Homeಮುಖಪುಟ2019-20ರಲ್ಲಿ ತಿರಸ್ಕರಿಸಿದ ಬೆಳೆ ವಿಮೆ ಹಕ್ಕುಗಳ ಸಂಖ್ಯೆ 9.28 ಲಕ್ಷ!

2019-20ರಲ್ಲಿ ತಿರಸ್ಕರಿಸಿದ ಬೆಳೆ ವಿಮೆ ಹಕ್ಕುಗಳ ಸಂಖ್ಯೆ 9.28 ಲಕ್ಷ!

ವಿಮಾ ಕಂಪೆನಿಗಳು ತಿರಸ್ಕರಿಸಿದ ರೈತರ ಬೆಳೆ ವಿಮೆ ಹಕ್ಕುಗಳ ಸಂಖ್ಯೆ ಕೇವಲ ಎರಡು ವರ್ಷಗಳಲ್ಲಿ 10 ಪಟ್ಟು ಹೆಚ್ಚಾಗಿದೆ

- Advertisement -
- Advertisement -

ಕೇಂದ್ರದ ಪ್ರಮುಖ ಪ್ರಧಾನ್ ಮಂತ್ರಿ ಫಸಲ್ ಬಿಮಾ ಯೋಜನೆ (ಪಿಎಂಎಫ್‌ಬಿವೈ) ಅಡಿಯಲ್ಲಿ ವಿಮಾ ಕಂಪೆನಿಗಳು ತಿರಸ್ಕರಿಸಿದ ರೈತರ ಬೆಳೆ ವಿಮೆ ಹಕ್ಕುಗಳ ಸಂಖ್ಯೆ ಕೇವಲ ಎರಡು ವರ್ಷಗಳಲ್ಲಿ 10 ಪಟ್ಟು ಹೆಚ್ಚಾಗಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ನೀಡಿದ ಶುಕ್ರವಾರ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ ತಿಳಿಸಿದ್ದಾರೆ.

2017-18ರಲ್ಲಿ, ತಿರಸ್ಕರಿಸಿದ ಹಕ್ಕುಗಳ ಸಂಖ್ಯೆ 92,869 ಆಗಿತ್ತು. ಮುಂದಿನ ವರ್ಷ, 2018-19ರಲ್ಲಿ ಈ ಸಂಖ್ಯೆ 2.04 ಲಕ್ಷಕ್ಕೆ ದ್ವಿಗುಣಗೊಂಡಿದೆ. 2019-20ರ ವೇಳೆಗೆ ಅದು 9.28 ಲಕ್ಷ ಆಗಿದ್ದು, ಇದು 900% ಹೆಚ್ಚಾಗಿದೆ.

ವಿಮೆ ಕಂಪೆನಿಗಳು ಬೆಳೆ ವಿಮೆ ಹಕ್ಕುಗಳನ್ನು ರೈತರಿಗೆ ನಿರಾಕರಿಸಿವೆಯೇ?

ಆ ನಿರ್ದಿಷ್ಟ ವರ್ಷಗಳಲ್ಲಿ ವಿವಿಧ ರಾಜ್ಯಗಳಿಂದ ವರದಿಯಾದ ಪ್ರಕರಣಗಳ ವಿವರಗಳು ಮತ್ತು ಈ ನಿಟ್ಟಿನಲ್ಲಿ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ತೃಣಮೂಲ ಕಾಂಗ್ರೆಸ್ ಸಂಸದ ಮನಸ್ ರಂಜನ್ ಭುನಿಯಾ ಪ್ರಶ್ನೆ ಎತ್ತಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ, ಕೃಷಿ ಸಚಿವ ತೋಮರ್ ಅವರು, ಪಿಎಂಎಫ್‌ಬಿವೈ ಅಡಿಯಲ್ಲಿ, ಬರ ಅಥವಾ ಪ್ರವಾಹದಂತಹ ವ್ಯಾಪಕವಾದ ನೈಸರ್ಗಿಕ ವಿಪತ್ತುಗಳ ಸಂದರ್ಭದಲ್ಲಿ ಬೆಳೆ ನಷ್ಟದ ಹಕ್ಕುಗಳನ್ನು ಸಲ್ಲಿಸುವ ಅಗತ್ಯವಿಲ್ಲ ಎಂದು ಗಮನಸೆಳೆದರು, ಏಕೆಂದರೆ ಇಡೀ ಘಟಕದ ಇಳುವರಿಯಲ್ಲಿನ ಕೊರತೆಯ ಆಧಾರದ ಮೇಲೆ ಹಕ್ಕುಗಳನ್ನು ಲೆಕ್ಕ ಹಾಕಲಾಗುತ್ತದೆ. ಋತುವಿನ (ಹಂಗಾಮಿನ) ಕೊನೆಯಲ್ಲಿ, ಮಾಡಲಾಗದ ಬಿತ್ತನೆ ಮತ್ತು ಮಧ್ಯಕಾಲೀನ ಪ್ರತಿಕೂಲ ಹಕ್ಕುಗಳನ್ನು ಪ್ರದೇಶದ ವಿಧಾನದ ಆಧಾರದ ಮೇಲೆ ಇತ್ಯರ್ಥಪಡಿಸಲಾಗಿದೆ. ಇದನ್ನು ಸಂಬಂಧಪಟ್ಟ ರಾಜ್ಯ ಸರ್ಕಾರಗಳು ಒದಗಿಸಿದ ಇಳುವರಿ ಡೇಟಾ ಮತ್ತು ಬೆಳೆ ಹಾನಿ ವರದಿಗಳನ್ನು ಪರಿಗಣಿಸಿ ನಿರ್ಣಯಿಸಲಾಗಿದೆ ಎಂದು ತೋಮರ್ ತಿಳಿಸಿದ್ದಾರೆ.

