ಮಧ್ಯಪ್ರದೇಶದ ಬಿಜೆಪಿ ನಾಯಕನೊಬ್ಬ ಆದಿವಾಸಿ ಬುಡಕಟ್ಟು ಸಮುದಾಯದ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಸಿಧಿ ಜಿಲ್ಲೆಯಲ್ಲಿ ವರದಿಯಾಗಿತ್ತು. ಮನುಷ್ಯರೆಲ್ಲರೂ ತಲೆತಗ್ಗಿಸಬೇಕಾದ ಅಮಾನವೀಯ ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿಯನ್ನು ಬಂಧಿಸಿದ್ದಾರೆ ಮತ್ತು ಅವರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ)ಯನ್ನು ದಾಖಲು ಮಾಡಿದ್ದಾರೆ.
ಆರೋಪಿ ಸಿಧಿ ಬಿಜೆಪಿ ಶಾಸಕ ಕೇದಾರ್ ನಾಥ್ ಶುಕ್ಲಾ ಅವರ ಬೆಂಬಲಿಗ ಪ್ರವೇಶ್ ಶುಕ್ಲಾನನ್ನು ಬಂಧಿಸಲು ಹಲವಾರು ತಂಡಗಳನ್ನು ಕಳುಹಿಸಲಾಗಿತ್ತು. ಆರೋಪಿ ತನ್ನ ಸ್ಥಳಗಳನ್ನು ಬದಲಾಯಿಸುತ್ತಿದ್ದ ಕೊನೆಗೂ ಅವರನ್ನು ಪತ್ತೆಹಚ್ಚುವಲ್ಲಿ ಮಧ್ಯಪ್ರದೇಶ ಪೊಲೀಸರು ಯಶಸ್ವಿಯಾಗಿದ್ದಾರೆ. ನಿನ್ನೆ ತಡರಾತ್ರಿ ಆತನನ್ನು ಬಂಧಿಸಲಾಗಿದ್ದು, ಸದ್ಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿರುವ ಪೊಲೀಸರು, NSA ಜೊತೆಗೆ, ಐಪಿಸಿ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು ಮತ್ತು ಹಾಡುಗಳು), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು SC/ST (ದೌರ್ಜನ್ಯ ತಡೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.
#WATCH | We have taken the accused (Pravesh Shukla) into custody. He is under interrogation. Further legal action in the matter will be taken soon: Anju Lata Patle, ASP, Sidhi, Madhya Pradesh pic.twitter.com/4oHqMl2wqg
— ANI (@ANI) July 4, 2023
ಇದು ಸುಮಾರು ಮೂರು ತಿಂಗಳ ಹಿಂದಿನ ವೀಡಿಯೋ ಎನ್ನುವುದು ಗೊತ್ತಾಗಿದೆ. ಈ ವಿಚಾರ ತಿಳಿದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ಆರೋಪಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಹೇಳಿದ್ದಾರೆ.
”ಸಿಧಿ ಜಿಲ್ಲೆಯ ವೈರಲ್ ವೀಡಿಯೊ ನನ್ನ ಗಮನಕ್ಕೆ ಬಂದಿದೆ. ಕ್ರಿಮಿನಲ್ ಒಬ್ಬ ಅಪರಾಧಿ ಮಾತ್ರ, ಅವನಿಗೆ ಜಾತಿ, ಧರ್ಮ ಅಥವಾ ಪಕ್ಷವಿಲ್ಲ. ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಡಳಿತಕ್ಕೆ ಸೂಚನೆ ನೀಡಿದ್ದೇನೆ. ಆರೋಪಿಗಳಿಗೆ ಉದಾಹರಣೆ ಆಗುವ ರೀತಿಯಲ್ಲಿ ಶಿಕ್ಷೆ ವಿಧಿಸಲಾಗುವುದು. ಆತನ ಮೇಲೆ ಎನ್ಎಸ್ಎ (ರಾಷ್ಟ್ರೀಯ ಭದ್ರತಾ ಕಾಯಿದೆ) ವಿಧಿಸಲು ಸೂಚಿಸಿದ್ದೇನೆ” ಎಂದು ಚೌಹಾಣ್ ಟ್ವೀಟ್ ಮಾಡಿದ್ದಾರೆ.
अपराधी केवल अपराधी होता है, उसकी कोई जाति, धर्म या पार्टी नहीं होती।
सीधी मामले को लेकर मैंने निर्देश दिए हैं, आरोपी को ऐसी सजा दी जाएगी जो उदाहरण बने। हम उसे किसी भी कीमत पर नहीं छोड़ेंगे। pic.twitter.com/gmNk7PxfZD
— Shivraj Singh Chouhan (@ChouhanShivraj) July 4, 2023
”ಶುಕ್ಲಾ ಅವರು ಬಿಜೆಪಿಯ ಸಿದ್ಧಿ ಶಾಸಕ ಕೇದಾರನಾಥ್ ಶುಕ್ಲಾ ಅವರ ಸಹವರ್ತಿ” ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಈ ಆರೋಪವನ್ನು ಬಿಜೆಪಿ ಮತ್ತು ಅದರ ಶಾಸಕರು ನಿರಾಕರಿಸಿದ್ದಾರೆ.
ಅವರ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ಬಿಎಸ್ಪಿ ವರಿಷ್ಠೆ ಮಾಯಾವತಿ, ”ಮಧ್ಯಪ್ರದೇಶದ ಬಿಜೆಪಿ ಸರ್ಕಾರವು ಆ ಕ್ರಿಮಿನಲ್ ವಿರುದ್ಧ ಎನ್ಎಸ್ಎ ಮಾತ್ರವಲ್ಲದೆ ಆತನ ಆಸ್ತಿಯನ್ನು ಮುಟ್ಟುಗೋಲು ಹಾಕುವ ಕ್ರಮ ತೆಗೆದುಕೊಳ್ಳಬೇಕು ಮತ್ತು ಅವರು ತಮ್ಮ ಪಕ್ಷಕ್ಕೆ ಸೇರಿದವರು ಎಂದು ಹೇಳುತ್ತಿಲ್ಲ. ಇಂತಹ ಘಟನೆಗಳು ಎಲ್ಲರಿಗೂ ನಾಚಿಕೆ ತರುತ್ತವೆ” ಎಂದು ಹೇಳಿದ್ದಾರೆ.
1. मध्य प्रदेश के सीधी जिले में एक आदिवासी/दलित युवक पर स्थानीय दबंग नेता द्वारा पेशाब किए जाने की घटना अति-शर्मनाक, जिस अमानवीय कृत्य की जितनी भी निन्दा की जाए वह कम। इसका वीडियो वायरल होने के बाद ही सरकार का जागना इनकी संलिप्तता को साबित करता है, यह भी अति-दुःखद। (1/2)
— Mayawati (@Mayawati) July 5, 2023
ಇದನ್ನೂ ಓದಿ: ಮಧ್ಯಪ್ರದೇಶ: ಆದಿವಾಸಿ ಯುವಕನ ಮುಖದ ಮೇಲೆ ಬಿಜೆಪಿ ಮುಖಂಡನಿಂದ ಮೂತ್ರ ವಿಸರ್ಜನೆ