Homeಕರ್ನಾಟಕNRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು...

NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ

30 ಗ್ರಾಮಗಳ 77 ಗ್ರಾ.ಪಂ ಸದಸ್ಯ ಸ್ಥಾನಗಳಿಗೆ ಒಂದೂ ನಾಮಪತ್ರ ಸಲ್ಲಿಸದೆ ಗ್ರಾಮಸ್ಥರು ಸರ್ವಾನುಮತದಿಂದ ಚುನಾವಣೆ ಬಹಿಷ್ಕಾರ ಮಾಡಿ ಸಾಂವಿಧಾನಿಕ ಬಿಕ್ಕಟ್ಟು ಉಂಟು ಮಾಡಿದ್ದಾರೆ.

- Advertisement -
- Advertisement -

ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಹಲವಾರು ಗ್ರಾಮಗಳು ಬರಪೀಡಿತವಾಗಿದ್ದು, ನೀರಾವರಿ ಸೌಲಭ್ಯಕ್ಕಾಗಿ ದಶಕಗಳಿಂದ ನಿರಂತರ ಹೋರಾಟ ಮಾಡುತ್ತಿದ್ದಾರೆ. ಕೃಷ್ಣಾ ನೀರಿನ ನಾರಾಯಣಪುರ ಬಲದಂಡೆ 5ಎ ವಿತರಣಾ ಕಾಲುವೆ ಯೋಜನೆ (NRBC_5A ನಾಲಾ ಯೋಜನೆ) ಅನುಷ್ಠಾನಕ್ಕಾಗಿ ನೂರಾರು ಪ್ರತಿಭಟನೆ – ಧರಣಿ ನಡೆಸಿದ್ದಾರೆ. ಕೊನೆಗೂ ಈ ರೈತರ ಹೋರಾಟಕ್ಕೆ ಸ್ಪಂದಿಸಿ ಇಂದು ಬೆಂಗಳೂರಿನಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಮಂಡಳಿಯ ವತಿಯಿಂದ ಯೋಜನೆಯ ತಾಂತ್ರಿಕ ಕಾರ್ಯಸಾಧ್ಯತೆಯ ಪರಿಶೀಲನಾ ಸಮಿತಿ ಸಭೆ ಕರೆಯಲಾಗಿತ್ತು. ಆದರೆ ಇದು ಕಾಟಾಚಾರದ ಸಭೆ ಎಂದು ಆರೋಪಿಸಿರುವ ರೈತ ಮುಖಂಡರು ಸಭೆಯಿಂದ ಹೊರನಡೆದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಯಚೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ನಾರಾಯಣಪೂರ ಬಲದಂಡೆ ಕಾಲುವೆ 5(ಎ) ಪಾಮನ ಕಲ್ಲೂರು ಶಾಲಾ ಕಾಲುವೆ ಯೋಜನೆಯ ತಾಂತ್ರಿಕ ಕಾರ್ಯಸಾಧ್ಯತೆಯ ಪರಿಶೀಲಾನ ಸಮಿತಿಯ ಇಂದಿನ ಸಭೆಗೆ ಇಬ್ಬರು ಪ್ರಮುಖ ಅಧಿಕಾರಿಗಳು ಗೈರು ಹಾಜರಾಗಿದ್ದಾರೆ. ಅಲ್ಲದೇ ಉಳಿದ ಅಧಿಕಾರಿಗಳು ಸಹ ಯೋಜನೆಯ ಅನುಷ್ಠಾನದ ಬಗ್ಗೆ ಚರ್ಚಿಸದೆ ನಂದವಾಡಗಿ ಎರಡನೇ ಹಂತ ಮತ್ತು ಹನಿ ನೀರಾವರಿ ಪದ್ಧತಿ ಪರ ವಾದ ಮಂಡಿಸುತ್ತಿರುವುದನ್ನು ವಿರೋಧಿಸಿ ಸಭೆ ಧಿಕ್ಕರಿಸಲಾಯಿತು ಎಂದು ರೈತರು ತಿಳಿಸಿದ್ದಾರೆ.

ಏನಿದು NRBC_5A ಯೋಜನೆ?

