HomeಮುಖಪುಟNPR ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಅಭದ್ರತೆ ಉಂಟುಮಾಡಿದೆ: ಆಂಧ್ರ ಸಿಎಂ ಜಗನ್‌

NPR ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಅಭದ್ರತೆ ಉಂಟುಮಾಡಿದೆ: ಆಂಧ್ರ ಸಿಎಂ ಜಗನ್‌

2010 ರಲ್ಲಿ ಚಾಲ್ತಿಯಲ್ಲಿದ್ದ ಷರತ್ತುಗಳನ್ನು ಅಳವಡಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲು ನಾವು ನಿರ್ಧರಿಸಿದ್ದೇವೆ ಎಂದು ಜಗನ್‌ ಟ್ವೀಟ್‌ ಮಾಡಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ತಮ್ಮ ರಾಜ್ಯದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್)ಗಾಗಿ 2010 ರಲ್ಲಿ ಇದ್ದ ಷರತ್ತುಗಳನ್ನು ಅನುಸರಿಸುವಂತೆ ಕೇಂದ್ರವನ್ನು ಕೋರಲಿದ್ದೇನೆ ಎಂದು ಘೋಷಿಸಿದರು.

ಎನ್‌ಪಿಆರ್‌ನಲ್ಲಿ ಪ್ರಸ್ತಾಪಿಸಲಾದ ಕೆಲವು ಪ್ರಶ್ನೆಗಳು ನನ್ನ ರಾಜ್ಯದ ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಅಭದ್ರತೆಯನ್ನು ಉಂಟುಮಾಡುತ್ತಿವೆ. ನಮ್ಮ ಪಕ್ಷದೊಳಗೆ ವಿಸ್ತಾರವಾದ ಸಮಾಲೋಚನೆಗಳ ನಂತರ, 2010 ರಲ್ಲಿ ಚಾಲ್ತಿಯಲ್ಲಿದ್ದ ಷರತ್ತುಗಳನ್ನು ಅಳವಡಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲು ನಾವು ನಿರ್ಧರಿಸಿದ್ದೇವೆ ಎಂದು ಜಗನ್‌ ಟ್ವೀಟ್‌ ಮಾಡಿದ್ದಾರೆ.

ಇದಕ್ಕಾಗಿ ಮುಂಬರುವ ಅಸೆಂಬ್ಲಿ ಅಧಿವೇಶನದಲ್ಲಿ ನಾವು ನಿರ್ಣಯವನ್ನು ಅಂಗೀಕರಿಸುತ್ತೇವೆ ಎಂದು ಸಹ ಜಗನ್‌ ಹೇಳಿದ್ದಾರೆ.

ಏಪ್ರಿಲ್‌ನಿಂದ ಸೆಪ್ಟಂಬರ್‌ ಒಳಗೆ ಎನ್‌ಪಿಆರ್‌ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರ ಆದೇಶಿಸಿದ ಬೆನ್ನಲ್ಲೇ ಜಗನ್‌ ಮೋಹನ್‌ ರೆಡ್ಡಿಯವರ ಈ ತೀರ್ಮಾನ ವ್ಯಕ್ತಿವಾಗಿದೆ. ಈಗಿರುವ ಎನ್‌ಪಿಆರ್‌ ಪ್ರಶ್ನಾವಳಿಗಳು ತಮ್ಮ ಪೋಷಕರ ಜನ್ಮದಿನಾಂಕ ಮತ್ತು ಹುಟ್ಟಿದ ಸ್ಥಳಗಳನ್ನು ಕೇಳುವುದರಿಂದ ಇದು ಎನ್‌ಆರ್‌ಸಿ ಜಾರಿಗೆ ಪ್ರಥಮ ಹೆಜ್ಜೆಯಾಗಿದೆ ಎಂದು ಹಲವಾರು ಜನ ಅನುಮಾನ ವ್ಯಕ್ತಪಡಿಸಿದ್ದಾರೆ. ಗೃಹ ಸಚಿವರೆ ಈ ಕುರಿತು ಕೆಲವೆಡೆ ಹೇಳಿಕೆಗಳನ್ನು ಸಹ ನೀಡಿದ್ದಾರೆ.

“ಎನ್‌ಪಿಆರ್ ಜಾರಿಗೆ ಸಂಬಂಧಿಸಿದಂತೆ ಹಲವಾರು ಭಾಗಗಳಲ್ಲಿ ಹಲವಾರು ಆತಂಕಗಳು ಮತ್ತು ಅನುಮಾನಗಳು ವ್ಯಕ್ತವಾಗುತ್ತಿರುವುದರಿಂದ, ಎಲ್ಲಾ ಜಿಲ್ಲಾಧಿಕಾರಿಗಳು / ಪ್ರಧಾನ ಜನಗಣತಿ ಅಧಿಕಾರಿಗಳಿಗೆ ಈ ಕೆಳಗಿನ ಸ್ಪಷ್ಟೀಕರಣಗಳನ್ನು ‘ಪದೇ ಪದೇ ಕೇಳಲಾಗುವ ಪ್ರಶ್ನೆಗಳು’ (FAQ) ರೂಪದಲ್ಲಿ ನೀಡಲಾಗುತ್ತದೆ. ಸಂಬಂಧಪಟ್ಟ ಎಲ್ಲರಿಗೂ ಸುಲಭವಾಗಿ ಪ್ರಸಾರ ಮಾಡಲಾಗುವುದು” ಎಂದು ಸಾಮಾನ್ಯ ಆಡಳಿತ ಇಲಾಖೆ ಕಾರ್ಯದರ್ಶಿ ಶಶಿ ಭೂಷಣ್ ಕುಮಾರ್ ಜನವರಿ 22 ರಂದು ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದರು.

ಎನ್‌ಪಿಆರ್ ನಡೆಯುವ ಸಮಯದಲ್ಲಿ ಜನರು ಯಾವುದೇ ದಾಖಲೆಗಳನ್ನು ಎಣಿಕೆದಾರರಿಗೆ ಸಲ್ಲಿಸುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದರು.

“ಎನ್‌ಪಿಆರ್‌ ಮಾಡುವವರು ಜನರು ನೀಡುವ ಯಾವುದೇ ಉತ್ತರಗಳನ್ನು ದಾಖಲಿಸುವುದು ಅಗತ್ಯವಾಗಿರುತ್ತದೆ. ಯಾವುದೇ ಪ್ರಶ್ನೆಗೆ ಹೆಚ್ಚಿನ ಉತ್ತರಗಳನ್ನು ನೀಡುವಂತೆ ಒತ್ತಾಯಿಸಬಾರದು, ಅವರು ನೀಡಲು ಇಚ್ಛಿಸದಿದ್ದರೆ  ಯಾವುದೇ ದಾಖಲೆಯನ್ನು ಕೇಳಬಾರದು” ಎಂದು ಕುಮಾರ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...