Homeಕರ್ನಾಟಕಎನ್ನಾರ್ಸಿ, ಸಿಎಬಿ ಹಾಗೂ ಎನ್‍ಪಿಆರ್ ಎನ್ನುವ ಮೂರು ಅಂಕದ ನಾಟಕ

ಎನ್ನಾರ್ಸಿ, ಸಿಎಬಿ ಹಾಗೂ ಎನ್‍ಪಿಆರ್ ಎನ್ನುವ ಮೂರು ಅಂಕದ ನಾಟಕ

- Advertisement -
- Advertisement -

ನಮ್ಮ ಘನ ಸರಕಾರದವರು ನೀನು ಯಾರು ಅನ್ನೋ ಪ್ರಶ್ನೆ ಸೀದಾ ಸೀದಾ ಕೇಳೋದನ್ನ ಬಿಟ್ಟು ನಮ್ಮೆಲ್ಲರ ಪೌರತ್ವದ ಪುರಾವೆ ಕೇಳಾಕ ಹತ್ಯಾರ. ನೀವು ಓದಿದ್ದು ಸರಿ. ನಮ್ಮೆಲ್ಲರನ್ನೂ ಕೇಳಲಿಕ್ಕೆ ಹತ್ಯಾರ. ಬರೇ ಮುಸಲಮಾನರದಲ್ಲ.

ಇದರದು ಮೂರು ರೂಪ ಅವ. ಒಂದೊಂದಾಗಿ ನಮ್ಮನ್ನ ಸೀಳಿ ನೋಡೋ ಇವನ್ನ ನಾವೂ ಸೀಳಿ ನೋಡೋಣ.

ಒಂದು ಎನ್‍ಪಿಆರ್
(ರಾಷ್ಟ್ರೀಯ ಜನಸಂಖ್ಯಾ ದಾಖಲೆಪಟ್ಟಿ)
ಇದು ಸರ್ವೇಸಾಧಾರಣ ರಹವಾಸಿಗಳ ಪಟ್ಟಿ. ಇದರ ಮೂಲ ದಾಖಲೆಗಳನ್ನು ಜನಗಣತಿಯಿಂದ ಪಡೆಯಲಾಗುತ್ತದೆ. ಆದರೆ ಮನೆಮನೆಗೆ ಭೇಟಿ ನೀಡಿ ಅದನ್ನು ಪರಿಶೀಲಿಸಲಾಗುತ್ತದ. 2015 ರಲ್ಲಿ ಇದರ ಮೊದಲ ಪ್ರಯತ್ನ ನಡೆಯಿತು. ಎರಡನೇ ಹಂತದಲ್ಲಿ ಇದು 2020ರ ಎಪ್ರಿಲ್‍ನಲ್ಲಿ ಆರಂಭ ಆಗತದ.
ಇದರ ಪ್ರಕಾರ ಕಳೆದ ಆರು ತಿಂಗಳಿಂದ ಭರತ ಖಂಡದಲ್ಲಿ ಇದ್ದವರು ಹಾಗೂ ಅಥವಾ ಮುಂದಿನ ಆರು ತಿಂಗಳು ಇಲ್ಲಿ ಇರಬೇಕೆನ್ನುವವರು ಇದರ ಪ್ರಕಾರ ಸರ್ವೇಸಾಧಾರಣ ರಹವಾಸಿಗಳು.

ನಿಮ್ಮ ಮನೆಯ ಬೆಲ್ಲು ಬಡಿದು ನಿಮ್ಮನ್ನು ಕೇಳುವ ಪ್ರಶ್ನೆಗಳು ಇವು- ಹೆಸರು, ಲಿಂಗ, ಹುಟ್ಟಿದ ಸ್ಥಳ, ದಿನಾಂಕ, ಮನೆಯ ಮುಖ್ಯಸ್ಥನೊಂದಿಗೆ ಸಂಬಂಧ, ಅಪ್ಪ, ಅವ್ವನ ಹೆಸರು, ಮದುವೆಯಾಗಿದ್ದರ ಹೆಂಡತಿ/ ಗಂಡನ ಹೆಸರು, ಕೆಲಸ, ಈಗ ಇರುವ ವಿಳಾಸ, ಇಲ್ಲಿ ಎಷ್ಟು ದಿವಸ ಉಳದೀರಿ? ಕಾಯಂ ವಿಳಾಸ, ವಿದ್ಯಾಭ್ಯಾಸ ಹಾಗೂ ಇತರ ವಿವರಗಳು. ನೀವು ಕೊಟ್ಟ ಮಾಹಿತಿ ಸರಕಾರದ ಹತ್ತಿರ ಇರೋ ಮಾಹಿತಿಗೆ ಹೊಂದಲಿಲ್ಲಾ ಅಂದರ ಬೇರೆಯವರು ಬರತಾರ. ಅವರು ನಿಮ್ಮ ಬೆಲ್ಲನ್ನೂ ಬಡಿಯಬಹುದು, ನಿಮ್ಮನ್ನೂ ಬಡಿಯಬಹುದು.

