Homeಕರ್ನಾಟಕNPS ನೌಕರನ ಡೆತ್‌ನೋಟ್: ಮಾಜಿ ಸಚಿವ ಬಿ.ಸಿ.ನಾಗೇಶ್, ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೆಸರು ಉಲ್ಲೇಖ

NPS ನೌಕರನ ಡೆತ್‌ನೋಟ್: ಮಾಜಿ ಸಚಿವ ಬಿ.ಸಿ.ನಾಗೇಶ್, ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೆಸರು ಉಲ್ಲೇಖ

- Advertisement -
- Advertisement -

ರಾಜ್ಯ NPS ನೌಕರರ ಸಂಘ, ಶಿವಮೊಗ್ಗ ತಾಲ್ಲೂಕು ಘಟಕದ ಅಧ್ಯಕ್ಷರಾಗಿದ್ದ ಪ್ರಭಾಕರ್​ ಎಸ್​ ಅವರು ತಮ್ಮ ವೃತ್ತಿಬದುಕಿಗೆ ರಾಜ್ಯದ ನೌಕರ ಸಂಘದ ಅಧ್ಯಕ್ಷರಿಂದ ವ್ಯವಸ್ಥಿತ ತೊಂದರೆಯಾಗಿದೆ. ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನಸಿಕವಾಗಿ ವಿಫಲನಾಗಿದ್ದೇನೆ ಹಾಗಾಗಿ ನಾನು ಬದುಕಿಗೆ ವಿಧಾಯ ಹೇಳಲು ಬಯಸಿದ್ದೇನೆ” ಎಂದು ಡೆತ್‌ನೋಟ್ ಬರೆದಿದ್ದಾರೆ.

NPS ನೌಕರರ ಈ ಡೆತ್ ನೋಟ್‌ನಿಂದ ಜುಲೈ 19 ರ ಇಡೀ ದಿನ ಆತಂಕ ಸೃಷ್ಟಿಯಾಗಿತ್ತು. ಪ್ರಭಾಕರ್ ಎಸ್‌ ಅವರು, ತಮ್ಮ ಸರ್ಕಾರಿ ನೌಕರರ ಸಂಘದ ವಾಟ್ಸಾಪ್ ಗ್ರೂಪ್​ನಲ್ಲಿ ಎರಡು ಡೆತ್​ನೋಟ್​ ಮೆಸೇಜ್​ ಕಳುಹಿಸಿದ್ದಾರೆ. ಡೆತ್​ನೋಟ್​ ಸೆಂಡ್​ ಮಾಡಿದ ಬಳಿಕ ಅವರ ಮೊಬೈಲ್ ಸ್ವಿಚ್ ಆಪ್​ ಆಗಿದೆ. ಇದರಿಂದ ಸಹಜವಾಗಿ ಅವರ ಕುಟುಂಬಸ್ಥರು ಮತ್ತು ಸ್ನೇಹಿತರ ವಲಯದಲ್ಲಿ ಆತಂಕ ಮೂಡಿದೆ.

ಪ್ರಭಾಕರ್ ಅವರು ಡೆತ್‌ನೋಟ್‌ನ ಮೆಸೇಜ್ ಕಳುಹಿಸಿದ ಬಳಿಕ ಶಿವಮೊಗ್ಗದ ಸೋಮಯ್ಯ ಲೇಔಟ್​ನಲ್ಲಿರುವ ಅವರ ಮನೆಯ ಬಳಿ, ಸ್ನೇಹಿತರು, ಬಂಧು ಬಳಗದವರು ಸೇರಿದ್ದಾರೆ. ನಂತರ ಆ ಡೆತ್‌ನೋಟ್‌ ಅಡಿಯಲ್ಲಿ ಶಿವಮೊಗ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕರ್ನಾಟಕ ರಾಜ್ಯ NPS ನೌಕರರ ಸಂಘದ ಕಡೆಯಿಂದಲೂ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದು, ಘಟನೆಗೆ ಸಂಬಂಧಿಸಿದವರ ಮೇಲೆ FIR ದಾಖಲಿಸಿ ವಿಚಾರಣೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.

