Homeಮುಖಪುಟನುಹ್ ಹಿಂಸಾಚಾರ: ಸುಳ್ಳು ಮಾಹಿತಿ ಟ್ವೀಟ್ ಮಾಡಿದ ಸುದರ್ಶನ್ ನ್ಯೂಸ್ ಸಂಪಾದಕ ಅರೆಸ್ಟ್

ನುಹ್ ಹಿಂಸಾಚಾರ: ಸುಳ್ಳು ಮಾಹಿತಿ ಟ್ವೀಟ್ ಮಾಡಿದ ಸುದರ್ಶನ್ ನ್ಯೂಸ್ ಸಂಪಾದಕ ಅರೆಸ್ಟ್

- Advertisement -
- Advertisement -

ಹರಿಯಾಣದಲ್ಲಿ ನಡೆದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಟ್ವೀಟ್ ಮಾಡಿದ್ದಕ್ಕಾಗಿ ಸುದರ್ಶನ್ ನ್ಯೂಸ್‌ನ ಎಡಿಟರ್ ಮುಖೇಶ್ ಕುಮಾರ್ ಅವರನ್ನು ಶುಕ್ರವಾರ ಗುರುಗ್ರಾಮ್ ಪೊಲೀಸರು ಬಂಧಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಜುಲೈ 31ರಂದು ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಬ್ರಿಜ್ ಮಂಡಲ್ ಜಲಾಭಿಷೇಕ ಯಾತ್ರೆಯ ಮೆರವಣಿಗೆ ಆಯೋಜಿಸಿದ್ದರು. ಈ ವೇಳೆ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಕೋಮು ಘರ್ಷಣೆಗಳು ಆರಂಭವಾದವು. ಆ ಬಳಿಕ ತ್ವರಿತವಾಗಿ ನುಹ್‌ನ ಆಚೆಗೆ ಗಲಾಟೆಗಳು ಶುರುವಾದವು.

ಈ ಹಿಂಸಾಚಾರದಲ್ಲಿ ಇಬ್ಬರು ಗೃಹರಕ್ಷಕರು ಮತ್ತು ಒಬ್ಬ ಬಜರಂಗದಳದ ಸದಸ್ಯ ಸೇರಿದಂತೆ ಐದು ಜನರನ್ನು ಸಾವಿಗೀಡಾದರು. ಆ ಬಳಿಕ ತ್ವರಿತವಾಗಿ ನುಹ್‌ನ ಆಚೆಗೂ ಹಿಂಸಾಚಾರ ಹರಡಿತು.ಗುರುಗ್ರಾಮ್‌ನಲ್ಲಿ ಹಿಂದುತ್ವವಾದಿ ಗುಂಪುಗಳು ಅತಿರೇಕಕ್ಕೆ ಹೋದವು. ಸೆಕ್ಟರ್ 57ರಲ್ಲಿ ಮಸೀದಿಯನ್ನು ಸುಟ್ಟುಹಾಕಿದರು, ಅದರ ಉಪ ಇಮಾಮ್ ಅನ್ನು ಕೊಂದರು ಮತ್ತು ಮರುದಿನ ಸೆಕ್ಟರ್ 70ರಲ್ಲಿ ಮುಸ್ಲಿಂ ವಲಸೆ ಕಾರ್ಮಿಕರ ಅಂಗಡಿಗಳು ಮತ್ತು ಗುಡಿಸಲುಗಳಿಗೆ ಬೆಂಕಿ ಹಚ್ಚಿದರು.

ಇದನ್ನೂ ಓದಿ: ನುಹ್ ಹಿಂಸಾಚಾರ: ಮುಸ್ಲಿಮರ ಆರ್ಥಿಕ ಬಹಿಷ್ಕಾರ ಸ್ವೀಕಾರಾರ್ಹವಲ್ಲ ಎಂದ ಸುಪ್ರೀಂ

ಸುದರ್ಶನ್ ನ್ಯೂಸ್‌ನ ಎಡಿಟರ್ ಮುಖೇಶ್ ಕುಮಾರ್ ಅವರು ಟ್ವೀಟ್ ಮಾಡಿ, ”ಆಗಸ್ಟ್ 8 ರಂದು ಕತಾರ್‌ನ ಮಾಧ್ಯಮ ಸಂಸ್ಥೆ ಅಲ್ ಜಜೀರಾನ ಪತ್ರಕರ್ತರೊಬ್ಬರು ಗುರುಗ್ರಾಮ್ ಪೊಲೀಸ್ ಕಮಿಷನರ್‌ಗೆ ಕರೆ ಮಾಡಿ ಹಿಂಸಾಚಾರ ವಿಚಾರದಲ್ಲಿ ಹಿಂದೂಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಡ ಹೇರುತ್ತಿದ್ದಾರೆ” ಎಂದು ಆರೋಪಿಸಿದ್ದರು.

”ಅದರಂತೆ ಪೊಲೀಸ್ ಕಮಿಷನರ್ ಹಿಂದೂ ಕಾರ್ಯಕರ್ತರನ್ನು ಎಲ್ಲೆಂದರಲ್ಲಿ ಬಂಧನ ಮಾಡಿಸಿದ್ದಾರೆ” ಎಂದು ಟ್ವೀಟ್ ಮಾಡಿದ ಕುಮಾರ್ ಅವರು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರಿಗೆ ಟ್ಯಾಗ್ ಮಾಡಿದ್ದರು.

ಗುರುಗ್ರಾಮ್‌ದ ಪೊಲೀಸರು ಕುಮಾರ್ ಅವರ ಟ್ವೀಟ್ ಆಧಾರರಹಿತ ಮತ್ತು ತಪ್ಪುದಾರಿಗೆಳೆಯುವಂತಿದೆ ಎಂದು ಶುಕ್ರವಾರ ಹೇಳಿದ್ದಾರೆ.

ಮುಖೇಶ್ ಕುಮಾರ್ ಅವರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 66 ಸಿ ಹಾಗೂ ಸೆಕ್ಷನ್ 153 ಬಿ (ರಾಷ್ಟ್ರೀಯ ಏಕೀಕರಣಕ್ಕೆ ಪೂರ್ವಾಗ್ರಹ, ಸಮರ್ಥನೆಗಳು), 469 (ಪ್ರತಿಷ್ಠೆಗೆ ಹಾನಿ ಮಾಡುವ ಉದ್ದೇಶದಿಂದ ನಕಲಿ), 501 (ಮುದ್ರಣ ಅಥವಾ ಕೆತ್ತನೆ) ಅಡಿಯಲ್ಲಿ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ 505 (1)(ಸಿ) (ಪ್ರಚೋದಿಸುವ ಉದ್ದೇಶದಿಂದ ಹೇಳಿಕೆಗಳು) ಮಾನಹಾನಿಕರ ಪ್ರಕರಣಗಳನ್ನು ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...