Homeಮುಖಪುಟವ್ಯಕ್ತಿಯೊಬ್ಬರಿಗೆ ಥಳಿಸಿದ ನುಹ್ ಹಿಂಸಾಚಾರ ಆರೋಪಿ ಬಿಟ್ಟು ಭಜರಂಗಿ: ಮೂಕ ಪ್ರೇಕ್ಷಕನಾಗಿ ನಿಂತ ಪೊಲೀಸ್ ಸಿಬ್ಬಂದಿ!

ವ್ಯಕ್ತಿಯೊಬ್ಬರಿಗೆ ಥಳಿಸಿದ ನುಹ್ ಹಿಂಸಾಚಾರ ಆರೋಪಿ ಬಿಟ್ಟು ಭಜರಂಗಿ: ಮೂಕ ಪ್ರೇಕ್ಷಕನಾಗಿ ನಿಂತ ಪೊಲೀಸ್ ಸಿಬ್ಬಂದಿ!

- Advertisement -
- Advertisement -

ಕಳೆದ ವರ್ಷ ಹರಿಯಾಣದ ನುಹ್‌ನಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಬಂಧಿತನಾಗಿ ಜಾಮೀನಿನ ಮೇಲೆ ಹೊರಗಿರುವ ಬಿಟ್ಟು ಭಜರಂಗಿ, ವ್ಯಕ್ತಿಯೊಬ್ಬರಿಗೆ ಅಮಾನವೀಯ ಥಳಿಸಿರುವ ವಿಡಿಯೋ ವೈರಲ್ ಆಗಿದೆ.

ಬಿಟ್ಟು ಭಜರಂಗಿಯ ದುಷ್ಕೃತ್ಯಕ್ಕೆ ಆತನ ಸ್ವಯಂ ಘೋಷಿತ ಗೋರಕ್ಷಕ ಗುಂಪಿನ ಇತರ ಸದಸ್ಯರು ಸಾಥ್ ನೀಡಿದ್ದಾರೆ. ರಸ್ತೆಯಲ್ಲೇ ಹಲ್ಲೆ ನಡೆಯುತ್ತಿದ್ಧರೂ ಪೊಲೀಸ್ ಸಿಬ್ಬಂದಿಯೊಬ್ಬರು ಮೂಕ ಪ್ರೇಕ್ಷರಾಗಿ ನಿಂತು ನೋಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಪೊಲೀಸರು ಪ್ರಕರಣ ದಾಖಲಿಸಿಲ್ಲ ಎಂದು ವರದಿಗಳು ತಿಳಿಸಿವೆ.

ಹಲ್ಲೆಯ ವಿಡಿಯೋ ಏಪ್ರಿಲ್ 1ನೇ ತಾರೀಖಿನದ್ದಾಗಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಶಾಮು ಎಂದು ಗುರುತಿಸಲಾಗಿದ್ದು, ಫರಿದಾಬಾದ್‌ನ ಸರೂರ್‌ಪುರದವರು ಎಂದು ಪೊಲೀಸರು ತಿಳಿಸಿದ್ದಾರೆ.

ಶಾಮು ಇಬ್ಬರು ಹುಡುಗಿಯರನ್ನು ಚಾಕೋಲೇಟ್ ಆಸೆ ತೋರಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಶಾಮುನ ಮನೆಗೆ ನುಗ್ಗಿ ಆತನನ್ನು ಹಿಡಿದು ತಂದಿದ್ದಾರೆ.

ಈ ವಿಷಯ ಬಿಟ್ಟು ಭಜರಂಗಿಯ ‘ಗೋರಕ್ಷ ಭಜರಂಗಿ ಪೋರ್ಸ್‌’ಗೆ ಗೊತ್ತಾಗಿದೆ. ಸ್ಥಳಕ್ಕೆ ಬಂದ ತಂಡ ಶಾಮುವನ್ನು ಭಜರಂಗಿಯ ಮನೆ ಫರಿದಾಬಾದ್‌ನ ಸಂಜಯ್ ಎನ್‌ಕ್ಲೇವ್‌ಗೆ ಕರೆದುಕೊಂಡು ಹೋಗಿದ್ದಾರೆ. ಬಿಟ್ಟು ತನ್ನ ಮನೆ ಮುಂದೆ ಶಾಮುಗೆ ಬೆತ್ತದಿಂದ ಥಳಿಸಿದ್ದಾನೆ. ಆತನ ಸಹಚರರು ಸಾಥ್ ನೀಡಿದ್ದಾರೆ.

ಈ ವೇಳೆ ಪೊಲೀಸ್ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ನಿಂತು ದುಷ್ಕೃತ್ಯವನ್ನು ನೋಡಿದ್ದಾರೆ. ತಡೆಯುವ ಪ್ರಯತ್ನ ಮಾಡಿಲ್ಲ. ಆ ಪೊಲೀಸ್ ಸಿಬ್ಬಂದಿ ಬಿಟ್ಟು ಭಜರಂಗಿಯ ಭದ್ರತೆಗೆ ನಿಯೋಜಿಸಿದವರು ಎಂದು ಹೇಳಲಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಸರನ್ ಪೊಲೀಸ್ ಠಾಣೆಯ ಅಧಿಕಾರಿ, ವ್ಯಕ್ತಿಯೊಬ್ಬರಿಗೆ ಥಳಿಸಿರುವ ವಿಡಿಯೋವನ್ನು ನಾವು ಗಮನಿಸಿದ್ದೇವೆ. ಹಲ್ಲೆಗೊಳಗಾದ ವ್ಯಕ್ತಿ ದೂರು ನೀಡಿದರೆ ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಒಂದು ವೇಳೆ ಅವರು ದೂರು ನೀಡದಿದ್ದರೂ, ವಿಡಿಯೋ ಆಧರಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಜುಲೈನಲ್ಲಿ ಹರಿಯಾಣದ ನುಹ್‌ನಲ್ಲಿ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಮೆರವಣಿಗೆ ವೇಳೆ ಕೋಮುಗಲಭೆ ಭುಗಿಲೆದ್ದಿತ್ತು. ನಂತರ ಗುರುಗ್ರಾಮ್ ಮತ್ತು ಬಾದ್‌ಶಹಪುರ ಸೇರಿದಂತೆ ಇತರ ಪ್ರದೇಶಗಳಿಗೂ ಹಿಂಸಾಚಾರ ಹರಡಿತ್ತು. ಘಟನೆಯಲ್ಲಿ ಐವರು ಸಾವನ್ನಪ್ಪಿದ್ದರು ಮತ್ತು ಕನಿಷ್ಠ 70 ಜನರು ಗಾಯಗೊಂಡಿದ್ದರು. ಮಸೀದಿಗೆ ಬೆಂಕಿ ಹಚ್ಚಲಾಗಿತ್ತು. ಮೃತರಲ್ಲಿ ಒಬ್ಬರು ಧರ್ಮಗುರುವೂ ಸೇರಿದ್ದರು.

ಇದನ್ನೂ ಓದಿ : ಮೋದಿ ಆಡಳಿತದಲ್ಲಿ ‘ಭ್ರಷ್ಟಾಚಾರ’ದ ತನಿಖೆ ಎದುರಿಸುತ್ತಿದ್ದ 25 ವಿರೋಧ ಪಕ್ಷದ ನಾಯಕರು ಬಿಜೆಪಿಗೆ ಸೇರ್ಪಡೆ, ಆ ಬಳಿಕ ನೆನೆಗುದಿಗೆ ಬಿದ್ದ ಹೆಚ್ಚಿನ ಪ್ರಕರಣಗಳು……

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...