Homeಕರ್ನಾಟಕNRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು...

NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ

30 ಗ್ರಾಮಗಳ 77 ಗ್ರಾ.ಪಂ ಸದಸ್ಯ ಸ್ಥಾನಗಳಿಗೆ ಒಂದೂ ನಾಮಪತ್ರ ಸಲ್ಲಿಸದೆ ಗ್ರಾಮಸ್ಥರು ಸರ್ವಾನುಮತದಿಂದ ಚುನಾವಣೆ ಬಹಿಷ್ಕಾರ ಮಾಡಿ ಸಾಂವಿಧಾನಿಕ ಬಿಕ್ಕಟ್ಟು ಉಂಟು ಮಾಡಿದ್ದಾರೆ.

- Advertisement -
- Advertisement -

ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಹಲವಾರು ಗ್ರಾಮಗಳು ಬರಪೀಡಿತವಾಗಿದ್ದು, ನೀರಾವರಿ ಸೌಲಭ್ಯಕ್ಕಾಗಿ ದಶಕಗಳಿಂದ ನಿರಂತರ ಹೋರಾಟ ಮಾಡುತ್ತಿದ್ದಾರೆ. ಕೃಷ್ಣಾ ನೀರಿನ ನಾರಾಯಣಪುರ ಬಲದಂಡೆ 5ಎ ವಿತರಣಾ ಕಾಲುವೆ ಯೋಜನೆ (NRBC_5A ನಾಲಾ ಯೋಜನೆ) ಅನುಷ್ಠಾನಕ್ಕಾಗಿ ನೂರಾರು ಪ್ರತಿಭಟನೆ – ಧರಣಿ ನಡೆಸಿದ್ದಾರೆ. ಕೊನೆಗೂ ಈ ರೈತರ ಹೋರಾಟಕ್ಕೆ ಸ್ಪಂದಿಸಿ ಇಂದು ಬೆಂಗಳೂರಿನಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಮಂಡಳಿಯ ವತಿಯಿಂದ ಯೋಜನೆಯ ತಾಂತ್ರಿಕ ಕಾರ್ಯಸಾಧ್ಯತೆಯ ಪರಿಶೀಲನಾ ಸಮಿತಿ ಸಭೆ ಕರೆಯಲಾಗಿತ್ತು. ಆದರೆ ಇದು ಕಾಟಾಚಾರದ ಸಭೆ ಎಂದು ಆರೋಪಿಸಿರುವ ರೈತ ಮುಖಂಡರು ಸಭೆಯಿಂದ ಹೊರನಡೆದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಯಚೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ನಾರಾಯಣಪೂರ ಬಲದಂಡೆ ಕಾಲುವೆ 5(ಎ) ಪಾಮನ ಕಲ್ಲೂರು ಶಾಲಾ ಕಾಲುವೆ ಯೋಜನೆಯ ತಾಂತ್ರಿಕ ಕಾರ್ಯಸಾಧ್ಯತೆಯ ಪರಿಶೀಲಾನ ಸಮಿತಿಯ ಇಂದಿನ ಸಭೆಗೆ ಇಬ್ಬರು ಪ್ರಮುಖ ಅಧಿಕಾರಿಗಳು ಗೈರು ಹಾಜರಾಗಿದ್ದಾರೆ. ಅಲ್ಲದೇ ಉಳಿದ ಅಧಿಕಾರಿಗಳು ಸಹ ಯೋಜನೆಯ ಅನುಷ್ಠಾನದ ಬಗ್ಗೆ ಚರ್ಚಿಸದೆ ನಂದವಾಡಗಿ ಎರಡನೇ ಹಂತ ಮತ್ತು ಹನಿ ನೀರಾವರಿ ಪದ್ಧತಿ ಪರ ವಾದ ಮಂಡಿಸುತ್ತಿರುವುದನ್ನು ವಿರೋಧಿಸಿ ಸಭೆ ಧಿಕ್ಕರಿಸಲಾಯಿತು ಎಂದು ರೈತರು ತಿಳಿಸಿದ್ದಾರೆ.

ಏನಿದು NRBC_5A ಯೋಜನೆ?

