Homeಮುಖಪುಟಕಾಲಾನುಕ್ರಮವನ್ನು ಅರ್ಥಮಾಡಿಕೊಳ್ಳಿ: ಎನ್‌ಪಿಆರ್-ಎನ್ಆರ್‌ಸಿಯ ನಕಲಿ ಮುಖ!

ಕಾಲಾನುಕ್ರಮವನ್ನು ಅರ್ಥಮಾಡಿಕೊಳ್ಳಿ: ಎನ್‌ಪಿಆರ್-ಎನ್ಆರ್‌ಸಿಯ ನಕಲಿ ಮುಖ!

ಎನ್‌ಪಿಆರ್ ಮತ್ತು ಎನ್‌ಆರ್‌ಸಿ ನಡುವಿನ ಸಂಬಂಧವನ್ನು ಬಿಜೆಪಿ ನಾಯಕರುಗಳೇ ಸಂಸತ್ತಿನಲ್ಲಿಯೇ ಏನಿಲ್ಲವೆಂದರೂ ಒಂಭತ್ತು ಸಲ ಉಲ್ಲೇಖಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆ ಎತ್ತಿತೋರಿಸಿದೆ.

- Advertisement -
- Advertisement -

ಗೌತಮ್ ಭಾಟಿಯಾ

ಅನುವಾದ: ನಿಖಿಲ್ ಕೋಲ್ಪೆ

ಎಪ್ರಿಲ್ ತಿಂಗಳಲ್ಲಿ ಆರಂಭಿಸಲು ಉದ್ದೇಶಿಸಲಾಗಿರುವ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್)ಗಾಗಿ ಕೇಂದ್ರ ಸಂಪುಟವು 3,900 ಕೋಟಿ ರೂ.ಗಳ ಬಜೆಟನ್ನು ಅಂಗೀಕರಿಸಿದೆ. ತಕ್ಷಣವೇ ಕೇಂದ್ರ ಗೃಹಸಚಿವ ಅಮಿತ್ ಶಾ ಮತ್ತು ಸಚಿವ ಪ್ರಕಾಶ್ ಜಾವ್ಡೇಕರ್ ಅವರು ಹೇಳಿಕೆ ನೀಡಿ, ಇದು ಕೇವಲ ಒಂದು ಗಣತಿ ಕಾರ್ಯಕ್ರಮವಾಗಿದ್ದು, ಅದಕ್ಕೂ ವಿವಾದಾತ್ಮಕ ಮತ್ತು ಎಲ್ಲರೂ ಭಯಪಟ್ಟಿರುವ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಗೂ ಸಂಬಂಧವಿಲ್ಲ ಎಂದರು.

ರಾಷ್ಟ್ರವ್ಯಾಪಿ ಪೌರತ್ವ ನೋಂದಣಿಯ ಕುರಿತು ಕೇಂದ್ರ ಸರಕಾರವು ಈ ತನಕ ಚರ್ಚಿಸಿಯೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸಭೆಯೊಂದರಲ್ಲಿ ಹೇಳಿದ ಬೆನ್ನಲ್ಲೇ ಈ ಮಂತ್ರಿಗಳು, ಎನ್‌ಪಿಆರ್ ಜನಗಣತಿಯಂತೆಯೇ ಒಂದು ನಿರುಪದ್ರವಿ ಕಾರ್ಯಕ್ರಮ ಎಂದು ವಾದಿಸಿದರು. ಇದಕ್ಕೆ ಯಾವುದೇ ದಾಖಲೆಗಳ ಅಗತ್ಯವಿಲ್ಲ; ಇದನ್ನು ಸರಕಾರಿ ಕಾರ್ಯಕ್ರಮಗಳ ಪರಿಣಾಮಕಾರಿ ನಿರ್ವಹಣೆಗಾಗಿ ಮಾಡಲಾಗುತ್ತಿದೆ ಎಂದೂ ಅವರು ಹೇಳಿದರು.