ಮಸ್ಕಿ ತಾಲ್ಲೂಕಿನ ಬರಪೀಡಿತ 58 ಹಳ್ಳಿಗಳ ಗ್ರಾಮಸ್ಥರು, ರೈತರು ಕಳೆದ 12 ವರ್ಷಗಳಿಂದ ತಮ್ಮ ಗ್ರಾಮಕ್ಕೆ ನೀರಾವರಿ ಯೋಜನೆ ಬೇಕೆಂದು ಆಗ್ರಹಿಸಿ ಹೋರಾಟ ಆರಂಭಿಸಿದ್ದಾರೆ. ಕರ್ನಾಟಕ ನೀರಾವರಿ ಸಂಘ ಕಟ್ಟಿ ತಮ್ಮೂರಿಗೆ ಕಾಲುವೇ ನೀರು ಬಿಡಬೇಕೆಂದು ನೂರಾರು ಪ್ರತಿಭಟನೆಗಳನ್ನು ನಡೆಸಿದ್ದಾರೆ. ಈ 12 ವರ್ಷಗಳ ಅವಧಿಯಲ್ಲಿ ನಾಲ್ಕು ಸರ್ಕಾರಗಳು ಬದಲಾಗಿವೆ. ಎಲ್ಲಾ ಸರ್ಕಾರಗಳು ಭರವಸೆ ನೀಡಿವೆಯೇ ಹೊರತು ಒಬ್ಬರು ಕಾರ್ಯರೂಪಕ್ಕೆ ತಂದಿಲ್ಲ ಎಂದು ರೈತರು ಆರೋಪಿಸುತ್ತಾರೆ.

ಈ ಬಾರಿ 4 ಗ್ರಾಮ ಪಂಚಾಯ್ತಿಗಳಲ್ಲಿ ಚುನಾವಣೆ ಬಹಿಷ್ಕಾರ

ಹೋರಾಟವನ್ನು ತೀವ್ರಗೊಳಿಸುವ ಸಲುವಾಗಿ 2020ರ ಡಿಸೆಂಬರ್‌ನಲ್ಲಿ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಇಡೀ ರಾಜ್ಯವೇ ಉತ್ಸಾಹದಿಂದ ಭಾಗವಹಿಸಿದರೆ ಮಸ್ಕಿ ವ್ಯಾಪ್ತಿಯ ನಾಲ್ಕು ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆಯೇ ನಡೆಯಲಿಲ್ಲ! 30 ಗ್ರಾಮಗಳ 77 ಗ್ರಾ.ಪಂ ಸದಸ್ಯ ಸ್ಥಾನಗಳಿಗೆ ಒಂದೂ ನಾಮಪತ್ರ ಸಲ್ಲಿಕೆಯಾಗಲಿಲ್ಲ. ಅಷ್ಟೋಂದು ತೀವ್ರವಾಗಿ ಈ ಗ್ರಾಮಗಳ ಜನರು ಸರ್ವಾನುಮತದಿಂದ ಚುನಾವಣೆ ಬಹಿಷ್ಕಾರ ಮಾಡಿ ಸಾಂವಿಧಾನಿಕ ಬಿಕ್ಕಟ್ಟು ಉಂಟು ಮಾಡಿದ್ದಾರೆ.

ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸುತ್ತೇವೆ

ಮಸ್ಕಿ ವಿಧಾನಸಭಾ ಕ್ಷೇತ್ರದಿಂದ ಇದುವರೆಗೂ ಹಾಲಿ ಸಚಿವ ಪ್ರತಾಪ್ ಗೌಡ ಪಾಟೀಲರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ ಪ್ರತಿಬಾರಿಯೂ ರೈತ ವಿರೋಧಿಯಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿರುವ ರೈತರು ಈ ಬಾರಿ ಅವರನ್ನು ಸೋಲಿಸಲು ಕರೆ ನೀಡಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ NRBC_5A ಯೋಜನೆ ಜಾರಿ ಹೋರಾಟ ಸಮಿತಿಯ ಕಾರ್ಯದರ್ಶಿ ನಾಗರಡ್ಡೆಪ್ಪ ದೇವರಮನಿ “ನಾವು ಕಳೆದ 58 ದಿನಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದೇವೆ. ಗ್ರಾಮ ಪಂಚಾಯ್ತಿ ಚುನಾವಣೆಯನ್ನೇ ಬಹಿಷ್ಕರಿಸಿದ್ದೇವೆ. ಚುನಾವಣೆ ನಡೆಸಲು ಎಸಿ, ತಹಶೀಲ್ದಾರ್ ಸೇರಿ ಎಲ್ಲರೂ ಏನೇ ಪ್ರಯತ್ನ ಮಾಡಿದರೂ ಈ 30 ಗ್ರಾಮಗಳ ಜನರ ಒಗ್ಗಟ್ಟು ಮುರಿಯಲಾಗಿಲ್ಲ. ನಾಲೆಗೆ ನೀರು ಹರಿಯಬೇಕು ಎಂಬುದು ನಮ್ಮ ಹಕ್ಕೊತ್ತಾಯ. ಅದು ಕಾರ್ಯಸಾಧ್ಯವಾದುದು. ಆದರೆ ಈ ವಿಚಾರದಲ್ಲಿ ನಮ್ಮ ಶಾಸಕರು ನಮಗೆ ದ್ರೋಹ ಮಾಡಿದ್ದಾರೆ. ಹಾಗಾಗಿ ನಾವು ಈ ವಿಧಾನಸಭಾ ಉಪಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವುದಿಲ್ಲ, ಬದಲಿಗೆ ಪ್ರತಾಪ್‌ ಗೌಡ ಪಾಟೀಲರನ್ನು ಸೋಲಿಸುತ್ತೇವೆ ಮತ್ತು ಹೋರಾಟ ಮುಂದುವರೆಸುತ್ತೇವೆ” ಎಂದಿದ್ದಾರೆ.

