಂಕಿಯನ್ನು ಹಾಯ್ದು ಎನ್‌ಆರ್‌ಸಿಯೊಳಗೆ ದಾಖಲಾದರೂ, ತಿದ್ದುಪಡಿಯು ಯಾವುದೇ ವ್ಯಕ್ತಿಗೆ ಈ ಯಾದಿಯಲ್ಲಿರುವ ಯಾವುದೇ ವ್ಯಕ್ತಿಯ ವಿರುದ್ಧ ಆಕ್ಷೇಪಣೆಯನ್ನು ಸಲ್ಲಿಸಲು ಅವಕಾಶ ಮಾಡಿಕೊಡುತ್ತದೆ. ಆಕ್ಷೇಪಣೆಗೆ ಒಳಗಾದ ವ್ಯಕ್ತಿ ಮತ್ತೊಮ್ಮೆ ಅದೇ ಕಷ್ಟದಾಯಕ ಪ್ರಕ್ರಿಯೆಯನ್ನು ಪಾರುಮಾಡಬೇಕಾಗುತ್ತದೆ. ಆಕ್ಷೇಪಣೆ ಮಾಡುವ ವ್ಯಕ್ತಿ ನಿಮ್ಮನ್ನು ಕಂಡರಾಗದ ನೆರೆಮನೆಯವರಾಗಿರಬಹುದು ಅಥವಾ ನಿಮ್ಮ ಕಚೇರಿಯಲ್ಲಿಯೇ ಇರುವ ಪ್ರತಿಸ್ಪರ್ಧಿಯೂ ಆಗಿರಬಹುದು.

ಮತ್ತೊಮ್ಮೆ ಅಸ್ಸಾಮಿನ ಅನುಭವವು ಏನನ್ನು ತಿಳಿಸುತ್ತದೆ ಎಂದರೆ, ಲಕ್ಷಾಂತರ ಜನರ ಮೇಲೆ, ಮುಖ್ಯವಾಗಿ ಮುಸ್ಲಿಮರ ಮೇಲೆ ರಾಶಿಗಟ್ಟಲೆ ಆಕ್ಷೇಪಣೆಗಳನ್ನು ಸಲ್ಲಿಸಲಾಗಿತ್ತು. ಅನೇಕ ಸಂದರ್ಭಗಳಲ್ಲಿ ಆಕ್ಷೇಪಣೆ ಸಲ್ಲಿಸಿದ ವ್ಯಕ್ತಿಗಳಿಗೆ ತಾವು ಯಾರ ವಿರುದ್ಧ ಆಕ್ಷೇಪಣೆಯನ್ನು ಸಲ್ಲಿಸಿದ್ದೇವೆ ಎಂದೂ ಗೊತ್ತಿರಲಿಲ್ಲ. ಒಟ್ಟಿನಲ್ಲಿ ಗುಂಪಿನಲ್ಲಿ ಗೋವಿಂದ ಎಂಬಂತಹ ದ್ವೇಷ ಸಾಧನೆ.

ಆದುದರಿಂದ ಈ ನಿಯಮಾವಳಿಗಳು ಭಯ, ಅಭದ್ರತೆ, ಕಿರುಕುಳದ ವಾತಾವರಣವನ್ನು ಸೃಷ್ಟಿಸುವುದು ಖಂಡಿತ ಮತ್ತು ಎಲ್ಲವೂ ಕೊನೆಗೆ ಸ್ಥಳೀಯ ಅಧಿಕಾರಿಯ ಮರ್ಜಿಯ ಮೇಲೆ ನಿಂತಿರುತ್ತದೆ. ಆದುದರಿಂದ, ಇದನ್ನೆಲ್ಲಾ ಸಾಧ್ಯ ಮಾಡುವ ಮತ್ತು ಅದಕ್ಕೆ ಕಾನೂನಿನ ನೆಲೆಗಟ್ಟು ಒದಗಿಸುವ ಪೌರತ್ವ ನಿಯಮಾವಳಿ 2003 ಮತ್ತು ಪೌರತ್ವ ಕಾಯಿದೆಯ ವಿಧಿ 14ಎಯನ್ನು ತಕ್ಷಣವೇ ರದ್ದು ಮಾಡುವಂತೆ ನಾವು ತುರ್ತಾಗಿ ಬೇಡಿಕೆ ಸಲ್ಲಿಸಬೇಕಾಗಿದೆ.

ಇಷ್ಟಿದ್ದರೂ, ಎನ್‌ಪಿಆರ್ ನಿರುಪದ್ರವಿ ಮತ್ತು ಅದರ ಉದ್ದೇಶ ಸರಕಾರಿ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲಪಿಸುವುದು ಎಂದು ಬಿಜೆಪಿ ಹೇಳುತ್ತದೆ. ಇದು ಶುದ್ಧ ಸುಳ್ಳು. ವಕೀಲರಾದ ಮಾಳವಿಕಾ ಪ್ರಸಾದ್ ಅವರು ಹೇಳುವಂತೆ ಎನ್‌ಪಿಆರ್ ಕೇವಲ ಗಣತಿಯಾಗಿದ್ದರೆ, ಅದಕ್ಕೆ ಪೌರತ್ವವನ್ನು ನಿರ್ಧರಿಸುವ ಪೌರತ್ವ ಕಾಯಿದೆಯನ್ನು ಅನ್ವಯಿಸುವ ಅಗತ್ಯವಿರಲಿಲ್ಲ. ಇನ್ನು ಅಭಿವೃದ್ಧಿ ಕಾರ್ಯಕ್ರಮಗಳ ಪ್ರಶ್ನೆ ಬಂದರೆ, ಎಲ್ಲದಕ್ಕೂ ಆಧಾರ್ ಕಾರ್ಡೇ ಆಧಾರ ಎಂದು ಸರಕಾರ ಕಳೆದ ಏಳು ವರ್ಷಗಳಿಂದಲೂ ಹೇಳುತ್ತಾಬಂದಿದೆ. ಸರಕಾರದ ಪರ ವಕೀಲರು ನ್ಯಾಯಾಲಯಗಳಲ್ಲಿ ಮತ್ತು ಅದರ ಚೇಲಾಗಳು ಮಾಧ್ಯಮಗಳಲ್ಲಿ ಇದನ್ನೇ ಹೇಳಿದ್ದಾರೆ. ಅಂದರೆ, ಆಧಾರ್ ಎಂಬುದು ಒಂದು ಗುಜುರಿ ದಾಖಲೆ ಎಂದು ಸರಕಾರ ಈಗ ಒಪ್ಪಿಕೊಳ್ಳಲು ಸಿದ್ಧವಿದೆಯೆ?

