Homeಮುಖಪುಟಮತೀಯ ಸಂಕೇತಗಳಿಗೆ ಎನ್‌ಎಸ್‌ಡಿ ಇನ್‌ಸ್ಟಾಗ್ರಾಮ್‌ ಖಾತೆ ದುರ್ಬಳಕೆ: 272 ಜೀವಪರರ ಬಹಿರಂಗ ಪತ್ರ

ಮತೀಯ ಸಂಕೇತಗಳಿಗೆ ಎನ್‌ಎಸ್‌ಡಿ ಇನ್‌ಸ್ಟಾಗ್ರಾಮ್‌ ಖಾತೆ ದುರ್ಬಳಕೆ: 272 ಜೀವಪರರ ಬಹಿರಂಗ ಪತ್ರ

- Advertisement -
- Advertisement -

ರಾಷ್ಟ್ರೀಯ ನಾಟಕ ಶಾಲೆ (ಎನ್ಎಸ್‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍ಡಿ)ಯ ಅಧಿಕೃತ ಇನ್‌ಸ್ಟಾಗ್ರಾಮ್‌ ಖಾತೆಯು ಮತಧರ್ಮೀಯವಾದ ಸಂದೇಶಗಳನ್ನು ಬಿತ್ತರಿಸಿ ತುಂಬ ತಪ್ಪು ಮಾಡುತ್ತಿದೆ ಎಂದು ಆಕ್ಷೇಪಿಸಿ 272 ಕಲಾವಿದರು ಎನ್‌ಎಸ್‌ಡಿಯ ಅಧ್ಯಕ್ಷರು ಹಾಗೂ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ರಾಷ್ಟ್ರೀಯ ನಾಟಕಶಾಲೆಯ ಅಧಿಕೃತ ಇನ್‍ಸ್ಟಾಗ್ರಾಮ್ ಖಾತೆಯು ಮತಧರ್ಮೀಯವಾದ ಹಬ್ಬಗಳನ್ನು ಎತ್ತಿಹಿಡಿಯುತ್ತಿದೆ. ಮತಧರ್ಮೀಯವಾದ ಚಿತ್ರಗಳು ಹಾಗೂ ಪ್ರತಿಮಾ ಸಂಕೇತಗಳನ್ನು ಪ್ರದರ್ಶಿಸಲು ತೊಡಗಿದೆ ಎಂದು 272 ಮಂದಿ ಕಲಾವಿದ-ಕಲಾವಿದೆಯರು, ಸಾಹಿತಿಗಳು, ಅಧ್ಯಾಪಕ-ಅಧ್ಯಾಪಿಕೆಯರು, ಸಂಸ್ಕೃತಿ ಕ್ಷೇತ್ರದ ಕಾಯಕದವರು, ಮತ್ತು ಆ ಶಾಲೆಯ ಪದವೀಧರರು, ಪದವೀಧರೆಯರು ಹಾಗೂ ಈ ಶಾಲೆಯಲ್ಲಿ ಈ ಹಿಂದೆ ಪಾಠ ಮಾಡಿದವರು ಬಹಿರಂಗ ಪತ್ರಬರೆದಿದ್ದು, “ಇದನ್ನು ಬಹಳ ಆತಂಕದಿಂದ ಗಮನಿಸಿದ್ದೇವೆ” ಎಂದಿದ್ದಾರೆ.

“ಯಾವುದೇ ಮತಧರ್ಮಕ್ಕೆ ಸೇರಿದ ಯಾವುದೇ ಬಗೆಯ ಸಂದೇಶ ಚಿತ್ರ ಹಾಗೂ ಪ್ರತಿಮಾ ಸಂಕೇತಗಳನ್ನು ಸರ್ಕಾರವು ನಡೆಸುವ ಸಾರ್ವಜನಿಕ ಸಂಸ್ಥೆಗಳು ಬಿತ್ತರಿಸುವುದು ಆ ಸಂಸ್ಥೆಗಳ ಕರ್ತವ್ಯಧರ್ಮಕ್ಕೆ ಹೊರತಾದುದು. ಈ ವಿಷಯವನ್ನು ನಾವು, ಈ ಮೂಲಕ, ರಾಷ್ಟ್ರೀಯ ನಾಟಕಶಾಲೆಯ ಅಧಿಕಾರಿಗಳಾದ ತಮ್ಮ ಗಮನಕ್ಕೆ ತಂದು, ಇಂಥ ಕೆಲಸವು ಈಗಿಂದೀಗ ನಿಲ್ಲುವಂತೆ ನೋಡಿಕೊಳ್ಳಬೇಕು” ಎಂದು ಜೀವಪರ ಮನಸ್ಸುಗಳು ಆಗ್ರಹಿಸಿವೆ.