NRBC_5A ಯೋಜನೆ ಜಾರಿ ಹೋರಾಟ ಸಮಿತಿಯ ಅಧ್ಯಕ್ಷರಾದ ಬಸವರಾಜಪ್ಪಗೌಡ ಹರ್ನಾಪೂರ ಮಾತನಾಡಿ “ನಾಲ್ಕು ಜನ ಮುಖ್ಯಮಂತ್ರಿಗಳು ಸುಳ್ಳು ಭರವಸೆ ನೀಡಿದ್ದಾರೆ. ನಾವು ಗ್ರಾಮ ಪಂಚಾಯ್ತಿ ಚುನಾವಣೆ ಬಹಿಷ್ಕರಿಸಿ ಹೋರಾಟ ನಡೆಸಿದ್ದರಿಂದ ಇಂದು ಸಭೆ ಕರೆದಿದ್ದರು. ಆದರೆ ಸಭೆಯಲ್ಲಿ ನಂದವಾಡಗಿ ಏತನೀರಾವರಿ ಯೋಜನೆ ಜಾರಿಗೊಳಿಸುವುದರ ಬಗ್ಗೆ ಮತ್ತು ಹನಿ ನೀರಾವರಿ ಮಾಡಿಕೊಳ್ಳಿ ಎಂದು ಅಧಿಕಾರಿಗಳು ನಮಗೆ ಉಪದೇಶ ನೀಡುತ್ತಿದ್ದಾರೆ. ನಂದವಾಡಗಿ ಯೋಜನೆಯಿಂದ ನಮ್ಮ ಗ್ರಾಮಗಳಿಗೆ ನೀರು ಬರುವುದಿಲ್ಲ. ಹಾಗಾಗಿ ಎನ್‌ಆರ್‌ಬಿಸಿ 5ಎ ಯೋಜನೆ ಜಾರಿಗೊಳಿಸಿ ಎಂದು ಪಟ್ಟು ಹಿಡಿದ ನಾವು ಸಭೆ ಬಹಿಷ್ಕರಿಸಿದ್ದೇವೆ. ನಮ್ಮ ಹೋರಾಟ ಮುಂದುವರೆಸುತ್ತೇವೆ. ಉಪಚುನಾವಣೆಯಲ್ಲಿ ರಾಜಕಾರಣಿಗಳು ಓಟು ಕೇಳಿಕೊಂಡು ಬರಲಿ ಬುದ್ದಿ ಕಲಿಸುತ್ತೇವೆ” ಎಂದರು.

ಒಟ್ಟಿನಲ್ಲಿ ಮಳೆಯೂ ಬಾರದೆ, ಕೃಷಿಯೂ ಸಾಗದೇ ನೀರಾವರಿ ಯೋಜನೆಗಾಗಿ 12 ವರ್ಷದಿಂದ ಹೋರಾಡುತ್ತಿರುವ ಈ ಭಾಗದ ರೈತರಿಗೆ ಇಂದು ಸಹ ಅನ್ಯಾಯವಾಗಿದೆ. ಅವರು ಹೋರಾಟ ಮುಂದುವರೆಸುವುದಾಗಿ ಘೋಷಿಸಿದ್ದಾರೆ.


ಇದನ್ನೂ ಓದಿ: ತಪ್ಪೊಪ್ಪಿಕೊಂಡು ಕಾಯ್ದೆ ಹಿಂಪಡೆಯಿರಿ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶರಿಂದ ಪ್ರಧಾನಿಗೆ ಪತ್ರತಪ್ಪೊಪ್ಪಿಕೊಂಡು, ಕಾಯ್ದೆ ಹಿಂಪಡೆಯಲು ಸುಗ್ರೀವಾಜ್ಞೆ ಹೊರಡಿಸಿ: ಪ್ರಧಾನಿಗೆ ಪತ್ರ ಬರೆದ ಸುಪ್ರೀಂ ಕೋರ್ಟಿನ ಮಾಜಿ ನ್ಯಾಯಾಧೀಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...