Homeಮುಖಪುಟನುಹ್ ಹಿಂಸಾಚಾರ: ಮುಸ್ಲಿಮರ ಆರ್ಥಿಕ ಬಹಿಷ್ಕಾರ ಸ್ವೀಕಾರಾರ್ಹವಲ್ಲ ಎಂದ ಸುಪ್ರೀಂ

ನುಹ್ ಹಿಂಸಾಚಾರ: ಮುಸ್ಲಿಮರ ಆರ್ಥಿಕ ಬಹಿಷ್ಕಾರ ಸ್ವೀಕಾರಾರ್ಹವಲ್ಲ ಎಂದ ಸುಪ್ರೀಂ

- Advertisement -
- Advertisement -

ಹರಿಯಾಣದ ನುಹ್ ಜಿಲ್ಲೆಯಲ್ಲಿ ನಡೆದ ಕೋಮು ಹಿಂಸಾಚಾರದ ಬಳಿಕ ಅಲ್ಲಿಯ ಮುಸ್ಲಿಮರ ಆರ್ಥಿಕ ಬಹಿಷ್ಕಾರದ ಕರೆಗಳು “ಸ್ವೀಕಾರಾರ್ಹವಲ್ಲ” ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಟೀಕಿಸಿದೆ.

ಹರಿಯಾಣ ಹಿಂಸಾಚಾರದ ಬಗ್ಗೆ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು, ಹಿಂಸಾಚಾರದ ನಂತರ ವರದಿಯಾಗಿರುವ ದ್ವೇಷ ಭಾಷಣದ ದೂರುಗಳನ್ನು ಪರಿಶೀಲಿಸಲು ಹರಿಯಾಣ ಪೊಲೀಸ್ ಮಹಾನಿರ್ದೇಶಕರ ನೇತೃತ್ವದ ಸಮಿತಿಯನ್ನು ರಚಿಸುವಂತೆ ಸೂಚಿಸಿದೆ.

ಆರೋಪಗಳು ನಿಜವೆಂದು ಕಂಡುಬಂದರೆ, ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಬಹುದು ಎಂದು ನ್ಯಾಯಾಧೀಶರು ಹೇಳಿದರು.

”ಸಮಸ್ಯೆಯೆಂದರೆ, SHO [ಠಾಣೆಯ ಗೃಹ ಅಧಿಕಾರಿ] ಮಟ್ಟದಲ್ಲಿ ಅಥವಾ ಪೊಲೀಸ್ ಠಾಣೆಯ ಮಟ್ಟದಲ್ಲಿನ ಸಿಬ್ಬಂದಿಗೆ ಕಾನೂನಿನ ಸೂಕ್ಷ್ಮತೆಗಳು ಹಾಗೂ ಸಂವೇದನಾಶಿಲತೆಯು ಕಡಿಮೆ ಇದೆ ಹಾಗಾಗಿ ಹಿರಿಯ ಅಥವಾ ಮಧ್ಯಮ ಮಟ್ಟದ ಅಧಿಕಾರಿಗಳು … ಅವರನ್ನು ಸಂವೇದನಾಶೀಲಗೊಳಿಸಬಹುದು” ಎಂದು ನ್ಯಾಯಮೂರ್ತಿ ಖನ್ನಾ ಹೇಳಿದರು.

ಜುಲೈ 31ರಂದು ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಬ್ರಿಜ್ ಮಂಡಲ್ ಜಲಾಭಿಷೇಕ ಯಾತ್ರೆಯ ಮೆರವಣಿಗೆ ಆಯೋಜಿಸಿದ್ದರು. ಈ ವೇಳೆ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಕೋಮು ಘರ್ಷಣೆಗಳು ಆರಂಭವಾದವು. ಆ ಬಳಿಕ ತ್ವರಿತವಾಗಿ ನುಹ್‌ನ ಆಚೆಗೆ ಗಲಾಟೆಗಳು ಶುರುವಾದವು.

ಗುರುಗ್ರಾಮ್‌ನಲ್ಲಿ ಹಿಂದುತ್ವವಾದಿ ಗುಂಪುಗಳು ಅತಿರೇಕಕ್ಕೆ ಹೋದವು. ಸೆಕ್ಟರ್ 57ರಲ್ಲಿ ಮಸೀದಿಯನ್ನು ಸುಟ್ಟುಹಾಕಿದರು, ಅದರ ಉಪ ಇಮಾಮ್ ಅನ್ನು ಕೊಂದರು ಮತ್ತು ಮರುದಿನ ಸೆಕ್ಟರ್ 70ರಲ್ಲಿ ಮುಸ್ಲಿಂ ವಲಸೆ ಕಾರ್ಮಿಕರ ಅಂಗಡಿಗಳು ಮತ್ತು ಗುಡಿಸಲುಗಳಿಗೆ ಬೆಂಕಿ ಹಚ್ಚಿದರು.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ವಿಳಂಬ ತನಿಖೆಗೆ ಸುಪ್ರೀಂ ಬೇಸರ

ಪತ್ರಕರ್ತ ಶಹೀನ್ ಅಬ್ದುಲ್ಲಾ ಅವರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಈ ಹಿಂಸಾಚಾರದ ನಂತರ ರಾಜ್ಯದ ವಿವಿಧ ಕಡೆ 27ಕ್ಕೂ ಹೆಚ್ಚು ರ್ಯಾಲಿಗಳನ್ನು ಆಯೋಜಿಸಲಾಗಿದೆ ಮತ್ತು ದ್ವೇಷದ ಭಾಷಣವನ್ನು ಮಾಡಿದ್ದಾರೆ ತಿಳಿಸಿದ್ದಾರೆ.