ಇದನ್ನೂ ಓದಿರಿ: ತ್ರಿಪುರಾ: VHP ರ್‍ಯಾಲಿ ವೇಳೆ ಮಸೀದಿ ಧ್ವಂಸ, ಎರಡು ಅಂಗಡಿಗಳಿಗೆ ಬೆಂಕಿ

ರಾಷ್ಟ್ರೀಯ ನಾಟಕ ಶಾಲೆಯು ಮತಧರ್ಮೀಯವಾದ ಹಬ್ಬಗಳ ಆಚರಣೆಯನ್ನು ಎತ್ತಿಹಿಡಿಯುವ ಸಂದೇಶಗಳನ್ನು ಬಿತ್ತರಿಸುವುದರಿಂದಾಗಿ, ಕಲಾಬೋಧನೆಯ ತನ್ನ ಅಸಲು ಕರ್ತವ್ಯವನ್ನು ಕಡೆಗಣಿಸಿ, ತನ್ನ ಘನತೆಗೌರವಗಳಿಗೆ ಧಕ್ಕೆ ಉಂಟುಮಾಡಿಕೊಳ್ಳುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಸಾರ್ವಜನಿಕ ಸಂಪರ್ಕತೆಗೆ ಬೇಕಾದ ಕುಶಲತೆಯ ವಿಷಯದಲ್ಲಿ ನಿಮಗೆ, ಒಂದು ವೇಳೆ, ನೆರವು ಬೇಕಾದಲ್ಲಿ, ದಯವಿಟ್ಟು, ಶಾಲೆಯಲ್ಲಿ ಈ ಹಿಂದೆ ಪಾಠ ಮಾಡುತ್ತಿದ್ದ ಅಧ್ಯಾಪಕರನ್ನು, ಅಧ್ಯಾಪಿಕೆಯರನ್ನು ಕೇಳಿ; ಕಲೆ ಮತ್ತು ಸಂಸ್ಕೃತಿಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರನ್ನು ಕೇಳಿ; ಅಧ್ಯಾಪನ ಕ್ಷೇತ್ರದ ಧೀಮಂತರನ್ನು ಕೇಳಿ; ಈ ನಮ್ಮ ಶಾಲೆಯ ಪದವೀಧರರಲ್ಲಿ ಸಮರ್ಥರಾದವರನ್ನು ಕೇಳಿ. ರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧವಾದ ಈ ಸಂಸ್ಥೆಯು ತನ್ನ ಚಹರೆ ಗುರುತುಗಳನ್ನು ಉಳಿಸಿ, ಬೆಳೆಸಿಕೊಳ್ಳಲು ಅವರು ನಿಮಗೆ ಸಂತಸದಿಂದ ನೆರವಾಗುತ್ತಾರೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಎನ್‌ಎಸ್‌ಡಿಯ ಅಧಿಕಾರಿವರ್ಗದ ಮುಂದೆ ಇಡಲಾಗಿರುವ ಬೇಡಿಕೆಗಳು

“ರಾಷ್ಟ್ರೀಯ ನಾಟಕಶಾಲೆಯ ಸಾಮಾಜಿಕ ಸಂಪರ್ಕದ ಜಾಲತಾಣಗಳಲ್ಲಿ ಹಾಗೂ ಸಾರ್ವಜನಿಕ ಸಂಪರ್ಕದ ಅದರ ಮತ್ತೆಲ್ಲ ವಹಿವಾಟಿನಲ್ಲಿ ಈಗ ಕಾಣಿಸಿಕೊಂಡಿರುವ ಮತ್ತು ಕಾಣಿಸಿಕೊಳ್ಳುತ್ತಿರುವ ಮತಧರ್ಮೀಯವಾದ ಎಲ್ಲ ಸಂದೇಶ, ಒಕ್ಕಣೆ ಹಾಗೂ ಚಿತ್ರಗಳನ್ನು ತಾವು ಈಗಿಂದೀಗ ಹಿಂದಕ್ಕೆ ಪಡೆದು, ಅಳಿಸಿಹಾಕಬೇಕು” ಎಂದು ಸಹಿ ಮಾಡಿರುವ ಎಲ್ಲ ಪ್ರಜ್ಞಾವಂತರು ಆಗ್ರಹಿಸಿದ್ದಾರೆ.

