Homeಮುಖಪುಟಎನ್.ಪಿ.ಆರ್ - ಜನಗಣತಿಗೆ ಸಿದ್ದತೆ : ಏ.15 ರಿಂದ ಕುಟುಂಬದ ಸಮಗ್ರ ಮಾಹಿತಿ ನೀಡಬೇಕು

ಎನ್.ಪಿ.ಆರ್ – ಜನಗಣತಿಗೆ ಸಿದ್ದತೆ : ಏ.15 ರಿಂದ ಕುಟುಂಬದ ಸಮಗ್ರ ಮಾಹಿತಿ ನೀಡಬೇಕು

- Advertisement -
- Advertisement -

ರಾಷ್ಟ್ರೀಯ ಜನಸಂಖ್ಯಾ ನೋಂದಣಿಗೆ ರಾಜ್ಯ ಸರ್ಕಾರ ಸಕಲ ಸಿದ್ದತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಶಿಕ್ಷಕರಿಗೆ ತರಬೇತಿ ನೀಡುವ ಪ್ರಕ್ರಿಯೆ ಪೂರ್ಣಗೊಂಡಿದೆ. ಜನರಿಂದ ಯಾವ ರೀತಿ ಮಾಹಿತಿ ಪಡೆಯಬೇಕು, ಯಾವ ಪ್ರಶ್ನೆಗಳನ್ನು ಕೇಳಬೇಕು ಎಂಬ ಬಗ್ಗೆ ತರಬೇತಿ ನೀಡಿ ಶಿಕ್ಷಕರನ್ನು ಸಜ್ಜುಗೊಳಿಸಲಾಗಿದೆ. ಶಿಕ್ಷಕರು ಎನ್.ಪಿ.ಆರ್ ಮತ್ತು ಜನಗಣತಿಗೆ ಸಂಬಂಧ ಏಪ್ರಿಲ್ 15 ರಿಂದ ಮನೆಮನೆ ಭೇಟಿ ನೀಡಿ ಕುಟುಂಬದ ಸಮಗ್ರ ಮಾಹಿತಿ ಸಂಗ್ರಹಿಸುವ ಕಾರ್ಯಕ್ಕೆ ಸಿದ್ದರಾಗಿ ನಿಂತಿದ್ದಾರೆ.

ಎನ್ ಪಿ.ಆರ್ ಗಣತಿ ವೇಳೆ ಗಣತಿದಾರರು ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡಬೇಕು. ಪ್ರತಿಯೊಂದು ಪ್ರಶ್ನೆಗೂ ಉತ್ತರ ಸಮರ್ಪಕವಾಗಿರಬೇಕು. ಆಧಾರ್ ನಂಬರ್, ಜನ್ಮದಿನಾಂಕ, ತಂದೆ-ತಾಯಿಯ ಸಂಪೂರ್ಣ ಮಾಹಿತಿ ನೀಡಬೇಕು. ತಂದೆ ಹುಟ್ಟಿದ ಗ್ರಾಮ, ತಾಯಿಯ ತವರಿನ ಕುರಿತು ಮಾಹಿತಿ ನೀಡಬೇಕು. ಪ್ರತಿಯೊಬ್ಬ ವ್ಯಕ್ತಿಯ ಆಧಾರ್ ಮತ್ತು ಜನ್ಮದಿನಾಂಕವನ್ನು ನೀಡಲೇಬೇಕು. ವ್ಯಕ್ತಿಯ ತಂದೆ, ತಾಯಿ, ಹೆಂಡತಿ, ಗಂಡ, ಮಕ್ಕಳ ವಿವರಗಳನ್ನು ಕೊಡಬೇಕು.

ಬಹುತೇಕರಿಗೆ ತಮ್ಮ ತಂದೆ-ತಾಯಿಗಳು ಯಾವ ಗ್ರಾಮದಲ್ಲಿ ಜನಿಸಿದರು.  ಎಲ್ಲಿಂದ ಬಂದವರು ಎಂಬ ಬಗ್ಗೆ ಮಾಹಿತಿಯೇ ಇಲ್ಲ. ತಂದೆ-ತಾಯಿಗಳ ಜನ್ಮದಿನಾಂಕವೂ ಇಲ್ಲ. ಅಷ್ಟೇ ಅಲ್ಲ ಬಹುತೇಕರಿಗೆ 1980ಕ್ಕೂ ಮೊದಲು ಜನಿಸಿದವರಿಗೆ ಜನ್ಮ ಪ್ರಮಾಣ ಪತ್ರಗಳೇ ಇಲ್ಲ. ನಂತರದವರಿಗೂ ಇಲ್ಲ. ಎಸ್.ಎಸ್.ಎಲ್.ಸಿ ಅಂಕಪಟ್ಟಿಯಲ್ಲಿ ಇರುವ ಜನ್ಮದಿನಾಂಕವನ್ನು ಬಿಟ್ಟರೆ ಬೇರೊಂದು ಪ್ರಮಾಣ ಪತ್ರ ಇಲ್ಲ. ಹಾಗಾಗಿ ಮಾಹಿತಿ ನೀಡುವಾಗ ಅಪ್ಪ-ಅಮ್ಮಂದಿರ ಹುಟ್ಟಿದ ಗ್ರಾಮದ ಬಗ್ಗೆ ಮಾಹಿತಿ ನೀಡದಿದ್ದರೆ ಮಾಹಿತಿ ಕೊಡಲು ನಿರಾಕರಿಸಿದ್ದಾರೆ ಎಂದು ಬರೆದುಕೊಂಡು ಹೋಗಲಾಗುತ್ತದೆ..