ಘಟನೆ ಕುರಿತು ವಿವರ

ರಾಜ್ಯ NPS ನೌಕರರ ಸಂಘದ KSGNPSEA ಹೆಸರಿನ ವಾಟ್ಸಾಪ್ ಗ್ರೂಪ್ ನಲ್ಲಿ ಪ್ರಭಾಕರ್ ಅವರು ಒಟ್ಟು ಎರಡು ಸಂದೇಶಗಳನ್ನು ಕಳುಹಿಸಿದ್ದಾರೆ. ಬುಧವಾರ ಬೆಳಿಗ್ಗೆ 4.28ಕ್ಕೆ ಮೊದಲ ಮೆಸೇಜ್​, ಎರಡನೇ ಮೆಸೇಜ್ ಬೆಳಗ್ಗೆ 8.13 ಕ್ಕೆ ಗ್ರೂಪ್​ಗೆ ಮೆಸೇಜ್‌ಗಳು ಬಂದಿವೆ.

ಮೊದಲ ಮೆಸೇಜ್ ನಲ್ಲಿ ”ಆತ್ಮೀಯ ರಾಜ್ಯದ ಸಮಸ್ತ NPS ನೌಕರ ಸಂಘದ ಪದಾಧಿಕಾರಿ ಮಿತ್ರರೇ ನಾನು ಕಳೆದ ಹತ್ತು ವರ್ಷಗಳಿಂದ NPS ನೌಕರ ಸಂಘವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಕಟ್ಟಿ ಬೆಳೆಸಿದ್ದೇನೆ. ರಾಜ್ಯ ಸಂಘದ ನಿರ್ಧೇಶನದಂತೆ ಅನೇಕ ಕಾರ್ಯಕ್ರಮಗಳನ್ನು ಶಿವಮೊಗ್ಗ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ಸಂಘಟನೆ ಮಾಡಿದ್ದೇನೆ. ಇತ್ತೀಚೆಗೆ ಜನವರಿ 22-2023 ರಂದು ಶಿವಮೊಗ್ಗ ಜಿಲ್ಲಾ ಮಟ್ಟದ NPS ನೌಕರರ ಸಮಾವೇಶ ಮತ್ತು ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಅತ್ಯಂತ ಯಶಸ್ವಿಯಾಗಿ ಮಾಡಿದ್ದರ ಫಲವಾಗಿ ನನ್ನ ವೃತ್ತಿಬದುಕಿಗೆ ರಾಜ್ಯದ ನೌಕರ ಸಂಘದ ಅಧ್ಯಕ್ಷರಿಂದ ವ್ಯವಸ್ಥಿತ ತೊಂದರೆಯಾಗಿ ಕಳೆದ 6 ತಿಂಗಳಿಂದ ವೇತನವಿಲ್ಲದೆ ನರಕಯಾತನೆ ಅನುಭವಿಸಿದ್ದೇನೆ. ಮತ್ತು ನನ್ನ ಇಡೀ ಕುಟುಂಬ ಕಣ್ಣೀರಿನಲ್ಲಿ ಮುಳುಗಿದೆ ನನ್ನ ಸಮಸ್ಯೆಗೆ ಪರಿಹಾರ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಕಾಲ ಕಳೆದಾಯಿತು. ಆದರೂ ಯಾವುದೇ ಪರಿಹಾರ ಸಿಗದೆ ಪ್ರಯತ್ನಗಳೆಲ್ಲ ವಿಫಲವಾಗಿದ್ದು ಅತ್ಯಂತ ನೋವಿನ ಸಂಗತಿ.”

”ಈ ಘಟನೆಗೆ ಕಾರಣರಾದವರು ಚೆನ್ನಾಗಿರಲಿ. ನಾನು ಈ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನಸಿಕವಾಗಿ ವಿಫಲನಾಗಿರುವ ಪ್ರಯುಕ್ತ ನಾನು ಬದುಕಿಗೆ ವಿಧಾಯ ಹೇಳಲು ಬಯಸಿದ್ದೇನೆ. ನನ್ನ ಕುಟುಂಬದ ಹೊಣೆಗಾರಿಕೆ ಇಡೀ NPS ನೌಕರ ಸಂಘಟನೆಯದ್ದು. ದಯವಿಟ್ಟು ನನ್ನ ಕುಟುಂಬಕ್ಕೆ ಸಹಾಯ ಸಹಕಾರ ಮಾಡಿ. ಇಂತಿ ನಿಮ್ಮ ನತದೃಷ್ಟ NPS ನೌಕರ ಪ್ರಭಾಕರ ಎಸ್.” ಎಂದು ಬರೆದು ಮೆಸೇಜ್ ಕಳುಹಿಸಿದ್ದಾರೆ.

