Homeಮುಖಪುಟಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದಿದ್ದರೆ ಆಧಾರ್ ಇಲ್ಲ - ಅಸ್ಸಾಂ ಸಿಎಂ ಹಿಮಂತ ಶರ್ಮಾ

ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದಿದ್ದರೆ ಆಧಾರ್ ಇಲ್ಲ – ಅಸ್ಸಾಂ ಸಿಎಂ ಹಿಮಂತ ಶರ್ಮಾ

- Advertisement -
- Advertisement -

ನಿವಾಸಿಗಳು ಅಥವಾ ಅವರ ಕುಟುಂಬದ ಸದಸ್ಯರು ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್‌ಆರ್‌ಸಿ)ಯ ಭಾಗವಾಗಲು ಅರ್ಜಿ ಸಲ್ಲಿಸದಿದ್ದರೆ ಅಸ್ಸಾಂ ಸರ್ಕಾರ ಅಂತವರ ಆಧಾರ್ ಕಾರ್ಡ್‌ಗಾಗಿ ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸುತ್ತದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬುಧವಾರ ಹೇಳಿದ್ದಾರೆ. ರಾಜ್ಯ ಸಚಿವ ಸಂಪುಟದ ಸಭೆಯ ನಂತರ, ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಖಚಿತಪಡಿಸಿಕೊಳ್ಳಲು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನದ ಪ್ರಸ್ತಾವನೆಯನ್ನು ಅನುಮೋದಿಸಲಾಗಿದೆ ಎಂದು ಸಿಎಂ ಸುದ್ದಿಗಾರರಿಗೆ ತಿಳಿಸಿದ್ದಾರೆ. ಎನ್‌ಆರ್‌ಸಿಗೆ ಅರ್ಜಿ

“ಕಳೆದ ಎರಡು ತಿಂಗಳಲ್ಲಿ ಅಸ್ಸಾಂ ಪೋಲೀಸ್, ತ್ರಿಪುರಾ ಪೋಲೀಸ್ ಮತ್ತು ಬಿಎಸ್ಎಫ್ [ಗಡಿ ಭದ್ರತಾ ಪಡೆ] ಹಲವಾರು ನುಸುಳುಕೋರರನ್ನು ಬಂಧಿಸಿದ್ದಾರೆ. ಅದಕ್ಕಾಗಿಯೇ ಬಾಂಗ್ಲಾದೇಶದಿಂದ ಒಳನುಸುಳುವಿಕೆ ಬಗ್ಗೆ ನಮಗೆ ಕಳವಳವಿದೆ” ಎಂದು ಸಿಎಂ ಶರ್ಮಾ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಿಜೆಪಿಯು ಅಸ್ಸಾಂನಲ್ಲಿ ಬಂಗಾಳಿ ಮುಸ್ಲಿಂ ಸಮುದಾಯವನ್ನು ಸ್ಥಳೀಯ ಜನರ ಸಂಪನ್ಮೂಲಗಳು, ಉದ್ಯೋಗಗಳು ಮತ್ತು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ “ನುಸುಳುಕೋರರು” ಎಂದು ಆಗಾಗ್ಗೆ ಹಣೆಪಟ್ಟಿ ಕಟ್ಟುತ್ತಿದೆ. ಜೊತೆಗೆ ಈ ಸಮುದಾಯವು ಅಸ್ಸಾಮಿ ಸಂಸ್ಕೃತಿ ಮತ್ತು ಗುರುತಿಗೆ ಬೆದರಿಕೆಯನ್ನುಂಟುಮಾಡುತ್ತದೆ ಎಂದು ಪಕ್ಷವೂ ಚಿತ್ರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ನಮ್ಮ ವ್ಯವಸ್ಥೆಯನ್ನು ಬಲಪಡಿಸಬೇಕಾಗಿದ್ದು, ಅದಕ್ಕಾಗಿಯೇ ನಾವು ಆಧಾರ್ ಕಾರ್ಡ್ ಕಾರ್ಯವಿಧಾನವನ್ನು ಕಠಿಣಗೊಳಿಸಲು ನಿರ್ಧರಿಸಿದ್ದೇವೆ” ಎಂದು ಹಿಮಂತ ಶರ್ಮಾ ಹೇಳಿದ್ದಾರೆ. ಆಧಾರ್ ಒಂದು ವಿಶಿಷ್ಟವಾದ 12 ಅಂಕಿಯ ಸಂಖ್ಯೆಯ ಗುರುತಿನ ಸಂಖ್ಯೆಯಾಗಿದ್ದು, ಇದನ್ನು ಶಾಸನಬದ್ಧ ಸಂಸ್ಥೆಯಾದ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಭಾರತದ ನಿವಾಸಿಗಳಿಗೆ ನೀಡಲಾಗುತ್ತದೆ.

