Homeಕರ್ನಾಟಕಎನ್ನಾರ್ಸಿ, ಸಿಎಬಿ ಹಾಗೂ ಎನ್‍ಪಿಆರ್ ಎನ್ನುವ ಮೂರು ಅಂಕದ ನಾಟಕ

ಎನ್ನಾರ್ಸಿ, ಸಿಎಬಿ ಹಾಗೂ ಎನ್‍ಪಿಆರ್ ಎನ್ನುವ ಮೂರು ಅಂಕದ ನಾಟಕ

- Advertisement -
- Advertisement -

ನಮ್ಮ ಘನ ಸರಕಾರದವರು ನೀನು ಯಾರು ಅನ್ನೋ ಪ್ರಶ್ನೆ ಸೀದಾ ಸೀದಾ ಕೇಳೋದನ್ನ ಬಿಟ್ಟು ನಮ್ಮೆಲ್ಲರ ಪೌರತ್ವದ ಪುರಾವೆ ಕೇಳಾಕ ಹತ್ಯಾರ. ನೀವು ಓದಿದ್ದು ಸರಿ. ನಮ್ಮೆಲ್ಲರನ್ನೂ ಕೇಳಲಿಕ್ಕೆ ಹತ್ಯಾರ. ಬರೇ ಮುಸಲಮಾನರದಲ್ಲ.

ಇದರದು ಮೂರು ರೂಪ ಅವ. ಒಂದೊಂದಾಗಿ ನಮ್ಮನ್ನ ಸೀಳಿ ನೋಡೋ ಇವನ್ನ ನಾವೂ ಸೀಳಿ ನೋಡೋಣ.

ಒಂದು ಎನ್‍ಪಿಆರ್
(ರಾಷ್ಟ್ರೀಯ ಜನಸಂಖ್ಯಾ ದಾಖಲೆಪಟ್ಟಿ)
ಇದು ಸರ್ವೇಸಾಧಾರಣ ರಹವಾಸಿಗಳ ಪಟ್ಟಿ. ಇದರ ಮೂಲ ದಾಖಲೆಗಳನ್ನು ಜನಗಣತಿಯಿಂದ ಪಡೆಯಲಾಗುತ್ತದೆ. ಆದರೆ ಮನೆಮನೆಗೆ ಭೇಟಿ ನೀಡಿ ಅದನ್ನು ಪರಿಶೀಲಿಸಲಾಗುತ್ತದ. 2015 ರಲ್ಲಿ ಇದರ ಮೊದಲ ಪ್ರಯತ್ನ ನಡೆಯಿತು. ಎರಡನೇ ಹಂತದಲ್ಲಿ ಇದು 2020ರ ಎಪ್ರಿಲ್‍ನಲ್ಲಿ ಆರಂಭ ಆಗತದ.
ಇದರ ಪ್ರಕಾರ ಕಳೆದ ಆರು ತಿಂಗಳಿಂದ ಭರತ ಖಂಡದಲ್ಲಿ ಇದ್ದವರು ಹಾಗೂ ಅಥವಾ ಮುಂದಿನ ಆರು ತಿಂಗಳು ಇಲ್ಲಿ ಇರಬೇಕೆನ್ನುವವರು ಇದರ ಪ್ರಕಾರ ಸರ್ವೇಸಾಧಾರಣ ರಹವಾಸಿಗಳು.

ನಿಮ್ಮ ಮನೆಯ ಬೆಲ್ಲು ಬಡಿದು ನಿಮ್ಮನ್ನು ಕೇಳುವ ಪ್ರಶ್ನೆಗಳು ಇವು- ಹೆಸರು, ಲಿಂಗ, ಹುಟ್ಟಿದ ಸ್ಥಳ, ದಿನಾಂಕ, ಮನೆಯ ಮುಖ್ಯಸ್ಥನೊಂದಿಗೆ ಸಂಬಂಧ, ಅಪ್ಪ, ಅವ್ವನ ಹೆಸರು, ಮದುವೆಯಾಗಿದ್ದರ ಹೆಂಡತಿ/ ಗಂಡನ ಹೆಸರು, ಕೆಲಸ, ಈಗ ಇರುವ ವಿಳಾಸ, ಇಲ್ಲಿ ಎಷ್ಟು ದಿವಸ ಉಳದೀರಿ? ಕಾಯಂ ವಿಳಾಸ, ವಿದ್ಯಾಭ್ಯಾಸ ಹಾಗೂ ಇತರ ವಿವರಗಳು. ನೀವು ಕೊಟ್ಟ ಮಾಹಿತಿ ಸರಕಾರದ ಹತ್ತಿರ ಇರೋ ಮಾಹಿತಿಗೆ ಹೊಂದಲಿಲ್ಲಾ ಅಂದರ ಬೇರೆಯವರು ಬರತಾರ. ಅವರು ನಿಮ್ಮ ಬೆಲ್ಲನ್ನೂ ಬಡಿಯಬಹುದು, ನಿಮ್ಮನ್ನೂ ಬಡಿಯಬಹುದು.

