Homeಮುಖಪುಟಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದಿದ್ದರೆ ಆಧಾರ್ ಇಲ್ಲ - ಅಸ್ಸಾಂ ಸಿಎಂ ಹಿಮಂತ ಶರ್ಮಾ

ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದಿದ್ದರೆ ಆಧಾರ್ ಇಲ್ಲ – ಅಸ್ಸಾಂ ಸಿಎಂ ಹಿಮಂತ ಶರ್ಮಾ

- Advertisement -
- Advertisement -

ನಿವಾಸಿಗಳು ಅಥವಾ ಅವರ ಕುಟುಂಬದ ಸದಸ್ಯರು ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್‌ಆರ್‌ಸಿ)ಯ ಭಾಗವಾಗಲು ಅರ್ಜಿ ಸಲ್ಲಿಸದಿದ್ದರೆ ಅಸ್ಸಾಂ ಸರ್ಕಾರ ಅಂತವರ ಆಧಾರ್ ಕಾರ್ಡ್‌ಗಾಗಿ ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸುತ್ತದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬುಧವಾರ ಹೇಳಿದ್ದಾರೆ. ರಾಜ್ಯ ಸಚಿವ ಸಂಪುಟದ ಸಭೆಯ ನಂತರ, ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಖಚಿತಪಡಿಸಿಕೊಳ್ಳಲು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನದ ಪ್ರಸ್ತಾವನೆಯನ್ನು ಅನುಮೋದಿಸಲಾಗಿದೆ ಎಂದು ಸಿಎಂ ಸುದ್ದಿಗಾರರಿಗೆ ತಿಳಿಸಿದ್ದಾರೆ. ಎನ್‌ಆರ್‌ಸಿಗೆ ಅರ್ಜಿ

“ಕಳೆದ ಎರಡು ತಿಂಗಳಲ್ಲಿ ಅಸ್ಸಾಂ ಪೋಲೀಸ್, ತ್ರಿಪುರಾ ಪೋಲೀಸ್ ಮತ್ತು ಬಿಎಸ್ಎಫ್ [ಗಡಿ ಭದ್ರತಾ ಪಡೆ] ಹಲವಾರು ನುಸುಳುಕೋರರನ್ನು ಬಂಧಿಸಿದ್ದಾರೆ. ಅದಕ್ಕಾಗಿಯೇ ಬಾಂಗ್ಲಾದೇಶದಿಂದ ಒಳನುಸುಳುವಿಕೆ ಬಗ್ಗೆ ನಮಗೆ ಕಳವಳವಿದೆ” ಎಂದು ಸಿಎಂ ಶರ್ಮಾ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಿಜೆಪಿಯು ಅಸ್ಸಾಂನಲ್ಲಿ ಬಂಗಾಳಿ ಮುಸ್ಲಿಂ ಸಮುದಾಯವನ್ನು ಸ್ಥಳೀಯ ಜನರ ಸಂಪನ್ಮೂಲಗಳು, ಉದ್ಯೋಗಗಳು ಮತ್ತು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ “ನುಸುಳುಕೋರರು” ಎಂದು ಆಗಾಗ್ಗೆ ಹಣೆಪಟ್ಟಿ ಕಟ್ಟುತ್ತಿದೆ. ಜೊತೆಗೆ ಈ ಸಮುದಾಯವು ಅಸ್ಸಾಮಿ ಸಂಸ್ಕೃತಿ ಮತ್ತು ಗುರುತಿಗೆ ಬೆದರಿಕೆಯನ್ನುಂಟುಮಾಡುತ್ತದೆ ಎಂದು ಪಕ್ಷವೂ ಚಿತ್ರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ನಮ್ಮ ವ್ಯವಸ್ಥೆಯನ್ನು ಬಲಪಡಿಸಬೇಕಾಗಿದ್ದು, ಅದಕ್ಕಾಗಿಯೇ ನಾವು ಆಧಾರ್ ಕಾರ್ಡ್ ಕಾರ್ಯವಿಧಾನವನ್ನು ಕಠಿಣಗೊಳಿಸಲು ನಿರ್ಧರಿಸಿದ್ದೇವೆ” ಎಂದು ಹಿಮಂತ ಶರ್ಮಾ ಹೇಳಿದ್ದಾರೆ. ಆಧಾರ್ ಒಂದು ವಿಶಿಷ್ಟವಾದ 12 ಅಂಕಿಯ ಸಂಖ್ಯೆಯ ಗುರುತಿನ ಸಂಖ್ಯೆಯಾಗಿದ್ದು, ಇದನ್ನು ಶಾಸನಬದ್ಧ ಸಂಸ್ಥೆಯಾದ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಭಾರತದ ನಿವಾಸಿಗಳಿಗೆ ನೀಡಲಾಗುತ್ತದೆ.

