Homeಮುಖಪುಟ2020 ರಲ್ಲಿ ಭಾರತದ ಬಡವರ ಸಂಖ್ಯೆ ದುಪ್ಪಟ್ಟು! ಮಧ್ಯಮ ವರ್ಗದ ಸಂಖ್ಯೆಯಲ್ಲೂ ಕುಸಿತ!

2020 ರಲ್ಲಿ ಭಾರತದ ಬಡವರ ಸಂಖ್ಯೆ ದುಪ್ಪಟ್ಟು! ಮಧ್ಯಮ ವರ್ಗದ ಸಂಖ್ಯೆಯಲ್ಲೂ ಕುಸಿತ!

- Advertisement -
- Advertisement -

ಸಾಂಕ್ರಾಮಿಕ ರೋಗ ಕೊರೊನಾ ಕಾರಣದಿಂದ ಉಂಟಾದ ಆರ್ಥಿಕ ಹಿಂಜರಿತದಿಂದಾಗಿ ಭಾರತದ ಮಧ್ಯಮ ವರ್ಗವು 2020 ರಲ್ಲಿ ಮೂರನೇ ಒಂದು ಭಾಗದಷ್ಟು ಕುಗ್ಗಿದೆ. ದೇಶದ ಬಡವರ ಸಂಖ್ಯೆ ದ್ವಿಗುಣಗೊಂಡಿದೆ ಎಂದು ವಾಷಿಂಗ್ಟನ್ ಮೂಲದ ಪ್ಯೂ ರಿಸರ್ಚ್ ಸಂಸ್ಥೆಯ ವರದಿ ತಿಳಿಸಿದೆ ಎಂದು ಟೆಲಿಗ್ರಾಫ್ ಆನ್‌ಲೈನ್ ವರದಿ ಮಾಡಿದೆ.

ವಾಷಿಂಗ್ಟನ್ ಮೂಲದ ಎನ್‌ಜಿಒ ಪ್ಯೂ ರಿಸರ್ಚ್ ಗುರುವಾರ ಬಿಡುಗಡೆ ಮಾಡಿರುವ ತನ್ನ ವರದಿಯಲ್ಲಿ ಕೊರೊನಾ ಸಾಂಕ್ರಾಮಿಕದಿಂದಾಗಿ ಆರ್ಥಿಕ ಹಿಂಜರಿತ ಹೆಚ್ಚಾಗಿದ್ದು ಬಡವರ ಸಂಖ್ಯೆಗೆ ದುಪ್ಪಟ್ಟುಗೊಳ್ಳಲು ಕಾರಣ ಎಂದು ಉಲ್ಲೇಖಿಸಿದೆ.

ಆರ್ಥಿಕ ಕುಸಿತದ ಪರಿಣಾಮವಾಗಿ, ಭಾರತದ ಮಧ್ಯಮ ವರ್ಗವು ಯಾವುದೇ ಸಾಂಕ್ರಾಮಿಕ ರೋಗಗಳಿಲ್ಲದಿದ್ದರೆ ಅದು ತಲುಪಬಹುದಾದ ಸಂಖ್ಯೆಯಿಂದ 32 ಮಿಲಿಯನ್ಂತಲೂ ಕಡಿಮೆಯಾಗಿದೆ (ದೈನಂದಿನ ಆದಾಯವು 725 ರಿಂದ 1,450 ರೂಪಾಯಿ ಇರುವ ವರ್ಗ).

ಸಾಂಕ್ರಾಮಿಕ ರೋಗದ ಮೊದಲು, 2020 ರಲ್ಲಿ ಭಾರತದಲ್ಲಿ 99 ಮಿಲಿಯನ್ ಜನರು ಮಧ್ಯಮ ವರ್ಗಕ್ಕೆ ಸೇರಿದವರು ಎಂದು ಅಂದಾಜಿಸಲಾಗಿದೆ. ಪ್ಯೂ ವರದಿ ಪ್ರಕಾರ, ಈ ಸಂಖ್ಯೆ ಈಗ 66 ಮಿಲಿಯನ್ ಹತ್ತಿರದಲ್ಲಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: 86 ಮೇಯರ್‌‌/ಅಧ್ಯಕ್ಷ ಸ್ಥಾನಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟ ‘ಜಗನ್‌’ ಸರ್ಕಾರ!

ಕೊರೊನಾ ಪ್ರೇರಿತ ಆರ್ಥಿಕ ಹಿಂಜರಿತದಿಂದಾಗಿ ಭಾರತದಲ್ಲಿ ಬಡವರ ಸಂಖ್ಯೆ (ದೈನಂದಿನ ಆದಾಯ 145 ರೂ. ಅಥವಾ ಅದಕ್ಕಿಂತ ಕಡಿಮೆ) 75 ಮಿಲಿಯನ್‌ಗೆ ಏರಿಕೆಯಾಗಿದೆ ಎಂದು ಅಂದಾಜಿಸಲಾಗಿದೆ. ಇದು ಬಡತನದ ಜಾಗತಿಕ ಹೆಚ್ಚಳದ ಶೇಕಡಾ 60 ರಷ್ಟಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸಕ್ಕೆ ಬೇಡಿಕೆ ಈಗ ಎಂದಿಗಿಂತ ಹೆಚ್ಚಾಗಿದೆ ಎಂದು ವರದಿ ಹೇಳುತ್ತದೆ. ಭಾರತದಲ್ಲಿ ಬಡವರ ಸಂಖ್ಯೆ 134 ಮಿಲಿಯನ್ ತಲುಪುವ ನಿರೀಕ್ಷೆಯಿದೆ. ಇದು ಆರ್ಥಿಕ ಹಿಂಜರಿತದ ಮೊದಲು ಅಂದಾಜು ಮಾಡಲಾದ 59 ದಶಲಕ್ಷಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ ಎಮದು ವರದಿ ತಿಳಿಸಿದೆ.

ಭಾರತ ಮತ್ತು ಚೀನಾ ಒಟ್ಟಾಗಿ ವಿಶ್ವದ ಜನಸಂಖ್ಯೆಯ ಮೂರನೇ ಒಂದು ಭಾಗವನ್ನು ಹೊಂದಿರುವುದರಿಂದ, ಪ್ಯೂ ರಿಸರ್ಚ್ ಎರಡೂ ದೇಶಗಳನ್ನು ಒಟ್ಟಿಗೆ ಅಧ್ಯಯನ ಮಾಡಿದೆ. ಭಾರತವು ಆಳವಾದ ಆರ್ಥಿಕ ಹಿಂಜರಿತದಲ್ಲಿ ಮುಳುಗಿತು. ಆದರೆ ಚೀನಾವು ಆರ್ಥಿಕ ಸಂಕುಚಿತತೆಯನ್ನು ತಡೆಯಲು ಸಾಧ್ಯವಾಯಿತು ಎಂದು ವರದಿ ವಿವರಿಸಿದೆ.

ಸಾಂಕ್ರಾಮಿಕ ರೋಗದ ಮೊದಲು, ವಿಶ್ವಬ್ಯಾಂಕ್ 2020 ರಲ್ಲಿ ಭಾರತದಲ್ಲಿ ನೈಜ ಜಿಡಿಪಿಯಲ್ಲಿ (ಶೇ. 5.8) ಮತ್ತು ಚೀನಾದಲ್ಲಿ (ಶೇ. 5.9) ಬಹುತೇಕ ಸಮಾನ ಬೆಳವಣಿಗೆಯನ್ನು ಅಂದಾಜಿಸಿತ್ತು.


ಇದನ್ನೂ ಓದಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...