”ಆಗಸ್ಟ್ 2ರಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದು ವೈರಲ್ ಆಗಿತ್ತು.  ವಿಡಿಯೋದಲ್ಲಿ, ಸಂಹಸ್ತ್ ಹಿಂದೂ ಸಮಾಜದವರು ಹರಿಯಾಣದ ಹಿಸಾರ್‌ನಲ್ಲಿ ಮೆರವಣಿಗೆ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲೇ, ಅಲ್ಲಿಯ ಎರಡು ದಿನಗಳಲ್ಲಿ ಇಲ್ಲಿ ಯಾವುದೇ ಮುಸ್ಲಿಮರು ಅಂಗಡಿಗಳನ್ನು ನಡೆಸುವಂತಿಲ್ಲ, ಮುಸ್ಲಿಮರ ಬಹಿಷ್ಕರಿಸಬೇಕು ಎಂದು ಅಲ್ಲಿಯ ನಿವಾಸಿಗಳಿಗೆ ತಿಳಿಸಲಾಗಿದೆ.

ಶುಕ್ರವಾರದ ವಿಚಾರಣೆಯಲ್ಲಿ, ಅಬ್ದುಲ್ಲಾ ಅವರನ್ನು ಪ್ರತಿನಿಧಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಸುಪ್ರೀಂ ಕೋರ್ಟ್ ಜನರನ್ನು ರಕ್ಷಿಸಬೇಕು ಮತ್ತು ಈ ರೀತಿಯ ಅನಿಯಂತ್ರಿತವಾಗಿ ದೌರ್ಜನ್ಯ ನಡೆಯಲು ಬಿಡಬಾರದು ಎಂದು ಹೇಳಿದರು.

ನ್ಯಾಯಮೂರ್ತಿ ಖನ್ನಾ ಅವರು ಸಮುದಾಯಗಳ ನಡುವೆ ಸಾಮರಸ್ಯವನ್ನು ಕಾಪಾಡಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ”ಈ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ. ಯಾರೂ ಇದನ್ನು ಸ್ವೀಕರಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್ ಮಾತನಾಡಿ, ದ್ವೇಷಪೂರಿತ ಭಾಷಣದ ಸಮಸ್ಯೆ ನಿವಾರಣೆಗೆ ಕಾನೂನಿನಡಿ ಈಗಾಗಲೇ ಯಾಂತ್ರಿಕ ವ್ಯವಸ್ಥೆ ಇದ್ದರೂ ಕೆಲವೆಡೆ ಅದು ಕಾರ್ಯನಿರ್ವಹಿಸುತ್ತಿಲ್ಲ ಎಂದರು.

ಸಮಿತಿಯನ್ನು ರಚಿಸುವ ಆಲೋಚನೆಯ ಬಗ್ಗೆ ಪೀಠವು ಸಿಬಲ್ ಅವರನ್ನು ಕೇಳಿದಾಗ,  ಅವರು, ”ನನ್ನ ಸಮಸ್ಯೆ ಏನೆಂದರೆ ಇನ್ನೆರಡು ದಿನಗಳಲ್ಲಿ ಬೆದರಿಕೆ ಹಾಕಿ ಮುಸ್ಲಿಮರನ್ನು ಹೊರಹಾಕಿದಾಗ, ಈ ಸಮಿತಿಯು ಸಹಾಯ ಮಾಡಲು ಹೋಗುವುದಿಲ್ಲ” ಎಂದರು.

”ಎಫ್‌ಐಆರ್ ದಾಖಲಾದ ನಂತರ ಪೊಲೀಸರು ಅಪರಾಧಿಗಳನ್ನು ಬಂಧಿಸುವುದಿಲ್ಲ. ಎಫ್‌ಐಆರ್ ದಾಖಲಾದರೂ ಕೂಡ ಅವರ ವಿರುದ್ಧ ಯಾವುದೇ ಕ್ರಮ ಆಗುವುದಿಲ್ಲ ಎಂದರೆ ಎಫ್‌ಐಆರ್ ದಾಖಲಾಗಿದೆ ಎಂದು ಹೇಳುವುದರ ಅರ್ಥವೇನು?” ಎಂದು ಸಿಬಲ್ ಕೇಳಿದರು.

ಈ ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 18 ರಂದು ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...