ರಾಜ್ಯದಲ್ಲಿ ವಾಸಿಸುವ ದಾಖಲೆರಹಿತ ವಲಸಿಗರಿಂದ ಭಾರತೀಯ ನಾಗರಿಕರನ್ನು ಪ್ರತ್ಯೇಕಿಸುವ ಉದ್ದೇಶದಿಂದ ಅಸ್ಸಾಂ ಆಗಸ್ಟ್ 31, 2019 ರಂದು ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್‌ಆರ್‌ಸಿ)ಯನ್ನು ಪ್ರಕಟಿಸಿತ್ತು. ಅದರಂತೆ ನಿವಾಸಿಗಳು ತಾವು ಅಥವಾ ಅವರ ಪೂರ್ವಜರು ಅಸ್ಸಾಂ ಅನ್ನು ಮಾರ್ಚ್ 24, 1971 ರ ಮಧ್ಯರಾತ್ರಿಯ ಮೊದಲು ಪ್ರವೇಶಿಸಿದ್ದಾರೆ ಎಂದು ಸಾಬೀತುಪಡಿಸಬೇಕಾಗುತ್ತದೆ.

ಅದಾಗ್ಯೂ, ರಾಜ್ಯದಾದ್ಯಂತ 19 ಲಕ್ಷಕ್ಕೂ ಹೆಚ್ಚು ವ್ಯಕ್ತಿಗಳು ಅಥವಾ 5.77% ಅರ್ಜಿದಾರರು ಎನ್‌ಆರ್‌ಸಿಯ ಅಂತಿಮ ಪಟ್ಟಿಯಿಂದ ಹೊರಗುಳಿದಿದ್ದಾರೆ. ಎನ್‌ಆರ್‌ಸಿಗೆ ಇನ್ನಷ್ಟೆ ಸೂಚನೆ ನೀಡಬೇಕಿದೆ.

ಸೆಪ್ಟೆಂಬರ್ 7 ರಂದು, ಅಸ್ಸಾಂನಲ್ಲಿ ಆಧಾರ್ ಸಂಖ್ಯೆಗಳನ್ನು ನೀಡುವ ಪ್ರಕ್ರಿಯೆಯನ್ನು “ಕಟ್ಟುನಿಟ್ಟಾಗಿ ನಿಯಂತ್ರಿಸಲಾಗುವುದು” ಎಂದು ಹಿಮಂತ ಶರ್ಮಾ ಘೋಷಿಸಿದ್ದಾರೆ. ಅರ್ಜಿದಾರರು 2015 ರಲ್ಲಿ ಅರ್ಜಿ ಸಲ್ಲಿಸುವಾಗ ಅವರಿಗೆ ಒದಗಿಸಲಾದ ತಮ್ಮ ಎನ್‌ಆರ್‌ಸಿ ಅರ್ಜಿ ಸಂಖ್ಯೆಯನ್ನು ಒದಗಿಸುವುದು ಕಡ್ಡಾಯವಾಗಿದೆ ಎಂದು ಅವರು ಹೇಳಿದ್ದಾರೆ.

