Homeಮುಖಪುಟಕಾಲಾನುಕ್ರಮವನ್ನು ಅರ್ಥಮಾಡಿಕೊಳ್ಳಿ: ಎನ್‌ಪಿಆರ್-ಎನ್ಆರ್‌ಸಿಯ ನಕಲಿ ಮುಖ!

ಕಾಲಾನುಕ್ರಮವನ್ನು ಅರ್ಥಮಾಡಿಕೊಳ್ಳಿ: ಎನ್‌ಪಿಆರ್-ಎನ್ಆರ್‌ಸಿಯ ನಕಲಿ ಮುಖ!

ಎನ್‌ಪಿಆರ್ ಮತ್ತು ಎನ್‌ಆರ್‌ಸಿ ನಡುವಿನ ಸಂಬಂಧವನ್ನು ಬಿಜೆಪಿ ನಾಯಕರುಗಳೇ ಸಂಸತ್ತಿನಲ್ಲಿಯೇ ಏನಿಲ್ಲವೆಂದರೂ ಒಂಭತ್ತು ಸಲ ಉಲ್ಲೇಖಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆ ಎತ್ತಿತೋರಿಸಿದೆ.

- Advertisement -
- Advertisement -

ಗೌತಮ್ ಭಾಟಿಯಾ

ಅನುವಾದ: ನಿಖಿಲ್ ಕೋಲ್ಪೆ

ಎಪ್ರಿಲ್ ತಿಂಗಳಲ್ಲಿ ಆರಂಭಿಸಲು ಉದ್ದೇಶಿಸಲಾಗಿರುವ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್)ಗಾಗಿ ಕೇಂದ್ರ ಸಂಪುಟವು 3,900 ಕೋಟಿ ರೂ.ಗಳ ಬಜೆಟನ್ನು ಅಂಗೀಕರಿಸಿದೆ. ತಕ್ಷಣವೇ ಕೇಂದ್ರ ಗೃಹಸಚಿವ ಅಮಿತ್ ಶಾ ಮತ್ತು ಸಚಿವ ಪ್ರಕಾಶ್ ಜಾವ್ಡೇಕರ್ ಅವರು ಹೇಳಿಕೆ ನೀಡಿ, ಇದು ಕೇವಲ ಒಂದು ಗಣತಿ ಕಾರ್ಯಕ್ರಮವಾಗಿದ್ದು, ಅದಕ್ಕೂ ವಿವಾದಾತ್ಮಕ ಮತ್ತು ಎಲ್ಲರೂ ಭಯಪಟ್ಟಿರುವ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಗೂ ಸಂಬಂಧವಿಲ್ಲ ಎಂದರು.

ರಾಷ್ಟ್ರವ್ಯಾಪಿ ಪೌರತ್ವ ನೋಂದಣಿಯ ಕುರಿತು ಕೇಂದ್ರ ಸರಕಾರವು ಈ ತನಕ ಚರ್ಚಿಸಿಯೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸಭೆಯೊಂದರಲ್ಲಿ ಹೇಳಿದ ಬೆನ್ನಲ್ಲೇ ಈ ಮಂತ್ರಿಗಳು, ಎನ್‌ಪಿಆರ್ ಜನಗಣತಿಯಂತೆಯೇ ಒಂದು ನಿರುಪದ್ರವಿ ಕಾರ್ಯಕ್ರಮ ಎಂದು ವಾದಿಸಿದರು. ಇದಕ್ಕೆ ಯಾವುದೇ ದಾಖಲೆಗಳ ಅಗತ್ಯವಿಲ್ಲ; ಇದನ್ನು ಸರಕಾರಿ ಕಾರ್ಯಕ್ರಮಗಳ ಪರಿಣಾಮಕಾರಿ ನಿರ್ವಹಣೆಗಾಗಿ ಮಾಡಲಾಗುತ್ತಿದೆ ಎಂದೂ ಅವರು ಹೇಳಿದರು.

