Homeಮುಖಪುಟಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದಿದ್ದರೆ ಆಧಾರ್ ಇಲ್ಲ - ಅಸ್ಸಾಂ ಸಿಎಂ ಹಿಮಂತ ಶರ್ಮಾ

ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದಿದ್ದರೆ ಆಧಾರ್ ಇಲ್ಲ – ಅಸ್ಸಾಂ ಸಿಎಂ ಹಿಮಂತ ಶರ್ಮಾ

- Advertisement -
- Advertisement -

ನಿವಾಸಿಗಳು ಅಥವಾ ಅವರ ಕುಟುಂಬದ ಸದಸ್ಯರು ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್‌ಆರ್‌ಸಿ)ಯ ಭಾಗವಾಗಲು ಅರ್ಜಿ ಸಲ್ಲಿಸದಿದ್ದರೆ ಅಸ್ಸಾಂ ಸರ್ಕಾರ ಅಂತವರ ಆಧಾರ್ ಕಾರ್ಡ್‌ಗಾಗಿ ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸುತ್ತದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬುಧವಾರ ಹೇಳಿದ್ದಾರೆ. ರಾಜ್ಯ ಸಚಿವ ಸಂಪುಟದ ಸಭೆಯ ನಂತರ, ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಖಚಿತಪಡಿಸಿಕೊಳ್ಳಲು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನದ ಪ್ರಸ್ತಾವನೆಯನ್ನು ಅನುಮೋದಿಸಲಾಗಿದೆ ಎಂದು ಸಿಎಂ ಸುದ್ದಿಗಾರರಿಗೆ ತಿಳಿಸಿದ್ದಾರೆ. ಎನ್‌ಆರ್‌ಸಿಗೆ ಅರ್ಜಿ

“ಕಳೆದ ಎರಡು ತಿಂಗಳಲ್ಲಿ ಅಸ್ಸಾಂ ಪೋಲೀಸ್, ತ್ರಿಪುರಾ ಪೋಲೀಸ್ ಮತ್ತು ಬಿಎಸ್ಎಫ್ [ಗಡಿ ಭದ್ರತಾ ಪಡೆ] ಹಲವಾರು ನುಸುಳುಕೋರರನ್ನು ಬಂಧಿಸಿದ್ದಾರೆ. ಅದಕ್ಕಾಗಿಯೇ ಬಾಂಗ್ಲಾದೇಶದಿಂದ ಒಳನುಸುಳುವಿಕೆ ಬಗ್ಗೆ ನಮಗೆ ಕಳವಳವಿದೆ” ಎಂದು ಸಿಎಂ ಶರ್ಮಾ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಿಜೆಪಿಯು ಅಸ್ಸಾಂನಲ್ಲಿ ಬಂಗಾಳಿ ಮುಸ್ಲಿಂ ಸಮುದಾಯವನ್ನು ಸ್ಥಳೀಯ ಜನರ ಸಂಪನ್ಮೂಲಗಳು, ಉದ್ಯೋಗಗಳು ಮತ್ತು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ “ನುಸುಳುಕೋರರು” ಎಂದು ಆಗಾಗ್ಗೆ ಹಣೆಪಟ್ಟಿ ಕಟ್ಟುತ್ತಿದೆ. ಜೊತೆಗೆ ಈ ಸಮುದಾಯವು ಅಸ್ಸಾಮಿ ಸಂಸ್ಕೃತಿ ಮತ್ತು ಗುರುತಿಗೆ ಬೆದರಿಕೆಯನ್ನುಂಟುಮಾಡುತ್ತದೆ ಎಂದು ಪಕ್ಷವೂ ಚಿತ್ರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ನಮ್ಮ ವ್ಯವಸ್ಥೆಯನ್ನು ಬಲಪಡಿಸಬೇಕಾಗಿದ್ದು, ಅದಕ್ಕಾಗಿಯೇ ನಾವು ಆಧಾರ್ ಕಾರ್ಡ್ ಕಾರ್ಯವಿಧಾನವನ್ನು ಕಠಿಣಗೊಳಿಸಲು ನಿರ್ಧರಿಸಿದ್ದೇವೆ” ಎಂದು ಹಿಮಂತ ಶರ್ಮಾ ಹೇಳಿದ್ದಾರೆ. ಆಧಾರ್ ಒಂದು ವಿಶಿಷ್ಟವಾದ 12 ಅಂಕಿಯ ಸಂಖ್ಯೆಯ ಗುರುತಿನ ಸಂಖ್ಯೆಯಾಗಿದ್ದು, ಇದನ್ನು ಶಾಸನಬದ್ಧ ಸಂಸ್ಥೆಯಾದ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಭಾರತದ ನಿವಾಸಿಗಳಿಗೆ ನೀಡಲಾಗುತ್ತದೆ.