“ರಾಷ್ಟ್ರೀಯ ನಾಟಕ ಶಾಲೆಯ ಸಾಮಾಜಿಕ ಸಂಪರ್ಕದ ಜಾಲತಾಣಗಳಲ್ಲಿ ಕಾಣಿಸಿಕೊಳ್ಳಬೇಕಾದದ್ದು ರಂಗಭೂಮಿ, ಕಲೆ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಸಂದೇಶ ಮತ್ತು ಒಕ್ಕಣೆಗಳು ಮಾತ್ರ. ನಮ್ಮ ಈ ಸಂಸ್ಥೆಯ ಘನತೆ ಗೌರವಗಳನ್ನು, ಇದರ ಉನ್ನತ ಮಾನದಂಡಗಳನ್ನು ಉಳಿಸಿ, ಬೆಳೆಸುವಲ್ಲಿ ಹೆಚ್ಚಿನ ಮುತುವರ್ಜಿ ಕಾಣಿಸಿಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಎನ್‌ಎಸ್‌ಡಿಗೆ ಪತ್ರ ಬರೆದಿರುವವರು (ಪ್ರಾತಿನಿಧಿಕ ಹೆಸರುಗಳು)
ಎನ್‌ಎಸ್‌ಡಿಗೆ ಪತ್ರ ಬರೆದಿರುವವರು (ಪ್ರಾತಿನಿಧಿಕ ಹೆಸರುಗಳು)

ಖ್ಯಾತ ಕವಿ-ನಾಟಕಕಾರ-ರಂಗನಿರ್ದೇಶಕ ರಘುನಂದನ ಅವರು ದೆಹಲಿಯ ರಾಷ್ಟ್ರೀಯ ನಾಟಕಶಾಲೆ (ಎನ್‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍ಎಸ್‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍ಡಿ)ಯಲ್ಲಿ ಓದಿದವರು. ರಂಗಾಯಣ, ನೀನಾಸಮ್, ನೀನಾಸಮ್ ರಂಗಶಿಕ್ಷಣ ಕೇಂದ್ರದಲ್ಲಿ ಹಲವು ದಶಕಗಳಿಂದ ಕೆಲಸಮಾಡುವುದರ ಜೊತೆಗೆ ಅನೇಕ ವರ್ಷಗಳ ಕಾಲ ದೆಹಲಿಯ ಆ ನಾಟಕಶಾಲೆಗೆ ಅತಿಥಿ ಪ್ರಾಧ್ಯಾಪಕ ಹಾಗೂ ರಂಗನಿರ್ದೇಶಕರಾಗಿ ಹೋಗಿಬರುತ್ತಿದ್ದವರು. ಅಲ್ಲಿನ ಶೈಕ್ಷಣಿಕ ಮಂಡಳಿಯ ಸದಸ್ಯರಾಗಿದ್ದವರು.