ಅಲ್ಪ ಪರಿಶೀಲನೆಯಲ್ಲಿಯೇ ಇವರಿಬ್ಬರ ಹೇಳಿಕೆಗಳನ್ನು ಚಿಂದಿ ಉಡಾಯಿಸಬಹುದು. ಎನ್‌ಪಿಆರ್ ಮತ್ತು ಎನ್‌ಆರ್‌ಸಿ ನಡುವಿನ ಸಂಬಂಧವನ್ನು ಬಿಜೆಪಿ ನಾಯಕರುಗಳೇ ಸಂಸತ್ತಿನಲ್ಲಿಯೇ ಏನಿಲ್ಲವೆಂದರೂ ಒಂಭತ್ತು ಸಲ ಉಲ್ಲೇಖಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆ ಎತ್ತಿತೋರಿಸಿದೆ. ಅದಕ್ಕಿಂತಲೂ ಮುಖ್ಯವಾಗಿ ಇವೆರಡರ ನಡುವಿನ ಸಂಬಂಧವನ್ನು ಕಾನೂನು ಮೂಲಕವೂ ಗಟ್ಟಿಗೊಳಿಸಲಾಗಿದೆ. ವಾಜಪೇಯಿ ಸರಕಾರವು 2003ರಲ್ಲಿಯೇ ಭಾರತೀಯ ಪೌರತ್ವ ಕಾಯಿದೆಯನ್ನು ತಿದ್ದುಪಡಿ ಮಾಡಿ, ವಿಧಿ 14(ಎ)ಯನ್ನು ತರುವುದರ ಮೂಲಕ ಇದಕ್ಕೆ ಕಾನೂನಿನ ನೆಲೆಗಟ್ಟು ಒದಗಿಸಿತ್ತು.

ಇದನ್ನು ಎಷ್ಟು ಸಾಧ್ಯವೋ ಅಷ್ಟು ಷೇರ್ ಮಾಡುವ ಅಗತ್ಯವಿದೆ. ಏಕೆಂದರೆ ಎನ್‌‌ಆರ್‌ಸಿ ಸಿಎಎ ಒಪ್ಪುವುದು ಬಿಡುವುದು ಬೇರೆ ಮಾತು. ಆದರೆ ದೇಶದ ಪ್ರಧಾನಿಯೊಬ್ಬರು ಈ ರೀತಿ ಹಸೀ ಸುಳ್ಳನ್ನು ಸಾರ್ವಜನಿಕವಾಗಿ ಗಟ್ಟಿ ಗಂಟಲಲ್ಲಿ ಕಿರುಲುವುದು ದೇಶಕ್ಕೇ ಅಪಮಾನವಲ್ಲವೇ? ಸಂಸತ್ತಿನಲ್ಲೇ ತನ್ನ ಗೃಹ ಸಚಿವ ಹೇಳಿದ್ದನ್ನು, ತಾನೇ ಮಾಧ್ಯಮ‌ ಸಂದರ್ಶನದಲ್ಲಿ ಹೇಳಿದ್ದನ್ನು ಮರೆತಿರಲು ಸಾಧ್ಯವೇ? ಆ ಪಾಟಿ ಮರೆವಿನ ಖಾಯಿಲೆ ಇದ್ದರೆ ಮೊದಲು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಿ ಚಿಕಿತ್ಸೆ ಕೊಡಿಸಬೇಕು. ಇಲ್ಲ ಎಂದಾದರೆ ಇಂತಹ ಸುಳ್ಳು ಹೇಳಿದ್ದಕ್ಕೆ ಕ್ಷಮೆ ಯಾಚಿಸಬೇಕು.ಯಾವುದಾದರೂ ಮೀಡಿಯಾದಲ್ಲಿ ಯಾರಾದರೂ ಇದನ್ನು ಬಯಲುಗೊಳಿಸಿ ಛೀಮಾರಿ‌ ಹಾಕಿದ್ದಾರೆಯೇ? ಇಲ್ಲದಿದ್ದರೆ ಅವರು ಮಾಧ್ಯಮ ಹೇಗಾಗುತ್ತಾರೆ?