ಅಲ್ಪ ಪರಿಶೀಲನೆಯಲ್ಲಿಯೇ ಇವರಿಬ್ಬರ ಹೇಳಿಕೆಗಳನ್ನು ಚಿಂದಿ ಉಡಾಯಿಸಬಹುದು. ಎನ್‌ಪಿಆರ್ ಮತ್ತು ಎನ್‌ಆರ್‌ಸಿ ನಡುವಿನ ಸಂಬಂಧವನ್ನು ಬಿಜೆಪಿ ನಾಯಕರುಗಳೇ ಸಂಸತ್ತಿನಲ್ಲಿಯೇ ಏನಿಲ್ಲವೆಂದರೂ ಒಂಭತ್ತು ಸಲ ಉಲ್ಲೇಖಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆ ಎತ್ತಿತೋರಿಸಿದೆ. ಅದಕ್ಕಿಂತಲೂ ಮುಖ್ಯವಾಗಿ ಇವೆರಡರ ನಡುವಿನ ಸಂಬಂಧವನ್ನು ಕಾನೂನು ಮೂಲಕವೂ ಗಟ್ಟಿಗೊಳಿಸಲಾಗಿದೆ. ವಾಜಪೇಯಿ ಸರಕಾರವು 2003ರಲ್ಲಿಯೇ ಭಾರತೀಯ ಪೌರತ್ವ ಕಾಯಿದೆಯನ್ನು ತಿದ್ದುಪಡಿ ಮಾಡಿ, ವಿಧಿ 14(ಎ)ಯನ್ನು ತರುವುದರ ಮೂಲಕ ಇದಕ್ಕೆ ಕಾನೂನಿನ ನೆಲೆಗಟ್ಟು ಒದಗಿಸಿತ್ತು.

ಇದನ್ನು ಎಷ್ಟು ಸಾಧ್ಯವೋ ಅಷ್ಟು ಷೇರ್ ಮಾಡುವ ಅಗತ್ಯವಿದೆ. ಏಕೆಂದರೆ ಎನ್‌‌ಆರ್‌ಸಿ ಸಿಎಎ ಒಪ್ಪುವುದು ಬಿಡುವುದು ಬೇರೆ ಮಾತು. ಆದರೆ ದೇಶದ ಪ್ರಧಾನಿಯೊಬ್ಬರು ಈ ರೀತಿ ಹಸೀ ಸುಳ್ಳನ್ನು ಸಾರ್ವಜನಿಕವಾಗಿ ಗಟ್ಟಿ ಗಂಟಲಲ್ಲಿ ಕಿರುಲುವುದು ದೇಶಕ್ಕೇ ಅಪಮಾನವಲ್ಲವೇ? ಸಂಸತ್ತಿನಲ್ಲೇ ತನ್ನ ಗೃಹ ಸಚಿವ ಹೇಳಿದ್ದನ್ನು, ತಾನೇ ಮಾಧ್ಯಮ‌ ಸಂದರ್ಶನದಲ್ಲಿ ಹೇಳಿದ್ದನ್ನು ಮರೆತಿರಲು ಸಾಧ್ಯವೇ? ಆ ಪಾಟಿ ಮರೆವಿನ ಖಾಯಿಲೆ ಇದ್ದರೆ ಮೊದಲು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಿ ಚಿಕಿತ್ಸೆ ಕೊಡಿಸಬೇಕು. ಇಲ್ಲ ಎಂದಾದರೆ ಇಂತಹ ಸುಳ್ಳು ಹೇಳಿದ್ದಕ್ಕೆ ಕ್ಷಮೆ ಯಾಚಿಸಬೇಕು.ಯಾವುದಾದರೂ ಮೀಡಿಯಾದಲ್ಲಿ ಯಾರಾದರೂ ಇದನ್ನು ಬಯಲುಗೊಳಿಸಿ ಛೀಮಾರಿ‌ ಹಾಕಿದ್ದಾರೆಯೇ? ಇಲ್ಲದಿದ್ದರೆ ಅವರು ಮಾಧ್ಯಮ ಹೇಗಾಗುತ್ತಾರೆ?

