Homeಕರೋನಾ ತಲ್ಲಣದೇಶದಲ್ಲಿ ಒಂದೇ ದಿನದಲ್ಲಿ 2.6 ಲಕ್ಷ ದಾಟಿದ ಕೊರೊನಾ ಪ್ರಕರಣಗಳ ಸಂಖ್ಯೆ

ದೇಶದಲ್ಲಿ ಒಂದೇ ದಿನದಲ್ಲಿ 2.6 ಲಕ್ಷ ದಾಟಿದ ಕೊರೊನಾ ಪ್ರಕರಣಗಳ ಸಂಖ್ಯೆ

- Advertisement -
- Advertisement -

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,61,500 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಪ್ರತಿ ದಿನ 2 ಲಕ್ಷ ಕೊರೊನಾ ಪ್ರಕರಣಗಳು ದಾಖಲಾಗುತ್ತಿರುವ ನಾಲ್ಕನೆ ದಿನ ಇದಾಗಿದೆ. ಕಳೆದ ಒಂದು ವಾರದಲ್ಲಿ 12 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ.

ಕಳೆದ 24 ಗಂಟೆಗಳಲ್ಲಿ 1,501 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1,47,88,109 ದಾಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 18,01,316 ಲಕ್ಷ ದಾಟಿದೆ.

ಕೊರೊನಾ ಉಲ್ಬಣದ ಮಧ್ಯೆ ಹಲವು ರಾಜ್ಯಗಳಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ಮತ್ತು ಲಸಿಕೆಗಳು, ಆಸ್ಪತ್ರೆಗಳಲ್ಲಿ ಬೆಡ್ ಸಮಸ್ಯೆಗಳು ಹೆಚ್ಚಾಗಿವೆ.  ಕೊರೊನಾ ನಿಯಂತ್ರಣಕ್ಕಾಗಿ ಹಲವು ರಾಜ್ಯಗಳಲ್ಲಿ ನೈಟ್ ಕರ್ಫ್ಯೂಗಳು, ವಾರಾಂತ್ಯದ ಕರ್ಫ್ಯೂಗಳು ಸೇರಿದಂತೆ ಹಲವು ನಿರ್ಬಂಧಗಳನ್ನು ಹಾಕಲಾಗಿದೆ.

ಇದನ್ನೂ ಓದಿ: ಕೊರೊನಾ ಎರಡನೆ ಅಲೆಗೆ ವೇದಿಕೆ ಒದಗಿಸಿದ್ದು ಮೋದಿ ಸರ್ಕಾರದ ಅಪಕ್ವ ನಿರ್ಧಾರಗಳು, ಕಣ್ಕಟ್ಟು ಅಂಕಿಅಂಶಗಳು

ಮಹಾರಾಷ್ಟ್ರದಲ್ಲಿ 67,123, ಉತ್ತರ ಪ್ರದೇಶದಲ್ಲಿ 27,734, ದೆಹಲಿಯಲ್ಲಿ 24,375, ಕರ್ನಾಟಕದಲ್ಲಿ 17,489, ಮತ್ತು ಛತ್ತೀಸ್‌ಗಢದಲ್ಲಿ 16,083 ಪ್ರಕರಣಗಳು ದಾಖಲಾಗಿವೆ. ಇವು ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣಗಳನ್ನು ದಾಖಲಿಸಿದ ಐದು ರಾಜ್ಯಗಳಾಗಿವೆ.

ಕೊರೊನಾ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ್ದರು.

ಟ್ವೀಟ್ ಮೂಲಕ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ನರೇಂದ್ರ ಮೋದಿ, “ಕೊರೊನಾ ಪರಿಸ್ಥಿತಿಯನ್ನು ನಿಭಾಯಿಸಲು ಸಿದ್ಧತೆಯನ್ನು ಪರಿಶೀಲಿಸಲಾಗಿದೆ. ಔಷಧಿಗಳು, ಆಮ್ಲಜನಕ, ವೆಂಟಿಲೇಟರ್‌ಗಳು ಮತ್ತು ವ್ಯಾಕ್ಸಿನೇಷನ್‌ಗೆ ಸಂಬಂಧಿಸಿದ ಅಂಶಗಳನ್ನು ಚರ್ಚಿಸಲಾಯಿತು. ನಾವು ಕಳೆದ ವರ್ಷ ಮಾಡಿದಂತೆ, ಇನ್ನೂ ಹೆಚ್ಚಿನ ವೇಗ ಮತ್ತು ಸಮನ್ವಯದೊಂದಿಗೆ ಕೋವಿಡ್ ವಿರುದ್ಧ ಯಶಸ್ವಿಯಾಗಿ ಹೋರಾಡುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಸೋನು ಸೂದ್‌ಗೆ ಕೊರೊನಾ, ನಿಮ್ಮ ಸಮಸ್ಯೆ ಬಗೆಹರಿಸಲು ಹೆಚ್ಚಿನ ಸಮಯ ಸಿಗಲಿದೆ ಎಂದ ನಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...