ಇನ್ನೊಂದು ಎನ್‍ಆರ್‍ಸಿ.
ಈ ದಸ್ತಾವೇಜಿನ ಹೆಸರು ರಾಷ್ಟ್ರೀಯ ನಾಗರಿಕರ ದಾಖಲೆಪಟ್ಟಿ. ಇದನ್ನು ಉಪಯೋಗಿಸಿ ಬೇರೆ ದೇಶದಿಂದ ಬಂದ ನುಸುಳುಕೋರರ ಹೆಸರು ಹಾಕಿ ಅವರನ್ನು ಅವರ ದೇಶಕ್ಕೆ ವಾಪಸು ಕಳಿಸಬಹುದು. ದಾಖಲೆ ಇಲ್ಲದ ಜನರನ್ನು ಗುರುತಿಸಿ ಅವರನ್ನು ಗೈರು ನಾಗರಿಕರು ಅಂತ ಬರೆಯೋದು. ಆಮ್ಯಾಲೆ ಅವರನ್ನು ಹಿಡದು ಇಡಲಿಕ್ಕೆ ದೊಡ್ಡ ದೊಡ್ಡ ಹಿಡಿದಿಟ್ಟುಕೊಳ್ಳುವ ಕೇಂದ್ರಗಳನ್ನು ಕಟ್ಟೋದು.

ಒಂದು ಸಲೆ ಅಸ್ಸಾಮಿನೊಳಗ ಇದನ್ನ ಮಾಡಿ 19 ಲಕ್ಷ ಜನರನ್ನ ಗೈರು ನಾಗರಿಕರು ಅಂತ ಗುರುತಿಸಿದರು. ಅದರೊಳಗ 11 ಲಕ್ಷ ಹಿಂದೂಗಳು, ಎಂಟು ಲಕ್ಷ ಮುಸಲಮಾನರು. ಈಗ ಅಲ್ಲಿ ಇಂಥಾ ಕೇಂದ್ರ, ಅಥವಾ ಬಯಲು ಜೈಲಿನ ತಯಾರಿ ನಡದದ.

ಎನ್ನಾರ್ಸಿ ಅಧಿಕಾರಿಗಳು
ನಿಮ್ಮನ್ನ ಬಂದು ಏನು ಕೇಳತಾರಪಾ ಅಂದರ ನಿಮ್ಮ ಆಧಾರ ಕಾರಡು ಅದೇನು? ಓದಿದ್ದರ ಎಸ್ಸೆಸೆಲ್ಸಿ ಅಂಕ ಪಟ್ಟಿ ಅದೇನು? ಮತ್ತ ಏನೇನ ಅದಾವ ಅಂತ ಕೇಳಬಹುದು.

ಎಲ್ಲಾಕ್ಕಿಂತ ಮುಖ್ಯವಾಗಿ ನಿಮಗೂ ನಿಮ್ಮಪ್ಪನಿಗೂ ಸಂಬಂಧ ಏನು, ಅದನ್ನ ಸಿದ್ಧ ಮಾಡಿ ತೋರಿಸೋ ಸಾಕ್ಷಿ ಏನು ಅಂತ ಕೇಳತಾರ.

