Homeಮುಖಪುಟ2020 ರಲ್ಲಿ ಭಾರತದ ಬಡವರ ಸಂಖ್ಯೆ ದುಪ್ಪಟ್ಟು! ಮಧ್ಯಮ ವರ್ಗದ ಸಂಖ್ಯೆಯಲ್ಲೂ ಕುಸಿತ!

2020 ರಲ್ಲಿ ಭಾರತದ ಬಡವರ ಸಂಖ್ಯೆ ದುಪ್ಪಟ್ಟು! ಮಧ್ಯಮ ವರ್ಗದ ಸಂಖ್ಯೆಯಲ್ಲೂ ಕುಸಿತ!

- Advertisement -
- Advertisement -

ಸಾಂಕ್ರಾಮಿಕ ರೋಗ ಕೊರೊನಾ ಕಾರಣದಿಂದ ಉಂಟಾದ ಆರ್ಥಿಕ ಹಿಂಜರಿತದಿಂದಾಗಿ ಭಾರತದ ಮಧ್ಯಮ ವರ್ಗವು 2020 ರಲ್ಲಿ ಮೂರನೇ ಒಂದು ಭಾಗದಷ್ಟು ಕುಗ್ಗಿದೆ. ದೇಶದ ಬಡವರ ಸಂಖ್ಯೆ ದ್ವಿಗುಣಗೊಂಡಿದೆ ಎಂದು ವಾಷಿಂಗ್ಟನ್ ಮೂಲದ ಪ್ಯೂ ರಿಸರ್ಚ್ ಸಂಸ್ಥೆಯ ವರದಿ ತಿಳಿಸಿದೆ ಎಂದು ಟೆಲಿಗ್ರಾಫ್ ಆನ್‌ಲೈನ್ ವರದಿ ಮಾಡಿದೆ.

ವಾಷಿಂಗ್ಟನ್ ಮೂಲದ ಎನ್‌ಜಿಒ ಪ್ಯೂ ರಿಸರ್ಚ್ ಗುರುವಾರ ಬಿಡುಗಡೆ ಮಾಡಿರುವ ತನ್ನ ವರದಿಯಲ್ಲಿ ಕೊರೊನಾ ಸಾಂಕ್ರಾಮಿಕದಿಂದಾಗಿ ಆರ್ಥಿಕ ಹಿಂಜರಿತ ಹೆಚ್ಚಾಗಿದ್ದು ಬಡವರ ಸಂಖ್ಯೆಗೆ ದುಪ್ಪಟ್ಟುಗೊಳ್ಳಲು ಕಾರಣ ಎಂದು ಉಲ್ಲೇಖಿಸಿದೆ.

ಆರ್ಥಿಕ ಕುಸಿತದ ಪರಿಣಾಮವಾಗಿ, ಭಾರತದ ಮಧ್ಯಮ ವರ್ಗವು ಯಾವುದೇ ಸಾಂಕ್ರಾಮಿಕ ರೋಗಗಳಿಲ್ಲದಿದ್ದರೆ ಅದು ತಲುಪಬಹುದಾದ ಸಂಖ್ಯೆಯಿಂದ 32 ಮಿಲಿಯನ್ಂತಲೂ ಕಡಿಮೆಯಾಗಿದೆ (ದೈನಂದಿನ ಆದಾಯವು 725 ರಿಂದ 1,450 ರೂಪಾಯಿ ಇರುವ ವರ್ಗ).

ಸಾಂಕ್ರಾಮಿಕ ರೋಗದ ಮೊದಲು, 2020 ರಲ್ಲಿ ಭಾರತದಲ್ಲಿ 99 ಮಿಲಿಯನ್ ಜನರು ಮಧ್ಯಮ ವರ್ಗಕ್ಕೆ ಸೇರಿದವರು ಎಂದು ಅಂದಾಜಿಸಲಾಗಿದೆ. ಪ್ಯೂ ವರದಿ ಪ್ರಕಾರ, ಈ ಸಂಖ್ಯೆ ಈಗ 66 ಮಿಲಿಯನ್ ಹತ್ತಿರದಲ್ಲಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: 86 ಮೇಯರ್‌‌/ಅಧ್ಯಕ್ಷ ಸ್ಥಾನಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟ ‘ಜಗನ್‌’ ಸರ್ಕಾರ!

ಕೊರೊನಾ ಪ್ರೇರಿತ ಆರ್ಥಿಕ ಹಿಂಜರಿತದಿಂದಾಗಿ ಭಾರತದಲ್ಲಿ ಬಡವರ ಸಂಖ್ಯೆ (ದೈನಂದಿನ ಆದಾಯ 145 ರೂ. ಅಥವಾ ಅದಕ್ಕಿಂತ ಕಡಿಮೆ) 75 ಮಿಲಿಯನ್‌ಗೆ ಏರಿಕೆಯಾಗಿದೆ ಎಂದು ಅಂದಾಜಿಸಲಾಗಿದೆ. ಇದು ಬಡತನದ ಜಾಗತಿಕ ಹೆಚ್ಚಳದ ಶೇಕಡಾ 60 ರಷ್ಟಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸಕ್ಕೆ ಬೇಡಿಕೆ ಈಗ ಎಂದಿಗಿಂತ ಹೆಚ್ಚಾಗಿದೆ ಎಂದು ವರದಿ ಹೇಳುತ್ತದೆ. ಭಾರತದಲ್ಲಿ ಬಡವರ ಸಂಖ್ಯೆ 134 ಮಿಲಿಯನ್ ತಲುಪುವ ನಿರೀಕ್ಷೆಯಿದೆ. ಇದು ಆರ್ಥಿಕ ಹಿಂಜರಿತದ ಮೊದಲು ಅಂದಾಜು ಮಾಡಲಾದ 59 ದಶಲಕ್ಷಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ ಎಮದು ವರದಿ ತಿಳಿಸಿದೆ.

ಭಾರತ ಮತ್ತು ಚೀನಾ ಒಟ್ಟಾಗಿ ವಿಶ್ವದ ಜನಸಂಖ್ಯೆಯ ಮೂರನೇ ಒಂದು ಭಾಗವನ್ನು ಹೊಂದಿರುವುದರಿಂದ, ಪ್ಯೂ ರಿಸರ್ಚ್ ಎರಡೂ ದೇಶಗಳನ್ನು ಒಟ್ಟಿಗೆ ಅಧ್ಯಯನ ಮಾಡಿದೆ. ಭಾರತವು ಆಳವಾದ ಆರ್ಥಿಕ ಹಿಂಜರಿತದಲ್ಲಿ ಮುಳುಗಿತು. ಆದರೆ ಚೀನಾವು ಆರ್ಥಿಕ ಸಂಕುಚಿತತೆಯನ್ನು ತಡೆಯಲು ಸಾಧ್ಯವಾಯಿತು ಎಂದು ವರದಿ ವಿವರಿಸಿದೆ.

ಸಾಂಕ್ರಾಮಿಕ ರೋಗದ ಮೊದಲು, ವಿಶ್ವಬ್ಯಾಂಕ್ 2020 ರಲ್ಲಿ ಭಾರತದಲ್ಲಿ ನೈಜ ಜಿಡಿಪಿಯಲ್ಲಿ (ಶೇ. 5.8) ಮತ್ತು ಚೀನಾದಲ್ಲಿ (ಶೇ. 5.9) ಬಹುತೇಕ ಸಮಾನ ಬೆಳವಣಿಗೆಯನ್ನು ಅಂದಾಜಿಸಿತ್ತು.


ಇದನ್ನೂ ಓದಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...