Homeಕರ್ನಾಟಕNPS ನೌಕರನ ಡೆತ್‌ನೋಟ್: ಮಾಜಿ ಸಚಿವ ಬಿ.ಸಿ.ನಾಗೇಶ್, ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೆಸರು ಉಲ್ಲೇಖ

NPS ನೌಕರನ ಡೆತ್‌ನೋಟ್: ಮಾಜಿ ಸಚಿವ ಬಿ.ಸಿ.ನಾಗೇಶ್, ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೆಸರು ಉಲ್ಲೇಖ

- Advertisement -
- Advertisement -

ರಾಜ್ಯ NPS ನೌಕರರ ಸಂಘ, ಶಿವಮೊಗ್ಗ ತಾಲ್ಲೂಕು ಘಟಕದ ಅಧ್ಯಕ್ಷರಾಗಿದ್ದ ಪ್ರಭಾಕರ್​ ಎಸ್​ ಅವರು ತಮ್ಮ ವೃತ್ತಿಬದುಕಿಗೆ ರಾಜ್ಯದ ನೌಕರ ಸಂಘದ ಅಧ್ಯಕ್ಷರಿಂದ ವ್ಯವಸ್ಥಿತ ತೊಂದರೆಯಾಗಿದೆ. ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನಸಿಕವಾಗಿ ವಿಫಲನಾಗಿದ್ದೇನೆ ಹಾಗಾಗಿ ನಾನು ಬದುಕಿಗೆ ವಿಧಾಯ ಹೇಳಲು ಬಯಸಿದ್ದೇನೆ” ಎಂದು ಡೆತ್‌ನೋಟ್ ಬರೆದಿದ್ದಾರೆ.

NPS ನೌಕರರ ಈ ಡೆತ್ ನೋಟ್‌ನಿಂದ ಜುಲೈ 19 ರ ಇಡೀ ದಿನ ಆತಂಕ ಸೃಷ್ಟಿಯಾಗಿತ್ತು. ಪ್ರಭಾಕರ್ ಎಸ್‌ ಅವರು, ತಮ್ಮ ಸರ್ಕಾರಿ ನೌಕರರ ಸಂಘದ ವಾಟ್ಸಾಪ್ ಗ್ರೂಪ್​ನಲ್ಲಿ ಎರಡು ಡೆತ್​ನೋಟ್​ ಮೆಸೇಜ್​ ಕಳುಹಿಸಿದ್ದಾರೆ. ಡೆತ್​ನೋಟ್​ ಸೆಂಡ್​ ಮಾಡಿದ ಬಳಿಕ ಅವರ ಮೊಬೈಲ್ ಸ್ವಿಚ್ ಆಪ್​ ಆಗಿದೆ. ಇದರಿಂದ ಸಹಜವಾಗಿ ಅವರ ಕುಟುಂಬಸ್ಥರು ಮತ್ತು ಸ್ನೇಹಿತರ ವಲಯದಲ್ಲಿ ಆತಂಕ ಮೂಡಿದೆ.

ಪ್ರಭಾಕರ್ ಅವರು ಡೆತ್‌ನೋಟ್‌ನ ಮೆಸೇಜ್ ಕಳುಹಿಸಿದ ಬಳಿಕ ಶಿವಮೊಗ್ಗದ ಸೋಮಯ್ಯ ಲೇಔಟ್​ನಲ್ಲಿರುವ ಅವರ ಮನೆಯ ಬಳಿ, ಸ್ನೇಹಿತರು, ಬಂಧು ಬಳಗದವರು ಸೇರಿದ್ದಾರೆ. ನಂತರ ಆ ಡೆತ್‌ನೋಟ್‌ ಅಡಿಯಲ್ಲಿ ಶಿವಮೊಗ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕರ್ನಾಟಕ ರಾಜ್ಯ NPS ನೌಕರರ ಸಂಘದ ಕಡೆಯಿಂದಲೂ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದು, ಘಟನೆಗೆ ಸಂಬಂಧಿಸಿದವರ ಮೇಲೆ FIR ದಾಖಲಿಸಿ ವಿಚಾರಣೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.

