Homeಮುಖಪುಟನುಹ್ ಹಿಂಸಾಚಾರ: ಮುಸ್ಲಿಮರ ಆರ್ಥಿಕ ಬಹಿಷ್ಕಾರ ಸ್ವೀಕಾರಾರ್ಹವಲ್ಲ ಎಂದ ಸುಪ್ರೀಂ

ನುಹ್ ಹಿಂಸಾಚಾರ: ಮುಸ್ಲಿಮರ ಆರ್ಥಿಕ ಬಹಿಷ್ಕಾರ ಸ್ವೀಕಾರಾರ್ಹವಲ್ಲ ಎಂದ ಸುಪ್ರೀಂ

- Advertisement -
- Advertisement -

ಹರಿಯಾಣದ ನುಹ್ ಜಿಲ್ಲೆಯಲ್ಲಿ ನಡೆದ ಕೋಮು ಹಿಂಸಾಚಾರದ ಬಳಿಕ ಅಲ್ಲಿಯ ಮುಸ್ಲಿಮರ ಆರ್ಥಿಕ ಬಹಿಷ್ಕಾರದ ಕರೆಗಳು “ಸ್ವೀಕಾರಾರ್ಹವಲ್ಲ” ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಟೀಕಿಸಿದೆ.

ಹರಿಯಾಣ ಹಿಂಸಾಚಾರದ ಬಗ್ಗೆ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು, ಹಿಂಸಾಚಾರದ ನಂತರ ವರದಿಯಾಗಿರುವ ದ್ವೇಷ ಭಾಷಣದ ದೂರುಗಳನ್ನು ಪರಿಶೀಲಿಸಲು ಹರಿಯಾಣ ಪೊಲೀಸ್ ಮಹಾನಿರ್ದೇಶಕರ ನೇತೃತ್ವದ ಸಮಿತಿಯನ್ನು ರಚಿಸುವಂತೆ ಸೂಚಿಸಿದೆ.

ಆರೋಪಗಳು ನಿಜವೆಂದು ಕಂಡುಬಂದರೆ, ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಬಹುದು ಎಂದು ನ್ಯಾಯಾಧೀಶರು ಹೇಳಿದರು.

”ಸಮಸ್ಯೆಯೆಂದರೆ, SHO [ಠಾಣೆಯ ಗೃಹ ಅಧಿಕಾರಿ] ಮಟ್ಟದಲ್ಲಿ ಅಥವಾ ಪೊಲೀಸ್ ಠಾಣೆಯ ಮಟ್ಟದಲ್ಲಿನ ಸಿಬ್ಬಂದಿಗೆ ಕಾನೂನಿನ ಸೂಕ್ಷ್ಮತೆಗಳು ಹಾಗೂ ಸಂವೇದನಾಶಿಲತೆಯು ಕಡಿಮೆ ಇದೆ ಹಾಗಾಗಿ ಹಿರಿಯ ಅಥವಾ ಮಧ್ಯಮ ಮಟ್ಟದ ಅಧಿಕಾರಿಗಳು … ಅವರನ್ನು ಸಂವೇದನಾಶೀಲಗೊಳಿಸಬಹುದು” ಎಂದು ನ್ಯಾಯಮೂರ್ತಿ ಖನ್ನಾ ಹೇಳಿದರು.

ಜುಲೈ 31ರಂದು ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಬ್ರಿಜ್ ಮಂಡಲ್ ಜಲಾಭಿಷೇಕ ಯಾತ್ರೆಯ ಮೆರವಣಿಗೆ ಆಯೋಜಿಸಿದ್ದರು. ಈ ವೇಳೆ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಕೋಮು ಘರ್ಷಣೆಗಳು ಆರಂಭವಾದವು. ಆ ಬಳಿಕ ತ್ವರಿತವಾಗಿ ನುಹ್‌ನ ಆಚೆಗೆ ಗಲಾಟೆಗಳು ಶುರುವಾದವು.

ಗುರುಗ್ರಾಮ್‌ನಲ್ಲಿ ಹಿಂದುತ್ವವಾದಿ ಗುಂಪುಗಳು ಅತಿರೇಕಕ್ಕೆ ಹೋದವು. ಸೆಕ್ಟರ್ 57ರಲ್ಲಿ ಮಸೀದಿಯನ್ನು ಸುಟ್ಟುಹಾಕಿದರು, ಅದರ ಉಪ ಇಮಾಮ್ ಅನ್ನು ಕೊಂದರು ಮತ್ತು ಮರುದಿನ ಸೆಕ್ಟರ್ 70ರಲ್ಲಿ ಮುಸ್ಲಿಂ ವಲಸೆ ಕಾರ್ಮಿಕರ ಅಂಗಡಿಗಳು ಮತ್ತು ಗುಡಿಸಲುಗಳಿಗೆ ಬೆಂಕಿ ಹಚ್ಚಿದರು.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ವಿಳಂಬ ತನಿಖೆಗೆ ಸುಪ್ರೀಂ ಬೇಸರ

ಪತ್ರಕರ್ತ ಶಹೀನ್ ಅಬ್ದುಲ್ಲಾ ಅವರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಈ ಹಿಂಸಾಚಾರದ ನಂತರ ರಾಜ್ಯದ ವಿವಿಧ ಕಡೆ 27ಕ್ಕೂ ಹೆಚ್ಚು ರ್ಯಾಲಿಗಳನ್ನು ಆಯೋಜಿಸಲಾಗಿದೆ ಮತ್ತು ದ್ವೇಷದ ಭಾಷಣವನ್ನು ಮಾಡಿದ್ದಾರೆ ತಿಳಿಸಿದ್ದಾರೆ.