Posted by Vasu Hv on Tuesday, December 24, 2019

ಇದಕ್ಕೆ ಮುಂಚಿತವಾಗಿ 2002ರಲ್ಲಿಯೇ ಪೌರತ್ವ ನಿಯಮಾವಳಿಗಳನ್ನು ರೂಪಿಸಲಾಗಿದ್ದು, ಎನ್‌ಪಿಆರ್ ಎಂಬುದು ಎನ್‌ಆರ್‌ಸಿಯತ್ತ ಒಂದು ಖಂಡಿತವಾದ ಹೆಜ್ಜೆ ಎಂದು ಸ್ಪಷ್ಟಪಡಿಸಲಾಗಿದೆ. ಇದು ಪೌರತ್ವ ನಿಯಮಾವಳಿಗಳ ನಿಯಮ 4(3)ರ ಸಾಲೊಂದರಲ್ಲಿ ಅಡಗಿದೆ. “ಪ್ರತಿಯೊಂದು ಕುಟುಂಬ ಮತ್ತು ವ್ಯಕ್ತಿಯ ವಿವರಗಳನ್ನು ಸ್ಥಳೀಯ ಜನಸಂಖ್ಯಾ ರಿಜಿಸ್ಟರ್‌ನಲ್ಲಿ ನಮೂದಿಸಬೇಕು ಮತ್ತು ಅದನ್ನು ಸ್ಥಳೀಯ ರಿಜಿಸ್ಟ್ರಾರ್ ತನಿಖೆಗೆ ಒಳಪಡಿಸಿ ಪರಿಶೀಲಿಸಬೇಕು” ಎಂದು ಅದರಲ್ಲಿ ಹೇಳಲಾಗಿದೆ. ಬೇರೆಯೇ ರೀತಿಯಲ್ಲಿ ಹೇಳುವುದಾದರೆ, ಎನ್‌ಪಿಆರ್‌ಗಾಗಿ ವ್ಯಕ್ತಿಗಳು ಮತ್ತು ಕುಟುಂಬಗಳಿಂದ ಸಂಗ್ರಹಿಸಲಾದ ಮಾಹಿತಿಗಳನ್ನು ಎನ್‌ಆರ್‌ಸಿಗಾಗಿ ನಿಯೋಜಿತರಾದ ಸರಕಾರಿ ಅಧಿಕಾರಿಗಳು ಪರಿಶೀಲಿಸಲು ಕಾನೂನು ಅವಕಾಶ ಮಾಡಿಕೊಡುತ್ತದೆ.

ನಿಯಮ 4(4) ಈ ನಿಯಮಾವಳಿಗಳ ಉದ್ದೇಶವನ್ನು ಇನ್ನಷ್ಟು ಸ್ಪಷ್ಟವಾಗಿ ತಿಳಿಸುತ್ತದೆ. ಅದರ ಪ್ರಕಾರ ಯಾರ ಪೌರತ್ವ ಸಂಶಯಾಸ್ಪದವಾಗಿದೆಯೋ ಅಂತವರ ವಿವರಗಳನ್ನು ಸ್ಥಳೀಯ ರಿಜಿಸ್ಟ್ರಾರರು ಜನಸಂಖ್ಯಾ ನೋಂದಣಿಯಲ್ಲಿ ಸೂಕ್ತ ಟಿಪ್ಪಣಿಯೊಂದಿಗೆ  ಮುಂದಿನ ತನಿಖೆಗಾಗಿ ನೋಂದಾಯಿಸುತ್ತಾರೆ. ಇಲ್ಲಿ ಎನ್‌ಪಿಆರ್ ಮತ್ತು ಎನ್‌ಆರ್‌ಸಿಗಳ ಪ್ರಕ್ರಿಯೆಗಳು ಒಂದರೊಳಗೊಂದು ಕಲಸಿಹೋಗುತ್ತವೆ. ಎನ್‌ಪಿಆರ್ ಪ್ರಕ್ರಿಯೆಯಲ್ಲಿ ನೀಡಲಾದ ಮಾಹಿತಿಗಳ ಆಧಾರದಲ್ಲಿ ಒಬ್ಬ ವ್ಯಕ್ತಿ ‘ಸಂಶಯಾಸ್ಪದ ನಾಗರಿಕ’ನೇ ಎಂದು ನಿರ್ಧರಿಸಲು ಪೌರತ್ವ ನಿಯಮಾವಳಿಗಳು ಸ್ಥಳೀಯ ಸರಕಾರಿ ಅಧಿಕಾರಿಗಳಿಗೆ ಅವಕಾಶ ಒದಗಿಸಿಕೊಡುತ್ತವೆ.

