Homeಮುಖಪುಟನುಹ್ ಹಿಂಸಾಚಾರ: ಸುಳ್ಳು ಮಾಹಿತಿ ಟ್ವೀಟ್ ಮಾಡಿದ ಸುದರ್ಶನ್ ನ್ಯೂಸ್ ಸಂಪಾದಕ ಅರೆಸ್ಟ್

ನುಹ್ ಹಿಂಸಾಚಾರ: ಸುಳ್ಳು ಮಾಹಿತಿ ಟ್ವೀಟ್ ಮಾಡಿದ ಸುದರ್ಶನ್ ನ್ಯೂಸ್ ಸಂಪಾದಕ ಅರೆಸ್ಟ್

- Advertisement -
- Advertisement -

ಹರಿಯಾಣದಲ್ಲಿ ನಡೆದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಟ್ವೀಟ್ ಮಾಡಿದ್ದಕ್ಕಾಗಿ ಸುದರ್ಶನ್ ನ್ಯೂಸ್‌ನ ಎಡಿಟರ್ ಮುಖೇಶ್ ಕುಮಾರ್ ಅವರನ್ನು ಶುಕ್ರವಾರ ಗುರುಗ್ರಾಮ್ ಪೊಲೀಸರು ಬಂಧಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಜುಲೈ 31ರಂದು ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಬ್ರಿಜ್ ಮಂಡಲ್ ಜಲಾಭಿಷೇಕ ಯಾತ್ರೆಯ ಮೆರವಣಿಗೆ ಆಯೋಜಿಸಿದ್ದರು. ಈ ವೇಳೆ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಕೋಮು ಘರ್ಷಣೆಗಳು ಆರಂಭವಾದವು. ಆ ಬಳಿಕ ತ್ವರಿತವಾಗಿ ನುಹ್‌ನ ಆಚೆಗೆ ಗಲಾಟೆಗಳು ಶುರುವಾದವು.

ಈ ಹಿಂಸಾಚಾರದಲ್ಲಿ ಇಬ್ಬರು ಗೃಹರಕ್ಷಕರು ಮತ್ತು ಒಬ್ಬ ಬಜರಂಗದಳದ ಸದಸ್ಯ ಸೇರಿದಂತೆ ಐದು ಜನರನ್ನು ಸಾವಿಗೀಡಾದರು. ಆ ಬಳಿಕ ತ್ವರಿತವಾಗಿ ನುಹ್‌ನ ಆಚೆಗೂ ಹಿಂಸಾಚಾರ ಹರಡಿತು.ಗುರುಗ್ರಾಮ್‌ನಲ್ಲಿ ಹಿಂದುತ್ವವಾದಿ ಗುಂಪುಗಳು ಅತಿರೇಕಕ್ಕೆ ಹೋದವು. ಸೆಕ್ಟರ್ 57ರಲ್ಲಿ ಮಸೀದಿಯನ್ನು ಸುಟ್ಟುಹಾಕಿದರು, ಅದರ ಉಪ ಇಮಾಮ್ ಅನ್ನು ಕೊಂದರು ಮತ್ತು ಮರುದಿನ ಸೆಕ್ಟರ್ 70ರಲ್ಲಿ ಮುಸ್ಲಿಂ ವಲಸೆ ಕಾರ್ಮಿಕರ ಅಂಗಡಿಗಳು ಮತ್ತು ಗುಡಿಸಲುಗಳಿಗೆ ಬೆಂಕಿ ಹಚ್ಚಿದರು.

ಇದನ್ನೂ ಓದಿ: ನುಹ್ ಹಿಂಸಾಚಾರ: ಮುಸ್ಲಿಮರ ಆರ್ಥಿಕ ಬಹಿಷ್ಕಾರ ಸ್ವೀಕಾರಾರ್ಹವಲ್ಲ ಎಂದ ಸುಪ್ರೀಂ

ಸುದರ್ಶನ್ ನ್ಯೂಸ್‌ನ ಎಡಿಟರ್ ಮುಖೇಶ್ ಕುಮಾರ್ ಅವರು ಟ್ವೀಟ್ ಮಾಡಿ, ”ಆಗಸ್ಟ್ 8 ರಂದು ಕತಾರ್‌ನ ಮಾಧ್ಯಮ ಸಂಸ್ಥೆ ಅಲ್ ಜಜೀರಾನ ಪತ್ರಕರ್ತರೊಬ್ಬರು ಗುರುಗ್ರಾಮ್ ಪೊಲೀಸ್ ಕಮಿಷನರ್‌ಗೆ ಕರೆ ಮಾಡಿ ಹಿಂಸಾಚಾರ ವಿಚಾರದಲ್ಲಿ ಹಿಂದೂಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಡ ಹೇರುತ್ತಿದ್ದಾರೆ” ಎಂದು ಆರೋಪಿಸಿದ್ದರು.

”ಅದರಂತೆ ಪೊಲೀಸ್ ಕಮಿಷನರ್ ಹಿಂದೂ ಕಾರ್ಯಕರ್ತರನ್ನು ಎಲ್ಲೆಂದರಲ್ಲಿ ಬಂಧನ ಮಾಡಿಸಿದ್ದಾರೆ” ಎಂದು ಟ್ವೀಟ್ ಮಾಡಿದ ಕುಮಾರ್ ಅವರು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರಿಗೆ ಟ್ಯಾಗ್ ಮಾಡಿದ್ದರು.

ಗುರುಗ್ರಾಮ್‌ದ ಪೊಲೀಸರು ಕುಮಾರ್ ಅವರ ಟ್ವೀಟ್ ಆಧಾರರಹಿತ ಮತ್ತು ತಪ್ಪುದಾರಿಗೆಳೆಯುವಂತಿದೆ ಎಂದು ಶುಕ್ರವಾರ ಹೇಳಿದ್ದಾರೆ.

ಮುಖೇಶ್ ಕುಮಾರ್ ಅವರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 66 ಸಿ ಹಾಗೂ ಸೆಕ್ಷನ್ 153 ಬಿ (ರಾಷ್ಟ್ರೀಯ ಏಕೀಕರಣಕ್ಕೆ ಪೂರ್ವಾಗ್ರಹ, ಸಮರ್ಥನೆಗಳು), 469 (ಪ್ರತಿಷ್ಠೆಗೆ ಹಾನಿ ಮಾಡುವ ಉದ್ದೇಶದಿಂದ ನಕಲಿ), 501 (ಮುದ್ರಣ ಅಥವಾ ಕೆತ್ತನೆ) ಅಡಿಯಲ್ಲಿ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ 505 (1)(ಸಿ) (ಪ್ರಚೋದಿಸುವ ಉದ್ದೇಶದಿಂದ ಹೇಳಿಕೆಗಳು) ಮಾನಹಾನಿಕರ ಪ್ರಕರಣಗಳನ್ನು ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...