Homeಕರ್ನಾಟಕNPS ನೌಕರನ ಡೆತ್‌ನೋಟ್: ಮಾಜಿ ಸಚಿವ ಬಿ.ಸಿ.ನಾಗೇಶ್, ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೆಸರು ಉಲ್ಲೇಖ

NPS ನೌಕರನ ಡೆತ್‌ನೋಟ್: ಮಾಜಿ ಸಚಿವ ಬಿ.ಸಿ.ನಾಗೇಶ್, ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೆಸರು ಉಲ್ಲೇಖ

- Advertisement -
- Advertisement -

ರಾಜ್ಯ NPS ನೌಕರರ ಸಂಘ, ಶಿವಮೊಗ್ಗ ತಾಲ್ಲೂಕು ಘಟಕದ ಅಧ್ಯಕ್ಷರಾಗಿದ್ದ ಪ್ರಭಾಕರ್​ ಎಸ್​ ಅವರು ತಮ್ಮ ವೃತ್ತಿಬದುಕಿಗೆ ರಾಜ್ಯದ ನೌಕರ ಸಂಘದ ಅಧ್ಯಕ್ಷರಿಂದ ವ್ಯವಸ್ಥಿತ ತೊಂದರೆಯಾಗಿದೆ. ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನಸಿಕವಾಗಿ ವಿಫಲನಾಗಿದ್ದೇನೆ ಹಾಗಾಗಿ ನಾನು ಬದುಕಿಗೆ ವಿಧಾಯ ಹೇಳಲು ಬಯಸಿದ್ದೇನೆ” ಎಂದು ಡೆತ್‌ನೋಟ್ ಬರೆದಿದ್ದಾರೆ.

NPS ನೌಕರರ ಈ ಡೆತ್ ನೋಟ್‌ನಿಂದ ಜುಲೈ 19 ರ ಇಡೀ ದಿನ ಆತಂಕ ಸೃಷ್ಟಿಯಾಗಿತ್ತು. ಪ್ರಭಾಕರ್ ಎಸ್‌ ಅವರು, ತಮ್ಮ ಸರ್ಕಾರಿ ನೌಕರರ ಸಂಘದ ವಾಟ್ಸಾಪ್ ಗ್ರೂಪ್​ನಲ್ಲಿ ಎರಡು ಡೆತ್​ನೋಟ್​ ಮೆಸೇಜ್​ ಕಳುಹಿಸಿದ್ದಾರೆ. ಡೆತ್​ನೋಟ್​ ಸೆಂಡ್​ ಮಾಡಿದ ಬಳಿಕ ಅವರ ಮೊಬೈಲ್ ಸ್ವಿಚ್ ಆಪ್​ ಆಗಿದೆ. ಇದರಿಂದ ಸಹಜವಾಗಿ ಅವರ ಕುಟುಂಬಸ್ಥರು ಮತ್ತು ಸ್ನೇಹಿತರ ವಲಯದಲ್ಲಿ ಆತಂಕ ಮೂಡಿದೆ.

ಪ್ರಭಾಕರ್ ಅವರು ಡೆತ್‌ನೋಟ್‌ನ ಮೆಸೇಜ್ ಕಳುಹಿಸಿದ ಬಳಿಕ ಶಿವಮೊಗ್ಗದ ಸೋಮಯ್ಯ ಲೇಔಟ್​ನಲ್ಲಿರುವ ಅವರ ಮನೆಯ ಬಳಿ, ಸ್ನೇಹಿತರು, ಬಂಧು ಬಳಗದವರು ಸೇರಿದ್ದಾರೆ. ನಂತರ ಆ ಡೆತ್‌ನೋಟ್‌ ಅಡಿಯಲ್ಲಿ ಶಿವಮೊಗ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕರ್ನಾಟಕ ರಾಜ್ಯ NPS ನೌಕರರ ಸಂಘದ ಕಡೆಯಿಂದಲೂ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದು, ಘಟನೆಗೆ ಸಂಬಂಧಿಸಿದವರ ಮೇಲೆ FIR ದಾಖಲಿಸಿ ವಿಚಾರಣೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.

