Homeಮುಖಪುಟ5 ಕೆಜಿ ಅಕ್ಕಿ ಬದಲು ಫಲಾನುಭವಿಗಳ ಖಾತೆಗೆ ಹಣ ನೀಡುತ್ತೇವೆ: ಸಚಿವ ಮುನಿಯಪ್ಪ ಘೋಷಣೆ

5 ಕೆಜಿ ಅಕ್ಕಿ ಬದಲು ಫಲಾನುಭವಿಗಳ ಖಾತೆಗೆ ಹಣ ನೀಡುತ್ತೇವೆ: ಸಚಿವ ಮುನಿಯಪ್ಪ ಘೋಷಣೆ

5 ಅಕ್ಕಿ ಕೊಡುವುದರ ಜೊತೆಗೆ ಹೆಚ್ಚುವರಿ 5ಕೆಜಿಗೆ ಪ್ರತಿ ಕೆಜಿ ಅಕ್ಕಿಗೆ 34 ರೂಗಳಂತೆ ಪ್ರತಿ ವ್ಯಕ್ತಿಗೆ 170 ರೂ ಕೊಡಲಾಗುವುದು.

- Advertisement -
- Advertisement -

ಅನ್ನಭಾಗ್ಯ ಅಕ್ಕಿ ನೀಡಲು ಅಕ್ಕಿ ಕೊರತೆಯಾದ ಕಾರಣ 5 ಕೆಜಿ ಅಕ್ಕಿ ನೀಡುವುದರ ಜೊತೆಗೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಅದಕ್ಕೆ ತಗುಲುವ ಹಣವನ್ನು ಫಲಾನುಭವಿಗಳಿಗೆ ನೀಡುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ.

ಇಂದು ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ಪ್ರತಿ ಕೆಜಿ ಅಕ್ಕಿಗೆ 34 ರೂಗಳಂತೆ ಪ್ರತಿ ವ್ಯಕ್ತಿಗೆ 170 ರೂ ಕೊಡಲಾಗುವುದು. ಹಣವನ್ನು ಬಿಪಿಎಲ್ ಕಾರ್ಡಿನಲ್ಲಿ ಮನೆಯ ಮುಖ್ಯಸ್ಥ ಎಂದು ನಮೂದಿಸಿದವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸದ್ಯಕ್ಕೆ 5ಕೆಜಿ ಅಕ್ಕಿ ನೀಡಲಾಗುತ್ತದೆ ಮತ್ತು ಉಳಿದುದ್ದಕ್ಕೆ ಹಣ ನೀಡಲಾಗುತ್ತದೆ. ಬಿಪಿಎಲ್ ಕಾರ್ಡಿನಲ್ಲಿ ಎಷ್ಟು ಜನರಿರುತ್ತಾರೊ ಅವರಿಗೆಲ್ಲ ಪ್ರತಿಯೊಬ್ಬರಿಗೂ 170 ರೂ ನೀಡಲಾಗುತ್ತದೆ. ಅಕ್ಕಿ ಸಿಗುವ ತನಕವೂ ಇದು ಮುಂದುವರೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಬಿಪಿಎಲ್ ಕಾರ್ಡುದಾರರಿಗೆ 10ಕೆಜಿ ಅಕ್ಕಿ ಕೊಡುತ್ತೇವೆ ಎಂದು ನಾವು ಮಾತು ಕೊಟ್ಟಿದ್ದೇವೆ. ಈ ಕುರಿತು ಕೇಂದ್ರದ ಬಳಿ ದುಡ್ಡು ಕೊಡುತ್ತೇವೆ ಅಕ್ಕಿ ಕೊಡಿ, ನಿಮ್ಮಲ್ಲಿ ದಾಸ್ತಾನಿಗೆ ಎಂದು ಕೇಳಿಕೊಂಡೆವು. ಆದರೆ ಕೇಂದ್ರ ಸರ್ಕಾರ ಅಕ್ಕಿ ಕೊಡದೇ ರಾಜಕೀಯ ಮಾಡುತ್ತಿದೆ ಎಂದು ಇದೇ ಸಂದರ್ಭದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್ ಮಾತನಾಡಿ, ರಾಜ್ಯದ ಶೇ.95% ಜನರ ಬಿಪಿಲ್ ಕಾರ್ಡ್‌ಗೆ ಅವರ ಬ್ಯಾಂಕ್ ಅಕೌಂಟ್ ಲಿಂಕ್ ಆಗಿದೆ. ಹಾಗಾಗಿ ಜುಲೈ 1ರಿಂದಲೇ ಅನ್ನಭಾಗ್ಯ ಯೋಜನೆ ಜಾರಿಗೆ ಬರಲಿದೆ ಎಂದು ಅವರು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರು ಮಾತನಾಡಿ, ನಮ್ಮ ಯೋಜನೆಗೆ ಅಕ್ಕಿ ಕೊಡುವುದಾಗಿ ಎಫ್‌ಸಿಐ ಒಪ್ಪಿಕೊಂಡು ಪತ್ರ ಕೊಟ್ಟಿತ್ತು. ಆದರೆ ಕೇಂದ್ರ ಸರ್ಕಾರದ ದ್ವೇಷ ರಾಜಕಾರಣಕ್ಕೆ ಸಿಲುಕಿ ಅಕ್ಕಿ ಕೊಡುತ್ತಿಲ್ಲ. ಹಾಗಾಗಿ ನಾವು ಕೊಟ್ಟ ಮಾತಿನಂತೆ ಜುಲೈ ತಿಂಗಳಿನಿಂದಲೇ ಅನ್ನಭಾಗ್ಯ ಯೋಜನೆ ಜಾರಿಗೊಳಿಸುತ್ತಿದ್ದೇವೆ. ಅಕ್ಕಿ ದಾಸ್ತಾನು ಅಗುವವರೆಗೂ ಹೆಚ್ಚುವರಿ ಅಕ್ಕಿಯ ಬದಲಿಗೆ ಹಣ ನೀಡುವ ಯೋಜನೆ ಮುಂದುವರೆಯುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಮೇಲೆ ಅವ್ಯವ್ಯಹಾರಗಳ ಆರೋಪ: ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...