Homeಮುಖಪುಟ5 ಕೆಜಿ ಅಕ್ಕಿ ಬದಲು ಫಲಾನುಭವಿಗಳ ಖಾತೆಗೆ ಹಣ ನೀಡುತ್ತೇವೆ: ಸಚಿವ ಮುನಿಯಪ್ಪ ಘೋಷಣೆ

5 ಕೆಜಿ ಅಕ್ಕಿ ಬದಲು ಫಲಾನುಭವಿಗಳ ಖಾತೆಗೆ ಹಣ ನೀಡುತ್ತೇವೆ: ಸಚಿವ ಮುನಿಯಪ್ಪ ಘೋಷಣೆ

5 ಅಕ್ಕಿ ಕೊಡುವುದರ ಜೊತೆಗೆ ಹೆಚ್ಚುವರಿ 5ಕೆಜಿಗೆ ಪ್ರತಿ ಕೆಜಿ ಅಕ್ಕಿಗೆ 34 ರೂಗಳಂತೆ ಪ್ರತಿ ವ್ಯಕ್ತಿಗೆ 170 ರೂ ಕೊಡಲಾಗುವುದು.

- Advertisement -
- Advertisement -

ಅನ್ನಭಾಗ್ಯ ಅಕ್ಕಿ ನೀಡಲು ಅಕ್ಕಿ ಕೊರತೆಯಾದ ಕಾರಣ 5 ಕೆಜಿ ಅಕ್ಕಿ ನೀಡುವುದರ ಜೊತೆಗೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಅದಕ್ಕೆ ತಗುಲುವ ಹಣವನ್ನು ಫಲಾನುಭವಿಗಳಿಗೆ ನೀಡುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ.

ಇಂದು ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ಪ್ರತಿ ಕೆಜಿ ಅಕ್ಕಿಗೆ 34 ರೂಗಳಂತೆ ಪ್ರತಿ ವ್ಯಕ್ತಿಗೆ 170 ರೂ ಕೊಡಲಾಗುವುದು. ಹಣವನ್ನು ಬಿಪಿಎಲ್ ಕಾರ್ಡಿನಲ್ಲಿ ಮನೆಯ ಮುಖ್ಯಸ್ಥ ಎಂದು ನಮೂದಿಸಿದವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸದ್ಯಕ್ಕೆ 5ಕೆಜಿ ಅಕ್ಕಿ ನೀಡಲಾಗುತ್ತದೆ ಮತ್ತು ಉಳಿದುದ್ದಕ್ಕೆ ಹಣ ನೀಡಲಾಗುತ್ತದೆ. ಬಿಪಿಎಲ್ ಕಾರ್ಡಿನಲ್ಲಿ ಎಷ್ಟು ಜನರಿರುತ್ತಾರೊ ಅವರಿಗೆಲ್ಲ ಪ್ರತಿಯೊಬ್ಬರಿಗೂ 170 ರೂ ನೀಡಲಾಗುತ್ತದೆ. ಅಕ್ಕಿ ಸಿಗುವ ತನಕವೂ ಇದು ಮುಂದುವರೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಬಿಪಿಎಲ್ ಕಾರ್ಡುದಾರರಿಗೆ 10ಕೆಜಿ ಅಕ್ಕಿ ಕೊಡುತ್ತೇವೆ ಎಂದು ನಾವು ಮಾತು ಕೊಟ್ಟಿದ್ದೇವೆ. ಈ ಕುರಿತು ಕೇಂದ್ರದ ಬಳಿ ದುಡ್ಡು ಕೊಡುತ್ತೇವೆ ಅಕ್ಕಿ ಕೊಡಿ, ನಿಮ್ಮಲ್ಲಿ ದಾಸ್ತಾನಿಗೆ ಎಂದು ಕೇಳಿಕೊಂಡೆವು. ಆದರೆ ಕೇಂದ್ರ ಸರ್ಕಾರ ಅಕ್ಕಿ ಕೊಡದೇ ರಾಜಕೀಯ ಮಾಡುತ್ತಿದೆ ಎಂದು ಇದೇ ಸಂದರ್ಭದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್ ಮಾತನಾಡಿ, ರಾಜ್ಯದ ಶೇ.95% ಜನರ ಬಿಪಿಲ್ ಕಾರ್ಡ್‌ಗೆ ಅವರ ಬ್ಯಾಂಕ್ ಅಕೌಂಟ್ ಲಿಂಕ್ ಆಗಿದೆ. ಹಾಗಾಗಿ ಜುಲೈ 1ರಿಂದಲೇ ಅನ್ನಭಾಗ್ಯ ಯೋಜನೆ ಜಾರಿಗೆ ಬರಲಿದೆ ಎಂದು ಅವರು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರು ಮಾತನಾಡಿ, ನಮ್ಮ ಯೋಜನೆಗೆ ಅಕ್ಕಿ ಕೊಡುವುದಾಗಿ ಎಫ್‌ಸಿಐ ಒಪ್ಪಿಕೊಂಡು ಪತ್ರ ಕೊಟ್ಟಿತ್ತು. ಆದರೆ ಕೇಂದ್ರ ಸರ್ಕಾರದ ದ್ವೇಷ ರಾಜಕಾರಣಕ್ಕೆ ಸಿಲುಕಿ ಅಕ್ಕಿ ಕೊಡುತ್ತಿಲ್ಲ. ಹಾಗಾಗಿ ನಾವು ಕೊಟ್ಟ ಮಾತಿನಂತೆ ಜುಲೈ ತಿಂಗಳಿನಿಂದಲೇ ಅನ್ನಭಾಗ್ಯ ಯೋಜನೆ ಜಾರಿಗೊಳಿಸುತ್ತಿದ್ದೇವೆ. ಅಕ್ಕಿ ದಾಸ್ತಾನು ಅಗುವವರೆಗೂ ಹೆಚ್ಚುವರಿ ಅಕ್ಕಿಯ ಬದಲಿಗೆ ಹಣ ನೀಡುವ ಯೋಜನೆ ಮುಂದುವರೆಯುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಮೇಲೆ ಅವ್ಯವ್ಯಹಾರಗಳ ಆರೋಪ: ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...