ಘಟನೆ ಕುರಿತು ವಿವರ

ರಾಜ್ಯ NPS ನೌಕರರ ಸಂಘದ KSGNPSEA ಹೆಸರಿನ ವಾಟ್ಸಾಪ್ ಗ್ರೂಪ್ ನಲ್ಲಿ ಪ್ರಭಾಕರ್ ಅವರು ಒಟ್ಟು ಎರಡು ಸಂದೇಶಗಳನ್ನು ಕಳುಹಿಸಿದ್ದಾರೆ. ಬುಧವಾರ ಬೆಳಿಗ್ಗೆ 4.28ಕ್ಕೆ ಮೊದಲ ಮೆಸೇಜ್​, ಎರಡನೇ ಮೆಸೇಜ್ ಬೆಳಗ್ಗೆ 8.13 ಕ್ಕೆ ಗ್ರೂಪ್​ಗೆ ಮೆಸೇಜ್‌ಗಳು ಬಂದಿವೆ.

ಮೊದಲ ಮೆಸೇಜ್ ನಲ್ಲಿ ”ಆತ್ಮೀಯ ರಾಜ್ಯದ ಸಮಸ್ತ NPS ನೌಕರ ಸಂಘದ ಪದಾಧಿಕಾರಿ ಮಿತ್ರರೇ ನಾನು ಕಳೆದ ಹತ್ತು ವರ್ಷಗಳಿಂದ NPS ನೌಕರ ಸಂಘವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಕಟ್ಟಿ ಬೆಳೆಸಿದ್ದೇನೆ. ರಾಜ್ಯ ಸಂಘದ ನಿರ್ಧೇಶನದಂತೆ ಅನೇಕ ಕಾರ್ಯಕ್ರಮಗಳನ್ನು ಶಿವಮೊಗ್ಗ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ಸಂಘಟನೆ ಮಾಡಿದ್ದೇನೆ. ಇತ್ತೀಚೆಗೆ ಜನವರಿ 22-2023 ರಂದು ಶಿವಮೊಗ್ಗ ಜಿಲ್ಲಾ ಮಟ್ಟದ NPS ನೌಕರರ ಸಮಾವೇಶ ಮತ್ತು ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಅತ್ಯಂತ ಯಶಸ್ವಿಯಾಗಿ ಮಾಡಿದ್ದರ ಫಲವಾಗಿ ನನ್ನ ವೃತ್ತಿಬದುಕಿಗೆ ರಾಜ್ಯದ ನೌಕರ ಸಂಘದ ಅಧ್ಯಕ್ಷರಿಂದ ವ್ಯವಸ್ಥಿತ ತೊಂದರೆಯಾಗಿ ಕಳೆದ 6 ತಿಂಗಳಿಂದ ವೇತನವಿಲ್ಲದೆ ನರಕಯಾತನೆ ಅನುಭವಿಸಿದ್ದೇನೆ. ಮತ್ತು ನನ್ನ ಇಡೀ ಕುಟುಂಬ ಕಣ್ಣೀರಿನಲ್ಲಿ ಮುಳುಗಿದೆ ನನ್ನ ಸಮಸ್ಯೆಗೆ ಪರಿಹಾರ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಕಾಲ ಕಳೆದಾಯಿತು. ಆದರೂ ಯಾವುದೇ ಪರಿಹಾರ ಸಿಗದೆ ಪ್ರಯತ್ನಗಳೆಲ್ಲ ವಿಫಲವಾಗಿದ್ದು ಅತ್ಯಂತ ನೋವಿನ ಸಂಗತಿ.”

”ಈ ಘಟನೆಗೆ ಕಾರಣರಾದವರು ಚೆನ್ನಾಗಿರಲಿ. ನಾನು ಈ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನಸಿಕವಾಗಿ ವಿಫಲನಾಗಿರುವ ಪ್ರಯುಕ್ತ ನಾನು ಬದುಕಿಗೆ ವಿಧಾಯ ಹೇಳಲು ಬಯಸಿದ್ದೇನೆ. ನನ್ನ ಕುಟುಂಬದ ಹೊಣೆಗಾರಿಕೆ ಇಡೀ NPS ನೌಕರ ಸಂಘಟನೆಯದ್ದು. ದಯವಿಟ್ಟು ನನ್ನ ಕುಟುಂಬಕ್ಕೆ ಸಹಾಯ ಸಹಕಾರ ಮಾಡಿ. ಇಂತಿ ನಿಮ್ಮ ನತದೃಷ್ಟ NPS ನೌಕರ ಪ್ರಭಾಕರ ಎಸ್.” ಎಂದು ಬರೆದು ಮೆಸೇಜ್ ಕಳುಹಿಸಿದ್ದಾರೆ.