Posted by Vasu Hv on Tuesday, December 24, 2019

ಇದಕ್ಕೆ ಮುಂಚಿತವಾಗಿ 2002ರಲ್ಲಿಯೇ ಪೌರತ್ವ ನಿಯಮಾವಳಿಗಳನ್ನು ರೂಪಿಸಲಾಗಿದ್ದು, ಎನ್‌ಪಿಆರ್ ಎಂಬುದು ಎನ್‌ಆರ್‌ಸಿಯತ್ತ ಒಂದು ಖಂಡಿತವಾದ ಹೆಜ್ಜೆ ಎಂದು ಸ್ಪಷ್ಟಪಡಿಸಲಾಗಿದೆ. ಇದು ಪೌರತ್ವ ನಿಯಮಾವಳಿಗಳ ನಿಯಮ 4(3)ರ ಸಾಲೊಂದರಲ್ಲಿ ಅಡಗಿದೆ. “ಪ್ರತಿಯೊಂದು ಕುಟುಂಬ ಮತ್ತು ವ್ಯಕ್ತಿಯ ವಿವರಗಳನ್ನು ಸ್ಥಳೀಯ ಜನಸಂಖ್ಯಾ ರಿಜಿಸ್ಟರ್‌ನಲ್ಲಿ ನಮೂದಿಸಬೇಕು ಮತ್ತು ಅದನ್ನು ಸ್ಥಳೀಯ ರಿಜಿಸ್ಟ್ರಾರ್ ತನಿಖೆಗೆ ಒಳಪಡಿಸಿ ಪರಿಶೀಲಿಸಬೇಕು” ಎಂದು ಅದರಲ್ಲಿ ಹೇಳಲಾಗಿದೆ. ಬೇರೆಯೇ ರೀತಿಯಲ್ಲಿ ಹೇಳುವುದಾದರೆ, ಎನ್‌ಪಿಆರ್‌ಗಾಗಿ ವ್ಯಕ್ತಿಗಳು ಮತ್ತು ಕುಟುಂಬಗಳಿಂದ ಸಂಗ್ರಹಿಸಲಾದ ಮಾಹಿತಿಗಳನ್ನು ಎನ್‌ಆರ್‌ಸಿಗಾಗಿ ನಿಯೋಜಿತರಾದ ಸರಕಾರಿ ಅಧಿಕಾರಿಗಳು ಪರಿಶೀಲಿಸಲು ಕಾನೂನು ಅವಕಾಶ ಮಾಡಿಕೊಡುತ್ತದೆ.

ನಿಯಮ 4(4) ಈ ನಿಯಮಾವಳಿಗಳ ಉದ್ದೇಶವನ್ನು ಇನ್ನಷ್ಟು ಸ್ಪಷ್ಟವಾಗಿ ತಿಳಿಸುತ್ತದೆ. ಅದರ ಪ್ರಕಾರ ಯಾರ ಪೌರತ್ವ ಸಂಶಯಾಸ್ಪದವಾಗಿದೆಯೋ ಅಂತವರ ವಿವರಗಳನ್ನು ಸ್ಥಳೀಯ ರಿಜಿಸ್ಟ್ರಾರರು ಜನಸಂಖ್ಯಾ ನೋಂದಣಿಯಲ್ಲಿ ಸೂಕ್ತ ಟಿಪ್ಪಣಿಯೊಂದಿಗೆ  ಮುಂದಿನ ತನಿಖೆಗಾಗಿ ನೋಂದಾಯಿಸುತ್ತಾರೆ. ಇಲ್ಲಿ ಎನ್‌ಪಿಆರ್ ಮತ್ತು ಎನ್‌ಆರ್‌ಸಿಗಳ ಪ್ರಕ್ರಿಯೆಗಳು ಒಂದರೊಳಗೊಂದು ಕಲಸಿಹೋಗುತ್ತವೆ. ಎನ್‌ಪಿಆರ್ ಪ್ರಕ್ರಿಯೆಯಲ್ಲಿ ನೀಡಲಾದ ಮಾಹಿತಿಗಳ ಆಧಾರದಲ್ಲಿ ಒಬ್ಬ ವ್ಯಕ್ತಿ ‘ಸಂಶಯಾಸ್ಪದ ನಾಗರಿಕ’ನೇ ಎಂದು ನಿರ್ಧರಿಸಲು ಪೌರತ್ವ ನಿಯಮಾವಳಿಗಳು ಸ್ಥಳೀಯ ಸರಕಾರಿ ಅಧಿಕಾರಿಗಳಿಗೆ ಅವಕಾಶ ಒದಗಿಸಿಕೊಡುತ್ತವೆ.

