Homeಕರ್ನಾಟಕNPS ನೌಕರನ ಡೆತ್‌ನೋಟ್: ಮಾಜಿ ಸಚಿವ ಬಿ.ಸಿ.ನಾಗೇಶ್, ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೆಸರು ಉಲ್ಲೇಖ

NPS ನೌಕರನ ಡೆತ್‌ನೋಟ್: ಮಾಜಿ ಸಚಿವ ಬಿ.ಸಿ.ನಾಗೇಶ್, ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೆಸರು ಉಲ್ಲೇಖ

- Advertisement -
- Advertisement -

ರಾಜ್ಯ NPS ನೌಕರರ ಸಂಘ, ಶಿವಮೊಗ್ಗ ತಾಲ್ಲೂಕು ಘಟಕದ ಅಧ್ಯಕ್ಷರಾಗಿದ್ದ ಪ್ರಭಾಕರ್​ ಎಸ್​ ಅವರು ತಮ್ಮ ವೃತ್ತಿಬದುಕಿಗೆ ರಾಜ್ಯದ ನೌಕರ ಸಂಘದ ಅಧ್ಯಕ್ಷರಿಂದ ವ್ಯವಸ್ಥಿತ ತೊಂದರೆಯಾಗಿದೆ. ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನಸಿಕವಾಗಿ ವಿಫಲನಾಗಿದ್ದೇನೆ ಹಾಗಾಗಿ ನಾನು ಬದುಕಿಗೆ ವಿಧಾಯ ಹೇಳಲು ಬಯಸಿದ್ದೇನೆ” ಎಂದು ಡೆತ್‌ನೋಟ್ ಬರೆದಿದ್ದಾರೆ.

NPS ನೌಕರರ ಈ ಡೆತ್ ನೋಟ್‌ನಿಂದ ಜುಲೈ 19 ರ ಇಡೀ ದಿನ ಆತಂಕ ಸೃಷ್ಟಿಯಾಗಿತ್ತು. ಪ್ರಭಾಕರ್ ಎಸ್‌ ಅವರು, ತಮ್ಮ ಸರ್ಕಾರಿ ನೌಕರರ ಸಂಘದ ವಾಟ್ಸಾಪ್ ಗ್ರೂಪ್​ನಲ್ಲಿ ಎರಡು ಡೆತ್​ನೋಟ್​ ಮೆಸೇಜ್​ ಕಳುಹಿಸಿದ್ದಾರೆ. ಡೆತ್​ನೋಟ್​ ಸೆಂಡ್​ ಮಾಡಿದ ಬಳಿಕ ಅವರ ಮೊಬೈಲ್ ಸ್ವಿಚ್ ಆಪ್​ ಆಗಿದೆ. ಇದರಿಂದ ಸಹಜವಾಗಿ ಅವರ ಕುಟುಂಬಸ್ಥರು ಮತ್ತು ಸ್ನೇಹಿತರ ವಲಯದಲ್ಲಿ ಆತಂಕ ಮೂಡಿದೆ.

ಪ್ರಭಾಕರ್ ಅವರು ಡೆತ್‌ನೋಟ್‌ನ ಮೆಸೇಜ್ ಕಳುಹಿಸಿದ ಬಳಿಕ ಶಿವಮೊಗ್ಗದ ಸೋಮಯ್ಯ ಲೇಔಟ್​ನಲ್ಲಿರುವ ಅವರ ಮನೆಯ ಬಳಿ, ಸ್ನೇಹಿತರು, ಬಂಧು ಬಳಗದವರು ಸೇರಿದ್ದಾರೆ. ನಂತರ ಆ ಡೆತ್‌ನೋಟ್‌ ಅಡಿಯಲ್ಲಿ ಶಿವಮೊಗ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕರ್ನಾಟಕ ರಾಜ್ಯ NPS ನೌಕರರ ಸಂಘದ ಕಡೆಯಿಂದಲೂ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದು, ಘಟನೆಗೆ ಸಂಬಂಧಿಸಿದವರ ಮೇಲೆ FIR ದಾಖಲಿಸಿ ವಿಚಾರಣೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.