ಆನಂತರ 8.13ಕ್ಕೆ ಇನ್ನೊಂದು ಮೆಸೇಜ್ ಕಳುಹಿಸಲಾಗಿದ್ದು, ಅದರಲ್ಲಿ, ”ಆತ್ಮೀಯ ರಾಜ್ಯದ ಸಮಸ್ತ NPS ನೌಕರ ಸಂಘದ ಪದಾಧಿಕಾರಿ ಮಿತ್ರರೇ ನಾನು ಕಳೆದ ಹತ್ತು ವರ್ಷಗಳಿಂದ NPS ನೌಕರ ಸಂಘವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಕಟ್ಟಿ ಬೆಳೆಸಿದ್ದೇನೆ. ರಾಜ್ಯ ಸಂಘದ ನಿರ್ಧೇಶನದಂತೆ ಅನೇಕ ಕಾರ್ಯಕ್ರಮಗಳನ್ನು ಶಿವಮೊಗ್ಗ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ಸಂಘಟನೆ ಮಾಡಿದ್ದೇನೆ.”

”ಇತ್ತೀಚೆಗೆ ಜನವರಿ 22-2023 ರಂದು ಶಿವಮೊಗ್ಗ ಜಿಲ್ಲಾ ಮಟ್ಟದ NPS ನೌಕರರ ಸಮಾವೇಶ ಮತ್ತು ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಅತ್ಯಂತ ಯಶಸ್ವಿಯಾಗಿ ಮಾಡಿದ್ದರ ಫಲವಾಗಿ ನನ್ನ ವೃತ್ತಿಬದುಕಿಗೆ ರಾಜ್ಯದ ನೌಕರ ಸಂಘದ ಅಧ್ಯಕ್ಷರಾದ ಷಡಕ್ಷರಿ, ಅವರ ಸಹಚರರಾದ ಮೋಹನ್ ಕುಮಾರ ಆರ್,ಬಸವನಗೌಡ, ಹಾಗೂ ಹಿಂದಿನ ಶಿಕ್ಷಣ ಸಚಿವರಾ ಬಿ.ಸಿ.ನಾಗೇಶ್ ಮತ್ತು ಅವರ ಆಪ್ತ ಕಾರ್ಯದರ್ಶಿಗಳಾಗಿದ್ದ ಎ ಆರ್ ರವಿ ಅವರ ವ್ಯವಸ್ಥಿತ ಪಿತೂರಿಯಿಂದಾಗಿ ಹಿಂಬಡ್ತಿ ಮಾಡಿ ನಿಯಮಗಳಲ್ಲಿ ವೇತನ ಸಂರಕ್ಷಣೆಗೆ ಅವಕಾಶವಿದ್ದರೂ ಹಿಂಬಡ್ತಿ ಆದೇಶದಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಶ್ರೀ ಮಹಂತಯ್ಯ ಹೊಸಮಠ ಅವರು ಹಿಂಬಡ್ತಿ ಮಾಡಿದ್ದಲ್ಲದೆ, ಹೆಚ್ಚುವರಿ ವೇತನ ಕಟಾಯಿಸುವಂತೆ ಆದೇಶ ಮಾಡಿದ್ದರ ಪ್ರತಿಫಲವಾಗಿ, ಹೊನ್ನಾಳಿ BEO ರವರಾದ ನಂಜರಾಜ ಅವರು ಸರಿಯಾದ ಸಮಯಕ್ಕೆ ಅಂತಿಮ ವೇತನ ಪ್ರಮಾಣ ಪತ್ರ, ಸೇವಾವಹಿಯನ್ನು ಕಳುಹಿಸದೆ ಕಳೆದ 6 ತಿಂಗಳಿಂದ ವೇತನ ಆಗದೆ ನರಕಯಾತನೆ ಅನುಭವಿಸಿದ್ದೇನೆ. ಮತ್ತು ನನ್ನ ಇಡೀ ಕುಟುಂಬ ಕಣ್ಣೀರಿನಲ್ಲಿ ಮುಳುಗಿದೆ ನನ್ನ ಸಮಸ್ಯೆಗೆ ಪರಿಹಾರ ಸಿಗಬಹುದು ಎಂಬ ನಿರೀಕ್ಷೆಯಲ್ಲಿ 6 ತಿಂಗಳಕಾಲ ಕಳೆದಾಯಿತು. ಆದರೂ ಯಾವುದೇ ಪರಿಹಾರ ಸಿಗದೆ ಪ್ರಯತ್ನಗಳೆಲ್ಲ ವಿಫಲವಾಗಿದ್ದು ಅತ್ಯಂತ ನೋವಿನ ಸಂಗತಿ.”

