Homeಚಳವಳಿಎನ್‌ಟಿಎ ವಿರುದ್ಧ ಘೋಷಣೆ ಬರೆದ ಆರೋಪ | ವಿದ್ಯಾರ್ಥಿಯನ್ನು 6 ತಿಂಗಳು ಉಚ್ಛಾಟಿಸಿದ ದೆಹಲಿ ವಿಶ್ವವಿದ್ಯಾಲಯ

ಎನ್‌ಟಿಎ ವಿರುದ್ಧ ಘೋಷಣೆ ಬರೆದ ಆರೋಪ | ವಿದ್ಯಾರ್ಥಿಯನ್ನು 6 ತಿಂಗಳು ಉಚ್ಛಾಟಿಸಿದ ದೆಹಲಿ ವಿಶ್ವವಿದ್ಯಾಲಯ

- Advertisement -
- Advertisement -

ಜುಲೈನಲ್ಲಿ ನಡೆದ ಪ್ರತಿಭಟನೆಯ ಭಾಗವಾಗಿ ದೆಹಲಿ ವಿಶ್ವವಿದ್ಯಾಲಯದ ಉತ್ತರ ಕ್ಯಾಂಪಸ್‌ನ ಗೋಡೆಯ ಮೇಲೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(NTA)ಯ ಬಗ್ಗೆ “ಆಕ್ಷೇಪಾರ್ಹ” ಘೋಷಣೆಗಳನ್ನು ಬರೆದ ಆರೋಪದ ಮೇಲೆ ವಿದ್ಯಾರ್ಥಿಯೊಬ್ಬರನ್ನು ವಿಶ್ವವಿದ್ಯಾಲಯ ಆರು ತಿಂಗಳ ಕಾಲ ಹೊರಹಾಕಿದೆ ಎಂದು ಸೋಮವಾರ ವರದಿಯಾಗಿದೆ. ವಿದ್ಯಾರ್ಥಿಯನ್ನು 6 ತಿಂಗಳು

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪರೀಕ್ಷೆಗಳನ್ನು ನಡೆಸುತ್ತದೆ. ಈ ಸಂಸ್ಥೆಯು, ಸ್ನಾತಕಪೂರ್ವ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ನಡೆಸಿದ 2024ರ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ಸೇರಿದಂತೆ ಹಲವಾರು ಪರೀಕ್ಷೆಗಳಲ್ಲಿ ಅಕ್ರಮ ನಡೆಸಿದೆ ಎಂದು ಆರೋಪಿಸಿ ದೇಶದಾದ್ಯಂತ ಭಾರಿ ಪ್ರತಿಭಟನೆ ನಡೆದಿತ್ತು. ವಿದ್ಯಾರ್ಥಿಯನ್ನು 6 ತಿಂಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಶ್ವವಿದ್ಯಾಲಯ ಸೋಮವಾರ ಹೊರಡಿಸಿದ ಆದೇಶದಲ್ಲಿ, ಉಚ್ಚಾಟನೆಗೆ ಒಳಗಾಗಿರುವ 22 ವರ್ಷದ ವಿದ್ಯಾರ್ಥಿಯು ತರಗತಿಗಳಿಗೆ ಹಾಜರಾಗುವುದು, ಪರೀಕ್ಷೆಗಳನ್ನು ಬರೆಯುವುದು ಅಥವಾ ಸಾಂಸ್ಥಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಆರು ತಿಂಗಳವರೆಗೆ ನಿರ್ಬಂಧಿಸಿದೆ.

ಸ್ಲಾವೊನಿಕ್ ಮತ್ತು ಫಿನ್ನೊ-ಉಗ್ರಿಯನ್ ಅಧ್ಯಯನ ವಿಭಾಗದಲ್ಲಿ ರಷ್ಯನ್ ಭಾಷೆಯಲ್ಲಿ ತನ್ನ ಸ್ನಾತಕೋತ್ತರ ಪದವಿ ಪಡೆಯುತ್ತಿರುವ ವಿದ್ಯಾರ್ಥಿ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ತನ್ನನ್ನು ಉಚ್ಚಾಟನೆ ಮಾಡಿರುವ ವಿಶ್ವವಿದ್ಯಾಲಯದ ನಿರ್ಧಾರವು ವಾಕ್ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ.

ದಿಶಾ ವಿದ್ಯಾರ್ಥಿಗಳ ಸಂಘಟನೆಯ ಕಾರ್ಯಕರ್ತರಾಗಿರುವ ವಿದ್ಯಾರ್ಥಿಯು ಕಾನೂನು ಫ್ಯಾಕಲ್ಟಿ ಬಳಿ ಗೋಡೆಯ ಮೇಲೆ ಘೋಷಣೆಗಳನ್ನು ಬರೆಯುತ್ತಿದ್ದಾಗ ವಿಶ್ವವಿದ್ಯಾಲಯದ ಭದ್ರತಾ ಸಿಬ್ಬಂದಿಗೆ ಜುಲೈ 31 ರಂದು ಸಿಕ್ಕಿಬಿದ್ದರು. “ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ ವಿರುದ್ಧದ ನಮ್ಮ ಆಂದೋಲನದ ಭಾಗವಾಗಿ, ನಾನು ವಿಶ್ವವಿದ್ಯಾಲಯದ ಗೋಡೆಯೊಂದರಲ್ಲಿ ‘SCRAP NTA’ ಎಂಬ ಪದಗಳನ್ನು ಬರೆದಿದ್ದೇನೆ” ಎಂದು ವಿದ್ಯಾರ್ಥಿ ಹೇಳಿದ್ದಾರೆ.