ರಾಜ್ಯದಲ್ಲಿ ವಾಸಿಸುವ ದಾಖಲೆರಹಿತ ವಲಸಿಗರಿಂದ ಭಾರತೀಯ ನಾಗರಿಕರನ್ನು ಪ್ರತ್ಯೇಕಿಸುವ ಉದ್ದೇಶದಿಂದ ಅಸ್ಸಾಂ ಆಗಸ್ಟ್ 31, 2019 ರಂದು ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್‌ಆರ್‌ಸಿ)ಯನ್ನು ಪ್ರಕಟಿಸಿತ್ತು. ಅದರಂತೆ ನಿವಾಸಿಗಳು ತಾವು ಅಥವಾ ಅವರ ಪೂರ್ವಜರು ಅಸ್ಸಾಂ ಅನ್ನು ಮಾರ್ಚ್ 24, 1971 ರ ಮಧ್ಯರಾತ್ರಿಯ ಮೊದಲು ಪ್ರವೇಶಿಸಿದ್ದಾರೆ ಎಂದು ಸಾಬೀತುಪಡಿಸಬೇಕಾಗುತ್ತದೆ.

ಅದಾಗ್ಯೂ, ರಾಜ್ಯದಾದ್ಯಂತ 19 ಲಕ್ಷಕ್ಕೂ ಹೆಚ್ಚು ವ್ಯಕ್ತಿಗಳು ಅಥವಾ 5.77% ಅರ್ಜಿದಾರರು ಎನ್‌ಆರ್‌ಸಿಯ ಅಂತಿಮ ಪಟ್ಟಿಯಿಂದ ಹೊರಗುಳಿದಿದ್ದಾರೆ. ಎನ್‌ಆರ್‌ಸಿಗೆ ಇನ್ನಷ್ಟೆ ಸೂಚನೆ ನೀಡಬೇಕಿದೆ.

ಸೆಪ್ಟೆಂಬರ್ 7 ರಂದು, ಅಸ್ಸಾಂನಲ್ಲಿ ಆಧಾರ್ ಸಂಖ್ಯೆಗಳನ್ನು ನೀಡುವ ಪ್ರಕ್ರಿಯೆಯನ್ನು “ಕಟ್ಟುನಿಟ್ಟಾಗಿ ನಿಯಂತ್ರಿಸಲಾಗುವುದು” ಎಂದು ಹಿಮಂತ ಶರ್ಮಾ ಘೋಷಿಸಿದ್ದಾರೆ. ಅರ್ಜಿದಾರರು 2015 ರಲ್ಲಿ ಅರ್ಜಿ ಸಲ್ಲಿಸುವಾಗ ಅವರಿಗೆ ಒದಗಿಸಲಾದ ತಮ್ಮ ಎನ್‌ಆರ್‌ಸಿ ಅರ್ಜಿ ಸಂಖ್ಯೆಯನ್ನು ಒದಗಿಸುವುದು ಕಡ್ಡಾಯವಾಗಿದೆ ಎಂದು ಅವರು ಹೇಳಿದ್ದಾರೆ.