ರಾಜ್ಯದಲ್ಲಿ ವಾಸಿಸುವ ದಾಖಲೆರಹಿತ ವಲಸಿಗರಿಂದ ಭಾರತೀಯ ನಾಗರಿಕರನ್ನು ಪ್ರತ್ಯೇಕಿಸುವ ಉದ್ದೇಶದಿಂದ ಅಸ್ಸಾಂ ಆಗಸ್ಟ್ 31, 2019 ರಂದು ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್‌ಆರ್‌ಸಿ)ಯನ್ನು ಪ್ರಕಟಿಸಿತ್ತು. ಅದರಂತೆ ನಿವಾಸಿಗಳು ತಾವು ಅಥವಾ ಅವರ ಪೂರ್ವಜರು ಅಸ್ಸಾಂ ಅನ್ನು ಮಾರ್ಚ್ 24, 1971 ರ ಮಧ್ಯರಾತ್ರಿಯ ಮೊದಲು ಪ್ರವೇಶಿಸಿದ್ದಾರೆ ಎಂದು ಸಾಬೀತುಪಡಿಸಬೇಕಾಗುತ್ತದೆ.

ಅದಾಗ್ಯೂ, ರಾಜ್ಯದಾದ್ಯಂತ 19 ಲಕ್ಷಕ್ಕೂ ಹೆಚ್ಚು ವ್ಯಕ್ತಿಗಳು ಅಥವಾ 5.77% ಅರ್ಜಿದಾರರು ಎನ್‌ಆರ್‌ಸಿಯ ಅಂತಿಮ ಪಟ್ಟಿಯಿಂದ ಹೊರಗುಳಿದಿದ್ದಾರೆ. ಎನ್‌ಆರ್‌ಸಿಗೆ ಇನ್ನಷ್ಟೆ ಸೂಚನೆ ನೀಡಬೇಕಿದೆ.

ಸೆಪ್ಟೆಂಬರ್ 7 ರಂದು, ಅಸ್ಸಾಂನಲ್ಲಿ ಆಧಾರ್ ಸಂಖ್ಯೆಗಳನ್ನು ನೀಡುವ ಪ್ರಕ್ರಿಯೆಯನ್ನು “ಕಟ್ಟುನಿಟ್ಟಾಗಿ ನಿಯಂತ್ರಿಸಲಾಗುವುದು” ಎಂದು ಹಿಮಂತ ಶರ್ಮಾ ಘೋಷಿಸಿದ್ದಾರೆ. ಅರ್ಜಿದಾರರು 2015 ರಲ್ಲಿ ಅರ್ಜಿ ಸಲ್ಲಿಸುವಾಗ ಅವರಿಗೆ ಒದಗಿಸಲಾದ ತಮ್ಮ ಎನ್‌ಆರ್‌ಸಿ ಅರ್ಜಿ ಸಂಖ್ಯೆಯನ್ನು ಒದಗಿಸುವುದು ಕಡ್ಡಾಯವಾಗಿದೆ ಎಂದು ಅವರು ಹೇಳಿದ್ದಾರೆ.