ಕೇಂದ್ರ ಸರ್ಕಾರ ಎನ್.ಪಿ.ಆರ್ ಗಣತಿಯ ಬಗ್ಗೆ ಪ್ರಶ್ನಾವಳಿ ಅಂತಿಮಗೊಳಿಸಿಲ್ಲ ಎಂದು ಹೇಳುತ್ತಿದೆ. ಕೆಲವು ಪ್ರಶ್ನೆಗಳನ್ನು ತೆಗೆದುಹಾಕುವಂತೆ ಪ್ರತಿಪಕ್ಷಗಳು ಆಗ್ರಹಿಸುತ್ತಿವೆ. ದೇಶಾದ್ಯಂತ ಪ್ರತಿಭಟನೆಗಳು ನಡೆಸುತ್ತಿವೆ. ಸುಮಾರು 10ಕ್ಕೂ ಹೆಚ್ಚು ರಾಜ್ಯಗಳು ಎನ್.ಪಿ.ಆರ್. ನಡೆಸುವುದಿಲ್ಲವೆಂದು ನಿರ್ಣಯ ಕೈಗೊಂಡಿವೆ. ಕೇಂದ್ರ ಸರ್ಕಾರ ಎನ್.ಪಿ.ಆರ್ ನಡೆಸಬೇಕೇ ಬೇಡವೇ ಎಂಬ ಬಗ್ಗೆ ಜನರನ್ನು ಗೊಂದಲದಲ್ಲಿಟ್ಟಿದೆ. ಎನ್.ಪಿ.ಆರ್ ಪ್ರಶ್ನಾವಳಿಗಳು ಸ್ಪಷ್ಟಗೊಂಡಿಲ್ಲ. ಆದರೆ ತರಬೇತಿ ಪಡೆದಿರುವ ಶಿಕ್ಷಕರು ಜನರ ವಿರೋಧದ ನಡುವೆಯೂ ಎನ್.ಪಿ.ಆರ್ ಗಣತಿಗೆ ಸಿದ್ದತೆ ನಡೆಸಿದ್ದಾರೆ.

ಎನ್.ಪಿ.ಆರ್. ಗಣತಿದಾರರಿಗೆ ಮಾಹಿತಿ ನೀಡುವುದು ಕಡ್ಡಾಯವೇನಲ್ಲ. ಆದರೆ ಜನರು ಮಾಹಿತಿ ನೀಡದಿದ್ದರೆ ಮಾಹಿತಿ ನೀಡಲು ನಿರಾಕರಿಸಿದ್ದಾರೆ ಎಂದು ಬರೆದುಕೊಂಡು ಹೋಗುತ್ತಾರೆ. ಇಂಥವರ ಮೇಲೆ ಮುಂದಿನ ದಿನಗಳಲ್ಲಿ ಕಣ್ಗಾವಲು ಇಡುವ ಸಾಧ್ಯತೆ ಇದೆ. ಎನ್.ಪಿ.ಆರ್. ಗಣತಿಯಲ್ಲಿ 14 ಪ್ರಶ್ನೆಗಳಿವೆ. ಆ ಪ್ರಶ್ನೆಗಳಿಗೆ ಪೂರ್ಣ ಮಾಹಿತಿ ನೀಡಬೇಕೆಂದೇನೂ ಇಲ್ಲದಿದ್ದರು ಮುಂದಿನ ದಿನಗಳಲ್ಲಿ ಸಮಸ್ಯೆಯಾಗಬಹುದು. ಗಣತಿದಾರರು ಏಪ್ರಿಲ್ 15ರಿಂದ ಮಾಡಲಿರುವ ಎನ್.ಪಿ.ಆರ್ ಗಣತಿಯ ಸಂದರ್ಭ ಯಾವ ಸಮಸ್ಯೆಗಳನ್ನು ಎದುರಿಸುತ್ತಾರೋ, ಜನರ ಪ್ರತಿಕ್ರಿಯೆ ಹೇಗಿರುತ್ತದೋ ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...