Homeಮುಖಪುಟಜುಲೈ 9 ರಾಷ್ಟ್ರವ್ಯಾಪಿ ಮುಷ್ಕರ: ನರೇಗಾ ಕಾರ್ಮಿಕ ಒಕ್ಕೂಟ, ವಿದ್ಯಾರ್ಥಿ ಸಂಘಟನೆಗಳಿಂದ ಬೆಂಬಲ

ಜುಲೈ 9 ರಾಷ್ಟ್ರವ್ಯಾಪಿ ಮುಷ್ಕರ: ನರೇಗಾ ಕಾರ್ಮಿಕ ಒಕ್ಕೂಟ, ವಿದ್ಯಾರ್ಥಿ ಸಂಘಟನೆಗಳಿಂದ ಬೆಂಬಲ

- Advertisement -
- Advertisement -

ಹೊಸ ಕಾರ್ಮಿಕ ಕಾನೂನುಗಳ ವಿರುದ್ಧ 10 ರಾಷ್ಟ್ರೀಯ ಕಾರ್ಮಿಕ ಸಂಘಟನೆಗಳು ಮತ್ತು ರೈತ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಜುಲೈ 9ರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ನರೇಗಾ ಕಾರ್ಮಿಕರನ್ನು ಪ್ರತಿನಿಧಿಸುವ 20ಕ್ಕೂ ಹೆಚ್ಚು ಕಾರ್ಮಿಕ ಗುಂಪುಗಳು ಮತ್ತು ಎಡ ಪಕ್ಷಗಳಿಗೆ ಸಂಬಂಧಿಸಿದ ವಿದ್ಯಾರ್ಥಿ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಮೋದಿ ಸರ್ಕಾರ 2019-2020ರಲ್ಲಿ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ವಿರುದ್ಧದ ಮುಷ್ಕರದಲ್ಲಿ ಎನ್‌ಆರ್‌ಇಜಿಎ ಸಂಘರ್ಷ ಮೋರ್ಚಾ ಭಾಗವಹಿಸಲಿದೆ ಎಂದು ವರದಿಯಾಗಿದೆ.

ನರೇಗಾ ಕಾರ್ಮಿಕರ ವೇತನವನ್ನು ದಿನಕ್ಕೆ ರೂ. 800ಕ್ಕೆ ಹೆಚ್ಚಿಸಬೇಕು. ಮೂರು ವರ್ಷಗಳಿಗೂ ಹೆಚ್ಚು ಕಾಲ ಈ ಯೋಜನೆ ಸ್ಥಗಿತಗೊಂಡಿರುವ ಬಂಗಾಳದಲ್ಲಿ ತಕ್ಷಣ ಕೆಲಸ ಪುನರಾರಂಭಿಸಬೇಕು. ಡಿಜಿಟಲ್ ಹಾಜರಾತಿ ವ್ಯವಸ್ಥೆ ಮತ್ತು ಆಧಾರ್ ಆಧಾರಿತ ಪಾವತಿ ವ್ಯವಸ್ಥೆಯನ್ನು ರದ್ದುಗೊಳಿಸಬೇಕು. ಕೆಲಸ ಮುಗಿದ 15 ದಿನಗಳಲ್ಲಿ ವೇತನ ಪಾವತಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಎನ್‌ಆರ್‌ಇಜಿಎ ಸಂಘರ್ಷ ಮೋರ್ಚಾ ಮುಷ್ಕರವನ್ನು ಬೆಂಬಲಿಸಿದೆ.

ಕಾರ್ಮಿಕ ಸಂಹಿತೆಗಳು ಕಾರ್ಮಿಕರ ವೇತನ ಮತ್ತು ಒಕ್ಕೂಟ ರಚಿಸುವ ಹಕ್ಕುಗಳನ್ನು ಕಸಿದುಕೊಳ್ಳಲಿವೆ. ಕೆಲಸದ ಸಮಯವನ್ನು ಹೆಚ್ಚಿಸಲಿವೆ ಎಂದು ಭಾರತೀಯ ವಿದ್ಯಾರ್ಥಿ ಒಕ್ಕೂಟ, ಅಖಿಲ ಭಾರತ ವಿದ್ಯಾರ್ಥಿ ಒಕ್ಕೂಟ ಮತ್ತು ಅಖಿಲ ಭಾರತ ವಿದ್ಯಾರ್ಥಿ ಸಂಘ ಜಂಟಿ ಹೇಳಿಕೆ ನೀಡಿದೆ.

Silence for Gaza| ಇಸ್ರೇಲ್ ನರಮೇಧದ ವಿರುದ್ಧ ‘ಡಿಜಿಟಲ್ ಸತ್ಯಾಗ್ರಹ’ಕ್ಕೆ ಕರೆ ಕೊಟ್ಟ ಸಿಪಿಐ(ಎಂ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...