ಅಸ್ಸಾಮಿನಲ್ಲಿ ನಡೆದ ಎನ್‌ಆರ್‌ಸಿ ಪ್ರಕ್ರಿಯೆಯಲ್ಲಿ ಸ್ಪಷ್ಟವಾಗಿರುವಂತೆ ಲಕ್ಷಾಂತರ ‘ಸಂಶಯಾಸ್ಪದ’ ನಾಗರಿಕರು ದಪ್ಪ ಚರ್ಮದ, ನಿಷ್ಕರುಣಿ ಅಧಿಕಾರಿಗಳ ಮುಂದೆ ತಮ್ಮ ಪೌರತ್ವವನ್ನು ಸಾಬೀತುಪಡಿಸಬೇಕಾಗಿದೆ. ಕತೆ ಇಲ್ಲಿಗೆ ಮುಗಿಯುವುದಿಲ್ಲ.  ಈ ಬೆಂಕಿಯನ್ನು ಹಾಯ್ದು ಎನ್‌ಆರ್‌ಸಿಯೊಳಗೆ ದಾಖಲಾದರೂ, ತಿದ್ದುಪಡಿಯು ಯಾವುದೇ ವ್ಯಕ್ತಿಗೆ ಈ ಯಾದಿಯಲ್ಲಿರುವ ಯಾವುದೇ ವ್ಯಕ್ತಿಯ ವಿರುದ್ಧ ಆಕ್ಷೇಪಣೆಯನ್ನು ಸಲ್ಲಿಸಲು ಅವಕಾಶ ಮಾಡಿಕೊಡುತ್ತದೆ. ಆಕ್ಷೇಪಣೆಗೆ ಒಳಗಾದ ವ್ಯಕ್ತಿ ಮತ್ತೊಮ್ಮೆ ಅದೇ ಕಷ್ಟದಾಯಕ ಪ್ರಕ್ರಿಯೆಯನ್ನು ಪಾರುಮಾಡಬೇಕಾಗುತ್ತದೆ. ಆಕ್ಷೇಪಣೆ ಮಾಡುವ ವ್ಯಕ್ತಿ ನಿಮ್ಮನ್ನು ಕಂಡರಾಗದ ನೆರೆಮನೆಯವರಾಗಿರಬಹುದು ಅಥವಾ ನಿಮ್ಮ ಕಚೇರಿಯಲ್ಲಿಯೇ ಇರುವ ಪ್ರತಿಸ್ಪರ್ಧಿಯೂ ಆಗಿರಬಹುದು.

ಮತ್ತೊಮ್ಮೆ ಅಸ್ಸಾಮಿನ ಅನುಭವವು ಏನನ್ನು ತಿಳಿಸುತ್ತದೆ ಎಂದರೆ, ಲಕ್ಷಾಂತರ ಜನರ ಮೇಲೆ, ಮುಖ್ಯವಾಗಿ ಮುಸ್ಲಿಮರ ಮೇಲೆ ರಾಶಿಗಟ್ಟಲೆ ಆಕ್ಷೇಪಣೆಗಳನ್ನು ಸಲ್ಲಿಸಲಾಗಿತ್ತು. ಅನೇಕ ಸಂದರ್ಭಗಳಲ್ಲಿ ಆಕ್ಷೇಪಣೆ ಸಲ್ಲಿಸಿದ ವ್ಯಕ್ತಿಗಳಿಗೆ ತಾವು ಯಾರ ವಿರುದ್ಧ ಆಕ್ಷೇಪಣೆಯನ್ನು ಸಲ್ಲಿಸಿದ್ದೇವೆ ಎಂದೂ ಗೊತ್ತಿರಲಿಲ್ಲ. ಒಟ್ಟಿನಲ್ಲಿ ಗುಂಪಿನಲ್ಲಿ ಗೋವಿಂದ ಎಂಬಂತಹ ದ್ವೇಷ ಸಾಧನೆ.