ಘಟನೆ ಕುರಿತು ವಿವರ

ರಾಜ್ಯ NPS ನೌಕರರ ಸಂಘದ KSGNPSEA ಹೆಸರಿನ ವಾಟ್ಸಾಪ್ ಗ್ರೂಪ್ ನಲ್ಲಿ ಪ್ರಭಾಕರ್ ಅವರು ಒಟ್ಟು ಎರಡು ಸಂದೇಶಗಳನ್ನು ಕಳುಹಿಸಿದ್ದಾರೆ. ಬುಧವಾರ ಬೆಳಿಗ್ಗೆ 4.28ಕ್ಕೆ ಮೊದಲ ಮೆಸೇಜ್​, ಎರಡನೇ ಮೆಸೇಜ್ ಬೆಳಗ್ಗೆ 8.13 ಕ್ಕೆ ಗ್ರೂಪ್​ಗೆ ಮೆಸೇಜ್‌ಗಳು ಬಂದಿವೆ.

ಮೊದಲ ಮೆಸೇಜ್ ನಲ್ಲಿ ”ಆತ್ಮೀಯ ರಾಜ್ಯದ ಸಮಸ್ತ NPS ನೌಕರ ಸಂಘದ ಪದಾಧಿಕಾರಿ ಮಿತ್ರರೇ ನಾನು ಕಳೆದ ಹತ್ತು ವರ್ಷಗಳಿಂದ NPS ನೌಕರ ಸಂಘವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಕಟ್ಟಿ ಬೆಳೆಸಿದ್ದೇನೆ. ರಾಜ್ಯ ಸಂಘದ ನಿರ್ಧೇಶನದಂತೆ ಅನೇಕ ಕಾರ್ಯಕ್ರಮಗಳನ್ನು ಶಿವಮೊಗ್ಗ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ಸಂಘಟನೆ ಮಾಡಿದ್ದೇನೆ. ಇತ್ತೀಚೆಗೆ ಜನವರಿ 22-2023 ರಂದು ಶಿವಮೊಗ್ಗ ಜಿಲ್ಲಾ ಮಟ್ಟದ NPS ನೌಕರರ ಸಮಾವೇಶ ಮತ್ತು ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಅತ್ಯಂತ ಯಶಸ್ವಿಯಾಗಿ ಮಾಡಿದ್ದರ ಫಲವಾಗಿ ನನ್ನ ವೃತ್ತಿಬದುಕಿಗೆ ರಾಜ್ಯದ ನೌಕರ ಸಂಘದ ಅಧ್ಯಕ್ಷರಿಂದ ವ್ಯವಸ್ಥಿತ ತೊಂದರೆಯಾಗಿ ಕಳೆದ 6 ತಿಂಗಳಿಂದ ವೇತನವಿಲ್ಲದೆ ನರಕಯಾತನೆ ಅನುಭವಿಸಿದ್ದೇನೆ. ಮತ್ತು ನನ್ನ ಇಡೀ ಕುಟುಂಬ ಕಣ್ಣೀರಿನಲ್ಲಿ ಮುಳುಗಿದೆ ನನ್ನ ಸಮಸ್ಯೆಗೆ ಪರಿಹಾರ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಕಾಲ ಕಳೆದಾಯಿತು. ಆದರೂ ಯಾವುದೇ ಪರಿಹಾರ ಸಿಗದೆ ಪ್ರಯತ್ನಗಳೆಲ್ಲ ವಿಫಲವಾಗಿದ್ದು ಅತ್ಯಂತ ನೋವಿನ ಸಂಗತಿ.”

”ಈ ಘಟನೆಗೆ ಕಾರಣರಾದವರು ಚೆನ್ನಾಗಿರಲಿ. ನಾನು ಈ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನಸಿಕವಾಗಿ ವಿಫಲನಾಗಿರುವ ಪ್ರಯುಕ್ತ ನಾನು ಬದುಕಿಗೆ ವಿಧಾಯ ಹೇಳಲು ಬಯಸಿದ್ದೇನೆ. ನನ್ನ ಕುಟುಂಬದ ಹೊಣೆಗಾರಿಕೆ ಇಡೀ NPS ನೌಕರ ಸಂಘಟನೆಯದ್ದು. ದಯವಿಟ್ಟು ನನ್ನ ಕುಟುಂಬಕ್ಕೆ ಸಹಾಯ ಸಹಕಾರ ಮಾಡಿ. ಇಂತಿ ನಿಮ್ಮ ನತದೃಷ್ಟ NPS ನೌಕರ ಪ್ರಭಾಕರ ಎಸ್.” ಎಂದು ಬರೆದು ಮೆಸೇಜ್ ಕಳುಹಿಸಿದ್ದಾರೆ.