ಘಟನೆ ಕುರಿತು ವಿವರ

ರಾಜ್ಯ NPS ನೌಕರರ ಸಂಘದ KSGNPSEA ಹೆಸರಿನ ವಾಟ್ಸಾಪ್ ಗ್ರೂಪ್ ನಲ್ಲಿ ಪ್ರಭಾಕರ್ ಅವರು ಒಟ್ಟು ಎರಡು ಸಂದೇಶಗಳನ್ನು ಕಳುಹಿಸಿದ್ದಾರೆ. ಬುಧವಾರ ಬೆಳಿಗ್ಗೆ 4.28ಕ್ಕೆ ಮೊದಲ ಮೆಸೇಜ್​, ಎರಡನೇ ಮೆಸೇಜ್ ಬೆಳಗ್ಗೆ 8.13 ಕ್ಕೆ ಗ್ರೂಪ್​ಗೆ ಮೆಸೇಜ್‌ಗಳು ಬಂದಿವೆ.

ಮೊದಲ ಮೆಸೇಜ್ ನಲ್ಲಿ ”ಆತ್ಮೀಯ ರಾಜ್ಯದ ಸಮಸ್ತ NPS ನೌಕರ ಸಂಘದ ಪದಾಧಿಕಾರಿ ಮಿತ್ರರೇ ನಾನು ಕಳೆದ ಹತ್ತು ವರ್ಷಗಳಿಂದ NPS ನೌಕರ ಸಂಘವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಕಟ್ಟಿ ಬೆಳೆಸಿದ್ದೇನೆ. ರಾಜ್ಯ ಸಂಘದ ನಿರ್ಧೇಶನದಂತೆ ಅನೇಕ ಕಾರ್ಯಕ್ರಮಗಳನ್ನು ಶಿವಮೊಗ್ಗ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ಸಂಘಟನೆ ಮಾಡಿದ್ದೇನೆ. ಇತ್ತೀಚೆಗೆ ಜನವರಿ 22-2023 ರಂದು ಶಿವಮೊಗ್ಗ ಜಿಲ್ಲಾ ಮಟ್ಟದ NPS ನೌಕರರ ಸಮಾವೇಶ ಮತ್ತು ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಅತ್ಯಂತ ಯಶಸ್ವಿಯಾಗಿ ಮಾಡಿದ್ದರ ಫಲವಾಗಿ ನನ್ನ ವೃತ್ತಿಬದುಕಿಗೆ ರಾಜ್ಯದ ನೌಕರ ಸಂಘದ ಅಧ್ಯಕ್ಷರಿಂದ ವ್ಯವಸ್ಥಿತ ತೊಂದರೆಯಾಗಿ ಕಳೆದ 6 ತಿಂಗಳಿಂದ ವೇತನವಿಲ್ಲದೆ ನರಕಯಾತನೆ ಅನುಭವಿಸಿದ್ದೇನೆ. ಮತ್ತು ನನ್ನ ಇಡೀ ಕುಟುಂಬ ಕಣ್ಣೀರಿನಲ್ಲಿ ಮುಳುಗಿದೆ ನನ್ನ ಸಮಸ್ಯೆಗೆ ಪರಿಹಾರ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಕಾಲ ಕಳೆದಾಯಿತು. ಆದರೂ ಯಾವುದೇ ಪರಿಹಾರ ಸಿಗದೆ ಪ್ರಯತ್ನಗಳೆಲ್ಲ ವಿಫಲವಾಗಿದ್ದು ಅತ್ಯಂತ ನೋವಿನ ಸಂಗತಿ.”

”ಈ ಘಟನೆಗೆ ಕಾರಣರಾದವರು ಚೆನ್ನಾಗಿರಲಿ. ನಾನು ಈ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನಸಿಕವಾಗಿ ವಿಫಲನಾಗಿರುವ ಪ್ರಯುಕ್ತ ನಾನು ಬದುಕಿಗೆ ವಿಧಾಯ ಹೇಳಲು ಬಯಸಿದ್ದೇನೆ. ನನ್ನ ಕುಟುಂಬದ ಹೊಣೆಗಾರಿಕೆ ಇಡೀ NPS ನೌಕರ ಸಂಘಟನೆಯದ್ದು. ದಯವಿಟ್ಟು ನನ್ನ ಕುಟುಂಬಕ್ಕೆ ಸಹಾಯ ಸಹಕಾರ ಮಾಡಿ. ಇಂತಿ ನಿಮ್ಮ ನತದೃಷ್ಟ NPS ನೌಕರ ಪ್ರಭಾಕರ ಎಸ್.” ಎಂದು ಬರೆದು ಮೆಸೇಜ್ ಕಳುಹಿಸಿದ್ದಾರೆ.

