Homeಮುಖಪುಟ2019-20ರಲ್ಲಿ ತಿರಸ್ಕರಿಸಿದ ಬೆಳೆ ವಿಮೆ ಹಕ್ಕುಗಳ ಸಂಖ್ಯೆ 9.28 ಲಕ್ಷ!

2019-20ರಲ್ಲಿ ತಿರಸ್ಕರಿಸಿದ ಬೆಳೆ ವಿಮೆ ಹಕ್ಕುಗಳ ಸಂಖ್ಯೆ 9.28 ಲಕ್ಷ!

ವಿಮಾ ಕಂಪೆನಿಗಳು ತಿರಸ್ಕರಿಸಿದ ರೈತರ ಬೆಳೆ ವಿಮೆ ಹಕ್ಕುಗಳ ಸಂಖ್ಯೆ ಕೇವಲ ಎರಡು ವರ್ಷಗಳಲ್ಲಿ 10 ಪಟ್ಟು ಹೆಚ್ಚಾಗಿದೆ

- Advertisement -
- Advertisement -

ಕೇಂದ್ರದ ಪ್ರಮುಖ ಪ್ರಧಾನ್ ಮಂತ್ರಿ ಫಸಲ್ ಬಿಮಾ ಯೋಜನೆ (ಪಿಎಂಎಫ್‌ಬಿವೈ) ಅಡಿಯಲ್ಲಿ ವಿಮಾ ಕಂಪೆನಿಗಳು ತಿರಸ್ಕರಿಸಿದ ರೈತರ ಬೆಳೆ ವಿಮೆ ಹಕ್ಕುಗಳ ಸಂಖ್ಯೆ ಕೇವಲ ಎರಡು ವರ್ಷಗಳಲ್ಲಿ 10 ಪಟ್ಟು ಹೆಚ್ಚಾಗಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ನೀಡಿದ ಶುಕ್ರವಾರ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ ತಿಳಿಸಿದ್ದಾರೆ.

2017-18ರಲ್ಲಿ, ತಿರಸ್ಕರಿಸಿದ ಹಕ್ಕುಗಳ ಸಂಖ್ಯೆ 92,869 ಆಗಿತ್ತು. ಮುಂದಿನ ವರ್ಷ, 2018-19ರಲ್ಲಿ ಈ ಸಂಖ್ಯೆ 2.04 ಲಕ್ಷಕ್ಕೆ ದ್ವಿಗುಣಗೊಂಡಿದೆ. 2019-20ರ ವೇಳೆಗೆ ಅದು 9.28 ಲಕ್ಷ ಆಗಿದ್ದು, ಇದು 900% ಹೆಚ್ಚಾಗಿದೆ.

ವಿಮೆ ಕಂಪೆನಿಗಳು ಬೆಳೆ ವಿಮೆ ಹಕ್ಕುಗಳನ್ನು ರೈತರಿಗೆ ನಿರಾಕರಿಸಿವೆಯೇ?

ಆ ನಿರ್ದಿಷ್ಟ ವರ್ಷಗಳಲ್ಲಿ ವಿವಿಧ ರಾಜ್ಯಗಳಿಂದ ವರದಿಯಾದ ಪ್ರಕರಣಗಳ ವಿವರಗಳು ಮತ್ತು ಈ ನಿಟ್ಟಿನಲ್ಲಿ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ತೃಣಮೂಲ ಕಾಂಗ್ರೆಸ್ ಸಂಸದ ಮನಸ್ ರಂಜನ್ ಭುನಿಯಾ ಪ್ರಶ್ನೆ ಎತ್ತಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ, ಕೃಷಿ ಸಚಿವ ತೋಮರ್ ಅವರು, ಪಿಎಂಎಫ್‌ಬಿವೈ ಅಡಿಯಲ್ಲಿ, ಬರ ಅಥವಾ ಪ್ರವಾಹದಂತಹ ವ್ಯಾಪಕವಾದ ನೈಸರ್ಗಿಕ ವಿಪತ್ತುಗಳ ಸಂದರ್ಭದಲ್ಲಿ ಬೆಳೆ ನಷ್ಟದ ಹಕ್ಕುಗಳನ್ನು ಸಲ್ಲಿಸುವ ಅಗತ್ಯವಿಲ್ಲ ಎಂದು ಗಮನಸೆಳೆದರು, ಏಕೆಂದರೆ ಇಡೀ ಘಟಕದ ಇಳುವರಿಯಲ್ಲಿನ ಕೊರತೆಯ ಆಧಾರದ ಮೇಲೆ ಹಕ್ಕುಗಳನ್ನು ಲೆಕ್ಕ ಹಾಕಲಾಗುತ್ತದೆ. ಋತುವಿನ (ಹಂಗಾಮಿನ) ಕೊನೆಯಲ್ಲಿ, ಮಾಡಲಾಗದ ಬಿತ್ತನೆ ಮತ್ತು ಮಧ್ಯಕಾಲೀನ ಪ್ರತಿಕೂಲ ಹಕ್ಕುಗಳನ್ನು ಪ್ರದೇಶದ ವಿಧಾನದ ಆಧಾರದ ಮೇಲೆ ಇತ್ಯರ್ಥಪಡಿಸಲಾಗಿದೆ. ಇದನ್ನು ಸಂಬಂಧಪಟ್ಟ ರಾಜ್ಯ ಸರ್ಕಾರಗಳು ಒದಗಿಸಿದ ಇಳುವರಿ ಡೇಟಾ ಮತ್ತು ಬೆಳೆ ಹಾನಿ ವರದಿಗಳನ್ನು ಪರಿಗಣಿಸಿ ನಿರ್ಣಯಿಸಲಾಗಿದೆ ಎಂದು ತೋಮರ್ ತಿಳಿಸಿದ್ದಾರೆ.