ಆನಂತರ 8.13ಕ್ಕೆ ಇನ್ನೊಂದು ಮೆಸೇಜ್ ಕಳುಹಿಸಲಾಗಿದ್ದು, ಅದರಲ್ಲಿ, ”ಆತ್ಮೀಯ ರಾಜ್ಯದ ಸಮಸ್ತ NPS ನೌಕರ ಸಂಘದ ಪದಾಧಿಕಾರಿ ಮಿತ್ರರೇ ನಾನು ಕಳೆದ ಹತ್ತು ವರ್ಷಗಳಿಂದ NPS ನೌಕರ ಸಂಘವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಕಟ್ಟಿ ಬೆಳೆಸಿದ್ದೇನೆ. ರಾಜ್ಯ ಸಂಘದ ನಿರ್ಧೇಶನದಂತೆ ಅನೇಕ ಕಾರ್ಯಕ್ರಮಗಳನ್ನು ಶಿವಮೊಗ್ಗ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ಸಂಘಟನೆ ಮಾಡಿದ್ದೇನೆ.”

”ಇತ್ತೀಚೆಗೆ ಜನವರಿ 22-2023 ರಂದು ಶಿವಮೊಗ್ಗ ಜಿಲ್ಲಾ ಮಟ್ಟದ NPS ನೌಕರರ ಸಮಾವೇಶ ಮತ್ತು ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಅತ್ಯಂತ ಯಶಸ್ವಿಯಾಗಿ ಮಾಡಿದ್ದರ ಫಲವಾಗಿ ನನ್ನ ವೃತ್ತಿಬದುಕಿಗೆ ರಾಜ್ಯದ ನೌಕರ ಸಂಘದ ಅಧ್ಯಕ್ಷರಾದ ಷಡಕ್ಷರಿ, ಅವರ ಸಹಚರರಾದ ಮೋಹನ್ ಕುಮಾರ ಆರ್,ಬಸವನಗೌಡ, ಹಾಗೂ ಹಿಂದಿನ ಶಿಕ್ಷಣ ಸಚಿವರಾ ಬಿ.ಸಿ.ನಾಗೇಶ್ ಮತ್ತು ಅವರ ಆಪ್ತ ಕಾರ್ಯದರ್ಶಿಗಳಾಗಿದ್ದ ಎ ಆರ್ ರವಿ ಅವರ ವ್ಯವಸ್ಥಿತ ಪಿತೂರಿಯಿಂದಾಗಿ ಹಿಂಬಡ್ತಿ ಮಾಡಿ ನಿಯಮಗಳಲ್ಲಿ ವೇತನ ಸಂರಕ್ಷಣೆಗೆ ಅವಕಾಶವಿದ್ದರೂ ಹಿಂಬಡ್ತಿ ಆದೇಶದಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಶ್ರೀ ಮಹಂತಯ್ಯ ಹೊಸಮಠ ಅವರು ಹಿಂಬಡ್ತಿ ಮಾಡಿದ್ದಲ್ಲದೆ, ಹೆಚ್ಚುವರಿ ವೇತನ ಕಟಾಯಿಸುವಂತೆ ಆದೇಶ ಮಾಡಿದ್ದರ ಪ್ರತಿಫಲವಾಗಿ, ಹೊನ್ನಾಳಿ BEO ರವರಾದ ನಂಜರಾಜ ಅವರು ಸರಿಯಾದ ಸಮಯಕ್ಕೆ ಅಂತಿಮ ವೇತನ ಪ್ರಮಾಣ ಪತ್ರ, ಸೇವಾವಹಿಯನ್ನು ಕಳುಹಿಸದೆ ಕಳೆದ 6 ತಿಂಗಳಿಂದ ವೇತನ ಆಗದೆ ನರಕಯಾತನೆ ಅನುಭವಿಸಿದ್ದೇನೆ. ಮತ್ತು ನನ್ನ ಇಡೀ ಕುಟುಂಬ ಕಣ್ಣೀರಿನಲ್ಲಿ ಮುಳುಗಿದೆ ನನ್ನ ಸಮಸ್ಯೆಗೆ ಪರಿಹಾರ ಸಿಗಬಹುದು ಎಂಬ ನಿರೀಕ್ಷೆಯಲ್ಲಿ 6 ತಿಂಗಳಕಾಲ ಕಳೆದಾಯಿತು. ಆದರೂ ಯಾವುದೇ ಪರಿಹಾರ ಸಿಗದೆ ಪ್ರಯತ್ನಗಳೆಲ್ಲ ವಿಫಲವಾಗಿದ್ದು ಅತ್ಯಂತ ನೋವಿನ ಸಂಗತಿ.”