“ಎನ್‌ಆರ್‌ಸಿ ಮಾಡಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಲೆಕ್ಕಿಸದೆ ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರು ಮಾತ್ರ ಆಧಾರ್ ಅನ್ನು ಪಡೆದುಕೊಳ್ಳಬಹುದು. ಈ ನೀತಿಯಿಂದ ಅಸ್ಸಾಂನಲ್ಲಿ ಯಾವುದೇ ಶಂಕಿತ ವಿದೇಶಿಯರು ಆಧಾರ್ ಕಾರ್ಡ್‌ಗಳನ್ನು ಪಡೆಯಲು ಸಾಧ್ಯವಿಲ್ಲ ಎಂದು ಖಚಿತಪಡಿಸುತ್ತದೆ. ಜೊತೆಗೆ ಇದು ಅಕ್ರಮ ವಿದೇಶಿಯರ ಒಳನುಸುಳುವಿಕೆಯವನ್ನು ತಡೆಯುತ್ತದೆ.” ಎಂದು ಅವರು ಹೇಳಿದ್ದಾರೆ.

ಆಧಾರ್ ನೀಡಲು ಹೊಸ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಜಾರಿಗೆ ತರಲು ರಾಜ್ಯ ಸರ್ಕಾರದ ಸಾಮಾನ್ಯ ಆಡಳಿತ ವಿಭಾಗವು ನೋಡಲ್ ಏಜೆನ್ಸಿಯಾಗಲಿದೆ ಎಂದು ಮುಖ್ಯಮಂತ್ರಿ ಬುಧವಾರ ಹೇಳಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗಳು ಮತ್ತು ಕಂದಾಯ ವೃತ್ತ ಮಟ್ಟದಲ್ಲಿ ವೃತ್ತ ಅಧಿಕಾರಿಗಳು ಇದನ್ನು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.

ಕಾರ್ಯವಿಧಾನದ ಪ್ರಕಾರ, ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಆಧಾರ್‌ಗಾಗಿ ಹೊಸ ಅರ್ಜಿಯನ್ನು ಪರಿಶೀಲನೆಗಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸುತ್ತದೆ ಎಂದು ಹಿಮಂತಾ ಶರ್ಮಾ ಹೇಳಿದ್ದಾರೆ. ಇದರ ನಂತರ, ಅರ್ಜಿದಾರರು ಅಥವಾ ಅವರ ಕುಟುಂಬವು ಎನ್‌ಆರ್‌ಸಿಗೆ ಸೇರ್ಪಡೆಗೊಳ್ಳಲು ಅರ್ಜಿ ಸಲ್ಲಿಸಿದ್ದರೆ ಸರ್ಕಲ್ ಅಧಿಕಾರಿ ಅದನ್ನು ಪರಿಶೀಲಿಸುತ್ತಾರೆ.

“ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಕಂಡುಬಂದರೆ, ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಸರ್ಕಲ್ ಆಫೀಸರ್ ಕ್ಷೇತ್ರ ಮಟ್ಟದ ಪರಿಶೀಲನೆಗೆ ಹೋಗುತ್ತಾರೆ. ಅಧಿಕಾರಿಗೆ ಸಂಪೂರ್ಣವಾಗಿ ಮನವರಿಕೆಯಾದ ನಂತರ, ಆಧಾರ್ ಅನ್ನು ಅನುಮೋದಿಸಲಾಗುತ್ತದೆ.” ಎಂದು ಅವರು ಹೇಳಿದ್ದಾರೆ.

ಸಿಎಂ ಅವರ ಈ ಕ್ರಮವನ್ನು ಹೋರಾಟಗಾರರು ವಿರೋಧಿಸಿದ್ದು, ಗುರುತಿನ ದಾಖಲೆಗಾಗಿ ಅರ್ಹತಾ ಮಾನದಂಡಗಳನ್ನು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ ಎಂದು ತಿಳಿಸಿದ್ದಾರೆ. ಅವರ ಈ ತೀರ್ಮಾನವು ಆಧಾರ್ ಕಾಯಿದೆ ಮತ್ತು ಆಧಾರ್ ಪರಿಕಲ್ಪನೆಯನ್ನು ತಿದ್ದುಪಡಿ ಮಾಡುತ್ತದೆ, ಇದು ದೊಡ್ಡ ಪರಿಣಾಮಗಳನ್ನು ಹೊಂದಿರುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನನ್ನ ವಿರುದ್ಧದ ಅವಹೇಳನಕಾರಿ ಹೇಳಿಕೆ ಕಡತದಿಂದ ತೆಗೆದುಹಾಕಿ – ಸ್ಪೀಕರ್‌ಗೆ ರಾಹುಲ್ ಗಾಂಧಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...