ಆನಂತರ 8.13ಕ್ಕೆ ಇನ್ನೊಂದು ಮೆಸೇಜ್ ಕಳುಹಿಸಲಾಗಿದ್ದು, ಅದರಲ್ಲಿ, ”ಆತ್ಮೀಯ ರಾಜ್ಯದ ಸಮಸ್ತ NPS ನೌಕರ ಸಂಘದ ಪದಾಧಿಕಾರಿ ಮಿತ್ರರೇ ನಾನು ಕಳೆದ ಹತ್ತು ವರ್ಷಗಳಿಂದ NPS ನೌಕರ ಸಂಘವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಕಟ್ಟಿ ಬೆಳೆಸಿದ್ದೇನೆ. ರಾಜ್ಯ ಸಂಘದ ನಿರ್ಧೇಶನದಂತೆ ಅನೇಕ ಕಾರ್ಯಕ್ರಮಗಳನ್ನು ಶಿವಮೊಗ್ಗ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ಸಂಘಟನೆ ಮಾಡಿದ್ದೇನೆ.”

”ಇತ್ತೀಚೆಗೆ ಜನವರಿ 22-2023 ರಂದು ಶಿವಮೊಗ್ಗ ಜಿಲ್ಲಾ ಮಟ್ಟದ NPS ನೌಕರರ ಸಮಾವೇಶ ಮತ್ತು ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಅತ್ಯಂತ ಯಶಸ್ವಿಯಾಗಿ ಮಾಡಿದ್ದರ ಫಲವಾಗಿ ನನ್ನ ವೃತ್ತಿಬದುಕಿಗೆ ರಾಜ್ಯದ ನೌಕರ ಸಂಘದ ಅಧ್ಯಕ್ಷರಾದ ಷಡಕ್ಷರಿ, ಅವರ ಸಹಚರರಾದ ಮೋಹನ್ ಕುಮಾರ ಆರ್,ಬಸವನಗೌಡ, ಹಾಗೂ ಹಿಂದಿನ ಶಿಕ್ಷಣ ಸಚಿವರಾ ಬಿ.ಸಿ.ನಾಗೇಶ್ ಮತ್ತು ಅವರ ಆಪ್ತ ಕಾರ್ಯದರ್ಶಿಗಳಾಗಿದ್ದ ಎ ಆರ್ ರವಿ ಅವರ ವ್ಯವಸ್ಥಿತ ಪಿತೂರಿಯಿಂದಾಗಿ ಹಿಂಬಡ್ತಿ ಮಾಡಿ ನಿಯಮಗಳಲ್ಲಿ ವೇತನ ಸಂರಕ್ಷಣೆಗೆ ಅವಕಾಶವಿದ್ದರೂ ಹಿಂಬಡ್ತಿ ಆದೇಶದಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಶ್ರೀ ಮಹಂತಯ್ಯ ಹೊಸಮಠ ಅವರು ಹಿಂಬಡ್ತಿ ಮಾಡಿದ್ದಲ್ಲದೆ, ಹೆಚ್ಚುವರಿ ವೇತನ ಕಟಾಯಿಸುವಂತೆ ಆದೇಶ ಮಾಡಿದ್ದರ ಪ್ರತಿಫಲವಾಗಿ, ಹೊನ್ನಾಳಿ BEO ರವರಾದ ನಂಜರಾಜ ಅವರು ಸರಿಯಾದ ಸಮಯಕ್ಕೆ ಅಂತಿಮ ವೇತನ ಪ್ರಮಾಣ ಪತ್ರ, ಸೇವಾವಹಿಯನ್ನು ಕಳುಹಿಸದೆ ಕಳೆದ 6 ತಿಂಗಳಿಂದ ವೇತನ ಆಗದೆ ನರಕಯಾತನೆ ಅನುಭವಿಸಿದ್ದೇನೆ. ಮತ್ತು ನನ್ನ ಇಡೀ ಕುಟುಂಬ ಕಣ್ಣೀರಿನಲ್ಲಿ ಮುಳುಗಿದೆ ನನ್ನ ಸಮಸ್ಯೆಗೆ ಪರಿಹಾರ ಸಿಗಬಹುದು ಎಂಬ ನಿರೀಕ್ಷೆಯಲ್ಲಿ 6 ತಿಂಗಳಕಾಲ ಕಳೆದಾಯಿತು. ಆದರೂ ಯಾವುದೇ ಪರಿಹಾರ ಸಿಗದೆ ಪ್ರಯತ್ನಗಳೆಲ್ಲ ವಿಫಲವಾಗಿದ್ದು ಅತ್ಯಂತ ನೋವಿನ ಸಂಗತಿ.”