ಅಂತಿಮವಾಗಿ ಇನ್ನೊಂದು ಆತಂಕಕಾರಿ ವಿಷಯವಿದೆ. ಮೊತ್ತಮೊದಲ ಬಾರಿಗೆ (2010ಕ್ಕೆ ವಿರುದ್ಧವಾಗಿ) ಎನ್‌ಪಿಆರ್ ಹೆತ್ತವರ ಜನನ ಸ್ಥಳ ಮತ್ತು ದಿನಾಂಕದ ದಾಖಲೆಗಳನ್ನು ಕೇಳಲಿದೆ. ಯಾಕೆಂದರೆ ಪೌರತ್ವ ಕಾಯಿದೆಯ ಪ್ರಕಾರ 1987ರ ನಂತರ ಹುಟ್ಟಿದವರು ಹೆತ್ತವರಲ್ಲಿ ಒಬ್ಬರಾದರೂ ಭಾರತೀಯ ಪೌರರು ಎಂದು ಸಾಬೀತುಪಡಿಸಿದರೆ ಮಾತ್ರ ಭಾರತೀಯ ಪೌರರಾಗುತ್ತಾರೆ. ಆದುದರಿಂದ, ಎನ್‌ಪಿಆರ್ ಕೇವಲ ಗಣತಿಗೆ ಸಂಬಂಧಪಡದ ಪ್ರಶ್ನೆಗಳನ್ನು ಕೇಳುವ ಮೂಲಕ ಎಲ್ಲಾ ರೀತಿಯಲ್ಲಿ ಅದನ್ನು ಪೌರತ್ವದೊಂದಿಗೆ ತಳಕುಹಾಕಿದೆ. ಆದುದರಿಂದ, ದಯವಿಟ್ಟು ಕಾಲಾನುಕ್ರಮವನ್ನು ಅರ್ಥಮಾಡಿಕೊಳ್ಳಿ. ಎನ್‌ಪಿಆರ್ ಮೊದಲು ನಡೆಯುವುದು ಮತ್ತು ಅದರಿಂದ ಪಡೆದ ಮಾಹಿತಿಯನ್ನು ರಾಷ್ಟ್ರವ್ಯಾಪಿ ಎನ್‌ಆರ್‌ಸಿಗಾಗಿ ಬಳಸಿಕೊಳ್ಳಲಾಗುವುದು.

ಎನ್‌ಆರ್‌ಸಿಯು ತಮ್ಮ ಪೌರತ್ವವನ್ನು ಸರಕಾರಿ ಅಧಿಕಾರಿಗಳ ಮುಂದೆ ಸಾಬೀತುಪಡಿಸುವಂತೆ ಪ್ರತಿಯೊಬ್ಬ ನಾಗರಿಕನನ್ನು ಬಲವಂತಪಡಿಸುತ್ತದೆ. ಮತ್ತು ಒಂದು ವೇಳೆ ಹಾಗೆ ಮಾಡಿದರೂ, ಯಾರೂ ಕೂಡಾ ಅದಕ್ಕೆ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ.  ಮೇಲಾಗಿ ದೇಶದೊಳಗೆ ದೊಡ್ಡ ಪ್ರಮಾಣದಲ್ಲಿ ಕಾನೂನುಬಾಹಿರ ವಲಸೆ ನಡೆದಿದೆ ಎನ್ನಲು ಯಾವುದೇ ಸಾಕ್ಷ್ಯಾಧಾರಗಳು ಇಲ್ಲದೇ ಇದ್ದರೂ ಇದನ್ನು ಮಾಡಲಾಗುತ್ತಿದೆ. ಯಾವುದೇ ಪ್ರಜಾಪ್ರಭುತ್ವ ರಾಷ್ಟ್ರವು ತನ್ನ ಪ್ರಜೆಗಳನ್ನು ತೀರಾ ಅನಗತ್ಯವಾಗಿ ಇಂತಹ ಕಂಗೆಡಿಸುವ ಮತ್ತು ನೋವಿನ ಸಂಕಷ್ಟಕ್ಕೆ ತಳ್ಳಿದ್ದಿಲ್ಲ!

(ಲೇಖಕರು ಸುಪ್ರೀಂಕೋರ್ಟಿನ ವಕೀಲರು)


ಇದನ್ನೂ ಓದಿ: ಧರ್ಮಾಧಾರಿತ ಪೌರತ್ವವನ್ನು ಸಂವಿಧಾನ ಸಭೆ ತಿರಸ್ಕರಿಸಿದ ಇತಿಹಾಸ ; ಡಾ. ಅಂಬೇಡ್ಕರ್ ಗೆದ್ದಿದ್ದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...