ಇನ್ನೊಂದು ಎನ್‍ಆರ್‍ಸಿ.
ಈ ದಸ್ತಾವೇಜಿನ ಹೆಸರು ರಾಷ್ಟ್ರೀಯ ನಾಗರಿಕರ ದಾಖಲೆಪಟ್ಟಿ. ಇದನ್ನು ಉಪಯೋಗಿಸಿ ಬೇರೆ ದೇಶದಿಂದ ಬಂದ ನುಸುಳುಕೋರರ ಹೆಸರು ಹಾಕಿ ಅವರನ್ನು ಅವರ ದೇಶಕ್ಕೆ ವಾಪಸು ಕಳಿಸಬಹುದು. ದಾಖಲೆ ಇಲ್ಲದ ಜನರನ್ನು ಗುರುತಿಸಿ ಅವರನ್ನು ಗೈರು ನಾಗರಿಕರು ಅಂತ ಬರೆಯೋದು. ಆಮ್ಯಾಲೆ ಅವರನ್ನು ಹಿಡದು ಇಡಲಿಕ್ಕೆ ದೊಡ್ಡ ದೊಡ್ಡ ಹಿಡಿದಿಟ್ಟುಕೊಳ್ಳುವ ಕೇಂದ್ರಗಳನ್ನು ಕಟ್ಟೋದು.

ಒಂದು ಸಲೆ ಅಸ್ಸಾಮಿನೊಳಗ ಇದನ್ನ ಮಾಡಿ 19 ಲಕ್ಷ ಜನರನ್ನ ಗೈರು ನಾಗರಿಕರು ಅಂತ ಗುರುತಿಸಿದರು. ಅದರೊಳಗ 11 ಲಕ್ಷ ಹಿಂದೂಗಳು, ಎಂಟು ಲಕ್ಷ ಮುಸಲಮಾನರು. ಈಗ ಅಲ್ಲಿ ಇಂಥಾ ಕೇಂದ್ರ, ಅಥವಾ ಬಯಲು ಜೈಲಿನ ತಯಾರಿ ನಡದದ.

ಎನ್ನಾರ್ಸಿ ಅಧಿಕಾರಿಗಳು
ನಿಮ್ಮನ್ನ ಬಂದು ಏನು ಕೇಳತಾರಪಾ ಅಂದರ ನಿಮ್ಮ ಆಧಾರ ಕಾರಡು ಅದೇನು? ಓದಿದ್ದರ ಎಸ್ಸೆಸೆಲ್ಸಿ ಅಂಕ ಪಟ್ಟಿ ಅದೇನು? ಮತ್ತ ಏನೇನ ಅದಾವ ಅಂತ ಕೇಳಬಹುದು.

ಎಲ್ಲಾಕ್ಕಿಂತ ಮುಖ್ಯವಾಗಿ ನಿಮಗೂ ನಿಮ್ಮಪ್ಪನಿಗೂ ಸಂಬಂಧ ಏನು, ಅದನ್ನ ಸಿದ್ಧ ಮಾಡಿ ತೋರಿಸೋ ಸಾಕ್ಷಿ ಏನು ಅಂತ ಕೇಳತಾರ.