ಮಸ್ಕಿ ತಾಲ್ಲೂಕಿನ ಬರಪೀಡಿತ 58 ಹಳ್ಳಿಗಳ ಗ್ರಾಮಸ್ಥರು, ರೈತರು ಕಳೆದ 12 ವರ್ಷಗಳಿಂದ ತಮ್ಮ ಗ್ರಾಮಕ್ಕೆ ನೀರಾವರಿ ಯೋಜನೆ ಬೇಕೆಂದು ಆಗ್ರಹಿಸಿ ಹೋರಾಟ ಆರಂಭಿಸಿದ್ದಾರೆ. ಕರ್ನಾಟಕ ನೀರಾವರಿ ಸಂಘ ಕಟ್ಟಿ ತಮ್ಮೂರಿಗೆ ಕಾಲುವೇ ನೀರು ಬಿಡಬೇಕೆಂದು ನೂರಾರು ಪ್ರತಿಭಟನೆಗಳನ್ನು ನಡೆಸಿದ್ದಾರೆ. ಈ 12 ವರ್ಷಗಳ ಅವಧಿಯಲ್ಲಿ ನಾಲ್ಕು ಸರ್ಕಾರಗಳು ಬದಲಾಗಿವೆ. ಎಲ್ಲಾ ಸರ್ಕಾರಗಳು ಭರವಸೆ ನೀಡಿವೆಯೇ ಹೊರತು ಒಬ್ಬರು ಕಾರ್ಯರೂಪಕ್ಕೆ ತಂದಿಲ್ಲ ಎಂದು ರೈತರು ಆರೋಪಿಸುತ್ತಾರೆ.

ಈ ಬಾರಿ 4 ಗ್ರಾಮ ಪಂಚಾಯ್ತಿಗಳಲ್ಲಿ ಚುನಾವಣೆ ಬಹಿಷ್ಕಾರ

ಹೋರಾಟವನ್ನು ತೀವ್ರಗೊಳಿಸುವ ಸಲುವಾಗಿ 2020ರ ಡಿಸೆಂಬರ್‌ನಲ್ಲಿ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಇಡೀ ರಾಜ್ಯವೇ ಉತ್ಸಾಹದಿಂದ ಭಾಗವಹಿಸಿದರೆ ಮಸ್ಕಿ ವ್ಯಾಪ್ತಿಯ ನಾಲ್ಕು ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆಯೇ ನಡೆಯಲಿಲ್ಲ! 30 ಗ್ರಾಮಗಳ 77 ಗ್ರಾ.ಪಂ ಸದಸ್ಯ ಸ್ಥಾನಗಳಿಗೆ ಒಂದೂ ನಾಮಪತ್ರ ಸಲ್ಲಿಕೆಯಾಗಲಿಲ್ಲ. ಅಷ್ಟೋಂದು ತೀವ್ರವಾಗಿ ಈ ಗ್ರಾಮಗಳ ಜನರು ಸರ್ವಾನುಮತದಿಂದ ಚುನಾವಣೆ ಬಹಿಷ್ಕಾರ ಮಾಡಿ ಸಾಂವಿಧಾನಿಕ ಬಿಕ್ಕಟ್ಟು ಉಂಟು ಮಾಡಿದ್ದಾರೆ.

ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸುತ್ತೇವೆ

ಮಸ್ಕಿ ವಿಧಾನಸಭಾ ಕ್ಷೇತ್ರದಿಂದ ಇದುವರೆಗೂ ಹಾಲಿ ಸಚಿವ ಪ್ರತಾಪ್ ಗೌಡ ಪಾಟೀಲರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ ಪ್ರತಿಬಾರಿಯೂ ರೈತ ವಿರೋಧಿಯಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿರುವ ರೈತರು ಈ ಬಾರಿ ಅವರನ್ನು ಸೋಲಿಸಲು ಕರೆ ನೀಡಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ NRBC_5A ಯೋಜನೆ ಜಾರಿ ಹೋರಾಟ ಸಮಿತಿಯ ಕಾರ್ಯದರ್ಶಿ ನಾಗರಡ್ಡೆಪ್ಪ ದೇವರಮನಿ “ನಾವು ಕಳೆದ 58 ದಿನಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದೇವೆ. ಗ್ರಾಮ ಪಂಚಾಯ್ತಿ ಚುನಾವಣೆಯನ್ನೇ ಬಹಿಷ್ಕರಿಸಿದ್ದೇವೆ. ಚುನಾವಣೆ ನಡೆಸಲು ಎಸಿ, ತಹಶೀಲ್ದಾರ್ ಸೇರಿ ಎಲ್ಲರೂ ಏನೇ ಪ್ರಯತ್ನ ಮಾಡಿದರೂ ಈ 30 ಗ್ರಾಮಗಳ ಜನರ ಒಗ್ಗಟ್ಟು ಮುರಿಯಲಾಗಿಲ್ಲ. ನಾಲೆಗೆ ನೀರು ಹರಿಯಬೇಕು ಎಂಬುದು ನಮ್ಮ ಹಕ್ಕೊತ್ತಾಯ. ಅದು ಕಾರ್ಯಸಾಧ್ಯವಾದುದು. ಆದರೆ ಈ ವಿಚಾರದಲ್ಲಿ ನಮ್ಮ ಶಾಸಕರು ನಮಗೆ ದ್ರೋಹ ಮಾಡಿದ್ದಾರೆ. ಹಾಗಾಗಿ ನಾವು ಈ ವಿಧಾನಸಭಾ ಉಪಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವುದಿಲ್ಲ, ಬದಲಿಗೆ ಪ್ರತಾಪ್‌ ಗೌಡ ಪಾಟೀಲರನ್ನು ಸೋಲಿಸುತ್ತೇವೆ ಮತ್ತು ಹೋರಾಟ ಮುಂದುವರೆಸುತ್ತೇವೆ” ಎಂದಿದ್ದಾರೆ.