“ಎನ್‌ಆರ್‌ಸಿ ಮಾಡಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಲೆಕ್ಕಿಸದೆ ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರು ಮಾತ್ರ ಆಧಾರ್ ಅನ್ನು ಪಡೆದುಕೊಳ್ಳಬಹುದು. ಈ ನೀತಿಯಿಂದ ಅಸ್ಸಾಂನಲ್ಲಿ ಯಾವುದೇ ಶಂಕಿತ ವಿದೇಶಿಯರು ಆಧಾರ್ ಕಾರ್ಡ್‌ಗಳನ್ನು ಪಡೆಯಲು ಸಾಧ್ಯವಿಲ್ಲ ಎಂದು ಖಚಿತಪಡಿಸುತ್ತದೆ. ಜೊತೆಗೆ ಇದು ಅಕ್ರಮ ವಿದೇಶಿಯರ ಒಳನುಸುಳುವಿಕೆಯವನ್ನು ತಡೆಯುತ್ತದೆ.” ಎಂದು ಅವರು ಹೇಳಿದ್ದಾರೆ.

ಆಧಾರ್ ನೀಡಲು ಹೊಸ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಜಾರಿಗೆ ತರಲು ರಾಜ್ಯ ಸರ್ಕಾರದ ಸಾಮಾನ್ಯ ಆಡಳಿತ ವಿಭಾಗವು ನೋಡಲ್ ಏಜೆನ್ಸಿಯಾಗಲಿದೆ ಎಂದು ಮುಖ್ಯಮಂತ್ರಿ ಬುಧವಾರ ಹೇಳಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗಳು ಮತ್ತು ಕಂದಾಯ ವೃತ್ತ ಮಟ್ಟದಲ್ಲಿ ವೃತ್ತ ಅಧಿಕಾರಿಗಳು ಇದನ್ನು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.

ಕಾರ್ಯವಿಧಾನದ ಪ್ರಕಾರ, ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಆಧಾರ್‌ಗಾಗಿ ಹೊಸ ಅರ್ಜಿಯನ್ನು ಪರಿಶೀಲನೆಗಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸುತ್ತದೆ ಎಂದು ಹಿಮಂತಾ ಶರ್ಮಾ ಹೇಳಿದ್ದಾರೆ. ಇದರ ನಂತರ, ಅರ್ಜಿದಾರರು ಅಥವಾ ಅವರ ಕುಟುಂಬವು ಎನ್‌ಆರ್‌ಸಿಗೆ ಸೇರ್ಪಡೆಗೊಳ್ಳಲು ಅರ್ಜಿ ಸಲ್ಲಿಸಿದ್ದರೆ ಸರ್ಕಲ್ ಅಧಿಕಾರಿ ಅದನ್ನು ಪರಿಶೀಲಿಸುತ್ತಾರೆ.

“ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಕಂಡುಬಂದರೆ, ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಸರ್ಕಲ್ ಆಫೀಸರ್ ಕ್ಷೇತ್ರ ಮಟ್ಟದ ಪರಿಶೀಲನೆಗೆ ಹೋಗುತ್ತಾರೆ. ಅಧಿಕಾರಿಗೆ ಸಂಪೂರ್ಣವಾಗಿ ಮನವರಿಕೆಯಾದ ನಂತರ, ಆಧಾರ್ ಅನ್ನು ಅನುಮೋದಿಸಲಾಗುತ್ತದೆ.” ಎಂದು ಅವರು ಹೇಳಿದ್ದಾರೆ.

ಸಿಎಂ ಅವರ ಈ ಕ್ರಮವನ್ನು ಹೋರಾಟಗಾರರು ವಿರೋಧಿಸಿದ್ದು, ಗುರುತಿನ ದಾಖಲೆಗಾಗಿ ಅರ್ಹತಾ ಮಾನದಂಡಗಳನ್ನು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ ಎಂದು ತಿಳಿಸಿದ್ದಾರೆ. ಅವರ ಈ ತೀರ್ಮಾನವು ಆಧಾರ್ ಕಾಯಿದೆ ಮತ್ತು ಆಧಾರ್ ಪರಿಕಲ್ಪನೆಯನ್ನು ತಿದ್ದುಪಡಿ ಮಾಡುತ್ತದೆ, ಇದು ದೊಡ್ಡ ಪರಿಣಾಮಗಳನ್ನು ಹೊಂದಿರುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನನ್ನ ವಿರುದ್ಧದ ಅವಹೇಳನಕಾರಿ ಹೇಳಿಕೆ ಕಡತದಿಂದ ತೆಗೆದುಹಾಕಿ – ಸ್ಪೀಕರ್‌ಗೆ ರಾಹುಲ್ ಗಾಂಧಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...