Homeಮುಖಪುಟ2020 ರಲ್ಲಿ ಭಾರತದ ಬಡವರ ಸಂಖ್ಯೆ ದುಪ್ಪಟ್ಟು! ಮಧ್ಯಮ ವರ್ಗದ ಸಂಖ್ಯೆಯಲ್ಲೂ ಕುಸಿತ!

2020 ರಲ್ಲಿ ಭಾರತದ ಬಡವರ ಸಂಖ್ಯೆ ದುಪ್ಪಟ್ಟು! ಮಧ್ಯಮ ವರ್ಗದ ಸಂಖ್ಯೆಯಲ್ಲೂ ಕುಸಿತ!

- Advertisement -
- Advertisement -

ಸಾಂಕ್ರಾಮಿಕ ರೋಗ ಕೊರೊನಾ ಕಾರಣದಿಂದ ಉಂಟಾದ ಆರ್ಥಿಕ ಹಿಂಜರಿತದಿಂದಾಗಿ ಭಾರತದ ಮಧ್ಯಮ ವರ್ಗವು 2020 ರಲ್ಲಿ ಮೂರನೇ ಒಂದು ಭಾಗದಷ್ಟು ಕುಗ್ಗಿದೆ. ದೇಶದ ಬಡವರ ಸಂಖ್ಯೆ ದ್ವಿಗುಣಗೊಂಡಿದೆ ಎಂದು ವಾಷಿಂಗ್ಟನ್ ಮೂಲದ ಪ್ಯೂ ರಿಸರ್ಚ್ ಸಂಸ್ಥೆಯ ವರದಿ ತಿಳಿಸಿದೆ ಎಂದು ಟೆಲಿಗ್ರಾಫ್ ಆನ್‌ಲೈನ್ ವರದಿ ಮಾಡಿದೆ.

ವಾಷಿಂಗ್ಟನ್ ಮೂಲದ ಎನ್‌ಜಿಒ ಪ್ಯೂ ರಿಸರ್ಚ್ ಗುರುವಾರ ಬಿಡುಗಡೆ ಮಾಡಿರುವ ತನ್ನ ವರದಿಯಲ್ಲಿ ಕೊರೊನಾ ಸಾಂಕ್ರಾಮಿಕದಿಂದಾಗಿ ಆರ್ಥಿಕ ಹಿಂಜರಿತ ಹೆಚ್ಚಾಗಿದ್ದು ಬಡವರ ಸಂಖ್ಯೆಗೆ ದುಪ್ಪಟ್ಟುಗೊಳ್ಳಲು ಕಾರಣ ಎಂದು ಉಲ್ಲೇಖಿಸಿದೆ.

ಆರ್ಥಿಕ ಕುಸಿತದ ಪರಿಣಾಮವಾಗಿ, ಭಾರತದ ಮಧ್ಯಮ ವರ್ಗವು ಯಾವುದೇ ಸಾಂಕ್ರಾಮಿಕ ರೋಗಗಳಿಲ್ಲದಿದ್ದರೆ ಅದು ತಲುಪಬಹುದಾದ ಸಂಖ್ಯೆಯಿಂದ 32 ಮಿಲಿಯನ್ಂತಲೂ ಕಡಿಮೆಯಾಗಿದೆ (ದೈನಂದಿನ ಆದಾಯವು 725 ರಿಂದ 1,450 ರೂಪಾಯಿ ಇರುವ ವರ್ಗ).

ಸಾಂಕ್ರಾಮಿಕ ರೋಗದ ಮೊದಲು, 2020 ರಲ್ಲಿ ಭಾರತದಲ್ಲಿ 99 ಮಿಲಿಯನ್ ಜನರು ಮಧ್ಯಮ ವರ್ಗಕ್ಕೆ ಸೇರಿದವರು ಎಂದು ಅಂದಾಜಿಸಲಾಗಿದೆ. ಪ್ಯೂ ವರದಿ ಪ್ರಕಾರ, ಈ ಸಂಖ್ಯೆ ಈಗ 66 ಮಿಲಿಯನ್ ಹತ್ತಿರದಲ್ಲಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: 86 ಮೇಯರ್‌‌/ಅಧ್ಯಕ್ಷ ಸ್ಥಾನಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟ ‘ಜಗನ್‌’ ಸರ್ಕಾರ!

ಕೊರೊನಾ ಪ್ರೇರಿತ ಆರ್ಥಿಕ ಹಿಂಜರಿತದಿಂದಾಗಿ ಭಾರತದಲ್ಲಿ ಬಡವರ ಸಂಖ್ಯೆ (ದೈನಂದಿನ ಆದಾಯ 145 ರೂ. ಅಥವಾ ಅದಕ್ಕಿಂತ ಕಡಿಮೆ) 75 ಮಿಲಿಯನ್‌ಗೆ ಏರಿಕೆಯಾಗಿದೆ ಎಂದು ಅಂದಾಜಿಸಲಾಗಿದೆ. ಇದು ಬಡತನದ ಜಾಗತಿಕ ಹೆಚ್ಚಳದ ಶೇಕಡಾ 60 ರಷ್ಟಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸಕ್ಕೆ ಬೇಡಿಕೆ ಈಗ ಎಂದಿಗಿಂತ ಹೆಚ್ಚಾಗಿದೆ ಎಂದು ವರದಿ ಹೇಳುತ್ತದೆ. ಭಾರತದಲ್ಲಿ ಬಡವರ ಸಂಖ್ಯೆ 134 ಮಿಲಿಯನ್ ತಲುಪುವ ನಿರೀಕ್ಷೆಯಿದೆ. ಇದು ಆರ್ಥಿಕ ಹಿಂಜರಿತದ ಮೊದಲು ಅಂದಾಜು ಮಾಡಲಾದ 59 ದಶಲಕ್ಷಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ ಎಮದು ವರದಿ ತಿಳಿಸಿದೆ.

ಭಾರತ ಮತ್ತು ಚೀನಾ ಒಟ್ಟಾಗಿ ವಿಶ್ವದ ಜನಸಂಖ್ಯೆಯ ಮೂರನೇ ಒಂದು ಭಾಗವನ್ನು ಹೊಂದಿರುವುದರಿಂದ, ಪ್ಯೂ ರಿಸರ್ಚ್ ಎರಡೂ ದೇಶಗಳನ್ನು ಒಟ್ಟಿಗೆ ಅಧ್ಯಯನ ಮಾಡಿದೆ. ಭಾರತವು ಆಳವಾದ ಆರ್ಥಿಕ ಹಿಂಜರಿತದಲ್ಲಿ ಮುಳುಗಿತು. ಆದರೆ ಚೀನಾವು ಆರ್ಥಿಕ ಸಂಕುಚಿತತೆಯನ್ನು ತಡೆಯಲು ಸಾಧ್ಯವಾಯಿತು ಎಂದು ವರದಿ ವಿವರಿಸಿದೆ.

ಸಾಂಕ್ರಾಮಿಕ ರೋಗದ ಮೊದಲು, ವಿಶ್ವಬ್ಯಾಂಕ್ 2020 ರಲ್ಲಿ ಭಾರತದಲ್ಲಿ ನೈಜ ಜಿಡಿಪಿಯಲ್ಲಿ (ಶೇ. 5.8) ಮತ್ತು ಚೀನಾದಲ್ಲಿ (ಶೇ. 5.9) ಬಹುತೇಕ ಸಮಾನ ಬೆಳವಣಿಗೆಯನ್ನು ಅಂದಾಜಿಸಿತ್ತು.


ಇದನ್ನೂ ಓದಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...