Homeಚಳವಳಿಎನ್‌ಟಿಎ ವಿರುದ್ಧ ಘೋಷಣೆ ಬರೆದ ಆರೋಪ | ವಿದ್ಯಾರ್ಥಿಯನ್ನು 6 ತಿಂಗಳು ಉಚ್ಛಾಟಿಸಿದ ದೆಹಲಿ ವಿಶ್ವವಿದ್ಯಾಲಯ

ಎನ್‌ಟಿಎ ವಿರುದ್ಧ ಘೋಷಣೆ ಬರೆದ ಆರೋಪ | ವಿದ್ಯಾರ್ಥಿಯನ್ನು 6 ತಿಂಗಳು ಉಚ್ಛಾಟಿಸಿದ ದೆಹಲಿ ವಿಶ್ವವಿದ್ಯಾಲಯ

- Advertisement -
- Advertisement -

ಜುಲೈನಲ್ಲಿ ನಡೆದ ಪ್ರತಿಭಟನೆಯ ಭಾಗವಾಗಿ ದೆಹಲಿ ವಿಶ್ವವಿದ್ಯಾಲಯದ ಉತ್ತರ ಕ್ಯಾಂಪಸ್‌ನ ಗೋಡೆಯ ಮೇಲೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(NTA)ಯ ಬಗ್ಗೆ “ಆಕ್ಷೇಪಾರ್ಹ” ಘೋಷಣೆಗಳನ್ನು ಬರೆದ ಆರೋಪದ ಮೇಲೆ ವಿದ್ಯಾರ್ಥಿಯೊಬ್ಬರನ್ನು ವಿಶ್ವವಿದ್ಯಾಲಯ ಆರು ತಿಂಗಳ ಕಾಲ ಹೊರಹಾಕಿದೆ ಎಂದು ಸೋಮವಾರ ವರದಿಯಾಗಿದೆ. ವಿದ್ಯಾರ್ಥಿಯನ್ನು 6 ತಿಂಗಳು

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪರೀಕ್ಷೆಗಳನ್ನು ನಡೆಸುತ್ತದೆ. ಈ ಸಂಸ್ಥೆಯು, ಸ್ನಾತಕಪೂರ್ವ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ನಡೆಸಿದ 2024ರ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ಸೇರಿದಂತೆ ಹಲವಾರು ಪರೀಕ್ಷೆಗಳಲ್ಲಿ ಅಕ್ರಮ ನಡೆಸಿದೆ ಎಂದು ಆರೋಪಿಸಿ ದೇಶದಾದ್ಯಂತ ಭಾರಿ ಪ್ರತಿಭಟನೆ ನಡೆದಿತ್ತು. ವಿದ್ಯಾರ್ಥಿಯನ್ನು 6 ತಿಂಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಶ್ವವಿದ್ಯಾಲಯ ಸೋಮವಾರ ಹೊರಡಿಸಿದ ಆದೇಶದಲ್ಲಿ, ಉಚ್ಚಾಟನೆಗೆ ಒಳಗಾಗಿರುವ 22 ವರ್ಷದ ವಿದ್ಯಾರ್ಥಿಯು ತರಗತಿಗಳಿಗೆ ಹಾಜರಾಗುವುದು, ಪರೀಕ್ಷೆಗಳನ್ನು ಬರೆಯುವುದು ಅಥವಾ ಸಾಂಸ್ಥಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಆರು ತಿಂಗಳವರೆಗೆ ನಿರ್ಬಂಧಿಸಿದೆ.

ಸ್ಲಾವೊನಿಕ್ ಮತ್ತು ಫಿನ್ನೊ-ಉಗ್ರಿಯನ್ ಅಧ್ಯಯನ ವಿಭಾಗದಲ್ಲಿ ರಷ್ಯನ್ ಭಾಷೆಯಲ್ಲಿ ತನ್ನ ಸ್ನಾತಕೋತ್ತರ ಪದವಿ ಪಡೆಯುತ್ತಿರುವ ವಿದ್ಯಾರ್ಥಿ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ತನ್ನನ್ನು ಉಚ್ಚಾಟನೆ ಮಾಡಿರುವ ವಿಶ್ವವಿದ್ಯಾಲಯದ ನಿರ್ಧಾರವು ವಾಕ್ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ.

ದಿಶಾ ವಿದ್ಯಾರ್ಥಿಗಳ ಸಂಘಟನೆಯ ಕಾರ್ಯಕರ್ತರಾಗಿರುವ ವಿದ್ಯಾರ್ಥಿಯು ಕಾನೂನು ಫ್ಯಾಕಲ್ಟಿ ಬಳಿ ಗೋಡೆಯ ಮೇಲೆ ಘೋಷಣೆಗಳನ್ನು ಬರೆಯುತ್ತಿದ್ದಾಗ ವಿಶ್ವವಿದ್ಯಾಲಯದ ಭದ್ರತಾ ಸಿಬ್ಬಂದಿಗೆ ಜುಲೈ 31 ರಂದು ಸಿಕ್ಕಿಬಿದ್ದರು. “ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ ವಿರುದ್ಧದ ನಮ್ಮ ಆಂದೋಲನದ ಭಾಗವಾಗಿ, ನಾನು ವಿಶ್ವವಿದ್ಯಾಲಯದ ಗೋಡೆಯೊಂದರಲ್ಲಿ ‘SCRAP NTA’ ಎಂಬ ಪದಗಳನ್ನು ಬರೆದಿದ್ದೇನೆ” ಎಂದು ವಿದ್ಯಾರ್ಥಿ ಹೇಳಿದ್ದಾರೆ.

