Homeಮುಖಪುಟಎನ್.ಪಿ.ಆರ್ - ಜನಗಣತಿಗೆ ಸಿದ್ದತೆ : ಏ.15 ರಿಂದ ಕುಟುಂಬದ ಸಮಗ್ರ ಮಾಹಿತಿ ನೀಡಬೇಕು

ಎನ್.ಪಿ.ಆರ್ – ಜನಗಣತಿಗೆ ಸಿದ್ದತೆ : ಏ.15 ರಿಂದ ಕುಟುಂಬದ ಸಮಗ್ರ ಮಾಹಿತಿ ನೀಡಬೇಕು

- Advertisement -
- Advertisement -

ರಾಷ್ಟ್ರೀಯ ಜನಸಂಖ್ಯಾ ನೋಂದಣಿಗೆ ರಾಜ್ಯ ಸರ್ಕಾರ ಸಕಲ ಸಿದ್ದತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಶಿಕ್ಷಕರಿಗೆ ತರಬೇತಿ ನೀಡುವ ಪ್ರಕ್ರಿಯೆ ಪೂರ್ಣಗೊಂಡಿದೆ. ಜನರಿಂದ ಯಾವ ರೀತಿ ಮಾಹಿತಿ ಪಡೆಯಬೇಕು, ಯಾವ ಪ್ರಶ್ನೆಗಳನ್ನು ಕೇಳಬೇಕು ಎಂಬ ಬಗ್ಗೆ ತರಬೇತಿ ನೀಡಿ ಶಿಕ್ಷಕರನ್ನು ಸಜ್ಜುಗೊಳಿಸಲಾಗಿದೆ. ಶಿಕ್ಷಕರು ಎನ್.ಪಿ.ಆರ್ ಮತ್ತು ಜನಗಣತಿಗೆ ಸಂಬಂಧ ಏಪ್ರಿಲ್ 15 ರಿಂದ ಮನೆಮನೆ ಭೇಟಿ ನೀಡಿ ಕುಟುಂಬದ ಸಮಗ್ರ ಮಾಹಿತಿ ಸಂಗ್ರಹಿಸುವ ಕಾರ್ಯಕ್ಕೆ ಸಿದ್ದರಾಗಿ ನಿಂತಿದ್ದಾರೆ.

ಎನ್ ಪಿ.ಆರ್ ಗಣತಿ ವೇಳೆ ಗಣತಿದಾರರು ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡಬೇಕು. ಪ್ರತಿಯೊಂದು ಪ್ರಶ್ನೆಗೂ ಉತ್ತರ ಸಮರ್ಪಕವಾಗಿರಬೇಕು. ಆಧಾರ್ ನಂಬರ್, ಜನ್ಮದಿನಾಂಕ, ತಂದೆ-ತಾಯಿಯ ಸಂಪೂರ್ಣ ಮಾಹಿತಿ ನೀಡಬೇಕು. ತಂದೆ ಹುಟ್ಟಿದ ಗ್ರಾಮ, ತಾಯಿಯ ತವರಿನ ಕುರಿತು ಮಾಹಿತಿ ನೀಡಬೇಕು. ಪ್ರತಿಯೊಬ್ಬ ವ್ಯಕ್ತಿಯ ಆಧಾರ್ ಮತ್ತು ಜನ್ಮದಿನಾಂಕವನ್ನು ನೀಡಲೇಬೇಕು. ವ್ಯಕ್ತಿಯ ತಂದೆ, ತಾಯಿ, ಹೆಂಡತಿ, ಗಂಡ, ಮಕ್ಕಳ ವಿವರಗಳನ್ನು ಕೊಡಬೇಕು.

ಬಹುತೇಕರಿಗೆ ತಮ್ಮ ತಂದೆ-ತಾಯಿಗಳು ಯಾವ ಗ್ರಾಮದಲ್ಲಿ ಜನಿಸಿದರು.  ಎಲ್ಲಿಂದ ಬಂದವರು ಎಂಬ ಬಗ್ಗೆ ಮಾಹಿತಿಯೇ ಇಲ್ಲ. ತಂದೆ-ತಾಯಿಗಳ ಜನ್ಮದಿನಾಂಕವೂ ಇಲ್ಲ. ಅಷ್ಟೇ ಅಲ್ಲ ಬಹುತೇಕರಿಗೆ 1980ಕ್ಕೂ ಮೊದಲು ಜನಿಸಿದವರಿಗೆ ಜನ್ಮ ಪ್ರಮಾಣ ಪತ್ರಗಳೇ ಇಲ್ಲ. ನಂತರದವರಿಗೂ ಇಲ್ಲ. ಎಸ್.ಎಸ್.ಎಲ್.ಸಿ ಅಂಕಪಟ್ಟಿಯಲ್ಲಿ ಇರುವ ಜನ್ಮದಿನಾಂಕವನ್ನು ಬಿಟ್ಟರೆ ಬೇರೊಂದು ಪ್ರಮಾಣ ಪತ್ರ ಇಲ್ಲ. ಹಾಗಾಗಿ ಮಾಹಿತಿ ನೀಡುವಾಗ ಅಪ್ಪ-ಅಮ್ಮಂದಿರ ಹುಟ್ಟಿದ ಗ್ರಾಮದ ಬಗ್ಗೆ ಮಾಹಿತಿ ನೀಡದಿದ್ದರೆ ಮಾಹಿತಿ ಕೊಡಲು ನಿರಾಕರಿಸಿದ್ದಾರೆ ಎಂದು ಬರೆದುಕೊಂಡು ಹೋಗಲಾಗುತ್ತದೆ..

