Homeಮುಖಪುಟ2019-20ರಲ್ಲಿ ತಿರಸ್ಕರಿಸಿದ ಬೆಳೆ ವಿಮೆ ಹಕ್ಕುಗಳ ಸಂಖ್ಯೆ 9.28 ಲಕ್ಷ!

2019-20ರಲ್ಲಿ ತಿರಸ್ಕರಿಸಿದ ಬೆಳೆ ವಿಮೆ ಹಕ್ಕುಗಳ ಸಂಖ್ಯೆ 9.28 ಲಕ್ಷ!

ವಿಮಾ ಕಂಪೆನಿಗಳು ತಿರಸ್ಕರಿಸಿದ ರೈತರ ಬೆಳೆ ವಿಮೆ ಹಕ್ಕುಗಳ ಸಂಖ್ಯೆ ಕೇವಲ ಎರಡು ವರ್ಷಗಳಲ್ಲಿ 10 ಪಟ್ಟು ಹೆಚ್ಚಾಗಿದೆ

- Advertisement -
- Advertisement -

ಕೇಂದ್ರದ ಪ್ರಮುಖ ಪ್ರಧಾನ್ ಮಂತ್ರಿ ಫಸಲ್ ಬಿಮಾ ಯೋಜನೆ (ಪಿಎಂಎಫ್‌ಬಿವೈ) ಅಡಿಯಲ್ಲಿ ವಿಮಾ ಕಂಪೆನಿಗಳು ತಿರಸ್ಕರಿಸಿದ ರೈತರ ಬೆಳೆ ವಿಮೆ ಹಕ್ಕುಗಳ ಸಂಖ್ಯೆ ಕೇವಲ ಎರಡು ವರ್ಷಗಳಲ್ಲಿ 10 ಪಟ್ಟು ಹೆಚ್ಚಾಗಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ನೀಡಿದ ಶುಕ್ರವಾರ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ ತಿಳಿಸಿದ್ದಾರೆ.

2017-18ರಲ್ಲಿ, ತಿರಸ್ಕರಿಸಿದ ಹಕ್ಕುಗಳ ಸಂಖ್ಯೆ 92,869 ಆಗಿತ್ತು. ಮುಂದಿನ ವರ್ಷ, 2018-19ರಲ್ಲಿ ಈ ಸಂಖ್ಯೆ 2.04 ಲಕ್ಷಕ್ಕೆ ದ್ವಿಗುಣಗೊಂಡಿದೆ. 2019-20ರ ವೇಳೆಗೆ ಅದು 9.28 ಲಕ್ಷ ಆಗಿದ್ದು, ಇದು 900% ಹೆಚ್ಚಾಗಿದೆ.

ವಿಮೆ ಕಂಪೆನಿಗಳು ಬೆಳೆ ವಿಮೆ ಹಕ್ಕುಗಳನ್ನು ರೈತರಿಗೆ ನಿರಾಕರಿಸಿವೆಯೇ?

ಆ ನಿರ್ದಿಷ್ಟ ವರ್ಷಗಳಲ್ಲಿ ವಿವಿಧ ರಾಜ್ಯಗಳಿಂದ ವರದಿಯಾದ ಪ್ರಕರಣಗಳ ವಿವರಗಳು ಮತ್ತು ಈ ನಿಟ್ಟಿನಲ್ಲಿ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ತೃಣಮೂಲ ಕಾಂಗ್ರೆಸ್ ಸಂಸದ ಮನಸ್ ರಂಜನ್ ಭುನಿಯಾ ಪ್ರಶ್ನೆ ಎತ್ತಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ, ಕೃಷಿ ಸಚಿವ ತೋಮರ್ ಅವರು, ಪಿಎಂಎಫ್‌ಬಿವೈ ಅಡಿಯಲ್ಲಿ, ಬರ ಅಥವಾ ಪ್ರವಾಹದಂತಹ ವ್ಯಾಪಕವಾದ ನೈಸರ್ಗಿಕ ವಿಪತ್ತುಗಳ ಸಂದರ್ಭದಲ್ಲಿ ಬೆಳೆ ನಷ್ಟದ ಹಕ್ಕುಗಳನ್ನು ಸಲ್ಲಿಸುವ ಅಗತ್ಯವಿಲ್ಲ ಎಂದು ಗಮನಸೆಳೆದರು, ಏಕೆಂದರೆ ಇಡೀ ಘಟಕದ ಇಳುವರಿಯಲ್ಲಿನ ಕೊರತೆಯ ಆಧಾರದ ಮೇಲೆ ಹಕ್ಕುಗಳನ್ನು ಲೆಕ್ಕ ಹಾಕಲಾಗುತ್ತದೆ. ಋತುವಿನ (ಹಂಗಾಮಿನ) ಕೊನೆಯಲ್ಲಿ, ಮಾಡಲಾಗದ ಬಿತ್ತನೆ ಮತ್ತು ಮಧ್ಯಕಾಲೀನ ಪ್ರತಿಕೂಲ ಹಕ್ಕುಗಳನ್ನು ಪ್ರದೇಶದ ವಿಧಾನದ ಆಧಾರದ ಮೇಲೆ ಇತ್ಯರ್ಥಪಡಿಸಲಾಗಿದೆ. ಇದನ್ನು ಸಂಬಂಧಪಟ್ಟ ರಾಜ್ಯ ಸರ್ಕಾರಗಳು ಒದಗಿಸಿದ ಇಳುವರಿ ಡೇಟಾ ಮತ್ತು ಬೆಳೆ ಹಾನಿ ವರದಿಗಳನ್ನು ಪರಿಗಣಿಸಿ ನಿರ್ಣಯಿಸಲಾಗಿದೆ ಎಂದು ತೋಮರ್ ತಿಳಿಸಿದ್ದಾರೆ.

