Homeಮುಖಪುಟಹಲವು ದೇಶಗಳಿಗೆ ‘ಪೆಗಾಸಸ್‌‌’ ಅನ್ನು ತಾತ್ಕಾಲಿಕವಾಗಿ ತಡೆಹಿಡಿದ ಎನ್‌ಎಸ್‌‌ಒ!

ಹಲವು ದೇಶಗಳಿಗೆ ‘ಪೆಗಾಸಸ್‌‌’ ಅನ್ನು ತಾತ್ಕಾಲಿಕವಾಗಿ ತಡೆಹಿಡಿದ ಎನ್‌ಎಸ್‌‌ಒ!

- Advertisement -
- Advertisement -

ತನ್ನ ಗೂಡಾಚಾರ ತಂತ್ರಾಂಶವನ್ನು ಬಳಕೆದಾರರು ದುರುಪಯೋಗ ಮಾಡಿರುವುದು ಬಹಿರಂಗವಾದ ಹಿನ್ನಲೆಯಲ್ಲಿ, ಇಸ್ರೇಲಿ ಕಣ್ಗಾವಲು ತಂತ್ರಾಂಶ ಪೆಗಾಸಸ್‌‌‌‌ನ ಮಾತೃ ಕಂಪನಿಯಾದ ‘ಎನ್‌ಎಸ್‌ಒ ಗ್ರೂಪ್’ ತನ್ನ ಹಲವಾರು ಸರ್ಕಾರಿ ಗ್ರಾಹಕರಿಗೆ ತಂತ್ರಾಂಶವನ್ನು ಬಳಸದಂತೆ ತಾತ್ಕಾಲಿಕವಾಗಿ ತಡೆಹಿಡಿದಿದೆ. ಈ ಬಗ್ಗೆ ವಾಶಿಂಗ್ಟನ್‌ ಮೂಲದ ಲಾಭ ರಹಿತ ಮಾಧ್ಯಮ ಸಂಸ್ಥೆ ಗುರುವಾರ ವರದಿ ಮಾಡಿದೆ.

ಪೆಗಾಸಸ್‌‌ ತಯಾರಕರಾದ ಎನ್‌ಎಸ್‌ಒನ ಉದ್ಯೋಗಿಯೊಬ್ಬರು, ತಮ್ಮ ಕಂಪೆನಿಯು ತಂತ್ರಾಂಶದ ದುರ್ಬಳಕೆಯ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಹೇಳಿದ್ದಾಗಿ ಮಾಧ್ಯಮ ವರದಿ ಮಾಡಿದೆ.

“ನಮ್ಮ ಕೆಲವು ಬಳಕೆದಾರರ ಬಗ್ಗೆ ತನಿಖೆ ನಡೆಯುತ್ತಿದೆ. ಆ ಬಳಕೆದಾರರಲ್ಲಿ ಕೆಲವರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ” ಎಂದು ಎನ್‌ಎಸ್‌ಒ ಉದ್ಯೋಗಿ ಹೇಳಿದ್ದಾರೆ. ಆದರೆ ಪೆಗಾಸಸ್ ಅಮಾನತುಗೊಳಿಸಿದ ಸರ್ಕಾರಿ ಏಜೆನ್ಸಿಗಳು ಅಥವಾ ದೇಶಗಳ ಹೆಸರನ್ನು ಅವರು ಬಹಿರಂಗ ಪಡಿಸಲಿಲ್ಲ.

ಇದನ್ನೂ ಓದಿ: ಪೆಗಾಸಸ್ ಬಗ್ಗೆ ತನಿಖೆ ನಡೆಯಲಿ: ಪ್ರಧಾನಿ ಭೇಟಿ ಬಳಿಕ ಮಮತಾ ಬ್ಯಾನರ್ಜಿ ಹೇಳಿಕೆ

ಭಾರತ ಸೇರಿದಂತೆ ಹಲವಾರು ದೇಶಗಳಲ್ಲಿ ಪತ್ರಕರ್ತರು, ಮಾನವ ಹಕ್ಕುಗಳ ಹೋರಾಟಗಾರರು, ರಾಜಕಾರಣಿಗಳು ಮತ್ತು ಇತರರ ಜನರ ಮೇಲೆ ಕಣ್ಣಿಡಲು ಪೆಗಾಸಸ್ ತಂತ್ರಾಂಶವನ್ನು ಬಳಸಲಾಗಿದೆ ಎಂದು ಇತ್ತೀಚೆಗೆ ಬಹಿರಂಗವಾಗಿತ್ತು. ಈ ಆರೋಪವು ಖಾಸಗಿತನಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ.

ಎನ್‌ಎಸ್‌ಒ ಕಂಪನಿಯು ಇಸ್ರೇಲಿ ಅಧಿಕಾರಿಗಳೊಂದಿಗೆ ಸಂಪೂರ್ಣ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ ಎಂದು ಕಂಪೆನಿಯನ್ನು ಪ್ರತಿನಿಧಿಸುತ್ತಿರುವ ಸಂಸ್ಥೆಯೊಂದು ಗುರುವಾರ ಹೇಳಿಕೆಯಲ್ಲಿ ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಎನ್‌ಎಸ್‌ಒ ತಾನು ಪೆಗಾಸಸ್‌‌ ತಂತ್ರಾಂಶವನ್ನು 40 ದೇಶಗಳ 60 ಗ್ರಾಹಕರನ್ನು ಹೊಂದಿದ್ದೇನೆ ಎಂದು ಹೇಳುತ್ತಿದ್ದು, ಅವರೆಲ್ಲರೂ ಗುಪ್ತಚರ ಸಂಸ್ಥೆಗಳು, ಕಾನೂನು ಜಾರಿ ಸಂಸ್ಥೆಗಳು ಮತ್ತು ಮಿಲಿಟರಿಗಳು ಎಂದು ಹೇಳಿದ್ದಾಗಿ ವರದಿಯಾಗಿದೆ.

ಮಾಧ್ಯಮಗಳು ತಂತ್ರಾಶದ ದುರುಪಯೋಗವಾಗುತ್ತಿದೆ ಎಂದು ವರದಿ ಮಾಡುವ ಮೊದಲೇ, ತನ್ನ ಸಾಫ್ಟ್‌ವೇರ್ ಅನ್ನು ದುರುಪಯೋಗ ಮಾಡುತ್ತಿದೆ ಎಂದು ಸಾಕ್ಷಿ ಸಮೇತವಾಗಿ ಕಂಡುಕೊಂಡ ಕಾರಣ ಕಳೆದ ವರ್ಷದಲ್ಲಿ ಎರಡು ಸರ್ಕಾರಿ ಸಂಸ್ಥೆಗಳನ್ನು ಕಂಪೆನಿಯು ನಿರ್ಬಂಧಿಸಿತ್ತು.

ಇದನ್ನೂ ಓದಿ: ಪೆಗಾಸಸ್ ಗೂಢಚರ್ಯೆ ಸಮಸ್ಯೆಯಲ್ಲ: ವಿವಾದಿತ ಹೇಳಿಕೆ ನೀಡಿದ ಕೇಂದ್ರ ಸಚಿವ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...