ಮಹಾಮಹಿಮ ಅಮಿತ ಶಾ ಅವರು ಹೊರದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಅಥವಾ ಅಫಘಾನಿಸ್ತಾನದೊಳಗ ಧರ್ಮದ ಆಧಾರದ ಮ್ಯಾಲೆ ಹಿಂಸೆ ಅನುಭವಿಸಿ ಭಾರತಕ್ಕ ಓಡಿಬಂದ ಹಿಂದೂಗಳನ್ನ ಇಲ್ಲೇ ಇಟಗೋತೇವಿ, ಹೊಳ್ಳಿ ಕಳಸಂಗಿಲ್ಲಾ ಅಂತ ಹೇಳ್ಯಾರ. ಹಿಂದೂಗಳ ಸಂಗ್ತೆ ಜೈನ, ಬೌದ್ಧ, ಸಿಖ್, ಪಾರಸೀ, ಕ್ರಿಶ್ಚಿಯನ್‍ಗಳನ್ನೂ ಕರಕೋತೇವಿ ಅಂತ ಹೇಳ್ಯಾರ. ಇನ್ನೊಂದು ಧರ್ಮದವರನ್ನ ಜಾಣತನದಿಂದ ಕೈ ಬಿಟ್ಟಾರ. ಹಂಗನ, ಭಾರತದೊಳಗ ಧರ್ಮದ ಆಧಾರದ ಮ್ಯಾಲೆ ಹಿಂಸೆ ಅನುಭವಿಸಿದವರು ಎಲ್ಲೆ ಹೋಗಬೇಕು ಅಂತ ಹೇಳೋದು ಮರತ ಬಿಟ್ಟಾರ. ಬರೇ ಅಸಾಮಿನಂಥ ಗಡಿ ರಾಜ್ಯಗಳಲ್ಲೆ ಅಲ್ಲ, ದೇಶಾದ್ಯಂತ ಇದನ್ನ ಮಾಡಬೇಕು ಅಂತ ಶಾಜೀ ಅಪ್ಪಣೆ ಕೊಡಸ್ಯಾರ. ಅದನ್ನ ಕೇಳಿ ನಮ್ಮ ಗೃಹಮಂತ್ರಿಯವರಾದ ಬಸವರಾಜ ಬೊಮ್ಮಾಯಿ ಅವರೂ ಅದ ರಾಗ ಹಾಡ್ಯಾರ. ನಿಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಸೋಮಪ್ಪಾ ರಾಯಪ್ಪಾ ಬೊಮ್ಮಾಯಿ ಅವರು ಸಮಾಜವಾದಿಗಳು ಆಗಿದ್ದರು. ಎಮ್ ಎನ್ ರಾಯ ಅವರ ವಿಶ್ವ ಮಾನವತ್ವದ ಸಿದ್ಧಾಂತದ ಪ್ರತಿಪಾದಕರಾಗಿದ್ದರು ಅನ್ನೊದನ್ನ ಅವರಿಗೆ ಯಾರೂ ನೆನಪು ಮಾಡಿದಂಗ ಕಾಣಂಗಿಲ್ಲ.

ಉಪೇಂದ್ರ ಅವರ ಏಕೆ 47 ನಿಂದಾಗಿ ಒಂದು ಜೈಲು ಫೇಮಸ್ ಆತಲ್ಲಾ ಅದರ ಹೆಸರು ಪರಪ್ಪನ ಅಗ್ರಹಾರ ಅಂತ. ಅದರೊಳಗ 2200 ಕೈದಿಗಳನ್ನ ಇಡಬಹುದು. ಆದರ 4400 ಜನರನ್ನ ಇಟ್ಟಾರ. ಇನ್ನು 19 ಲಕ್ಷ ಜನರನ್ನು ಇಡೋ ಜೈಲು ಎಷ್ಟು ದೊಡ್ಡದಿರಬಹುದು, ಅದರಾಗ ಏಷ್ಟು ಅಡಿಗಿ ಮಾಡಬೇಕು, ಹೆಂಗ ಅವರೆಲ್ಲರಿಗೂ ಊಟಕ್ಕ ಹಾಕಬೇಕು, ವಿಚಾರ ಮಾಡರಿ. ಅದರ ಸಲುವಾಗಿ ಕೇಂದ್ರ ಸರಕಾರ ಈಗಾಗಲೇ 50 ಕೋಟಿ ರೂಪಾಯಿ ಕೊಟ್ಟಾರ. ಅವರನ್ನು ಹೊರಗ ಬಿಟ್ಟರ ಅವರು ದುಡಕೊಂಡ ತಿನ್ನತಿದ್ದರು. ಹಿಂಗ ಅವರನ್ನು ಕೂಡಿಸಿ ಊಟಕ್ಕ ಹಾಕೋ ಪರಿಸ್ಥಿತಿ ಬರತಿದ್ದಿಲ್ಲಾ.

