Homeಮುಖಪುಟವ್ಯಕ್ತಿಯೊಬ್ಬರಿಗೆ ಥಳಿಸಿದ ನುಹ್ ಹಿಂಸಾಚಾರ ಆರೋಪಿ ಬಿಟ್ಟು ಭಜರಂಗಿ: ಮೂಕ ಪ್ರೇಕ್ಷಕನಾಗಿ ನಿಂತ ಪೊಲೀಸ್ ಸಿಬ್ಬಂದಿ!

ವ್ಯಕ್ತಿಯೊಬ್ಬರಿಗೆ ಥಳಿಸಿದ ನುಹ್ ಹಿಂಸಾಚಾರ ಆರೋಪಿ ಬಿಟ್ಟು ಭಜರಂಗಿ: ಮೂಕ ಪ್ರೇಕ್ಷಕನಾಗಿ ನಿಂತ ಪೊಲೀಸ್ ಸಿಬ್ಬಂದಿ!

- Advertisement -
- Advertisement -

ಕಳೆದ ವರ್ಷ ಹರಿಯಾಣದ ನುಹ್‌ನಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಬಂಧಿತನಾಗಿ ಜಾಮೀನಿನ ಮೇಲೆ ಹೊರಗಿರುವ ಬಿಟ್ಟು ಭಜರಂಗಿ, ವ್ಯಕ್ತಿಯೊಬ್ಬರಿಗೆ ಅಮಾನವೀಯ ಥಳಿಸಿರುವ ವಿಡಿಯೋ ವೈರಲ್ ಆಗಿದೆ.

ಬಿಟ್ಟು ಭಜರಂಗಿಯ ದುಷ್ಕೃತ್ಯಕ್ಕೆ ಆತನ ಸ್ವಯಂ ಘೋಷಿತ ಗೋರಕ್ಷಕ ಗುಂಪಿನ ಇತರ ಸದಸ್ಯರು ಸಾಥ್ ನೀಡಿದ್ದಾರೆ. ರಸ್ತೆಯಲ್ಲೇ ಹಲ್ಲೆ ನಡೆಯುತ್ತಿದ್ಧರೂ ಪೊಲೀಸ್ ಸಿಬ್ಬಂದಿಯೊಬ್ಬರು ಮೂಕ ಪ್ರೇಕ್ಷರಾಗಿ ನಿಂತು ನೋಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಪೊಲೀಸರು ಪ್ರಕರಣ ದಾಖಲಿಸಿಲ್ಲ ಎಂದು ವರದಿಗಳು ತಿಳಿಸಿವೆ.

ಹಲ್ಲೆಯ ವಿಡಿಯೋ ಏಪ್ರಿಲ್ 1ನೇ ತಾರೀಖಿನದ್ದಾಗಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಶಾಮು ಎಂದು ಗುರುತಿಸಲಾಗಿದ್ದು, ಫರಿದಾಬಾದ್‌ನ ಸರೂರ್‌ಪುರದವರು ಎಂದು ಪೊಲೀಸರು ತಿಳಿಸಿದ್ದಾರೆ.

ಶಾಮು ಇಬ್ಬರು ಹುಡುಗಿಯರನ್ನು ಚಾಕೋಲೇಟ್ ಆಸೆ ತೋರಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಶಾಮುನ ಮನೆಗೆ ನುಗ್ಗಿ ಆತನನ್ನು ಹಿಡಿದು ತಂದಿದ್ದಾರೆ.

ಈ ವಿಷಯ ಬಿಟ್ಟು ಭಜರಂಗಿಯ ‘ಗೋರಕ್ಷ ಭಜರಂಗಿ ಪೋರ್ಸ್‌’ಗೆ ಗೊತ್ತಾಗಿದೆ. ಸ್ಥಳಕ್ಕೆ ಬಂದ ತಂಡ ಶಾಮುವನ್ನು ಭಜರಂಗಿಯ ಮನೆ ಫರಿದಾಬಾದ್‌ನ ಸಂಜಯ್ ಎನ್‌ಕ್ಲೇವ್‌ಗೆ ಕರೆದುಕೊಂಡು ಹೋಗಿದ್ದಾರೆ. ಬಿಟ್ಟು ತನ್ನ ಮನೆ ಮುಂದೆ ಶಾಮುಗೆ ಬೆತ್ತದಿಂದ ಥಳಿಸಿದ್ದಾನೆ. ಆತನ ಸಹಚರರು ಸಾಥ್ ನೀಡಿದ್ದಾರೆ.

ಈ ವೇಳೆ ಪೊಲೀಸ್ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ನಿಂತು ದುಷ್ಕೃತ್ಯವನ್ನು ನೋಡಿದ್ದಾರೆ. ತಡೆಯುವ ಪ್ರಯತ್ನ ಮಾಡಿಲ್ಲ. ಆ ಪೊಲೀಸ್ ಸಿಬ್ಬಂದಿ ಬಿಟ್ಟು ಭಜರಂಗಿಯ ಭದ್ರತೆಗೆ ನಿಯೋಜಿಸಿದವರು ಎಂದು ಹೇಳಲಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಸರನ್ ಪೊಲೀಸ್ ಠಾಣೆಯ ಅಧಿಕಾರಿ, ವ್ಯಕ್ತಿಯೊಬ್ಬರಿಗೆ ಥಳಿಸಿರುವ ವಿಡಿಯೋವನ್ನು ನಾವು ಗಮನಿಸಿದ್ದೇವೆ. ಹಲ್ಲೆಗೊಳಗಾದ ವ್ಯಕ್ತಿ ದೂರು ನೀಡಿದರೆ ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಒಂದು ವೇಳೆ ಅವರು ದೂರು ನೀಡದಿದ್ದರೂ, ವಿಡಿಯೋ ಆಧರಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಜುಲೈನಲ್ಲಿ ಹರಿಯಾಣದ ನುಹ್‌ನಲ್ಲಿ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಮೆರವಣಿಗೆ ವೇಳೆ ಕೋಮುಗಲಭೆ ಭುಗಿಲೆದ್ದಿತ್ತು. ನಂತರ ಗುರುಗ್ರಾಮ್ ಮತ್ತು ಬಾದ್‌ಶಹಪುರ ಸೇರಿದಂತೆ ಇತರ ಪ್ರದೇಶಗಳಿಗೂ ಹಿಂಸಾಚಾರ ಹರಡಿತ್ತು. ಘಟನೆಯಲ್ಲಿ ಐವರು ಸಾವನ್ನಪ್ಪಿದ್ದರು ಮತ್ತು ಕನಿಷ್ಠ 70 ಜನರು ಗಾಯಗೊಂಡಿದ್ದರು. ಮಸೀದಿಗೆ ಬೆಂಕಿ ಹಚ್ಚಲಾಗಿತ್ತು. ಮೃತರಲ್ಲಿ ಒಬ್ಬರು ಧರ್ಮಗುರುವೂ ಸೇರಿದ್ದರು.

ಇದನ್ನೂ ಓದಿ : ಮೋದಿ ಆಡಳಿತದಲ್ಲಿ ‘ಭ್ರಷ್ಟಾಚಾರ’ದ ತನಿಖೆ ಎದುರಿಸುತ್ತಿದ್ದ 25 ವಿರೋಧ ಪಕ್ಷದ ನಾಯಕರು ಬಿಜೆಪಿಗೆ ಸೇರ್ಪಡೆ, ಆ ಬಳಿಕ ನೆನೆಗುದಿಗೆ ಬಿದ್ದ ಹೆಚ್ಚಿನ ಪ್ರಕರಣಗಳು……

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...