ಅಸ್ಸಾಮಿನಲ್ಲಿ ನಡೆದ ಎನ್‌ಆರ್‌ಸಿ ಪ್ರಕ್ರಿಯೆಯಲ್ಲಿ ಸ್ಪಷ್ಟವಾಗಿರುವಂತೆ ಲಕ್ಷಾಂತರ ‘ಸಂಶಯಾಸ್ಪದ’ ನಾಗರಿಕರು ದಪ್ಪ ಚರ್ಮದ, ನಿಷ್ಕರುಣಿ ಅಧಿಕಾರಿಗಳ ಮುಂದೆ ತಮ್ಮ ಪೌರತ್ವವನ್ನು ಸಾಬೀತುಪಡಿಸಬೇಕಾಗಿದೆ. ಕತೆ ಇಲ್ಲಿಗೆ ಮುಗಿಯುವುದಿಲ್ಲ.  ಈ ಬೆಂಕಿಯನ್ನು ಹಾಯ್ದು ಎನ್‌ಆರ್‌ಸಿಯೊಳಗೆ ದಾಖಲಾದರೂ, ತಿದ್ದುಪಡಿಯು ಯಾವುದೇ ವ್ಯಕ್ತಿಗೆ ಈ ಯಾದಿಯಲ್ಲಿರುವ ಯಾವುದೇ ವ್ಯಕ್ತಿಯ ವಿರುದ್ಧ ಆಕ್ಷೇಪಣೆಯನ್ನು ಸಲ್ಲಿಸಲು ಅವಕಾಶ ಮಾಡಿಕೊಡುತ್ತದೆ. ಆಕ್ಷೇಪಣೆಗೆ ಒಳಗಾದ ವ್ಯಕ್ತಿ ಮತ್ತೊಮ್ಮೆ ಅದೇ ಕಷ್ಟದಾಯಕ ಪ್ರಕ್ರಿಯೆಯನ್ನು ಪಾರುಮಾಡಬೇಕಾಗುತ್ತದೆ. ಆಕ್ಷೇಪಣೆ ಮಾಡುವ ವ್ಯಕ್ತಿ ನಿಮ್ಮನ್ನು ಕಂಡರಾಗದ ನೆರೆಮನೆಯವರಾಗಿರಬಹುದು ಅಥವಾ ನಿಮ್ಮ ಕಚೇರಿಯಲ್ಲಿಯೇ ಇರುವ ಪ್ರತಿಸ್ಪರ್ಧಿಯೂ ಆಗಿರಬಹುದು.

ಮತ್ತೊಮ್ಮೆ ಅಸ್ಸಾಮಿನ ಅನುಭವವು ಏನನ್ನು ತಿಳಿಸುತ್ತದೆ ಎಂದರೆ, ಲಕ್ಷಾಂತರ ಜನರ ಮೇಲೆ, ಮುಖ್ಯವಾಗಿ ಮುಸ್ಲಿಮರ ಮೇಲೆ ರಾಶಿಗಟ್ಟಲೆ ಆಕ್ಷೇಪಣೆಗಳನ್ನು ಸಲ್ಲಿಸಲಾಗಿತ್ತು. ಅನೇಕ ಸಂದರ್ಭಗಳಲ್ಲಿ ಆಕ್ಷೇಪಣೆ ಸಲ್ಲಿಸಿದ ವ್ಯಕ್ತಿಗಳಿಗೆ ತಾವು ಯಾರ ವಿರುದ್ಧ ಆಕ್ಷೇಪಣೆಯನ್ನು ಸಲ್ಲಿಸಿದ್ದೇವೆ ಎಂದೂ ಗೊತ್ತಿರಲಿಲ್ಲ. ಒಟ್ಟಿನಲ್ಲಿ ಗುಂಪಿನಲ್ಲಿ ಗೋವಿಂದ ಎಂಬಂತಹ ದ್ವೇಷ ಸಾಧನೆ.