”ಈ ಘಟನೆಗೆ ಕಾರಣರಾದವರು ಚೆನ್ನಾಗಿರಲಿ……ನಾನು ಈ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನಸಿಕವಾಗಿ ವಿಫಲನಾಗಿರುವ ಪ್ರಯುಕ್ತ ನಾನು ಬದುಕಿಗೆ ವಿಧಾಯ ಹೇಳಲು ಬಯಸಿದ್ದೇನೆ….. ನನ್ನ ನಿರ್ಧಾರಕ್ಕೆ ಮೇಲ್ಕಾಣಿಸಿದ ವ್ಯಕ್ತಿಗಳೇ ನೇರ ಕಾರಣರಾಗಿರುತ್ತಾರೆ. ನನ್ನ ಈ ನನ್ನ ಕುಟುಂಬದ ಹೊಣೆಗಾರಿಕೆ ಇಡೀ NPS ನೌಕರ ಸಂಘಟನೆಯದ್ದು ದಯವಿಟ್ಟು ನನ್ನ ಕುಟುಂಬಕ್ಕೆ ಸಹಾಯ ಸಹಕಾರ ಮಾಡಿ……
ಇಂತಿ ನಿಮ್ಮ ನತದೃಷ್ಟ NPS ನೌಕರ” ಎಂದು ಬರೆಯಲಾಗಿದೆ.

ಪ್ರಭಾಕರ್ ಅವರು ಕಳಿಸಿದ ಎರಡೂ ಮೆಸೇಜ್‌ಗಳು ಬಹುತೇಕ ಒಂದೇ ವಿಷಯವಾಗಿದೆ. ಆದರೆ, ಮೊದಲ ಮೆಸೇಜ್ ನಲ್ಲಿ ಯಾವುದೇ ವ್ಯಕ್ತಿಗಳ ಹೆಸರು ಬಳಸಿಲ್ಲ, ಎರಡನೇ ಮೆಸೇಜ್ ನಲ್ಲಿ ತನ್ನ ಈ ಸ್ಥಿತಿಗೆ ಕಾರಣರಾದವರ ಹೆಸರು ಉಲ್ಲೇಖಿಸಿದ್ದಾರೆ.

ಈ ಡೆತ್ ನೋಟ್ ನಲ್ಲಿ ಮಾಜಿ ಸಚಿವ ಬಿ.ಸಿ.ನಾಗೇಶ್ ಹಾಗೂ ರಾಜ್ಯ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೆಸರು ಇರುವುದು ಭಾರೀ ಚರ್ಚೆಯಾಗುತ್ತಿದೆ. ಪ್ರಭಾಕರ್ ಅವರ ಮುಖ್ಯ ಉದ್ದೇಶ ಇರುವುದು ಘಟನೆ ಹಿನ್ನೆಲೆಯಲ್ಲಿ ತನಿಖೆ ಆಗಬೇಕು, ತಮಗೆ ತೊಂದರೆ ನೀಡಿದ ವ್ಯಕ್ತಿಗಳಿಗೆ ಶಿಕ್ಷೆ ಆಗಬೇಕು ಎಂಬ ಉದ್ದೇಶ ಇರುವುದು ಸ್ಪಷ್ಟವಾಗಿದೆ.

