Homeಮುಖಪುಟಯಾವುದೇ ಕಾರಣಕ್ಕೂ NPR ಜಾರಿಗೊಳಿಸುವುದಿಲ್ಲ : ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್‌ನಾಥ್‌ ಘೋಷಣೆ

ಯಾವುದೇ ಕಾರಣಕ್ಕೂ NPR ಜಾರಿಗೊಳಿಸುವುದಿಲ್ಲ : ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್‌ನಾಥ್‌ ಘೋಷಣೆ

ಏಪ್ರಿಲ್ 1ರಿಂದ ಸೆಪ್ಟೆಂಬರ್ 30ರವರೆಗೆ ಜನಗಣತಿಯ ಜೊತೆಗೆ ಎನ್‌ಪಿಆರ್ ಕೈಗೊಳ್ಳಲು ಈ ಮೊದಲು ನಿರ್ಧರಿಸಲಾಗಿತ್ತು.

- Advertisement -
- Advertisement -

ಮಧ್ಯಪ್ರದೇಶದಲ್ಲಿ ತಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಎನ್‌ಪಿಆರ್‌ ಜಾರಿಗೊಳಿಸುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿ ಕಮಲ್‌ನಾಥ್‌ ಇಂದು ಸಂಜೆ ಘೋಷಿಸಿದ್ದಾರೆ.

ಭೋಪಾಲ್‌ನ ಶಾಸಕ ಆರಿಫ್‌ ಮಸೂದ್‌ರವರು ಎನ್‌ಪಿಆರ್‌ ಕುರಿತು ತಮ್ಮ ಸರ್ಕಾರ ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು, ಎನ್‌ಪಿಆರ್‌ ವಿರುದ್ಧ ನಿಲುವು ಮಂಡಿಸಬೇಕು ಇಲ್ಲದಿದ್ದಲ್ಲಿ ಪಕ್ಷ ತೊರೆಯುತ್ತೇನೆ ಎಂದು ಬೆದರಿಕೆ ಹಾಕಿದ ಬೆನ್ನಲ್ಲೇ ಮುಖ್ಯಮಂತ್ರಿ ಕಮಲ್‌ನಾಥ್‌ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ನಮ್ಮಲ್ಲಿ ಎನ್‌ಪಿಆರ್ ಅಧಿಸೂಚನೆಯನ್ನು 2019ರ ಡಿಸೆಂಬರ್ 9ರಂದು ಹೊರಡಿಸಲಾಯಿತು. ಆದರೆ ಪ್ರಸ್ತುತ ನಾವು ರಾಜ್ಯದಲ್ಲಿ ಎನ್‌ಪಿಆರ್ ಅನ್ನು ಕಾರ್ಯಗತಗೊಳಿಸಲು ಹೋಗುತ್ತಿಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪೌರತ್ವ ಕಾಯ್ದೆ- 1955ರಂತೆ ನಾವು ಮೊದಲು ಮುಂದುವರೆಯುತ್ತಿದ್ದೆವೆ. 2003 ರ ನಿಯಮ 3ರ ನಿಬಂಧನೆಗಳಂತೆ ನಮ್ಮ ಆದೇಶ ಹೊರಡಿಸಿದ್ದೆವು. ಆದರೆ ಇದರ ಹೊರತಾಗಿಯೂ ನಾವು ಎನ್‌ಪಿಆರ್ ಅನ್ನು ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ. ಏಕೆಂದರೆ ಕೇಂದ್ರ ಸರ್ಕಾರವು ಸೂಚಿಸಿದ ಎನ್‌ಪಿಆರ್ ಅನ್ನು ಸಿಎಎ 2019ರ ನಂತರ ಜಾರಿ ಮಾಡುತ್ತಿರುವುದು ಸರಿಯಿಲ್ಲ ಎಂದು ಅವರು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.

ಮಧ್ಯಪ್ರದೇಶ ಸರ್ಕಾರದ ವಕ್ತಾರ ಮತ್ತು ಜನಸಂಪರ್ಕ ಸಚಿವ ಪಿ ಒ ಶರ್ಮಾ ಅವರು ರಾಜ್ಯದಲ್ಲಿ ಎನ್‌ಪಿಆರ್ ಜಾರಿಗೆ ಬರುವುದಿಲ್ಲ ಎಂದು ಸಮರ್ಥಿಸಿಕೊಂಡರು. ಈ ವಿಷಯದ ಬಗ್ಗೆ ಗೆಜೆಟ್ ಅಧಿಸೂಚನೆಯನ್ನು ಮೊದಲೇ ನೀಡಲಾಗಿದೆ ಮತ್ತು ಸ್ಪಷ್ಟಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹಿಂದಿನ ದಿನ ತಾನೇ ಕಾಂಗ್ರೆಸ್‌ ಶಾಸಕ ಆರಿಫ್‌ ಮಸೂದ್‌ರವರು ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸರ್ಕಾರವು ಎನ್‌ಪಿಆರ್‌ ಮಾಡಬೇಕೆಂದು ಮಾರ್ಗದರ್ಶನ ನೀಡುತ್ತಿದೆ. ಇದು ಸರಿಯಾದುದ್ದಲ್ಲ ಇದನ್ನು ವಾಪಸ್‌ ಪಡೆಯಬೇಕೆಂದು ಒತ್ತಾಯಿಸಿದ್ದರು.

ಏಪ್ರಿಲ್ 1ರಿಂದ ಸೆಪ್ಟೆಂಬರ್ 30ರವರೆಗೆ ಜನಗಣತಿಯ ಜೊತೆಗೆ ಎನ್‌ಪಿಆರ್ ಕೈಗೊಳ್ಳಲು ನಿರ್ಧರಿಸಲಾಗಿತ್ತು. ಜನಗಣತಿ ಆಯೋಗವು ದೇಶದ ಪ್ರತಿ ಸಾಮಾನ್ಯ ನಿವಾಸಿಯ ಸಮಗ್ರ ಗುರುತಿನ ಡೇಟಾಬೇಸ್ ರಚಿಸುವುದು ಎನ್‌ಪಿಆರ್‌ನ ಉದ್ದೇಶವೆಂದು ಹೇಳಿತ್ತು.

ಆದರೆ ಬಿಜೆಪಿಯೇತರ ಹೆಚ್ಚಿನ ಪಕ್ಷಗಳು ಸಿಎಎಯನ್ನು ವಿರೋಧಿಸಿದ್ದವಾದರೂ ಎನ್‌ಪಿಆರ್ ಅನ್ನು ವಿರೋಧಿಸಿ ತೀರ್ಮಾನ ತೆಗೆದುಕೊಂಡಿದ್ದು ಕೇರಳ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಮಾತ್ರವಾಗಿದ್ದವು. ಎನ್‌ಪಿಆರ್ ಎನ್‌ಆರ್‌ಸಿ ಅನುಷ್ಠಾನಕ್ಕೆ ಪೂರ್ವಭಾವಿಯಾಗಿದೆ ಎಂಬ ಕಾರಣಕ್ಕೆ ಈ ನಿಲುವಿಗೆ ಬರಲಾಗುತ್ತಿದೆ.

ಎನ್‌ಆರ್‌ಸಿ (ನಾಗರಿಕರ ರಾಷ್ಟ್ರೀಯ ನೋಂದಣಿ) ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರವು ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...