ಆದುದರಿಂದ ಈ ನಿಯಮಾವಳಿಗಳು ಭಯ, ಅಭದ್ರತೆ, ಕಿರುಕುಳದ ವಾತಾವರಣವನ್ನು ಸೃಷ್ಟಿಸುವುದು ಖಂಡಿತ ಮತ್ತು ಎಲ್ಲವೂ ಕೊನೆಗೆ ಸ್ಥಳೀಯ ಅಧಿಕಾರಿಯ ಮರ್ಜಿಯ ಮೇಲೆ ನಿಂತಿರುತ್ತದೆ. ಆದುದರಿಂದ, ಇದನ್ನೆಲ್ಲಾ ಸಾಧ್ಯ ಮಾಡುವ ಮತ್ತು ಅದಕ್ಕೆ ಕಾನೂನಿನ ನೆಲೆಗಟ್ಟು ಒದಗಿಸುವ ಪೌರತ್ವ ನಿಯಮಾವಳಿ 2003 ಮತ್ತು ಪೌರತ್ವ ಕಾಯಿದೆಯ ವಿಧಿ 14ಎಯನ್ನು ತಕ್ಷಣವೇ ರದ್ದು ಮಾಡುವಂತೆ ನಾವು ತುರ್ತಾಗಿ ಬೇಡಿಕೆ ಸಲ್ಲಿಸಬೇಕಾಗಿದೆ.

ಇಷ್ಟಿದ್ದರೂ, ಎನ್‌ಪಿಆರ್ ನಿರುಪದ್ರವಿ ಮತ್ತು ಅದರ ಉದ್ದೇಶ ಸರಕಾರಿ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲಪಿಸುವುದು ಎಂದು ಬಿಜೆಪಿ ಹೇಳುತ್ತದೆ. ಇದು ಶುದ್ಧ ಸುಳ್ಳು. ವಕೀಲರಾದ ಮಾಳವಿಕಾ ಪ್ರಸಾದ್ ಅವರು ಹೇಳುವಂತೆ ಎನ್‌ಪಿಆರ್ ಕೇವಲ ಗಣತಿಯಾಗಿದ್ದರೆ, ಅದಕ್ಕೆ ಪೌರತ್ವವನ್ನು ನಿರ್ಧರಿಸುವ ಪೌರತ್ವ ಕಾಯಿದೆಯನ್ನು ಅನ್ವಯಿಸುವ ಅಗತ್ಯವಿರಲಿಲ್ಲ. ಇನ್ನು ಅಭಿವೃದ್ಧಿ ಕಾರ್ಯಕ್ರಮಗಳ ಪ್ರಶ್ನೆ ಬಂದರೆ, ಎಲ್ಲದಕ್ಕೂ ಆಧಾರ್ ಕಾರ್ಡೇ ಆಧಾರ ಎಂದು ಸರಕಾರ ಕಳೆದ ಏಳು ವರ್ಷಗಳಿಂದಲೂ ಹೇಳುತ್ತಾಬಂದಿದೆ. ಸರಕಾರದ ಪರ ವಕೀಲರು ನ್ಯಾಯಾಲಯಗಳಲ್ಲಿ ಮತ್ತು ಅದರ ಚೇಲಾಗಳು ಮಾಧ್ಯಮಗಳಲ್ಲಿ ಇದನ್ನೇ ಹೇಳಿದ್ದಾರೆ. ಅಂದರೆ, ಆಧಾರ್ ಎಂಬುದು ಒಂದು ಗುಜುರಿ ದಾಖಲೆ ಎಂದು ಸರಕಾರ ಈಗ ಒಪ್ಪಿಕೊಳ್ಳಲು ಸಿದ್ಧವಿದೆಯೆ?