ಗ್ರೂಪ್‌ನಲ್ಲಿ ಮೊದಲ ಮೆಸೇಜ್‌ ಬಂದ ಬಳಿಕ ಅವರ ಸ್ನೇಹಿತರು ಪ್ರಭಾಕರ್​​ನ್ನು ಸಂಪರ್ಕಿಸುವ ಪ್ರಯತ್ನವನ್ನು ಮಾಡಿದ್ದಾರೆ. ಆದರೆ ಪ್ರಭಾಕರ್ ಯಾರ ಸಂಪರ್ಕಕ್ಕೂ ಬಂದಿಲ್ಲ. ಬಳಿಕ ಮತ್ತೊಂದು ಮೆಸೇಜ್​ ಕಳುಹಿಸಿದ ಆನಂತರ ಪುನಃ ಮೊಬೈಲ್ ಸ್ವಿಚ್​ ಆಫ್​ ಆಗಿದೆ. ವಿಷಯ ತಿಳಿದು ಸರ್ಕಾರಿ ನೌಕರರು ಹಾಗು ಸ್ನೇಹಿತರು, ಪ್ರಭಾಕರ್​ರವರ ಮನೆ ಮತ್ತು ಕೆಲಸ ಮಾಡುವ ಜಾಗದಲ್ಲಿ ವಿಚಾರಿಸಿದ್ದಾರೆ. ಎಲ್ಲಿಯು ಪತ್ತೆಯಾಗದ ಹಿನ್ನೆಲೆ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಭಾಕರ್ ಅವರು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿಯ ಕೊಕ್ಕೋಡುವಿನಲ್ಲಿ ಟೀಚರ್ ಆಗಿದ್ದರು. ಶೆಟ್ಟಿಹಳ್ಳಿಯಲ್ಲಿ ಸಿಆರ್​ಪಿಯಾಗಿ ಕಾರ್ಯನಿರ್ವಹಿಸಿದ್ದರು. ಆನಂತರ ಅವರು ಎಫ್​ಡಿಎ ಆಗಿ ಹೊನ್ನಾಳಿ ಬಿಒ ಆಫೀಸ್​ನಲ್ಲಿ ಕಾರ್ಯನಿರ್ವಹಿಸಿದ್ದರು. ಟೀಚರ್ ಆಗಿದ್ದವರು ಎಫ್​ಡಿಎ ಆಗಿ ಬದಲಾವಣೆ ಪಡೆದಿದ್ದರ ಸಂಬಂಧ ಕೆಲವು ಆಕ್ಷೇಪಣೆ ಸಲ್ಲಿಸಿದ್ದರು. ಅಲ್ಲದೆ ಇದರ ನಡುವೆ ಅವರನ್ನು ಹಿರಿಯೂರು ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಗೆ ವರ್ಗಾವಣೆ ಮಾಡಲಾಗಿತ್ತು. ಆದರೆ, ಪ್ರಭಾಕರ್ ಕೋರ್ಟ್​ ಮೊರೆಹೋಗಿ, ವರ್ಗಾವಣೆಗೆ ಸ್ಟೇ ತಂದಿದ್ದರು. ಅವರ ವರ್ಗಾವಣೆ ಮತ್ತು ಹಿಂಬಡ್ತಿಗೆ ಮುಖ್ಯ ಕಾರಣ ಅವರು ನೌಕರರ ಸಂಘದ ಹೋರಾಟಗಳಲ್ಲಿ ಭಾಗಿ ಆಗಿದ್ದು ಎಂಬುದು ಪರಿಚಿತರಿಂದ ಸಿಕ್ಕ ಮಾಹಿತಿಯಾಗಿದೆ.

ವರ್ಗಾವಣೆಗೆ ಸ್ಟೇ ತಂದ ನಂತರ ಎಫ್ ಡಿಎಯಿಂದ ಎಸ್ ಡಿಎ ಆಗಿ ಹಿಂಬಡ್ತಿಗೆ ದೂಡಲಾಗಿತ್ತು. ನಂತರ ಹೊಸನಗರದ ಮಾರುತಿಪುರಕ್ಕೆ ವರ್ಗಾವಣೆ ಮಾಡಲಾಗಿತ್ತು. ಅಲ್ಲಿಗೆ ವರ್ಗಾವಣೆಗೊಳ್ಳದ ಪ್ರಭಾಕರ್, ತಮ್ಮ ವಿರುದ್ಧದ ನಿರ್ಣಯದ ವಿರುದ್ಧ ಹೋರಾಟಕ್ಕೆ ಇಳಿದಿದ್ದರು.  ಈ ಸಂಬಂಧ ಸರ್ಕಾರದಿಂದ ಪತ್ರವೊಂದು ಬಂದಿದೆ ಎನ್ನಲಾಗುತ್ತಿದ್ದು, ಆನಂತರ ಪ್ರಭಾಕರ್​ ರವರು ತುಂಬಾ ನೊಂದಿದ್ದರಿಂದ ಈ ಡೆತ್‌ನೋಟ್ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: NPS ಅಥವಾ OPS? ನವ ಉದಾರವಾದಿ ’ಹೊಸ ಪಿಂಚಣಿ ಯೋಜನೆ’ಯಲ್ಲಿ ನಿಜಕ್ಕೂ ಲಾಭವಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...