Homeಮುಖಪುಟ2020 ರಲ್ಲಿ ಭಾರತದ ಬಡವರ ಸಂಖ್ಯೆ ದುಪ್ಪಟ್ಟು! ಮಧ್ಯಮ ವರ್ಗದ ಸಂಖ್ಯೆಯಲ್ಲೂ ಕುಸಿತ!

2020 ರಲ್ಲಿ ಭಾರತದ ಬಡವರ ಸಂಖ್ಯೆ ದುಪ್ಪಟ್ಟು! ಮಧ್ಯಮ ವರ್ಗದ ಸಂಖ್ಯೆಯಲ್ಲೂ ಕುಸಿತ!

- Advertisement -
- Advertisement -

ಸಾಂಕ್ರಾಮಿಕ ರೋಗ ಕೊರೊನಾ ಕಾರಣದಿಂದ ಉಂಟಾದ ಆರ್ಥಿಕ ಹಿಂಜರಿತದಿಂದಾಗಿ ಭಾರತದ ಮಧ್ಯಮ ವರ್ಗವು 2020 ರಲ್ಲಿ ಮೂರನೇ ಒಂದು ಭಾಗದಷ್ಟು ಕುಗ್ಗಿದೆ. ದೇಶದ ಬಡವರ ಸಂಖ್ಯೆ ದ್ವಿಗುಣಗೊಂಡಿದೆ ಎಂದು ವಾಷಿಂಗ್ಟನ್ ಮೂಲದ ಪ್ಯೂ ರಿಸರ್ಚ್ ಸಂಸ್ಥೆಯ ವರದಿ ತಿಳಿಸಿದೆ ಎಂದು ಟೆಲಿಗ್ರಾಫ್ ಆನ್‌ಲೈನ್ ವರದಿ ಮಾಡಿದೆ.

ವಾಷಿಂಗ್ಟನ್ ಮೂಲದ ಎನ್‌ಜಿಒ ಪ್ಯೂ ರಿಸರ್ಚ್ ಗುರುವಾರ ಬಿಡುಗಡೆ ಮಾಡಿರುವ ತನ್ನ ವರದಿಯಲ್ಲಿ ಕೊರೊನಾ ಸಾಂಕ್ರಾಮಿಕದಿಂದಾಗಿ ಆರ್ಥಿಕ ಹಿಂಜರಿತ ಹೆಚ್ಚಾಗಿದ್ದು ಬಡವರ ಸಂಖ್ಯೆಗೆ ದುಪ್ಪಟ್ಟುಗೊಳ್ಳಲು ಕಾರಣ ಎಂದು ಉಲ್ಲೇಖಿಸಿದೆ.

ಆರ್ಥಿಕ ಕುಸಿತದ ಪರಿಣಾಮವಾಗಿ, ಭಾರತದ ಮಧ್ಯಮ ವರ್ಗವು ಯಾವುದೇ ಸಾಂಕ್ರಾಮಿಕ ರೋಗಗಳಿಲ್ಲದಿದ್ದರೆ ಅದು ತಲುಪಬಹುದಾದ ಸಂಖ್ಯೆಯಿಂದ 32 ಮಿಲಿಯನ್ಂತಲೂ ಕಡಿಮೆಯಾಗಿದೆ (ದೈನಂದಿನ ಆದಾಯವು 725 ರಿಂದ 1,450 ರೂಪಾಯಿ ಇರುವ ವರ್ಗ).

ಸಾಂಕ್ರಾಮಿಕ ರೋಗದ ಮೊದಲು, 2020 ರಲ್ಲಿ ಭಾರತದಲ್ಲಿ 99 ಮಿಲಿಯನ್ ಜನರು ಮಧ್ಯಮ ವರ್ಗಕ್ಕೆ ಸೇರಿದವರು ಎಂದು ಅಂದಾಜಿಸಲಾಗಿದೆ. ಪ್ಯೂ ವರದಿ ಪ್ರಕಾರ, ಈ ಸಂಖ್ಯೆ ಈಗ 66 ಮಿಲಿಯನ್ ಹತ್ತಿರದಲ್ಲಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: 86 ಮೇಯರ್‌‌/ಅಧ್ಯಕ್ಷ ಸ್ಥಾನಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟ ‘ಜಗನ್‌’ ಸರ್ಕಾರ!

ಕೊರೊನಾ ಪ್ರೇರಿತ ಆರ್ಥಿಕ ಹಿಂಜರಿತದಿಂದಾಗಿ ಭಾರತದಲ್ಲಿ ಬಡವರ ಸಂಖ್ಯೆ (ದೈನಂದಿನ ಆದಾಯ 145 ರೂ. ಅಥವಾ ಅದಕ್ಕಿಂತ ಕಡಿಮೆ) 75 ಮಿಲಿಯನ್‌ಗೆ ಏರಿಕೆಯಾಗಿದೆ ಎಂದು ಅಂದಾಜಿಸಲಾಗಿದೆ. ಇದು ಬಡತನದ ಜಾಗತಿಕ ಹೆಚ್ಚಳದ ಶೇಕಡಾ 60 ರಷ್ಟಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸಕ್ಕೆ ಬೇಡಿಕೆ ಈಗ ಎಂದಿಗಿಂತ ಹೆಚ್ಚಾಗಿದೆ ಎಂದು ವರದಿ ಹೇಳುತ್ತದೆ. ಭಾರತದಲ್ಲಿ ಬಡವರ ಸಂಖ್ಯೆ 134 ಮಿಲಿಯನ್ ತಲುಪುವ ನಿರೀಕ್ಷೆಯಿದೆ. ಇದು ಆರ್ಥಿಕ ಹಿಂಜರಿತದ ಮೊದಲು ಅಂದಾಜು ಮಾಡಲಾದ 59 ದಶಲಕ್ಷಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ ಎಮದು ವರದಿ ತಿಳಿಸಿದೆ.

ಭಾರತ ಮತ್ತು ಚೀನಾ ಒಟ್ಟಾಗಿ ವಿಶ್ವದ ಜನಸಂಖ್ಯೆಯ ಮೂರನೇ ಒಂದು ಭಾಗವನ್ನು ಹೊಂದಿರುವುದರಿಂದ, ಪ್ಯೂ ರಿಸರ್ಚ್ ಎರಡೂ ದೇಶಗಳನ್ನು ಒಟ್ಟಿಗೆ ಅಧ್ಯಯನ ಮಾಡಿದೆ. ಭಾರತವು ಆಳವಾದ ಆರ್ಥಿಕ ಹಿಂಜರಿತದಲ್ಲಿ ಮುಳುಗಿತು. ಆದರೆ ಚೀನಾವು ಆರ್ಥಿಕ ಸಂಕುಚಿತತೆಯನ್ನು ತಡೆಯಲು ಸಾಧ್ಯವಾಯಿತು ಎಂದು ವರದಿ ವಿವರಿಸಿದೆ.

ಸಾಂಕ್ರಾಮಿಕ ರೋಗದ ಮೊದಲು, ವಿಶ್ವಬ್ಯಾಂಕ್ 2020 ರಲ್ಲಿ ಭಾರತದಲ್ಲಿ ನೈಜ ಜಿಡಿಪಿಯಲ್ಲಿ (ಶೇ. 5.8) ಮತ್ತು ಚೀನಾದಲ್ಲಿ (ಶೇ. 5.9) ಬಹುತೇಕ ಸಮಾನ ಬೆಳವಣಿಗೆಯನ್ನು ಅಂದಾಜಿಸಿತ್ತು.


ಇದನ್ನೂ ಓದಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...