ಅಂತಿಮವಾಗಿ ಇನ್ನೊಂದು ಆತಂಕಕಾರಿ ವಿಷಯವಿದೆ. ಮೊತ್ತಮೊದಲ ಬಾರಿಗೆ (2010ಕ್ಕೆ ವಿರುದ್ಧವಾಗಿ) ಎನ್‌ಪಿಆರ್ ಹೆತ್ತವರ ಜನನ ಸ್ಥಳ ಮತ್ತು ದಿನಾಂಕದ ದಾಖಲೆಗಳನ್ನು ಕೇಳಲಿದೆ. ಯಾಕೆಂದರೆ ಪೌರತ್ವ ಕಾಯಿದೆಯ ಪ್ರಕಾರ 1987ರ ನಂತರ ಹುಟ್ಟಿದವರು ಹೆತ್ತವರಲ್ಲಿ ಒಬ್ಬರಾದರೂ ಭಾರತೀಯ ಪೌರರು ಎಂದು ಸಾಬೀತುಪಡಿಸಿದರೆ ಮಾತ್ರ ಭಾರತೀಯ ಪೌರರಾಗುತ್ತಾರೆ. ಆದುದರಿಂದ, ಎನ್‌ಪಿಆರ್ ಕೇವಲ ಗಣತಿಗೆ ಸಂಬಂಧಪಡದ ಪ್ರಶ್ನೆಗಳನ್ನು ಕೇಳುವ ಮೂಲಕ ಎಲ್ಲಾ ರೀತಿಯಲ್ಲಿ ಅದನ್ನು ಪೌರತ್ವದೊಂದಿಗೆ ತಳಕುಹಾಕಿದೆ. ಆದುದರಿಂದ, ದಯವಿಟ್ಟು ಕಾಲಾನುಕ್ರಮವನ್ನು ಅರ್ಥಮಾಡಿಕೊಳ್ಳಿ. ಎನ್‌ಪಿಆರ್ ಮೊದಲು ನಡೆಯುವುದು ಮತ್ತು ಅದರಿಂದ ಪಡೆದ ಮಾಹಿತಿಯನ್ನು ರಾಷ್ಟ್ರವ್ಯಾಪಿ ಎನ್‌ಆರ್‌ಸಿಗಾಗಿ ಬಳಸಿಕೊಳ್ಳಲಾಗುವುದು.

ಎನ್‌ಆರ್‌ಸಿಯು ತಮ್ಮ ಪೌರತ್ವವನ್ನು ಸರಕಾರಿ ಅಧಿಕಾರಿಗಳ ಮುಂದೆ ಸಾಬೀತುಪಡಿಸುವಂತೆ ಪ್ರತಿಯೊಬ್ಬ ನಾಗರಿಕನನ್ನು ಬಲವಂತಪಡಿಸುತ್ತದೆ. ಮತ್ತು ಒಂದು ವೇಳೆ ಹಾಗೆ ಮಾಡಿದರೂ, ಯಾರೂ ಕೂಡಾ ಅದಕ್ಕೆ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ.  ಮೇಲಾಗಿ ದೇಶದೊಳಗೆ ದೊಡ್ಡ ಪ್ರಮಾಣದಲ್ಲಿ ಕಾನೂನುಬಾಹಿರ ವಲಸೆ ನಡೆದಿದೆ ಎನ್ನಲು ಯಾವುದೇ ಸಾಕ್ಷ್ಯಾಧಾರಗಳು ಇಲ್ಲದೇ ಇದ್ದರೂ ಇದನ್ನು ಮಾಡಲಾಗುತ್ತಿದೆ. ಯಾವುದೇ ಪ್ರಜಾಪ್ರಭುತ್ವ ರಾಷ್ಟ್ರವು ತನ್ನ ಪ್ರಜೆಗಳನ್ನು ತೀರಾ ಅನಗತ್ಯವಾಗಿ ಇಂತಹ ಕಂಗೆಡಿಸುವ ಮತ್ತು ನೋವಿನ ಸಂಕಷ್ಟಕ್ಕೆ ತಳ್ಳಿದ್ದಿಲ್ಲ!

(ಲೇಖಕರು ಸುಪ್ರೀಂಕೋರ್ಟಿನ ವಕೀಲರು)


ಇದನ್ನೂ ಓದಿ: ಧರ್ಮಾಧಾರಿತ ಪೌರತ್ವವನ್ನು ಸಂವಿಧಾನ ಸಭೆ ತಿರಸ್ಕರಿಸಿದ ಇತಿಹಾಸ ; ಡಾ. ಅಂಬೇಡ್ಕರ್ ಗೆದ್ದಿದ್ದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....