ಆನಂತರ 8.13ಕ್ಕೆ ಇನ್ನೊಂದು ಮೆಸೇಜ್ ಕಳುಹಿಸಲಾಗಿದ್ದು, ಅದರಲ್ಲಿ, ”ಆತ್ಮೀಯ ರಾಜ್ಯದ ಸಮಸ್ತ NPS ನೌಕರ ಸಂಘದ ಪದಾಧಿಕಾರಿ ಮಿತ್ರರೇ ನಾನು ಕಳೆದ ಹತ್ತು ವರ್ಷಗಳಿಂದ NPS ನೌಕರ ಸಂಘವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಕಟ್ಟಿ ಬೆಳೆಸಿದ್ದೇನೆ. ರಾಜ್ಯ ಸಂಘದ ನಿರ್ಧೇಶನದಂತೆ ಅನೇಕ ಕಾರ್ಯಕ್ರಮಗಳನ್ನು ಶಿವಮೊಗ್ಗ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ಸಂಘಟನೆ ಮಾಡಿದ್ದೇನೆ.”

”ಇತ್ತೀಚೆಗೆ ಜನವರಿ 22-2023 ರಂದು ಶಿವಮೊಗ್ಗ ಜಿಲ್ಲಾ ಮಟ್ಟದ NPS ನೌಕರರ ಸಮಾವೇಶ ಮತ್ತು ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಅತ್ಯಂತ ಯಶಸ್ವಿಯಾಗಿ ಮಾಡಿದ್ದರ ಫಲವಾಗಿ ನನ್ನ ವೃತ್ತಿಬದುಕಿಗೆ ರಾಜ್ಯದ ನೌಕರ ಸಂಘದ ಅಧ್ಯಕ್ಷರಾದ ಷಡಕ್ಷರಿ, ಅವರ ಸಹಚರರಾದ ಮೋಹನ್ ಕುಮಾರ ಆರ್,ಬಸವನಗೌಡ, ಹಾಗೂ ಹಿಂದಿನ ಶಿಕ್ಷಣ ಸಚಿವರಾ ಬಿ.ಸಿ.ನಾಗೇಶ್ ಮತ್ತು ಅವರ ಆಪ್ತ ಕಾರ್ಯದರ್ಶಿಗಳಾಗಿದ್ದ ಎ ಆರ್ ರವಿ ಅವರ ವ್ಯವಸ್ಥಿತ ಪಿತೂರಿಯಿಂದಾಗಿ ಹಿಂಬಡ್ತಿ ಮಾಡಿ ನಿಯಮಗಳಲ್ಲಿ ವೇತನ ಸಂರಕ್ಷಣೆಗೆ ಅವಕಾಶವಿದ್ದರೂ ಹಿಂಬಡ್ತಿ ಆದೇಶದಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಶ್ರೀ ಮಹಂತಯ್ಯ ಹೊಸಮಠ ಅವರು ಹಿಂಬಡ್ತಿ ಮಾಡಿದ್ದಲ್ಲದೆ, ಹೆಚ್ಚುವರಿ ವೇತನ ಕಟಾಯಿಸುವಂತೆ ಆದೇಶ ಮಾಡಿದ್ದರ ಪ್ರತಿಫಲವಾಗಿ, ಹೊನ್ನಾಳಿ BEO ರವರಾದ ನಂಜರಾಜ ಅವರು ಸರಿಯಾದ ಸಮಯಕ್ಕೆ ಅಂತಿಮ ವೇತನ ಪ್ರಮಾಣ ಪತ್ರ, ಸೇವಾವಹಿಯನ್ನು ಕಳುಹಿಸದೆ ಕಳೆದ 6 ತಿಂಗಳಿಂದ ವೇತನ ಆಗದೆ ನರಕಯಾತನೆ ಅನುಭವಿಸಿದ್ದೇನೆ. ಮತ್ತು ನನ್ನ ಇಡೀ ಕುಟುಂಬ ಕಣ್ಣೀರಿನಲ್ಲಿ ಮುಳುಗಿದೆ ನನ್ನ ಸಮಸ್ಯೆಗೆ ಪರಿಹಾರ ಸಿಗಬಹುದು ಎಂಬ ನಿರೀಕ್ಷೆಯಲ್ಲಿ 6 ತಿಂಗಳಕಾಲ ಕಳೆದಾಯಿತು. ಆದರೂ ಯಾವುದೇ ಪರಿಹಾರ ಸಿಗದೆ ಪ್ರಯತ್ನಗಳೆಲ್ಲ ವಿಫಲವಾಗಿದ್ದು ಅತ್ಯಂತ ನೋವಿನ ಸಂಗತಿ.”

