Homeಮುಖಪುಟಎನ್.ಪಿ.ಆರ್ - ಜನಗಣತಿಗೆ ಸಿದ್ದತೆ : ಏ.15 ರಿಂದ ಕುಟುಂಬದ ಸಮಗ್ರ ಮಾಹಿತಿ ನೀಡಬೇಕು

ಎನ್.ಪಿ.ಆರ್ – ಜನಗಣತಿಗೆ ಸಿದ್ದತೆ : ಏ.15 ರಿಂದ ಕುಟುಂಬದ ಸಮಗ್ರ ಮಾಹಿತಿ ನೀಡಬೇಕು

- Advertisement -
- Advertisement -

ರಾಷ್ಟ್ರೀಯ ಜನಸಂಖ್ಯಾ ನೋಂದಣಿಗೆ ರಾಜ್ಯ ಸರ್ಕಾರ ಸಕಲ ಸಿದ್ದತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಶಿಕ್ಷಕರಿಗೆ ತರಬೇತಿ ನೀಡುವ ಪ್ರಕ್ರಿಯೆ ಪೂರ್ಣಗೊಂಡಿದೆ. ಜನರಿಂದ ಯಾವ ರೀತಿ ಮಾಹಿತಿ ಪಡೆಯಬೇಕು, ಯಾವ ಪ್ರಶ್ನೆಗಳನ್ನು ಕೇಳಬೇಕು ಎಂಬ ಬಗ್ಗೆ ತರಬೇತಿ ನೀಡಿ ಶಿಕ್ಷಕರನ್ನು ಸಜ್ಜುಗೊಳಿಸಲಾಗಿದೆ. ಶಿಕ್ಷಕರು ಎನ್.ಪಿ.ಆರ್ ಮತ್ತು ಜನಗಣತಿಗೆ ಸಂಬಂಧ ಏಪ್ರಿಲ್ 15 ರಿಂದ ಮನೆಮನೆ ಭೇಟಿ ನೀಡಿ ಕುಟುಂಬದ ಸಮಗ್ರ ಮಾಹಿತಿ ಸಂಗ್ರಹಿಸುವ ಕಾರ್ಯಕ್ಕೆ ಸಿದ್ದರಾಗಿ ನಿಂತಿದ್ದಾರೆ.

ಎನ್ ಪಿ.ಆರ್ ಗಣತಿ ವೇಳೆ ಗಣತಿದಾರರು ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡಬೇಕು. ಪ್ರತಿಯೊಂದು ಪ್ರಶ್ನೆಗೂ ಉತ್ತರ ಸಮರ್ಪಕವಾಗಿರಬೇಕು. ಆಧಾರ್ ನಂಬರ್, ಜನ್ಮದಿನಾಂಕ, ತಂದೆ-ತಾಯಿಯ ಸಂಪೂರ್ಣ ಮಾಹಿತಿ ನೀಡಬೇಕು. ತಂದೆ ಹುಟ್ಟಿದ ಗ್ರಾಮ, ತಾಯಿಯ ತವರಿನ ಕುರಿತು ಮಾಹಿತಿ ನೀಡಬೇಕು. ಪ್ರತಿಯೊಬ್ಬ ವ್ಯಕ್ತಿಯ ಆಧಾರ್ ಮತ್ತು ಜನ್ಮದಿನಾಂಕವನ್ನು ನೀಡಲೇಬೇಕು. ವ್ಯಕ್ತಿಯ ತಂದೆ, ತಾಯಿ, ಹೆಂಡತಿ, ಗಂಡ, ಮಕ್ಕಳ ವಿವರಗಳನ್ನು ಕೊಡಬೇಕು.

ಬಹುತೇಕರಿಗೆ ತಮ್ಮ ತಂದೆ-ತಾಯಿಗಳು ಯಾವ ಗ್ರಾಮದಲ್ಲಿ ಜನಿಸಿದರು.  ಎಲ್ಲಿಂದ ಬಂದವರು ಎಂಬ ಬಗ್ಗೆ ಮಾಹಿತಿಯೇ ಇಲ್ಲ. ತಂದೆ-ತಾಯಿಗಳ ಜನ್ಮದಿನಾಂಕವೂ ಇಲ್ಲ. ಅಷ್ಟೇ ಅಲ್ಲ ಬಹುತೇಕರಿಗೆ 1980ಕ್ಕೂ ಮೊದಲು ಜನಿಸಿದವರಿಗೆ ಜನ್ಮ ಪ್ರಮಾಣ ಪತ್ರಗಳೇ ಇಲ್ಲ. ನಂತರದವರಿಗೂ ಇಲ್ಲ. ಎಸ್.ಎಸ್.ಎಲ್.ಸಿ ಅಂಕಪಟ್ಟಿಯಲ್ಲಿ ಇರುವ ಜನ್ಮದಿನಾಂಕವನ್ನು ಬಿಟ್ಟರೆ ಬೇರೊಂದು ಪ್ರಮಾಣ ಪತ್ರ ಇಲ್ಲ. ಹಾಗಾಗಿ ಮಾಹಿತಿ ನೀಡುವಾಗ ಅಪ್ಪ-ಅಮ್ಮಂದಿರ ಹುಟ್ಟಿದ ಗ್ರಾಮದ ಬಗ್ಗೆ ಮಾಹಿತಿ ನೀಡದಿದ್ದರೆ ಮಾಹಿತಿ ಕೊಡಲು ನಿರಾಕರಿಸಿದ್ದಾರೆ ಎಂದು ಬರೆದುಕೊಂಡು ಹೋಗಲಾಗುತ್ತದೆ..