ಮಹಾಮಹಿಮ ಅಮಿತ ಶಾ ಅವರು ಹೊರದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಅಥವಾ ಅಫಘಾನಿಸ್ತಾನದೊಳಗ ಧರ್ಮದ ಆಧಾರದ ಮ್ಯಾಲೆ ಹಿಂಸೆ ಅನುಭವಿಸಿ ಭಾರತಕ್ಕ ಓಡಿಬಂದ ಹಿಂದೂಗಳನ್ನ ಇಲ್ಲೇ ಇಟಗೋತೇವಿ, ಹೊಳ್ಳಿ ಕಳಸಂಗಿಲ್ಲಾ ಅಂತ ಹೇಳ್ಯಾರ. ಹಿಂದೂಗಳ ಸಂಗ್ತೆ ಜೈನ, ಬೌದ್ಧ, ಸಿಖ್, ಪಾರಸೀ, ಕ್ರಿಶ್ಚಿಯನ್‍ಗಳನ್ನೂ ಕರಕೋತೇವಿ ಅಂತ ಹೇಳ್ಯಾರ. ಇನ್ನೊಂದು ಧರ್ಮದವರನ್ನ ಜಾಣತನದಿಂದ ಕೈ ಬಿಟ್ಟಾರ. ಹಂಗನ, ಭಾರತದೊಳಗ ಧರ್ಮದ ಆಧಾರದ ಮ್ಯಾಲೆ ಹಿಂಸೆ ಅನುಭವಿಸಿದವರು ಎಲ್ಲೆ ಹೋಗಬೇಕು ಅಂತ ಹೇಳೋದು ಮರತ ಬಿಟ್ಟಾರ. ಬರೇ ಅಸಾಮಿನಂಥ ಗಡಿ ರಾಜ್ಯಗಳಲ್ಲೆ ಅಲ್ಲ, ದೇಶಾದ್ಯಂತ ಇದನ್ನ ಮಾಡಬೇಕು ಅಂತ ಶಾಜೀ ಅಪ್ಪಣೆ ಕೊಡಸ್ಯಾರ. ಅದನ್ನ ಕೇಳಿ ನಮ್ಮ ಗೃಹಮಂತ್ರಿಯವರಾದ ಬಸವರಾಜ ಬೊಮ್ಮಾಯಿ ಅವರೂ ಅದ ರಾಗ ಹಾಡ್ಯಾರ. ನಿಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಸೋಮಪ್ಪಾ ರಾಯಪ್ಪಾ ಬೊಮ್ಮಾಯಿ ಅವರು ಸಮಾಜವಾದಿಗಳು ಆಗಿದ್ದರು. ಎಮ್ ಎನ್ ರಾಯ ಅವರ ವಿಶ್ವ ಮಾನವತ್ವದ ಸಿದ್ಧಾಂತದ ಪ್ರತಿಪಾದಕರಾಗಿದ್ದರು ಅನ್ನೊದನ್ನ ಅವರಿಗೆ ಯಾರೂ ನೆನಪು ಮಾಡಿದಂಗ ಕಾಣಂಗಿಲ್ಲ.

ಉಪೇಂದ್ರ ಅವರ ಏಕೆ 47 ನಿಂದಾಗಿ ಒಂದು ಜೈಲು ಫೇಮಸ್ ಆತಲ್ಲಾ ಅದರ ಹೆಸರು ಪರಪ್ಪನ ಅಗ್ರಹಾರ ಅಂತ. ಅದರೊಳಗ 2200 ಕೈದಿಗಳನ್ನ ಇಡಬಹುದು. ಆದರ 4400 ಜನರನ್ನ ಇಟ್ಟಾರ. ಇನ್ನು 19 ಲಕ್ಷ ಜನರನ್ನು ಇಡೋ ಜೈಲು ಎಷ್ಟು ದೊಡ್ಡದಿರಬಹುದು, ಅದರಾಗ ಏಷ್ಟು ಅಡಿಗಿ ಮಾಡಬೇಕು, ಹೆಂಗ ಅವರೆಲ್ಲರಿಗೂ ಊಟಕ್ಕ ಹಾಕಬೇಕು, ವಿಚಾರ ಮಾಡರಿ. ಅದರ ಸಲುವಾಗಿ ಕೇಂದ್ರ ಸರಕಾರ ಈಗಾಗಲೇ 50 ಕೋಟಿ ರೂಪಾಯಿ ಕೊಟ್ಟಾರ. ಅವರನ್ನು ಹೊರಗ ಬಿಟ್ಟರ ಅವರು ದುಡಕೊಂಡ ತಿನ್ನತಿದ್ದರು. ಹಿಂಗ ಅವರನ್ನು ಕೂಡಿಸಿ ಊಟಕ್ಕ ಹಾಕೋ ಪರಿಸ್ಥಿತಿ ಬರತಿದ್ದಿಲ್ಲಾ.