ಅವರು ‘ನಾನುಗೌರಿ.ಕಾಂ’ನೊಂದಿಗೆ ಮಾತನಾಡಿ, “ಎನ್‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍ಎಸ್‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍ಡಿ ಶುರುವಾದದ್ದು 1957-58ರಲ್ಲಿ. ಈ ಶಾಲೆಗೆ ಬುನಾದಿ ಹಾಕಿ ಕಟ್ಟಿದವರಲ್ಲಿ ಇಬ್ರಾಹಿಂ ಅಲ್ಕಾಜಿ಼ ಮತ್ತು ಬಿ. ವಿ. ಕಾರಂತ ಥರದ ಮಹಾನ್‌ ವ್ಯಕ್ತಿತ್ವಗಳಿವೆ. ನಿತ್ಯವೂ ಅವರನ್ನು ನೆನೆಯಬೇಕು. ನಿಜವಾದ ಅರ್ಥದಲ್ಲಿ ಅಲ್ಕಾಜಿ಼ ಅವರು ದೇಶಪ್ರೇಮಿಯಾಗಿದ್ದರು, ದೇಶ ಕಟ್ಟುವ ಕೆಲಸ ಮಾಡಿದರು. ಪ್ರಧಾನಿ ನೆಹರೂ ಅವರಿಗೆ ಅಲ್ಕಾಜಿ಼ ಅವರ ಮೇಲೆ ಅಪಾರ ನಂಬಿಕೆ ಇತ್ತು. ಎನ್‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍ಎಸ್‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍ಡಿಯಲ್ಲಿನ ತಮ್ಮ ಕೆಲಸದ ಮೂಲಕ ನಮ್ಮ ದೇಶವು ಸೆಕ್ಯೂಲರಿಸಮ್‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍ ಕಡೆಗೆ ಸಾಗುವುದರತ್ತ ತಮ್ಮ ಪಾಲು ನೀಡಿದವರು. ನಂತರದಲ್ಲಿ ಬಂದ ಕಾರಂತರು ಈ ಆಶಯವನ್ನು ಮತ್ತಷ್ಟು ವಿಸ್ತರಿಸಿದರು, ಆಳಗೊಳಿಸಿದರು. ಶಾಲೆಯ ಇತಿಹಾಸದಲ್ಲಿ ಏಳುಬೀಳುಗಳಿದ್ದರೂ ಎಲ್ಲರನ್ನೂ ಒಳಗೊಳ್ಳುವ ಬಂಧುತ್ವವನ್ನು ಕಾಪಾಡಿಕೊಂಡು ಬರುತ್ತಿತ್ತು. ಆದರೆ ಈಗ ಉಲ್ಟಾ ಆಗಿದೆ” ಎಂದು ವಿಷಾದಿಸಿದರು.

ಎನ್‌ಎಸ್‌ಡಿ ಮತೀಯ ವಿಚಾರಗಳಿಗೆ ಎಂದಿಗೂ ತಲೆ ಹಾಕಿರಲಿಲ್ಲ. ಈಗ ಹಾಕುತ್ತಿದೆ. ಈಗ ಆಯಾಕಟ್ಟಿನ ಜಾಗದಲ್ಲಿ ಕುಳಿತಿರುವವರು ಕಲಾವಿದರಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, “ಕಡವಾ ಚೌತ್‌ ಆಚರಣೆಯ ಪೋಸ್ಟ್‌ ಹಾಕಲಾಗಿದೆ. ಅದು ಪತಿ ಪೂಜೆಯನ್ನು ಪ್ರತಿಪಾದಿಸುತ್ತದೆ. ಹೆಂಡತಿ ದಿನಪೂರ್ತಿ ಉಪವಾಸ ಇರಬೇಕು, ಗಂಡನಿಗೆ ಬಾಯಿತುತ್ತು ತಿನಿಸಬೇಕು, ಜರಡಿ ಹಿಡಿದು ಗಂಡನ ಮುಖ ನೋಡಬೇಕು. ಇದು ಉತ್ತರಭಾರತದಲ್ಲಿ ಆಚರಣೆಯಲ್ಲಿದೆ. ಅಷ್ಟೇ ಅಲ್ಲದೆ ಗಂಡಾಳ್ವಿಕೆಯನ್ನು ಪ್ರತಿನಿಧಿಸುವ ಆಚರಣೆ ಕಡವಾ ಚೌತ್‌. ಇದನ್ನು ಆಚರಿಸಿ ಎಂದು ಪ್ರಚಾರ ಮಾಡುವುದು ಸರಿಯೇ? ಹೆಣ್ಣು ಮಕ್ಕಳು ಗಂಡನ ಪಾದ ಪೂಜೆ ಮಾಡಿ ಆತನಿಗೆ ಅಧೀನವಾಗಿ ಇರಬೇಕಾ? ರಾಷ್ಟ್ರೀಯ ನಾಟಕ ಶಾಲೆ ಏನನ್ನು ಹೇಳಲು ಹೊರಟಿದೆ” ಎಂದು ಪ್ರಶ್ನಿಸಿದರು.


ಇದನ್ನೂ ಓದಿರಿ: ಲೆಸ್ಬಿಯನ್ ಜೋಡಿ ‘ಕರ್ವಾ ಚೌತ್‌’ ಆಚರಿಸುವ ಜಾಹೀರಾತು ಹಿಂಪಡೆದ ಡಾಬರ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....