Homeಮುಖಪುಟ2020 ರಲ್ಲಿ ಭಾರತದ ಬಡವರ ಸಂಖ್ಯೆ ದುಪ್ಪಟ್ಟು! ಮಧ್ಯಮ ವರ್ಗದ ಸಂಖ್ಯೆಯಲ್ಲೂ ಕುಸಿತ!

2020 ರಲ್ಲಿ ಭಾರತದ ಬಡವರ ಸಂಖ್ಯೆ ದುಪ್ಪಟ್ಟು! ಮಧ್ಯಮ ವರ್ಗದ ಸಂಖ್ಯೆಯಲ್ಲೂ ಕುಸಿತ!

- Advertisement -
- Advertisement -

ಸಾಂಕ್ರಾಮಿಕ ರೋಗ ಕೊರೊನಾ ಕಾರಣದಿಂದ ಉಂಟಾದ ಆರ್ಥಿಕ ಹಿಂಜರಿತದಿಂದಾಗಿ ಭಾರತದ ಮಧ್ಯಮ ವರ್ಗವು 2020 ರಲ್ಲಿ ಮೂರನೇ ಒಂದು ಭಾಗದಷ್ಟು ಕುಗ್ಗಿದೆ. ದೇಶದ ಬಡವರ ಸಂಖ್ಯೆ ದ್ವಿಗುಣಗೊಂಡಿದೆ ಎಂದು ವಾಷಿಂಗ್ಟನ್ ಮೂಲದ ಪ್ಯೂ ರಿಸರ್ಚ್ ಸಂಸ್ಥೆಯ ವರದಿ ತಿಳಿಸಿದೆ ಎಂದು ಟೆಲಿಗ್ರಾಫ್ ಆನ್‌ಲೈನ್ ವರದಿ ಮಾಡಿದೆ.

ವಾಷಿಂಗ್ಟನ್ ಮೂಲದ ಎನ್‌ಜಿಒ ಪ್ಯೂ ರಿಸರ್ಚ್ ಗುರುವಾರ ಬಿಡುಗಡೆ ಮಾಡಿರುವ ತನ್ನ ವರದಿಯಲ್ಲಿ ಕೊರೊನಾ ಸಾಂಕ್ರಾಮಿಕದಿಂದಾಗಿ ಆರ್ಥಿಕ ಹಿಂಜರಿತ ಹೆಚ್ಚಾಗಿದ್ದು ಬಡವರ ಸಂಖ್ಯೆಗೆ ದುಪ್ಪಟ್ಟುಗೊಳ್ಳಲು ಕಾರಣ ಎಂದು ಉಲ್ಲೇಖಿಸಿದೆ.

ಆರ್ಥಿಕ ಕುಸಿತದ ಪರಿಣಾಮವಾಗಿ, ಭಾರತದ ಮಧ್ಯಮ ವರ್ಗವು ಯಾವುದೇ ಸಾಂಕ್ರಾಮಿಕ ರೋಗಗಳಿಲ್ಲದಿದ್ದರೆ ಅದು ತಲುಪಬಹುದಾದ ಸಂಖ್ಯೆಯಿಂದ 32 ಮಿಲಿಯನ್ಂತಲೂ ಕಡಿಮೆಯಾಗಿದೆ (ದೈನಂದಿನ ಆದಾಯವು 725 ರಿಂದ 1,450 ರೂಪಾಯಿ ಇರುವ ವರ್ಗ).

ಸಾಂಕ್ರಾಮಿಕ ರೋಗದ ಮೊದಲು, 2020 ರಲ್ಲಿ ಭಾರತದಲ್ಲಿ 99 ಮಿಲಿಯನ್ ಜನರು ಮಧ್ಯಮ ವರ್ಗಕ್ಕೆ ಸೇರಿದವರು ಎಂದು ಅಂದಾಜಿಸಲಾಗಿದೆ. ಪ್ಯೂ ವರದಿ ಪ್ರಕಾರ, ಈ ಸಂಖ್ಯೆ ಈಗ 66 ಮಿಲಿಯನ್ ಹತ್ತಿರದಲ್ಲಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: 86 ಮೇಯರ್‌‌/ಅಧ್ಯಕ್ಷ ಸ್ಥಾನಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟ ‘ಜಗನ್‌’ ಸರ್ಕಾರ!

ಕೊರೊನಾ ಪ್ರೇರಿತ ಆರ್ಥಿಕ ಹಿಂಜರಿತದಿಂದಾಗಿ ಭಾರತದಲ್ಲಿ ಬಡವರ ಸಂಖ್ಯೆ (ದೈನಂದಿನ ಆದಾಯ 145 ರೂ. ಅಥವಾ ಅದಕ್ಕಿಂತ ಕಡಿಮೆ) 75 ಮಿಲಿಯನ್‌ಗೆ ಏರಿಕೆಯಾಗಿದೆ ಎಂದು ಅಂದಾಜಿಸಲಾಗಿದೆ. ಇದು ಬಡತನದ ಜಾಗತಿಕ ಹೆಚ್ಚಳದ ಶೇಕಡಾ 60 ರಷ್ಟಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸಕ್ಕೆ ಬೇಡಿಕೆ ಈಗ ಎಂದಿಗಿಂತ ಹೆಚ್ಚಾಗಿದೆ ಎಂದು ವರದಿ ಹೇಳುತ್ತದೆ. ಭಾರತದಲ್ಲಿ ಬಡವರ ಸಂಖ್ಯೆ 134 ಮಿಲಿಯನ್ ತಲುಪುವ ನಿರೀಕ್ಷೆಯಿದೆ. ಇದು ಆರ್ಥಿಕ ಹಿಂಜರಿತದ ಮೊದಲು ಅಂದಾಜು ಮಾಡಲಾದ 59 ದಶಲಕ್ಷಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ ಎಮದು ವರದಿ ತಿಳಿಸಿದೆ.

ಭಾರತ ಮತ್ತು ಚೀನಾ ಒಟ್ಟಾಗಿ ವಿಶ್ವದ ಜನಸಂಖ್ಯೆಯ ಮೂರನೇ ಒಂದು ಭಾಗವನ್ನು ಹೊಂದಿರುವುದರಿಂದ, ಪ್ಯೂ ರಿಸರ್ಚ್ ಎರಡೂ ದೇಶಗಳನ್ನು ಒಟ್ಟಿಗೆ ಅಧ್ಯಯನ ಮಾಡಿದೆ. ಭಾರತವು ಆಳವಾದ ಆರ್ಥಿಕ ಹಿಂಜರಿತದಲ್ಲಿ ಮುಳುಗಿತು. ಆದರೆ ಚೀನಾವು ಆರ್ಥಿಕ ಸಂಕುಚಿತತೆಯನ್ನು ತಡೆಯಲು ಸಾಧ್ಯವಾಯಿತು ಎಂದು ವರದಿ ವಿವರಿಸಿದೆ.

ಸಾಂಕ್ರಾಮಿಕ ರೋಗದ ಮೊದಲು, ವಿಶ್ವಬ್ಯಾಂಕ್ 2020 ರಲ್ಲಿ ಭಾರತದಲ್ಲಿ ನೈಜ ಜಿಡಿಪಿಯಲ್ಲಿ (ಶೇ. 5.8) ಮತ್ತು ಚೀನಾದಲ್ಲಿ (ಶೇ. 5.9) ಬಹುತೇಕ ಸಮಾನ ಬೆಳವಣಿಗೆಯನ್ನು ಅಂದಾಜಿಸಿತ್ತು.


ಇದನ್ನೂ ಓದಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....