ವಿದ್ಯಾರ್ಥಿಯ ಸಿಕ್ಕಿಬಿದ್ದ ಅದೇ ದಿನ, ಕಾವಲುಗಾರರ ದೂರಿನ ಆಧಾರದ ಮೇಲೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 173 ರ ಅಡಿಯಲ್ಲಿ ಮಾರಿಸ್ ನಗರ ಪೊಲೀಸ್ ಠಾಣೆಯಲ್ಲಿ ಈ ವಿದ್ಯಾರ್ಥಿಯ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ಸೆಕ್ಷನ್ 173 ಕಾಗ್ನೈಸಬಲ್ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣವಾಗಿದ್ದು, ಈ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾದರೆ ಪೊಲೀಸರು ಮ್ಯಾಜಿಸ್ಟ್ರೇಟ್‌ನಿಂದ ಆದೇಶವಿಲ್ಲದೆ ತನಿಖೆ ಮಾಡಬಹುದು ಮತ್ತು ವಾರಂಟ್ ಇಲ್ಲದೆ ಬಂಧಿಸಬಹುದಾಗಿದೆ.

ಎಫ್‌ಐಆರ್‌ನ ಪ್ರತಿಯನ್ನು ಸ್ವೀಕರಿಸಿದ ನಂತರ ವಿಶ್ವವಿದ್ಯಾಲಯವು ಆಗಸ್ಟ್ 21 ರಂದು ಅವರನ್ನು ಅಮಾನತುಗೊಳಿಸಿತ್ತು. ವಿದ್ಯಾರ್ಥಿಯ ಮೇಲೆ ಎಫ್‌ಐಆರ್ ದಾಖಲಾದ ನಂತರ ತನಿಖೆ ನಡೆಸಲು ತನಿಖಾ ಸಮಿತಿಯನ್ನು ರಚಿಸಲಾಗಿತ್ತು ಎಂದು ಪ್ರೊಕ್ಟರ್ ರಜನಿ ಅಬ್ಬಿ ಮಂಗಳವಾರ ಹೇಳಿದ್ದಾರೆ. ಆದರೆ, ವಿದ್ಯಾರ್ಥಿಯು ತನ್ನ ಕಾರ್ಯಗಳಿಗಾಗಿ ಪಶ್ಚಾತ್ತಾಪ ವ್ಯಕ್ತಪಡಿಸಿರಲಿಲ್ಲ ಎಂದು ಈ ಸಮಿತಿಯು ಹೇಳಿದೆ.

“ವಿಶ್ವವಿದ್ಯಾನಿಲಯದಲ್ಲಿ ಘೋಷಣೆಗಳನ್ನು ಬರೆಯಲು ಅಥವಾ ಪೋಸ್ಟರ್‌ಗಳನ್ನು ಅಂಟಿಸಲು ಗೊತ್ತುಪಡಿಸಿದ ಸ್ಥಳಗಳಿವೆ. ಘೋಷಣೆಗಳನ್ನು ಬರೆಯಲು ಅಥವಾ ಪೋಸ್ಟರ್‌ಗಳನ್ನು ಅಂಟಿಸಲು ಎಲ್ಲೆಂದರಲ್ಲಿ ಮಾಡಬಾರದು. ಅವರು ಮಾಡಿರುವ ಕೃತ್ಯವು ವಿಶ್ವವಿದ್ಯಾನಿಲಯದ ವಿರೂಪಗೊಳಿಸುವ ಕಾಯಿದೆಗಳ ಉಲ್ಲಂಘನೆಯಾಗಿದೆ” ಎಂದು ತನಿಖಾ ಸಮಿತಿ ಹೇಳಿದೆ.

ನವೆಂಬರ್ 6 ರಂದು ನಡೆದ ಸಮಿತಿಯ ಸಭೆಯಲ್ಲಿ ವಿದ್ಯಾರ್ಥಿಯು ಘೋಷಣೆಗಳನ್ನು ಬರೆಯುವುದನ್ನು ಒಪ್ಪಿಕೊಂಡಿದ್ದು, ತಮ್ಮ ದಿಶಾ ಸಂಘಟನೆಯ “ಕಾರ್ಯತಂತ್ರದ ಯೋಜನೆ” ಭಾಗವಾಗಿ ಇದನ್ನು ಮಾಡಲಾಗಿತ್ತು ಎಂದು ಸಮಿತಿಯು ಸಿದ್ಧಪಡಿಸಿದ ವರದಿ ಹೇಳಿದೆ. “ಇದರ ಪರಿಣಾಮವಾಗಿ, ಕನಿಷ್ಠ ಆರು ತಿಂಗಳ ಅವಧಿಗೆ ಅವರನ್ನು ವಿಶ್ವವಿದ್ಯಾನಿಲಯದಿಂದ ಹೊರಹಾಕಬೇಕು ಎಂದು ಸಮಿತಿಯು ಅಭಿಪ್ರಾಯಪಟ್ಟಿದೆ” ಎಂದು ಅದು ಹೇಳಿದೆ.

ಇದನ್ನೂ ಓದಿ: FACT CHECK : ಮುಂಬೈ ಸಿದ್ದಿ ವಿನಾಯಕ ದೇವಸ್ಥಾನದ ಜಾಗ ತನ್ನದೆಂದ ವಕ್ಫ್‌ ಬೋರ್ಡ್..ವೈರಲ್ ಸುದ್ದಿಯ ಅಸಲಿಯತ್ತೇನು?

FACT CHECK : ಮುಂಬೈ ಸಿದ್ದಿ ವಿನಾಯಕ ದೇವಸ್ಥಾನದ ಜಾಗ ತನ್ನದೆಂದ ವಕ್ಫ್‌ ಬೋರ್ಡ್..ವೈರಲ್ ಸುದ್ದಿಯ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...