ವಿದ್ಯಾರ್ಥಿಯ ಸಿಕ್ಕಿಬಿದ್ದ ಅದೇ ದಿನ, ಕಾವಲುಗಾರರ ದೂರಿನ ಆಧಾರದ ಮೇಲೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 173 ರ ಅಡಿಯಲ್ಲಿ ಮಾರಿಸ್ ನಗರ ಪೊಲೀಸ್ ಠಾಣೆಯಲ್ಲಿ ಈ ವಿದ್ಯಾರ್ಥಿಯ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ಸೆಕ್ಷನ್ 173 ಕಾಗ್ನೈಸಬಲ್ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣವಾಗಿದ್ದು, ಈ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾದರೆ ಪೊಲೀಸರು ಮ್ಯಾಜಿಸ್ಟ್ರೇಟ್‌ನಿಂದ ಆದೇಶವಿಲ್ಲದೆ ತನಿಖೆ ಮಾಡಬಹುದು ಮತ್ತು ವಾರಂಟ್ ಇಲ್ಲದೆ ಬಂಧಿಸಬಹುದಾಗಿದೆ.

ಎಫ್‌ಐಆರ್‌ನ ಪ್ರತಿಯನ್ನು ಸ್ವೀಕರಿಸಿದ ನಂತರ ವಿಶ್ವವಿದ್ಯಾಲಯವು ಆಗಸ್ಟ್ 21 ರಂದು ಅವರನ್ನು ಅಮಾನತುಗೊಳಿಸಿತ್ತು. ವಿದ್ಯಾರ್ಥಿಯ ಮೇಲೆ ಎಫ್‌ಐಆರ್ ದಾಖಲಾದ ನಂತರ ತನಿಖೆ ನಡೆಸಲು ತನಿಖಾ ಸಮಿತಿಯನ್ನು ರಚಿಸಲಾಗಿತ್ತು ಎಂದು ಪ್ರೊಕ್ಟರ್ ರಜನಿ ಅಬ್ಬಿ ಮಂಗಳವಾರ ಹೇಳಿದ್ದಾರೆ. ಆದರೆ, ವಿದ್ಯಾರ್ಥಿಯು ತನ್ನ ಕಾರ್ಯಗಳಿಗಾಗಿ ಪಶ್ಚಾತ್ತಾಪ ವ್ಯಕ್ತಪಡಿಸಿರಲಿಲ್ಲ ಎಂದು ಈ ಸಮಿತಿಯು ಹೇಳಿದೆ.

“ವಿಶ್ವವಿದ್ಯಾನಿಲಯದಲ್ಲಿ ಘೋಷಣೆಗಳನ್ನು ಬರೆಯಲು ಅಥವಾ ಪೋಸ್ಟರ್‌ಗಳನ್ನು ಅಂಟಿಸಲು ಗೊತ್ತುಪಡಿಸಿದ ಸ್ಥಳಗಳಿವೆ. ಘೋಷಣೆಗಳನ್ನು ಬರೆಯಲು ಅಥವಾ ಪೋಸ್ಟರ್‌ಗಳನ್ನು ಅಂಟಿಸಲು ಎಲ್ಲೆಂದರಲ್ಲಿ ಮಾಡಬಾರದು. ಅವರು ಮಾಡಿರುವ ಕೃತ್ಯವು ವಿಶ್ವವಿದ್ಯಾನಿಲಯದ ವಿರೂಪಗೊಳಿಸುವ ಕಾಯಿದೆಗಳ ಉಲ್ಲಂಘನೆಯಾಗಿದೆ” ಎಂದು ತನಿಖಾ ಸಮಿತಿ ಹೇಳಿದೆ.

ನವೆಂಬರ್ 6 ರಂದು ನಡೆದ ಸಮಿತಿಯ ಸಭೆಯಲ್ಲಿ ವಿದ್ಯಾರ್ಥಿಯು ಘೋಷಣೆಗಳನ್ನು ಬರೆಯುವುದನ್ನು ಒಪ್ಪಿಕೊಂಡಿದ್ದು, ತಮ್ಮ ದಿಶಾ ಸಂಘಟನೆಯ “ಕಾರ್ಯತಂತ್ರದ ಯೋಜನೆ” ಭಾಗವಾಗಿ ಇದನ್ನು ಮಾಡಲಾಗಿತ್ತು ಎಂದು ಸಮಿತಿಯು ಸಿದ್ಧಪಡಿಸಿದ ವರದಿ ಹೇಳಿದೆ. “ಇದರ ಪರಿಣಾಮವಾಗಿ, ಕನಿಷ್ಠ ಆರು ತಿಂಗಳ ಅವಧಿಗೆ ಅವರನ್ನು ವಿಶ್ವವಿದ್ಯಾನಿಲಯದಿಂದ ಹೊರಹಾಕಬೇಕು ಎಂದು ಸಮಿತಿಯು ಅಭಿಪ್ರಾಯಪಟ್ಟಿದೆ” ಎಂದು ಅದು ಹೇಳಿದೆ.

ಇದನ್ನೂ ಓದಿ: FACT CHECK : ಮುಂಬೈ ಸಿದ್ದಿ ವಿನಾಯಕ ದೇವಸ್ಥಾನದ ಜಾಗ ತನ್ನದೆಂದ ವಕ್ಫ್‌ ಬೋರ್ಡ್..ವೈರಲ್ ಸುದ್ದಿಯ ಅಸಲಿಯತ್ತೇನು?

FACT CHECK : ಮುಂಬೈ ಸಿದ್ದಿ ವಿನಾಯಕ ದೇವಸ್ಥಾನದ ಜಾಗ ತನ್ನದೆಂದ ವಕ್ಫ್‌ ಬೋರ್ಡ್..ವೈರಲ್ ಸುದ್ದಿಯ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...