”ಈ ಘಟನೆಗೆ ಕಾರಣರಾದವರು ಚೆನ್ನಾಗಿರಲಿ……ನಾನು ಈ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನಸಿಕವಾಗಿ ವಿಫಲನಾಗಿರುವ ಪ್ರಯುಕ್ತ ನಾನು ಬದುಕಿಗೆ ವಿಧಾಯ ಹೇಳಲು ಬಯಸಿದ್ದೇನೆ….. ನನ್ನ ನಿರ್ಧಾರಕ್ಕೆ ಮೇಲ್ಕಾಣಿಸಿದ ವ್ಯಕ್ತಿಗಳೇ ನೇರ ಕಾರಣರಾಗಿರುತ್ತಾರೆ. ನನ್ನ ಈ ನನ್ನ ಕುಟುಂಬದ ಹೊಣೆಗಾರಿಕೆ ಇಡೀ NPS ನೌಕರ ಸಂಘಟನೆಯದ್ದು ದಯವಿಟ್ಟು ನನ್ನ ಕುಟುಂಬಕ್ಕೆ ಸಹಾಯ ಸಹಕಾರ ಮಾಡಿ……
ಇಂತಿ ನಿಮ್ಮ ನತದೃಷ್ಟ NPS ನೌಕರ” ಎಂದು ಬರೆಯಲಾಗಿದೆ.

ಪ್ರಭಾಕರ್ ಅವರು ಕಳಿಸಿದ ಎರಡೂ ಮೆಸೇಜ್‌ಗಳು ಬಹುತೇಕ ಒಂದೇ ವಿಷಯವಾಗಿದೆ. ಆದರೆ, ಮೊದಲ ಮೆಸೇಜ್ ನಲ್ಲಿ ಯಾವುದೇ ವ್ಯಕ್ತಿಗಳ ಹೆಸರು ಬಳಸಿಲ್ಲ, ಎರಡನೇ ಮೆಸೇಜ್ ನಲ್ಲಿ ತನ್ನ ಈ ಸ್ಥಿತಿಗೆ ಕಾರಣರಾದವರ ಹೆಸರು ಉಲ್ಲೇಖಿಸಿದ್ದಾರೆ.

ಈ ಡೆತ್ ನೋಟ್ ನಲ್ಲಿ ಮಾಜಿ ಸಚಿವ ಬಿ.ಸಿ.ನಾಗೇಶ್ ಹಾಗೂ ರಾಜ್ಯ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೆಸರು ಇರುವುದು ಭಾರೀ ಚರ್ಚೆಯಾಗುತ್ತಿದೆ. ಪ್ರಭಾಕರ್ ಅವರ ಮುಖ್ಯ ಉದ್ದೇಶ ಇರುವುದು ಘಟನೆ ಹಿನ್ನೆಲೆಯಲ್ಲಿ ತನಿಖೆ ಆಗಬೇಕು, ತಮಗೆ ತೊಂದರೆ ನೀಡಿದ ವ್ಯಕ್ತಿಗಳಿಗೆ ಶಿಕ್ಷೆ ಆಗಬೇಕು ಎಂಬ ಉದ್ದೇಶ ಇರುವುದು ಸ್ಪಷ್ಟವಾಗಿದೆ.