ಇನ್ನ ಇಡೀ ದೇಶದೊಳಗ ಈ ಕೇಂದ್ರಗಳನ್ನ ಮಾಡಲಿಕ್ಕೆ ಹೋದರ ಗತಿ?
ಮೂರನೆಯ ಬಹು ಚರ್ಚಿತ ವಿಷಯ ಸಿಎಬಿ ಅಥವಾ ನಾಗರಿಕತೆ ತಿದ್ದುಪಡಿ ಮಸೂದೆ. ಅದು ತಿರಗಿ ಎರಡೂ ಸಂಸತ್ ಸಭೆಗಳಲ್ಲಿ ಪಾಸಾಗಿ ಮಧ್ಯರಾತ್ರಿಯೊಳಗ ರಾಷ್ಟ್ರಪತಿಗಳ ಅಂಕಿತ ಪಡದು ಕಾನೂನು ಆಗಿ ಹೋಗೇದ. ಅದು ಈಗ ಸಿಎಎ. ನಾಗರಿಕತೆ ತಿದ್ದುಪಡಿ ಕಾಯಿದೆ. ಅದರ ಪ್ರಕಾರ ನೈಸರ್ಗೀಕರಣದ ನಾಗರಿಕತೆ ಸಾಧ್ಯ ಇಲ್ಲ. ಅಂದರ ನಾನು ಭಾರತದ ಪ್ರಜೆ ಆಗಬೇಕು ಅಂತ ಅರ್ಜಿ ಹಾಕಿದರ ಅದು ಸಿಗೋದಿಲ್ಲ. ಇಷ್ಟು ದಿವಸ ಸಿಗತಿತ್ತು. ಈ ದೇಶದಾಗ 26 ತಿಂಗಳು ಅಥವಾ 5 ವರ್ಷ ಅಥವಾ 11 ವರ್ಷ ಕಳೆದವರು (ಕೆಲವು ಷರತ್ತುಗಳೊಂದಿಗೆ) ಮತ್ತು ಕಾಯಂ ಆಗಿ ಇಲ್ಲಿ ಉಳಿಯೋ ವಿಚಾರದವರು ಅರ್ಜಿ ಹಾಕಬಹುದಿತ್ತು. ಅವರಿಗೆ ನಾಗರಿಕತೆ ಸಿಗತಿತ್ತು. ಈಗ ಸಿಗಂಗಿಲ್ಲ. ಆದರ ಈ ಕಾಯಿದೆ ಎಲ್ಲ ಧರ್ಮದವರಿಗೆ ಲಾಗೂ ಆಗಂಗಿಲ್ಲ. ಹಿಂದೂಗಳು ಮತ್ತು ಜೈನ, ಬೌದ್ಧ, ಸಿಖ್, ಪಾರಸೀ, ಕ್ರಿಶ್ಚಿಯನ್ ಈ ಧರ್ಮದವರು ನೈಸರ್ಗೀಕರಣಗೊಳ್ಳಬಹುದು, ಮುಸಲಮಾನರಿಗೆ ಇದು ಸಾಧ್ಯ ಇಲ್ಲ.

ಇದು ಸಂವಿಧಾನ ವಿರೋಧಿ ಅಂತ ಕೆಲವರು ಹೇಳಲಿಕ್ಕೆ ಹತ್ಯಾರ. ಇಲ್ಲಾ, ಇದು ಬರೇ ಸಂವಿಧಾನ ವಿರೋಧಿ ಅಲ್ಲ. ಇದು ಮಾನವೀಯತೆಯ ಪರಿಕಲ್ಪನೆಗೆ ವಿರೋಧಿ ಅಂತ ಕೆಲವರು ಹೇಳಲಿಕ್ಕೆ ಹತ್ಯಾರ. ಅದು ಅರ್ಥ ಆಗಲಿಕ್ಕೆ ಸ್ವಲ್ಪ ಸಮಯ ಬೇಕಾಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...