ಆದುದರಿಂದ ಈ ನಿಯಮಾವಳಿಗಳು ಭಯ, ಅಭದ್ರತೆ, ಕಿರುಕುಳದ ವಾತಾವರಣವನ್ನು ಸೃಷ್ಟಿಸುವುದು ಖಂಡಿತ ಮತ್ತು ಎಲ್ಲವೂ ಕೊನೆಗೆ ಸ್ಥಳೀಯ ಅಧಿಕಾರಿಯ ಮರ್ಜಿಯ ಮೇಲೆ ನಿಂತಿರುತ್ತದೆ. ಆದುದರಿಂದ, ಇದನ್ನೆಲ್ಲಾ ಸಾಧ್ಯ ಮಾಡುವ ಮತ್ತು ಅದಕ್ಕೆ ಕಾನೂನಿನ ನೆಲೆಗಟ್ಟು ಒದಗಿಸುವ ಪೌರತ್ವ ನಿಯಮಾವಳಿ 2003 ಮತ್ತು ಪೌರತ್ವ ಕಾಯಿದೆಯ ವಿಧಿ 14ಎಯನ್ನು ತಕ್ಷಣವೇ ರದ್ದು ಮಾಡುವಂತೆ ನಾವು ತುರ್ತಾಗಿ ಬೇಡಿಕೆ ಸಲ್ಲಿಸಬೇಕಾಗಿದೆ.

ಇಷ್ಟಿದ್ದರೂ, ಎನ್‌ಪಿಆರ್ ನಿರುಪದ್ರವಿ ಮತ್ತು ಅದರ ಉದ್ದೇಶ ಸರಕಾರಿ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲಪಿಸುವುದು ಎಂದು ಬಿಜೆಪಿ ಹೇಳುತ್ತದೆ. ಇದು ಶುದ್ಧ ಸುಳ್ಳು. ವಕೀಲರಾದ ಮಾಳವಿಕಾ ಪ್ರಸಾದ್ ಅವರು ಹೇಳುವಂತೆ ಎನ್‌ಪಿಆರ್ ಕೇವಲ ಗಣತಿಯಾಗಿದ್ದರೆ, ಅದಕ್ಕೆ ಪೌರತ್ವವನ್ನು ನಿರ್ಧರಿಸುವ ಪೌರತ್ವ ಕಾಯಿದೆಯನ್ನು ಅನ್ವಯಿಸುವ ಅಗತ್ಯವಿರಲಿಲ್ಲ. ಇನ್ನು ಅಭಿವೃದ್ಧಿ ಕಾರ್ಯಕ್ರಮಗಳ ಪ್ರಶ್ನೆ ಬಂದರೆ, ಎಲ್ಲದಕ್ಕೂ ಆಧಾರ್ ಕಾರ್ಡೇ ಆಧಾರ ಎಂದು ಸರಕಾರ ಕಳೆದ ಏಳು ವರ್ಷಗಳಿಂದಲೂ ಹೇಳುತ್ತಾಬಂದಿದೆ. ಸರಕಾರದ ಪರ ವಕೀಲರು ನ್ಯಾಯಾಲಯಗಳಲ್ಲಿ ಮತ್ತು ಅದರ ಚೇಲಾಗಳು ಮಾಧ್ಯಮಗಳಲ್ಲಿ ಇದನ್ನೇ ಹೇಳಿದ್ದಾರೆ. ಅಂದರೆ, ಆಧಾರ್ ಎಂಬುದು ಒಂದು ಗುಜುರಿ ದಾಖಲೆ ಎಂದು ಸರಕಾರ ಈಗ ಒಪ್ಪಿಕೊಳ್ಳಲು ಸಿದ್ಧವಿದೆಯೆ?