”ಈ ಘಟನೆಗೆ ಕಾರಣರಾದವರು ಚೆನ್ನಾಗಿರಲಿ……ನಾನು ಈ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನಸಿಕವಾಗಿ ವಿಫಲನಾಗಿರುವ ಪ್ರಯುಕ್ತ ನಾನು ಬದುಕಿಗೆ ವಿಧಾಯ ಹೇಳಲು ಬಯಸಿದ್ದೇನೆ….. ನನ್ನ ನಿರ್ಧಾರಕ್ಕೆ ಮೇಲ್ಕಾಣಿಸಿದ ವ್ಯಕ್ತಿಗಳೇ ನೇರ ಕಾರಣರಾಗಿರುತ್ತಾರೆ. ನನ್ನ ಈ ನನ್ನ ಕುಟುಂಬದ ಹೊಣೆಗಾರಿಕೆ ಇಡೀ NPS ನೌಕರ ಸಂಘಟನೆಯದ್ದು ದಯವಿಟ್ಟು ನನ್ನ ಕುಟುಂಬಕ್ಕೆ ಸಹಾಯ ಸಹಕಾರ ಮಾಡಿ……
ಇಂತಿ ನಿಮ್ಮ ನತದೃಷ್ಟ NPS ನೌಕರ” ಎಂದು ಬರೆಯಲಾಗಿದೆ.

ಪ್ರಭಾಕರ್ ಅವರು ಕಳಿಸಿದ ಎರಡೂ ಮೆಸೇಜ್‌ಗಳು ಬಹುತೇಕ ಒಂದೇ ವಿಷಯವಾಗಿದೆ. ಆದರೆ, ಮೊದಲ ಮೆಸೇಜ್ ನಲ್ಲಿ ಯಾವುದೇ ವ್ಯಕ್ತಿಗಳ ಹೆಸರು ಬಳಸಿಲ್ಲ, ಎರಡನೇ ಮೆಸೇಜ್ ನಲ್ಲಿ ತನ್ನ ಈ ಸ್ಥಿತಿಗೆ ಕಾರಣರಾದವರ ಹೆಸರು ಉಲ್ಲೇಖಿಸಿದ್ದಾರೆ.

ಈ ಡೆತ್ ನೋಟ್ ನಲ್ಲಿ ಮಾಜಿ ಸಚಿವ ಬಿ.ಸಿ.ನಾಗೇಶ್ ಹಾಗೂ ರಾಜ್ಯ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೆಸರು ಇರುವುದು ಭಾರೀ ಚರ್ಚೆಯಾಗುತ್ತಿದೆ. ಪ್ರಭಾಕರ್ ಅವರ ಮುಖ್ಯ ಉದ್ದೇಶ ಇರುವುದು ಘಟನೆ ಹಿನ್ನೆಲೆಯಲ್ಲಿ ತನಿಖೆ ಆಗಬೇಕು, ತಮಗೆ ತೊಂದರೆ ನೀಡಿದ ವ್ಯಕ್ತಿಗಳಿಗೆ ಶಿಕ್ಷೆ ಆಗಬೇಕು ಎಂಬ ಉದ್ದೇಶ ಇರುವುದು ಸ್ಪಷ್ಟವಾಗಿದೆ.

