Homeಮುಖಪುಟ2020 ರಲ್ಲಿ ಭಾರತದ ಬಡವರ ಸಂಖ್ಯೆ ದುಪ್ಪಟ್ಟು! ಮಧ್ಯಮ ವರ್ಗದ ಸಂಖ್ಯೆಯಲ್ಲೂ ಕುಸಿತ!

2020 ರಲ್ಲಿ ಭಾರತದ ಬಡವರ ಸಂಖ್ಯೆ ದುಪ್ಪಟ್ಟು! ಮಧ್ಯಮ ವರ್ಗದ ಸಂಖ್ಯೆಯಲ್ಲೂ ಕುಸಿತ!

- Advertisement -
- Advertisement -

ಸಾಂಕ್ರಾಮಿಕ ರೋಗ ಕೊರೊನಾ ಕಾರಣದಿಂದ ಉಂಟಾದ ಆರ್ಥಿಕ ಹಿಂಜರಿತದಿಂದಾಗಿ ಭಾರತದ ಮಧ್ಯಮ ವರ್ಗವು 2020 ರಲ್ಲಿ ಮೂರನೇ ಒಂದು ಭಾಗದಷ್ಟು ಕುಗ್ಗಿದೆ. ದೇಶದ ಬಡವರ ಸಂಖ್ಯೆ ದ್ವಿಗುಣಗೊಂಡಿದೆ ಎಂದು ವಾಷಿಂಗ್ಟನ್ ಮೂಲದ ಪ್ಯೂ ರಿಸರ್ಚ್ ಸಂಸ್ಥೆಯ ವರದಿ ತಿಳಿಸಿದೆ ಎಂದು ಟೆಲಿಗ್ರಾಫ್ ಆನ್‌ಲೈನ್ ವರದಿ ಮಾಡಿದೆ.

ವಾಷಿಂಗ್ಟನ್ ಮೂಲದ ಎನ್‌ಜಿಒ ಪ್ಯೂ ರಿಸರ್ಚ್ ಗುರುವಾರ ಬಿಡುಗಡೆ ಮಾಡಿರುವ ತನ್ನ ವರದಿಯಲ್ಲಿ ಕೊರೊನಾ ಸಾಂಕ್ರಾಮಿಕದಿಂದಾಗಿ ಆರ್ಥಿಕ ಹಿಂಜರಿತ ಹೆಚ್ಚಾಗಿದ್ದು ಬಡವರ ಸಂಖ್ಯೆಗೆ ದುಪ್ಪಟ್ಟುಗೊಳ್ಳಲು ಕಾರಣ ಎಂದು ಉಲ್ಲೇಖಿಸಿದೆ.

ಆರ್ಥಿಕ ಕುಸಿತದ ಪರಿಣಾಮವಾಗಿ, ಭಾರತದ ಮಧ್ಯಮ ವರ್ಗವು ಯಾವುದೇ ಸಾಂಕ್ರಾಮಿಕ ರೋಗಗಳಿಲ್ಲದಿದ್ದರೆ ಅದು ತಲುಪಬಹುದಾದ ಸಂಖ್ಯೆಯಿಂದ 32 ಮಿಲಿಯನ್ಂತಲೂ ಕಡಿಮೆಯಾಗಿದೆ (ದೈನಂದಿನ ಆದಾಯವು 725 ರಿಂದ 1,450 ರೂಪಾಯಿ ಇರುವ ವರ್ಗ).

ಸಾಂಕ್ರಾಮಿಕ ರೋಗದ ಮೊದಲು, 2020 ರಲ್ಲಿ ಭಾರತದಲ್ಲಿ 99 ಮಿಲಿಯನ್ ಜನರು ಮಧ್ಯಮ ವರ್ಗಕ್ಕೆ ಸೇರಿದವರು ಎಂದು ಅಂದಾಜಿಸಲಾಗಿದೆ. ಪ್ಯೂ ವರದಿ ಪ್ರಕಾರ, ಈ ಸಂಖ್ಯೆ ಈಗ 66 ಮಿಲಿಯನ್ ಹತ್ತಿರದಲ್ಲಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: 86 ಮೇಯರ್‌‌/ಅಧ್ಯಕ್ಷ ಸ್ಥಾನಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟ ‘ಜಗನ್‌’ ಸರ್ಕಾರ!

ಕೊರೊನಾ ಪ್ರೇರಿತ ಆರ್ಥಿಕ ಹಿಂಜರಿತದಿಂದಾಗಿ ಭಾರತದಲ್ಲಿ ಬಡವರ ಸಂಖ್ಯೆ (ದೈನಂದಿನ ಆದಾಯ 145 ರೂ. ಅಥವಾ ಅದಕ್ಕಿಂತ ಕಡಿಮೆ) 75 ಮಿಲಿಯನ್‌ಗೆ ಏರಿಕೆಯಾಗಿದೆ ಎಂದು ಅಂದಾಜಿಸಲಾಗಿದೆ. ಇದು ಬಡತನದ ಜಾಗತಿಕ ಹೆಚ್ಚಳದ ಶೇಕಡಾ 60 ರಷ್ಟಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸಕ್ಕೆ ಬೇಡಿಕೆ ಈಗ ಎಂದಿಗಿಂತ ಹೆಚ್ಚಾಗಿದೆ ಎಂದು ವರದಿ ಹೇಳುತ್ತದೆ. ಭಾರತದಲ್ಲಿ ಬಡವರ ಸಂಖ್ಯೆ 134 ಮಿಲಿಯನ್ ತಲುಪುವ ನಿರೀಕ್ಷೆಯಿದೆ. ಇದು ಆರ್ಥಿಕ ಹಿಂಜರಿತದ ಮೊದಲು ಅಂದಾಜು ಮಾಡಲಾದ 59 ದಶಲಕ್ಷಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ ಎಮದು ವರದಿ ತಿಳಿಸಿದೆ.

ಭಾರತ ಮತ್ತು ಚೀನಾ ಒಟ್ಟಾಗಿ ವಿಶ್ವದ ಜನಸಂಖ್ಯೆಯ ಮೂರನೇ ಒಂದು ಭಾಗವನ್ನು ಹೊಂದಿರುವುದರಿಂದ, ಪ್ಯೂ ರಿಸರ್ಚ್ ಎರಡೂ ದೇಶಗಳನ್ನು ಒಟ್ಟಿಗೆ ಅಧ್ಯಯನ ಮಾಡಿದೆ. ಭಾರತವು ಆಳವಾದ ಆರ್ಥಿಕ ಹಿಂಜರಿತದಲ್ಲಿ ಮುಳುಗಿತು. ಆದರೆ ಚೀನಾವು ಆರ್ಥಿಕ ಸಂಕುಚಿತತೆಯನ್ನು ತಡೆಯಲು ಸಾಧ್ಯವಾಯಿತು ಎಂದು ವರದಿ ವಿವರಿಸಿದೆ.

ಸಾಂಕ್ರಾಮಿಕ ರೋಗದ ಮೊದಲು, ವಿಶ್ವಬ್ಯಾಂಕ್ 2020 ರಲ್ಲಿ ಭಾರತದಲ್ಲಿ ನೈಜ ಜಿಡಿಪಿಯಲ್ಲಿ (ಶೇ. 5.8) ಮತ್ತು ಚೀನಾದಲ್ಲಿ (ಶೇ. 5.9) ಬಹುತೇಕ ಸಮಾನ ಬೆಳವಣಿಗೆಯನ್ನು ಅಂದಾಜಿಸಿತ್ತು.


ಇದನ್ನೂ ಓದಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...