ಗ್ರೂಪ್‌ನಲ್ಲಿ ಮೊದಲ ಮೆಸೇಜ್‌ ಬಂದ ಬಳಿಕ ಅವರ ಸ್ನೇಹಿತರು ಪ್ರಭಾಕರ್​​ನ್ನು ಸಂಪರ್ಕಿಸುವ ಪ್ರಯತ್ನವನ್ನು ಮಾಡಿದ್ದಾರೆ. ಆದರೆ ಪ್ರಭಾಕರ್ ಯಾರ ಸಂಪರ್ಕಕ್ಕೂ ಬಂದಿಲ್ಲ. ಬಳಿಕ ಮತ್ತೊಂದು ಮೆಸೇಜ್​ ಕಳುಹಿಸಿದ ಆನಂತರ ಪುನಃ ಮೊಬೈಲ್ ಸ್ವಿಚ್​ ಆಫ್​ ಆಗಿದೆ. ವಿಷಯ ತಿಳಿದು ಸರ್ಕಾರಿ ನೌಕರರು ಹಾಗು ಸ್ನೇಹಿತರು, ಪ್ರಭಾಕರ್​ರವರ ಮನೆ ಮತ್ತು ಕೆಲಸ ಮಾಡುವ ಜಾಗದಲ್ಲಿ ವಿಚಾರಿಸಿದ್ದಾರೆ. ಎಲ್ಲಿಯು ಪತ್ತೆಯಾಗದ ಹಿನ್ನೆಲೆ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಭಾಕರ್ ಅವರು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿಯ ಕೊಕ್ಕೋಡುವಿನಲ್ಲಿ ಟೀಚರ್ ಆಗಿದ್ದರು. ಶೆಟ್ಟಿಹಳ್ಳಿಯಲ್ಲಿ ಸಿಆರ್​ಪಿಯಾಗಿ ಕಾರ್ಯನಿರ್ವಹಿಸಿದ್ದರು. ಆನಂತರ ಅವರು ಎಫ್​ಡಿಎ ಆಗಿ ಹೊನ್ನಾಳಿ ಬಿಒ ಆಫೀಸ್​ನಲ್ಲಿ ಕಾರ್ಯನಿರ್ವಹಿಸಿದ್ದರು. ಟೀಚರ್ ಆಗಿದ್ದವರು ಎಫ್​ಡಿಎ ಆಗಿ ಬದಲಾವಣೆ ಪಡೆದಿದ್ದರ ಸಂಬಂಧ ಕೆಲವು ಆಕ್ಷೇಪಣೆ ಸಲ್ಲಿಸಿದ್ದರು. ಅಲ್ಲದೆ ಇದರ ನಡುವೆ ಅವರನ್ನು ಹಿರಿಯೂರು ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಗೆ ವರ್ಗಾವಣೆ ಮಾಡಲಾಗಿತ್ತು. ಆದರೆ, ಪ್ರಭಾಕರ್ ಕೋರ್ಟ್​ ಮೊರೆಹೋಗಿ, ವರ್ಗಾವಣೆಗೆ ಸ್ಟೇ ತಂದಿದ್ದರು. ಅವರ ವರ್ಗಾವಣೆ ಮತ್ತು ಹಿಂಬಡ್ತಿಗೆ ಮುಖ್ಯ ಕಾರಣ ಅವರು ನೌಕರರ ಸಂಘದ ಹೋರಾಟಗಳಲ್ಲಿ ಭಾಗಿ ಆಗಿದ್ದು ಎಂಬುದು ಪರಿಚಿತರಿಂದ ಸಿಕ್ಕ ಮಾಹಿತಿಯಾಗಿದೆ.

ವರ್ಗಾವಣೆಗೆ ಸ್ಟೇ ತಂದ ನಂತರ ಎಫ್ ಡಿಎಯಿಂದ ಎಸ್ ಡಿಎ ಆಗಿ ಹಿಂಬಡ್ತಿಗೆ ದೂಡಲಾಗಿತ್ತು. ನಂತರ ಹೊಸನಗರದ ಮಾರುತಿಪುರಕ್ಕೆ ವರ್ಗಾವಣೆ ಮಾಡಲಾಗಿತ್ತು. ಅಲ್ಲಿಗೆ ವರ್ಗಾವಣೆಗೊಳ್ಳದ ಪ್ರಭಾಕರ್, ತಮ್ಮ ವಿರುದ್ಧದ ನಿರ್ಣಯದ ವಿರುದ್ಧ ಹೋರಾಟಕ್ಕೆ ಇಳಿದಿದ್ದರು.  ಈ ಸಂಬಂಧ ಸರ್ಕಾರದಿಂದ ಪತ್ರವೊಂದು ಬಂದಿದೆ ಎನ್ನಲಾಗುತ್ತಿದ್ದು, ಆನಂತರ ಪ್ರಭಾಕರ್​ ರವರು ತುಂಬಾ ನೊಂದಿದ್ದರಿಂದ ಈ ಡೆತ್‌ನೋಟ್ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: NPS ಅಥವಾ OPS? ನವ ಉದಾರವಾದಿ ’ಹೊಸ ಪಿಂಚಣಿ ಯೋಜನೆ’ಯಲ್ಲಿ ನಿಜಕ್ಕೂ ಲಾಭವಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...