”ಈ ಘಟನೆಗೆ ಕಾರಣರಾದವರು ಚೆನ್ನಾಗಿರಲಿ……ನಾನು ಈ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನಸಿಕವಾಗಿ ವಿಫಲನಾಗಿರುವ ಪ್ರಯುಕ್ತ ನಾನು ಬದುಕಿಗೆ ವಿಧಾಯ ಹೇಳಲು ಬಯಸಿದ್ದೇನೆ….. ನನ್ನ ನಿರ್ಧಾರಕ್ಕೆ ಮೇಲ್ಕಾಣಿಸಿದ ವ್ಯಕ್ತಿಗಳೇ ನೇರ ಕಾರಣರಾಗಿರುತ್ತಾರೆ. ನನ್ನ ಈ ನನ್ನ ಕುಟುಂಬದ ಹೊಣೆಗಾರಿಕೆ ಇಡೀ NPS ನೌಕರ ಸಂಘಟನೆಯದ್ದು ದಯವಿಟ್ಟು ನನ್ನ ಕುಟುಂಬಕ್ಕೆ ಸಹಾಯ ಸಹಕಾರ ಮಾಡಿ……
ಇಂತಿ ನಿಮ್ಮ ನತದೃಷ್ಟ NPS ನೌಕರ” ಎಂದು ಬರೆಯಲಾಗಿದೆ.

ಪ್ರಭಾಕರ್ ಅವರು ಕಳಿಸಿದ ಎರಡೂ ಮೆಸೇಜ್‌ಗಳು ಬಹುತೇಕ ಒಂದೇ ವಿಷಯವಾಗಿದೆ. ಆದರೆ, ಮೊದಲ ಮೆಸೇಜ್ ನಲ್ಲಿ ಯಾವುದೇ ವ್ಯಕ್ತಿಗಳ ಹೆಸರು ಬಳಸಿಲ್ಲ, ಎರಡನೇ ಮೆಸೇಜ್ ನಲ್ಲಿ ತನ್ನ ಈ ಸ್ಥಿತಿಗೆ ಕಾರಣರಾದವರ ಹೆಸರು ಉಲ್ಲೇಖಿಸಿದ್ದಾರೆ.

ಈ ಡೆತ್ ನೋಟ್ ನಲ್ಲಿ ಮಾಜಿ ಸಚಿವ ಬಿ.ಸಿ.ನಾಗೇಶ್ ಹಾಗೂ ರಾಜ್ಯ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೆಸರು ಇರುವುದು ಭಾರೀ ಚರ್ಚೆಯಾಗುತ್ತಿದೆ. ಪ್ರಭಾಕರ್ ಅವರ ಮುಖ್ಯ ಉದ್ದೇಶ ಇರುವುದು ಘಟನೆ ಹಿನ್ನೆಲೆಯಲ್ಲಿ ತನಿಖೆ ಆಗಬೇಕು, ತಮಗೆ ತೊಂದರೆ ನೀಡಿದ ವ್ಯಕ್ತಿಗಳಿಗೆ ಶಿಕ್ಷೆ ಆಗಬೇಕು ಎಂಬ ಉದ್ದೇಶ ಇರುವುದು ಸ್ಪಷ್ಟವಾಗಿದೆ.