ಇನ್ನ ಇಡೀ ದೇಶದೊಳಗ ಈ ಕೇಂದ್ರಗಳನ್ನ ಮಾಡಲಿಕ್ಕೆ ಹೋದರ ಗತಿ?
ಮೂರನೆಯ ಬಹು ಚರ್ಚಿತ ವಿಷಯ ಸಿಎಬಿ ಅಥವಾ ನಾಗರಿಕತೆ ತಿದ್ದುಪಡಿ ಮಸೂದೆ. ಅದು ತಿರಗಿ ಎರಡೂ ಸಂಸತ್ ಸಭೆಗಳಲ್ಲಿ ಪಾಸಾಗಿ ಮಧ್ಯರಾತ್ರಿಯೊಳಗ ರಾಷ್ಟ್ರಪತಿಗಳ ಅಂಕಿತ ಪಡದು ಕಾನೂನು ಆಗಿ ಹೋಗೇದ. ಅದು ಈಗ ಸಿಎಎ. ನಾಗರಿಕತೆ ತಿದ್ದುಪಡಿ ಕಾಯಿದೆ. ಅದರ ಪ್ರಕಾರ ನೈಸರ್ಗೀಕರಣದ ನಾಗರಿಕತೆ ಸಾಧ್ಯ ಇಲ್ಲ. ಅಂದರ ನಾನು ಭಾರತದ ಪ್ರಜೆ ಆಗಬೇಕು ಅಂತ ಅರ್ಜಿ ಹಾಕಿದರ ಅದು ಸಿಗೋದಿಲ್ಲ. ಇಷ್ಟು ದಿವಸ ಸಿಗತಿತ್ತು. ಈ ದೇಶದಾಗ 26 ತಿಂಗಳು ಅಥವಾ 5 ವರ್ಷ ಅಥವಾ 11 ವರ್ಷ ಕಳೆದವರು (ಕೆಲವು ಷರತ್ತುಗಳೊಂದಿಗೆ) ಮತ್ತು ಕಾಯಂ ಆಗಿ ಇಲ್ಲಿ ಉಳಿಯೋ ವಿಚಾರದವರು ಅರ್ಜಿ ಹಾಕಬಹುದಿತ್ತು. ಅವರಿಗೆ ನಾಗರಿಕತೆ ಸಿಗತಿತ್ತು. ಈಗ ಸಿಗಂಗಿಲ್ಲ. ಆದರ ಈ ಕಾಯಿದೆ ಎಲ್ಲ ಧರ್ಮದವರಿಗೆ ಲಾಗೂ ಆಗಂಗಿಲ್ಲ. ಹಿಂದೂಗಳು ಮತ್ತು ಜೈನ, ಬೌದ್ಧ, ಸಿಖ್, ಪಾರಸೀ, ಕ್ರಿಶ್ಚಿಯನ್ ಈ ಧರ್ಮದವರು ನೈಸರ್ಗೀಕರಣಗೊಳ್ಳಬಹುದು, ಮುಸಲಮಾನರಿಗೆ ಇದು ಸಾಧ್ಯ ಇಲ್ಲ.

ಇದು ಸಂವಿಧಾನ ವಿರೋಧಿ ಅಂತ ಕೆಲವರು ಹೇಳಲಿಕ್ಕೆ ಹತ್ಯಾರ. ಇಲ್ಲಾ, ಇದು ಬರೇ ಸಂವಿಧಾನ ವಿರೋಧಿ ಅಲ್ಲ. ಇದು ಮಾನವೀಯತೆಯ ಪರಿಕಲ್ಪನೆಗೆ ವಿರೋಧಿ ಅಂತ ಕೆಲವರು ಹೇಳಲಿಕ್ಕೆ ಹತ್ಯಾರ. ಅದು ಅರ್ಥ ಆಗಲಿಕ್ಕೆ ಸ್ವಲ್ಪ ಸಮಯ ಬೇಕಾಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...