NRBC_5A ಯೋಜನೆ ಜಾರಿ ಹೋರಾಟ ಸಮಿತಿಯ ಅಧ್ಯಕ್ಷರಾದ ಬಸವರಾಜಪ್ಪಗೌಡ ಹರ್ನಾಪೂರ ಮಾತನಾಡಿ “ನಾಲ್ಕು ಜನ ಮುಖ್ಯಮಂತ್ರಿಗಳು ಸುಳ್ಳು ಭರವಸೆ ನೀಡಿದ್ದಾರೆ. ನಾವು ಗ್ರಾಮ ಪಂಚಾಯ್ತಿ ಚುನಾವಣೆ ಬಹಿಷ್ಕರಿಸಿ ಹೋರಾಟ ನಡೆಸಿದ್ದರಿಂದ ಇಂದು ಸಭೆ ಕರೆದಿದ್ದರು. ಆದರೆ ಸಭೆಯಲ್ಲಿ ನಂದವಾಡಗಿ ಏತನೀರಾವರಿ ಯೋಜನೆ ಜಾರಿಗೊಳಿಸುವುದರ ಬಗ್ಗೆ ಮತ್ತು ಹನಿ ನೀರಾವರಿ ಮಾಡಿಕೊಳ್ಳಿ ಎಂದು ಅಧಿಕಾರಿಗಳು ನಮಗೆ ಉಪದೇಶ ನೀಡುತ್ತಿದ್ದಾರೆ. ನಂದವಾಡಗಿ ಯೋಜನೆಯಿಂದ ನಮ್ಮ ಗ್ರಾಮಗಳಿಗೆ ನೀರು ಬರುವುದಿಲ್ಲ. ಹಾಗಾಗಿ ಎನ್‌ಆರ್‌ಬಿಸಿ 5ಎ ಯೋಜನೆ ಜಾರಿಗೊಳಿಸಿ ಎಂದು ಪಟ್ಟು ಹಿಡಿದ ನಾವು ಸಭೆ ಬಹಿಷ್ಕರಿಸಿದ್ದೇವೆ. ನಮ್ಮ ಹೋರಾಟ ಮುಂದುವರೆಸುತ್ತೇವೆ. ಉಪಚುನಾವಣೆಯಲ್ಲಿ ರಾಜಕಾರಣಿಗಳು ಓಟು ಕೇಳಿಕೊಂಡು ಬರಲಿ ಬುದ್ದಿ ಕಲಿಸುತ್ತೇವೆ” ಎಂದರು.

ಒಟ್ಟಿನಲ್ಲಿ ಮಳೆಯೂ ಬಾರದೆ, ಕೃಷಿಯೂ ಸಾಗದೇ ನೀರಾವರಿ ಯೋಜನೆಗಾಗಿ 12 ವರ್ಷದಿಂದ ಹೋರಾಡುತ್ತಿರುವ ಈ ಭಾಗದ ರೈತರಿಗೆ ಇಂದು ಸಹ ಅನ್ಯಾಯವಾಗಿದೆ. ಅವರು ಹೋರಾಟ ಮುಂದುವರೆಸುವುದಾಗಿ ಘೋಷಿಸಿದ್ದಾರೆ.


ಇದನ್ನೂ ಓದಿ: ತಪ್ಪೊಪ್ಪಿಕೊಂಡು ಕಾಯ್ದೆ ಹಿಂಪಡೆಯಿರಿ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶರಿಂದ ಪ್ರಧಾನಿಗೆ ಪತ್ರತಪ್ಪೊಪ್ಪಿಕೊಂಡು, ಕಾಯ್ದೆ ಹಿಂಪಡೆಯಲು ಸುಗ್ರೀವಾಜ್ಞೆ ಹೊರಡಿಸಿ: ಪ್ರಧಾನಿಗೆ ಪತ್ರ ಬರೆದ ಸುಪ್ರೀಂ ಕೋರ್ಟಿನ ಮಾಜಿ ನ್ಯಾಯಾಧೀಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...