ಗ್ರೂಪ್‌ನಲ್ಲಿ ಮೊದಲ ಮೆಸೇಜ್‌ ಬಂದ ಬಳಿಕ ಅವರ ಸ್ನೇಹಿತರು ಪ್ರಭಾಕರ್​​ನ್ನು ಸಂಪರ್ಕಿಸುವ ಪ್ರಯತ್ನವನ್ನು ಮಾಡಿದ್ದಾರೆ. ಆದರೆ ಪ್ರಭಾಕರ್ ಯಾರ ಸಂಪರ್ಕಕ್ಕೂ ಬಂದಿಲ್ಲ. ಬಳಿಕ ಮತ್ತೊಂದು ಮೆಸೇಜ್​ ಕಳುಹಿಸಿದ ಆನಂತರ ಪುನಃ ಮೊಬೈಲ್ ಸ್ವಿಚ್​ ಆಫ್​ ಆಗಿದೆ. ವಿಷಯ ತಿಳಿದು ಸರ್ಕಾರಿ ನೌಕರರು ಹಾಗು ಸ್ನೇಹಿತರು, ಪ್ರಭಾಕರ್​ರವರ ಮನೆ ಮತ್ತು ಕೆಲಸ ಮಾಡುವ ಜಾಗದಲ್ಲಿ ವಿಚಾರಿಸಿದ್ದಾರೆ. ಎಲ್ಲಿಯು ಪತ್ತೆಯಾಗದ ಹಿನ್ನೆಲೆ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಭಾಕರ್ ಅವರು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿಯ ಕೊಕ್ಕೋಡುವಿನಲ್ಲಿ ಟೀಚರ್ ಆಗಿದ್ದರು. ಶೆಟ್ಟಿಹಳ್ಳಿಯಲ್ಲಿ ಸಿಆರ್​ಪಿಯಾಗಿ ಕಾರ್ಯನಿರ್ವಹಿಸಿದ್ದರು. ಆನಂತರ ಅವರು ಎಫ್​ಡಿಎ ಆಗಿ ಹೊನ್ನಾಳಿ ಬಿಒ ಆಫೀಸ್​ನಲ್ಲಿ ಕಾರ್ಯನಿರ್ವಹಿಸಿದ್ದರು. ಟೀಚರ್ ಆಗಿದ್ದವರು ಎಫ್​ಡಿಎ ಆಗಿ ಬದಲಾವಣೆ ಪಡೆದಿದ್ದರ ಸಂಬಂಧ ಕೆಲವು ಆಕ್ಷೇಪಣೆ ಸಲ್ಲಿಸಿದ್ದರು. ಅಲ್ಲದೆ ಇದರ ನಡುವೆ ಅವರನ್ನು ಹಿರಿಯೂರು ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಗೆ ವರ್ಗಾವಣೆ ಮಾಡಲಾಗಿತ್ತು. ಆದರೆ, ಪ್ರಭಾಕರ್ ಕೋರ್ಟ್​ ಮೊರೆಹೋಗಿ, ವರ್ಗಾವಣೆಗೆ ಸ್ಟೇ ತಂದಿದ್ದರು. ಅವರ ವರ್ಗಾವಣೆ ಮತ್ತು ಹಿಂಬಡ್ತಿಗೆ ಮುಖ್ಯ ಕಾರಣ ಅವರು ನೌಕರರ ಸಂಘದ ಹೋರಾಟಗಳಲ್ಲಿ ಭಾಗಿ ಆಗಿದ್ದು ಎಂಬುದು ಪರಿಚಿತರಿಂದ ಸಿಕ್ಕ ಮಾಹಿತಿಯಾಗಿದೆ.

ವರ್ಗಾವಣೆಗೆ ಸ್ಟೇ ತಂದ ನಂತರ ಎಫ್ ಡಿಎಯಿಂದ ಎಸ್ ಡಿಎ ಆಗಿ ಹಿಂಬಡ್ತಿಗೆ ದೂಡಲಾಗಿತ್ತು. ನಂತರ ಹೊಸನಗರದ ಮಾರುತಿಪುರಕ್ಕೆ ವರ್ಗಾವಣೆ ಮಾಡಲಾಗಿತ್ತು. ಅಲ್ಲಿಗೆ ವರ್ಗಾವಣೆಗೊಳ್ಳದ ಪ್ರಭಾಕರ್, ತಮ್ಮ ವಿರುದ್ಧದ ನಿರ್ಣಯದ ವಿರುದ್ಧ ಹೋರಾಟಕ್ಕೆ ಇಳಿದಿದ್ದರು.  ಈ ಸಂಬಂಧ ಸರ್ಕಾರದಿಂದ ಪತ್ರವೊಂದು ಬಂದಿದೆ ಎನ್ನಲಾಗುತ್ತಿದ್ದು, ಆನಂತರ ಪ್ರಭಾಕರ್​ ರವರು ತುಂಬಾ ನೊಂದಿದ್ದರಿಂದ ಈ ಡೆತ್‌ನೋಟ್ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: NPS ಅಥವಾ OPS? ನವ ಉದಾರವಾದಿ ’ಹೊಸ ಪಿಂಚಣಿ ಯೋಜನೆ’ಯಲ್ಲಿ ನಿಜಕ್ಕೂ ಲಾಭವಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...