ಕೇಂದ್ರ ಸರ್ಕಾರ ಎನ್.ಪಿ.ಆರ್ ಗಣತಿಯ ಬಗ್ಗೆ ಪ್ರಶ್ನಾವಳಿ ಅಂತಿಮಗೊಳಿಸಿಲ್ಲ ಎಂದು ಹೇಳುತ್ತಿದೆ. ಕೆಲವು ಪ್ರಶ್ನೆಗಳನ್ನು ತೆಗೆದುಹಾಕುವಂತೆ ಪ್ರತಿಪಕ್ಷಗಳು ಆಗ್ರಹಿಸುತ್ತಿವೆ. ದೇಶಾದ್ಯಂತ ಪ್ರತಿಭಟನೆಗಳು ನಡೆಸುತ್ತಿವೆ. ಸುಮಾರು 10ಕ್ಕೂ ಹೆಚ್ಚು ರಾಜ್ಯಗಳು ಎನ್.ಪಿ.ಆರ್. ನಡೆಸುವುದಿಲ್ಲವೆಂದು ನಿರ್ಣಯ ಕೈಗೊಂಡಿವೆ. ಕೇಂದ್ರ ಸರ್ಕಾರ ಎನ್.ಪಿ.ಆರ್ ನಡೆಸಬೇಕೇ ಬೇಡವೇ ಎಂಬ ಬಗ್ಗೆ ಜನರನ್ನು ಗೊಂದಲದಲ್ಲಿಟ್ಟಿದೆ. ಎನ್.ಪಿ.ಆರ್ ಪ್ರಶ್ನಾವಳಿಗಳು ಸ್ಪಷ್ಟಗೊಂಡಿಲ್ಲ. ಆದರೆ ತರಬೇತಿ ಪಡೆದಿರುವ ಶಿಕ್ಷಕರು ಜನರ ವಿರೋಧದ ನಡುವೆಯೂ ಎನ್.ಪಿ.ಆರ್ ಗಣತಿಗೆ ಸಿದ್ದತೆ ನಡೆಸಿದ್ದಾರೆ.

ಎನ್.ಪಿ.ಆರ್. ಗಣತಿದಾರರಿಗೆ ಮಾಹಿತಿ ನೀಡುವುದು ಕಡ್ಡಾಯವೇನಲ್ಲ. ಆದರೆ ಜನರು ಮಾಹಿತಿ ನೀಡದಿದ್ದರೆ ಮಾಹಿತಿ ನೀಡಲು ನಿರಾಕರಿಸಿದ್ದಾರೆ ಎಂದು ಬರೆದುಕೊಂಡು ಹೋಗುತ್ತಾರೆ. ಇಂಥವರ ಮೇಲೆ ಮುಂದಿನ ದಿನಗಳಲ್ಲಿ ಕಣ್ಗಾವಲು ಇಡುವ ಸಾಧ್ಯತೆ ಇದೆ. ಎನ್.ಪಿ.ಆರ್. ಗಣತಿಯಲ್ಲಿ 14 ಪ್ರಶ್ನೆಗಳಿವೆ. ಆ ಪ್ರಶ್ನೆಗಳಿಗೆ ಪೂರ್ಣ ಮಾಹಿತಿ ನೀಡಬೇಕೆಂದೇನೂ ಇಲ್ಲದಿದ್ದರು ಮುಂದಿನ ದಿನಗಳಲ್ಲಿ ಸಮಸ್ಯೆಯಾಗಬಹುದು. ಗಣತಿದಾರರು ಏಪ್ರಿಲ್ 15ರಿಂದ ಮಾಡಲಿರುವ ಎನ್.ಪಿ.ಆರ್ ಗಣತಿಯ ಸಂದರ್ಭ ಯಾವ ಸಮಸ್ಯೆಗಳನ್ನು ಎದುರಿಸುತ್ತಾರೋ, ಜನರ ಪ್ರತಿಕ್ರಿಯೆ ಹೇಗಿರುತ್ತದೋ ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...