ಗ್ರೂಪ್‌ನಲ್ಲಿ ಮೊದಲ ಮೆಸೇಜ್‌ ಬಂದ ಬಳಿಕ ಅವರ ಸ್ನೇಹಿತರು ಪ್ರಭಾಕರ್​​ನ್ನು ಸಂಪರ್ಕಿಸುವ ಪ್ರಯತ್ನವನ್ನು ಮಾಡಿದ್ದಾರೆ. ಆದರೆ ಪ್ರಭಾಕರ್ ಯಾರ ಸಂಪರ್ಕಕ್ಕೂ ಬಂದಿಲ್ಲ. ಬಳಿಕ ಮತ್ತೊಂದು ಮೆಸೇಜ್​ ಕಳುಹಿಸಿದ ಆನಂತರ ಪುನಃ ಮೊಬೈಲ್ ಸ್ವಿಚ್​ ಆಫ್​ ಆಗಿದೆ. ವಿಷಯ ತಿಳಿದು ಸರ್ಕಾರಿ ನೌಕರರು ಹಾಗು ಸ್ನೇಹಿತರು, ಪ್ರಭಾಕರ್​ರವರ ಮನೆ ಮತ್ತು ಕೆಲಸ ಮಾಡುವ ಜಾಗದಲ್ಲಿ ವಿಚಾರಿಸಿದ್ದಾರೆ. ಎಲ್ಲಿಯು ಪತ್ತೆಯಾಗದ ಹಿನ್ನೆಲೆ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಭಾಕರ್ ಅವರು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿಯ ಕೊಕ್ಕೋಡುವಿನಲ್ಲಿ ಟೀಚರ್ ಆಗಿದ್ದರು. ಶೆಟ್ಟಿಹಳ್ಳಿಯಲ್ಲಿ ಸಿಆರ್​ಪಿಯಾಗಿ ಕಾರ್ಯನಿರ್ವಹಿಸಿದ್ದರು. ಆನಂತರ ಅವರು ಎಫ್​ಡಿಎ ಆಗಿ ಹೊನ್ನಾಳಿ ಬಿಒ ಆಫೀಸ್​ನಲ್ಲಿ ಕಾರ್ಯನಿರ್ವಹಿಸಿದ್ದರು. ಟೀಚರ್ ಆಗಿದ್ದವರು ಎಫ್​ಡಿಎ ಆಗಿ ಬದಲಾವಣೆ ಪಡೆದಿದ್ದರ ಸಂಬಂಧ ಕೆಲವು ಆಕ್ಷೇಪಣೆ ಸಲ್ಲಿಸಿದ್ದರು. ಅಲ್ಲದೆ ಇದರ ನಡುವೆ ಅವರನ್ನು ಹಿರಿಯೂರು ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಗೆ ವರ್ಗಾವಣೆ ಮಾಡಲಾಗಿತ್ತು. ಆದರೆ, ಪ್ರಭಾಕರ್ ಕೋರ್ಟ್​ ಮೊರೆಹೋಗಿ, ವರ್ಗಾವಣೆಗೆ ಸ್ಟೇ ತಂದಿದ್ದರು. ಅವರ ವರ್ಗಾವಣೆ ಮತ್ತು ಹಿಂಬಡ್ತಿಗೆ ಮುಖ್ಯ ಕಾರಣ ಅವರು ನೌಕರರ ಸಂಘದ ಹೋರಾಟಗಳಲ್ಲಿ ಭಾಗಿ ಆಗಿದ್ದು ಎಂಬುದು ಪರಿಚಿತರಿಂದ ಸಿಕ್ಕ ಮಾಹಿತಿಯಾಗಿದೆ.

ವರ್ಗಾವಣೆಗೆ ಸ್ಟೇ ತಂದ ನಂತರ ಎಫ್ ಡಿಎಯಿಂದ ಎಸ್ ಡಿಎ ಆಗಿ ಹಿಂಬಡ್ತಿಗೆ ದೂಡಲಾಗಿತ್ತು. ನಂತರ ಹೊಸನಗರದ ಮಾರುತಿಪುರಕ್ಕೆ ವರ್ಗಾವಣೆ ಮಾಡಲಾಗಿತ್ತು. ಅಲ್ಲಿಗೆ ವರ್ಗಾವಣೆಗೊಳ್ಳದ ಪ್ರಭಾಕರ್, ತಮ್ಮ ವಿರುದ್ಧದ ನಿರ್ಣಯದ ವಿರುದ್ಧ ಹೋರಾಟಕ್ಕೆ ಇಳಿದಿದ್ದರು.  ಈ ಸಂಬಂಧ ಸರ್ಕಾರದಿಂದ ಪತ್ರವೊಂದು ಬಂದಿದೆ ಎನ್ನಲಾಗುತ್ತಿದ್ದು, ಆನಂತರ ಪ್ರಭಾಕರ್​ ರವರು ತುಂಬಾ ನೊಂದಿದ್ದರಿಂದ ಈ ಡೆತ್‌ನೋಟ್ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: NPS ಅಥವಾ OPS? ನವ ಉದಾರವಾದಿ ’ಹೊಸ ಪಿಂಚಣಿ ಯೋಜನೆ’ಯಲ್ಲಿ ನಿಜಕ್ಕೂ ಲಾಭವಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...