ಕೇಂದ್ರ ಸರ್ಕಾರ ಎನ್.ಪಿ.ಆರ್ ಗಣತಿಯ ಬಗ್ಗೆ ಪ್ರಶ್ನಾವಳಿ ಅಂತಿಮಗೊಳಿಸಿಲ್ಲ ಎಂದು ಹೇಳುತ್ತಿದೆ. ಕೆಲವು ಪ್ರಶ್ನೆಗಳನ್ನು ತೆಗೆದುಹಾಕುವಂತೆ ಪ್ರತಿಪಕ್ಷಗಳು ಆಗ್ರಹಿಸುತ್ತಿವೆ. ದೇಶಾದ್ಯಂತ ಪ್ರತಿಭಟನೆಗಳು ನಡೆಸುತ್ತಿವೆ. ಸುಮಾರು 10ಕ್ಕೂ ಹೆಚ್ಚು ರಾಜ್ಯಗಳು ಎನ್.ಪಿ.ಆರ್. ನಡೆಸುವುದಿಲ್ಲವೆಂದು ನಿರ್ಣಯ ಕೈಗೊಂಡಿವೆ. ಕೇಂದ್ರ ಸರ್ಕಾರ ಎನ್.ಪಿ.ಆರ್ ನಡೆಸಬೇಕೇ ಬೇಡವೇ ಎಂಬ ಬಗ್ಗೆ ಜನರನ್ನು ಗೊಂದಲದಲ್ಲಿಟ್ಟಿದೆ. ಎನ್.ಪಿ.ಆರ್ ಪ್ರಶ್ನಾವಳಿಗಳು ಸ್ಪಷ್ಟಗೊಂಡಿಲ್ಲ. ಆದರೆ ತರಬೇತಿ ಪಡೆದಿರುವ ಶಿಕ್ಷಕರು ಜನರ ವಿರೋಧದ ನಡುವೆಯೂ ಎನ್.ಪಿ.ಆರ್ ಗಣತಿಗೆ ಸಿದ್ದತೆ ನಡೆಸಿದ್ದಾರೆ.

ಎನ್.ಪಿ.ಆರ್. ಗಣತಿದಾರರಿಗೆ ಮಾಹಿತಿ ನೀಡುವುದು ಕಡ್ಡಾಯವೇನಲ್ಲ. ಆದರೆ ಜನರು ಮಾಹಿತಿ ನೀಡದಿದ್ದರೆ ಮಾಹಿತಿ ನೀಡಲು ನಿರಾಕರಿಸಿದ್ದಾರೆ ಎಂದು ಬರೆದುಕೊಂಡು ಹೋಗುತ್ತಾರೆ. ಇಂಥವರ ಮೇಲೆ ಮುಂದಿನ ದಿನಗಳಲ್ಲಿ ಕಣ್ಗಾವಲು ಇಡುವ ಸಾಧ್ಯತೆ ಇದೆ. ಎನ್.ಪಿ.ಆರ್. ಗಣತಿಯಲ್ಲಿ 14 ಪ್ರಶ್ನೆಗಳಿವೆ. ಆ ಪ್ರಶ್ನೆಗಳಿಗೆ ಪೂರ್ಣ ಮಾಹಿತಿ ನೀಡಬೇಕೆಂದೇನೂ ಇಲ್ಲದಿದ್ದರು ಮುಂದಿನ ದಿನಗಳಲ್ಲಿ ಸಮಸ್ಯೆಯಾಗಬಹುದು. ಗಣತಿದಾರರು ಏಪ್ರಿಲ್ 15ರಿಂದ ಮಾಡಲಿರುವ ಎನ್.ಪಿ.ಆರ್ ಗಣತಿಯ ಸಂದರ್ಭ ಯಾವ ಸಮಸ್ಯೆಗಳನ್ನು ಎದುರಿಸುತ್ತಾರೋ, ಜನರ ಪ್ರತಿಕ್ರಿಯೆ ಹೇಗಿರುತ್ತದೋ ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...