ಹೇಗಾದರೂ, ಆಲಿಕಲ್ಲು ಮಳೆ, ಭೂಕುಸಿತಗಳು, ಪ್ರವಾಹ, ಮೋಡದ ಸಿಡಿತ ಅಥವಾ ನೈಸರ್ಗಿಕ ಬೆಂಕಿಯ ಸ್ಥಳೀಯ ಅಪಾಯಗಳಿಂದಾಗಿ ಸಣ್ಣ ಪ್ರದೇಶಗಳ ಮೇಲೆ ಪರಿಣಾಮ ಬೀರುವ ಅಪಾಯಗಳು ಬಂದಾಗ ವಿಭಿನ್ನ ಪ್ರಕ್ರಿಯೆ ಅನುಸರಿಸಲಾಗಿದೆ. ಅಂತಹ ನಷ್ಟಗಳನ್ನು ವೈಯಕ್ತಿಕ ವಿಮೆ ಮಾಡಿದ ಜಮೀನು ಪರಿಗಣಿಸಿ, ಬೆಳೆ ನಷ್ಟದ ಮೌಲ್ಯಮಾಪನದ ಆಧಾರದ ಮೇಲೆ ಲೆಕ್ಕ ಹಾಕಲಾಗಿದೆ. ರೈತರು ಅಂತಹ ಬೆಳೆ ನಷ್ಟವನ್ನು ಸಂಬಂಧಪಟ್ಟ ವಿಮಾ ಕಂಪನಿ, ರಾಜ್ಯ ಸರ್ಕಾರ ಅಥವಾ ಹಣಕಾಸು ಸಂಸ್ಥೆಗಳಿಗೆ ತಿಳಿಸಿದ್ದಾರೆ ಮತ್ತು ಅವರ ಹಕ್ಕುಗಳನ್ನು (ಕ್ಲೈಮ್) ರಾಜ್ಯ ಸರ್ಕಾರ ಮತ್ತು ವಿಮಾ ಕಂಪನಿಯ ಪ್ರತಿನಿಧಿಗಳ ಜಂಟಿ ಸಮಿತಿಯು ನಿರ್ಣಯಿಸಿದೆ ಎಂದು ವಿವರಿಸಿದ್ದಾರೆ.

“ಆದ್ದರಿಂದ, ಈ ಕೆಲವು ಹಕ್ಕುಗಳನ್ನು ರೈತರು ತಡವಾಗಿ ತಿಳಿಸುವುದು, ವಿಮೆ ಮಾಡದ ರೈತರಿಗೆ ಅಥವಾ ವಿಮೆ ಮಾಡದ ಬೆಳೆಗಳಿಗೆ ಮತ್ತು ಅಪಾಯ ಸಂಭವಿಸದಿರುವುದು ಮುಂತಾದ ವಿವಿಧ ಕಾರಣಗಳಿಗಾಗಿ ವಿಮಾ ಕಂಪನಿಗಳು ಹಕ್ಕುಗಳನ್ನು ತಿರಸ್ಕರಿಸಬಹುದು” ಎಂದು ತೋಮರ್ ಹೇಳಿದರು. ನಂತರ ಅವರು ಹಕ್ಕುಗಳ ನಿರಾಕರಣೆಯ ಡೇಟಾವನ್ನು ನೀಡಿದರು, ಇದು ಎರಡು ವರ್ಷಗಳ ಅವಧಿಯಲ್ಲಿ 900% ಹೆಚ್ಚಳವನ್ನು ತೋರಿಸಿದೆ.


ಇದನ್ನೂ ಓದಿ: ರಾಜ್ಯಾದ್ಯಂತ ಯಶಸ್ವಿಯಾಗಿ ಜರುಗಿದ ಸಂಚಾರ ಸ್ಥಗಿತ ಹೋರಾಟ: ಹೆದ್ದಾರಿ ಬಂದ್ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...