“ಎನ್‌ಆರ್‌ಸಿ ಮಾಡಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಲೆಕ್ಕಿಸದೆ ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರು ಮಾತ್ರ ಆಧಾರ್ ಅನ್ನು ಪಡೆದುಕೊಳ್ಳಬಹುದು. ಈ ನೀತಿಯಿಂದ ಅಸ್ಸಾಂನಲ್ಲಿ ಯಾವುದೇ ಶಂಕಿತ ವಿದೇಶಿಯರು ಆಧಾರ್ ಕಾರ್ಡ್‌ಗಳನ್ನು ಪಡೆಯಲು ಸಾಧ್ಯವಿಲ್ಲ ಎಂದು ಖಚಿತಪಡಿಸುತ್ತದೆ. ಜೊತೆಗೆ ಇದು ಅಕ್ರಮ ವಿದೇಶಿಯರ ಒಳನುಸುಳುವಿಕೆಯವನ್ನು ತಡೆಯುತ್ತದೆ.” ಎಂದು ಅವರು ಹೇಳಿದ್ದಾರೆ.

ಆಧಾರ್ ನೀಡಲು ಹೊಸ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಜಾರಿಗೆ ತರಲು ರಾಜ್ಯ ಸರ್ಕಾರದ ಸಾಮಾನ್ಯ ಆಡಳಿತ ವಿಭಾಗವು ನೋಡಲ್ ಏಜೆನ್ಸಿಯಾಗಲಿದೆ ಎಂದು ಮುಖ್ಯಮಂತ್ರಿ ಬುಧವಾರ ಹೇಳಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗಳು ಮತ್ತು ಕಂದಾಯ ವೃತ್ತ ಮಟ್ಟದಲ್ಲಿ ವೃತ್ತ ಅಧಿಕಾರಿಗಳು ಇದನ್ನು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.

ಕಾರ್ಯವಿಧಾನದ ಪ್ರಕಾರ, ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಆಧಾರ್‌ಗಾಗಿ ಹೊಸ ಅರ್ಜಿಯನ್ನು ಪರಿಶೀಲನೆಗಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸುತ್ತದೆ ಎಂದು ಹಿಮಂತಾ ಶರ್ಮಾ ಹೇಳಿದ್ದಾರೆ. ಇದರ ನಂತರ, ಅರ್ಜಿದಾರರು ಅಥವಾ ಅವರ ಕುಟುಂಬವು ಎನ್‌ಆರ್‌ಸಿಗೆ ಸೇರ್ಪಡೆಗೊಳ್ಳಲು ಅರ್ಜಿ ಸಲ್ಲಿಸಿದ್ದರೆ ಸರ್ಕಲ್ ಅಧಿಕಾರಿ ಅದನ್ನು ಪರಿಶೀಲಿಸುತ್ತಾರೆ.

“ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಕಂಡುಬಂದರೆ, ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಸರ್ಕಲ್ ಆಫೀಸರ್ ಕ್ಷೇತ್ರ ಮಟ್ಟದ ಪರಿಶೀಲನೆಗೆ ಹೋಗುತ್ತಾರೆ. ಅಧಿಕಾರಿಗೆ ಸಂಪೂರ್ಣವಾಗಿ ಮನವರಿಕೆಯಾದ ನಂತರ, ಆಧಾರ್ ಅನ್ನು ಅನುಮೋದಿಸಲಾಗುತ್ತದೆ.” ಎಂದು ಅವರು ಹೇಳಿದ್ದಾರೆ.

ಸಿಎಂ ಅವರ ಈ ಕ್ರಮವನ್ನು ಹೋರಾಟಗಾರರು ವಿರೋಧಿಸಿದ್ದು, ಗುರುತಿನ ದಾಖಲೆಗಾಗಿ ಅರ್ಹತಾ ಮಾನದಂಡಗಳನ್ನು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ ಎಂದು ತಿಳಿಸಿದ್ದಾರೆ. ಅವರ ಈ ತೀರ್ಮಾನವು ಆಧಾರ್ ಕಾಯಿದೆ ಮತ್ತು ಆಧಾರ್ ಪರಿಕಲ್ಪನೆಯನ್ನು ತಿದ್ದುಪಡಿ ಮಾಡುತ್ತದೆ, ಇದು ದೊಡ್ಡ ಪರಿಣಾಮಗಳನ್ನು ಹೊಂದಿರುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನನ್ನ ವಿರುದ್ಧದ ಅವಹೇಳನಕಾರಿ ಹೇಳಿಕೆ ಕಡತದಿಂದ ತೆಗೆದುಹಾಕಿ – ಸ್ಪೀಕರ್‌ಗೆ ರಾಹುಲ್ ಗಾಂಧಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...