ಹೇಗಾದರೂ, ಆಲಿಕಲ್ಲು ಮಳೆ, ಭೂಕುಸಿತಗಳು, ಪ್ರವಾಹ, ಮೋಡದ ಸಿಡಿತ ಅಥವಾ ನೈಸರ್ಗಿಕ ಬೆಂಕಿಯ ಸ್ಥಳೀಯ ಅಪಾಯಗಳಿಂದಾಗಿ ಸಣ್ಣ ಪ್ರದೇಶಗಳ ಮೇಲೆ ಪರಿಣಾಮ ಬೀರುವ ಅಪಾಯಗಳು ಬಂದಾಗ ವಿಭಿನ್ನ ಪ್ರಕ್ರಿಯೆ ಅನುಸರಿಸಲಾಗಿದೆ. ಅಂತಹ ನಷ್ಟಗಳನ್ನು ವೈಯಕ್ತಿಕ ವಿಮೆ ಮಾಡಿದ ಜಮೀನು ಪರಿಗಣಿಸಿ, ಬೆಳೆ ನಷ್ಟದ ಮೌಲ್ಯಮಾಪನದ ಆಧಾರದ ಮೇಲೆ ಲೆಕ್ಕ ಹಾಕಲಾಗಿದೆ. ರೈತರು ಅಂತಹ ಬೆಳೆ ನಷ್ಟವನ್ನು ಸಂಬಂಧಪಟ್ಟ ವಿಮಾ ಕಂಪನಿ, ರಾಜ್ಯ ಸರ್ಕಾರ ಅಥವಾ ಹಣಕಾಸು ಸಂಸ್ಥೆಗಳಿಗೆ ತಿಳಿಸಿದ್ದಾರೆ ಮತ್ತು ಅವರ ಹಕ್ಕುಗಳನ್ನು (ಕ್ಲೈಮ್) ರಾಜ್ಯ ಸರ್ಕಾರ ಮತ್ತು ವಿಮಾ ಕಂಪನಿಯ ಪ್ರತಿನಿಧಿಗಳ ಜಂಟಿ ಸಮಿತಿಯು ನಿರ್ಣಯಿಸಿದೆ ಎಂದು ವಿವರಿಸಿದ್ದಾರೆ.

“ಆದ್ದರಿಂದ, ಈ ಕೆಲವು ಹಕ್ಕುಗಳನ್ನು ರೈತರು ತಡವಾಗಿ ತಿಳಿಸುವುದು, ವಿಮೆ ಮಾಡದ ರೈತರಿಗೆ ಅಥವಾ ವಿಮೆ ಮಾಡದ ಬೆಳೆಗಳಿಗೆ ಮತ್ತು ಅಪಾಯ ಸಂಭವಿಸದಿರುವುದು ಮುಂತಾದ ವಿವಿಧ ಕಾರಣಗಳಿಗಾಗಿ ವಿಮಾ ಕಂಪನಿಗಳು ಹಕ್ಕುಗಳನ್ನು ತಿರಸ್ಕರಿಸಬಹುದು” ಎಂದು ತೋಮರ್ ಹೇಳಿದರು. ನಂತರ ಅವರು ಹಕ್ಕುಗಳ ನಿರಾಕರಣೆಯ ಡೇಟಾವನ್ನು ನೀಡಿದರು, ಇದು ಎರಡು ವರ್ಷಗಳ ಅವಧಿಯಲ್ಲಿ 900% ಹೆಚ್ಚಳವನ್ನು ತೋರಿಸಿದೆ.


ಇದನ್ನೂ ಓದಿ: ರಾಜ್ಯಾದ್ಯಂತ ಯಶಸ್ವಿಯಾಗಿ ಜರುಗಿದ ಸಂಚಾರ ಸ್ಥಗಿತ ಹೋರಾಟ: ಹೆದ್ದಾರಿ ಬಂದ್ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...