ಅಂತಿಮವಾಗಿ ಇನ್ನೊಂದು ಆತಂಕಕಾರಿ ವಿಷಯವಿದೆ. ಮೊತ್ತಮೊದಲ ಬಾರಿಗೆ (2010ಕ್ಕೆ ವಿರುದ್ಧವಾಗಿ) ಎನ್‌ಪಿಆರ್ ಹೆತ್ತವರ ಜನನ ಸ್ಥಳ ಮತ್ತು ದಿನಾಂಕದ ದಾಖಲೆಗಳನ್ನು ಕೇಳಲಿದೆ. ಯಾಕೆಂದರೆ ಪೌರತ್ವ ಕಾಯಿದೆಯ ಪ್ರಕಾರ 1987ರ ನಂತರ ಹುಟ್ಟಿದವರು ಹೆತ್ತವರಲ್ಲಿ ಒಬ್ಬರಾದರೂ ಭಾರತೀಯ ಪೌರರು ಎಂದು ಸಾಬೀತುಪಡಿಸಿದರೆ ಮಾತ್ರ ಭಾರತೀಯ ಪೌರರಾಗುತ್ತಾರೆ. ಆದುದರಿಂದ, ಎನ್‌ಪಿಆರ್ ಕೇವಲ ಗಣತಿಗೆ ಸಂಬಂಧಪಡದ ಪ್ರಶ್ನೆಗಳನ್ನು ಕೇಳುವ ಮೂಲಕ ಎಲ್ಲಾ ರೀತಿಯಲ್ಲಿ ಅದನ್ನು ಪೌರತ್ವದೊಂದಿಗೆ ತಳಕುಹಾಕಿದೆ. ಆದುದರಿಂದ, ದಯವಿಟ್ಟು ಕಾಲಾನುಕ್ರಮವನ್ನು ಅರ್ಥಮಾಡಿಕೊಳ್ಳಿ. ಎನ್‌ಪಿಆರ್ ಮೊದಲು ನಡೆಯುವುದು ಮತ್ತು ಅದರಿಂದ ಪಡೆದ ಮಾಹಿತಿಯನ್ನು ರಾಷ್ಟ್ರವ್ಯಾಪಿ ಎನ್‌ಆರ್‌ಸಿಗಾಗಿ ಬಳಸಿಕೊಳ್ಳಲಾಗುವುದು.

ಎನ್‌ಆರ್‌ಸಿಯು ತಮ್ಮ ಪೌರತ್ವವನ್ನು ಸರಕಾರಿ ಅಧಿಕಾರಿಗಳ ಮುಂದೆ ಸಾಬೀತುಪಡಿಸುವಂತೆ ಪ್ರತಿಯೊಬ್ಬ ನಾಗರಿಕನನ್ನು ಬಲವಂತಪಡಿಸುತ್ತದೆ. ಮತ್ತು ಒಂದು ವೇಳೆ ಹಾಗೆ ಮಾಡಿದರೂ, ಯಾರೂ ಕೂಡಾ ಅದಕ್ಕೆ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ.  ಮೇಲಾಗಿ ದೇಶದೊಳಗೆ ದೊಡ್ಡ ಪ್ರಮಾಣದಲ್ಲಿ ಕಾನೂನುಬಾಹಿರ ವಲಸೆ ನಡೆದಿದೆ ಎನ್ನಲು ಯಾವುದೇ ಸಾಕ್ಷ್ಯಾಧಾರಗಳು ಇಲ್ಲದೇ ಇದ್ದರೂ ಇದನ್ನು ಮಾಡಲಾಗುತ್ತಿದೆ. ಯಾವುದೇ ಪ್ರಜಾಪ್ರಭುತ್ವ ರಾಷ್ಟ್ರವು ತನ್ನ ಪ್ರಜೆಗಳನ್ನು ತೀರಾ ಅನಗತ್ಯವಾಗಿ ಇಂತಹ ಕಂಗೆಡಿಸುವ ಮತ್ತು ನೋವಿನ ಸಂಕಷ್ಟಕ್ಕೆ ತಳ್ಳಿದ್ದಿಲ್ಲ!

(ಲೇಖಕರು ಸುಪ್ರೀಂಕೋರ್ಟಿನ ವಕೀಲರು)


ಇದನ್ನೂ ಓದಿ: ಧರ್ಮಾಧಾರಿತ ಪೌರತ್ವವನ್ನು ಸಂವಿಧಾನ ಸಭೆ ತಿರಸ್ಕರಿಸಿದ ಇತಿಹಾಸ ; ಡಾ. ಅಂಬೇಡ್ಕರ್ ಗೆದ್ದಿದ್ದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...