”ಆಗಸ್ಟ್ 2ರಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದು ವೈರಲ್ ಆಗಿತ್ತು.  ವಿಡಿಯೋದಲ್ಲಿ, ಸಂಹಸ್ತ್ ಹಿಂದೂ ಸಮಾಜದವರು ಹರಿಯಾಣದ ಹಿಸಾರ್‌ನಲ್ಲಿ ಮೆರವಣಿಗೆ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲೇ, ಅಲ್ಲಿಯ ಎರಡು ದಿನಗಳಲ್ಲಿ ಇಲ್ಲಿ ಯಾವುದೇ ಮುಸ್ಲಿಮರು ಅಂಗಡಿಗಳನ್ನು ನಡೆಸುವಂತಿಲ್ಲ, ಮುಸ್ಲಿಮರ ಬಹಿಷ್ಕರಿಸಬೇಕು ಎಂದು ಅಲ್ಲಿಯ ನಿವಾಸಿಗಳಿಗೆ ತಿಳಿಸಲಾಗಿದೆ.

ಶುಕ್ರವಾರದ ವಿಚಾರಣೆಯಲ್ಲಿ, ಅಬ್ದುಲ್ಲಾ ಅವರನ್ನು ಪ್ರತಿನಿಧಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಸುಪ್ರೀಂ ಕೋರ್ಟ್ ಜನರನ್ನು ರಕ್ಷಿಸಬೇಕು ಮತ್ತು ಈ ರೀತಿಯ ಅನಿಯಂತ್ರಿತವಾಗಿ ದೌರ್ಜನ್ಯ ನಡೆಯಲು ಬಿಡಬಾರದು ಎಂದು ಹೇಳಿದರು.

ನ್ಯಾಯಮೂರ್ತಿ ಖನ್ನಾ ಅವರು ಸಮುದಾಯಗಳ ನಡುವೆ ಸಾಮರಸ್ಯವನ್ನು ಕಾಪಾಡಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ”ಈ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ. ಯಾರೂ ಇದನ್ನು ಸ್ವೀಕರಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್ ಮಾತನಾಡಿ, ದ್ವೇಷಪೂರಿತ ಭಾಷಣದ ಸಮಸ್ಯೆ ನಿವಾರಣೆಗೆ ಕಾನೂನಿನಡಿ ಈಗಾಗಲೇ ಯಾಂತ್ರಿಕ ವ್ಯವಸ್ಥೆ ಇದ್ದರೂ ಕೆಲವೆಡೆ ಅದು ಕಾರ್ಯನಿರ್ವಹಿಸುತ್ತಿಲ್ಲ ಎಂದರು.

ಸಮಿತಿಯನ್ನು ರಚಿಸುವ ಆಲೋಚನೆಯ ಬಗ್ಗೆ ಪೀಠವು ಸಿಬಲ್ ಅವರನ್ನು ಕೇಳಿದಾಗ,  ಅವರು, ”ನನ್ನ ಸಮಸ್ಯೆ ಏನೆಂದರೆ ಇನ್ನೆರಡು ದಿನಗಳಲ್ಲಿ ಬೆದರಿಕೆ ಹಾಕಿ ಮುಸ್ಲಿಮರನ್ನು ಹೊರಹಾಕಿದಾಗ, ಈ ಸಮಿತಿಯು ಸಹಾಯ ಮಾಡಲು ಹೋಗುವುದಿಲ್ಲ” ಎಂದರು.

”ಎಫ್‌ಐಆರ್ ದಾಖಲಾದ ನಂತರ ಪೊಲೀಸರು ಅಪರಾಧಿಗಳನ್ನು ಬಂಧಿಸುವುದಿಲ್ಲ. ಎಫ್‌ಐಆರ್ ದಾಖಲಾದರೂ ಕೂಡ ಅವರ ವಿರುದ್ಧ ಯಾವುದೇ ಕ್ರಮ ಆಗುವುದಿಲ್ಲ ಎಂದರೆ ಎಫ್‌ಐಆರ್ ದಾಖಲಾಗಿದೆ ಎಂದು ಹೇಳುವುದರ ಅರ್ಥವೇನು?” ಎಂದು ಸಿಬಲ್ ಕೇಳಿದರು.

ಈ ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 18 ರಂದು ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...