ಹೇಗಾದರೂ, ಆಲಿಕಲ್ಲು ಮಳೆ, ಭೂಕುಸಿತಗಳು, ಪ್ರವಾಹ, ಮೋಡದ ಸಿಡಿತ ಅಥವಾ ನೈಸರ್ಗಿಕ ಬೆಂಕಿಯ ಸ್ಥಳೀಯ ಅಪಾಯಗಳಿಂದಾಗಿ ಸಣ್ಣ ಪ್ರದೇಶಗಳ ಮೇಲೆ ಪರಿಣಾಮ ಬೀರುವ ಅಪಾಯಗಳು ಬಂದಾಗ ವಿಭಿನ್ನ ಪ್ರಕ್ರಿಯೆ ಅನುಸರಿಸಲಾಗಿದೆ. ಅಂತಹ ನಷ್ಟಗಳನ್ನು ವೈಯಕ್ತಿಕ ವಿಮೆ ಮಾಡಿದ ಜಮೀನು ಪರಿಗಣಿಸಿ, ಬೆಳೆ ನಷ್ಟದ ಮೌಲ್ಯಮಾಪನದ ಆಧಾರದ ಮೇಲೆ ಲೆಕ್ಕ ಹಾಕಲಾಗಿದೆ. ರೈತರು ಅಂತಹ ಬೆಳೆ ನಷ್ಟವನ್ನು ಸಂಬಂಧಪಟ್ಟ ವಿಮಾ ಕಂಪನಿ, ರಾಜ್ಯ ಸರ್ಕಾರ ಅಥವಾ ಹಣಕಾಸು ಸಂಸ್ಥೆಗಳಿಗೆ ತಿಳಿಸಿದ್ದಾರೆ ಮತ್ತು ಅವರ ಹಕ್ಕುಗಳನ್ನು (ಕ್ಲೈಮ್) ರಾಜ್ಯ ಸರ್ಕಾರ ಮತ್ತು ವಿಮಾ ಕಂಪನಿಯ ಪ್ರತಿನಿಧಿಗಳ ಜಂಟಿ ಸಮಿತಿಯು ನಿರ್ಣಯಿಸಿದೆ ಎಂದು ವಿವರಿಸಿದ್ದಾರೆ.

“ಆದ್ದರಿಂದ, ಈ ಕೆಲವು ಹಕ್ಕುಗಳನ್ನು ರೈತರು ತಡವಾಗಿ ತಿಳಿಸುವುದು, ವಿಮೆ ಮಾಡದ ರೈತರಿಗೆ ಅಥವಾ ವಿಮೆ ಮಾಡದ ಬೆಳೆಗಳಿಗೆ ಮತ್ತು ಅಪಾಯ ಸಂಭವಿಸದಿರುವುದು ಮುಂತಾದ ವಿವಿಧ ಕಾರಣಗಳಿಗಾಗಿ ವಿಮಾ ಕಂಪನಿಗಳು ಹಕ್ಕುಗಳನ್ನು ತಿರಸ್ಕರಿಸಬಹುದು” ಎಂದು ತೋಮರ್ ಹೇಳಿದರು. ನಂತರ ಅವರು ಹಕ್ಕುಗಳ ನಿರಾಕರಣೆಯ ಡೇಟಾವನ್ನು ನೀಡಿದರು, ಇದು ಎರಡು ವರ್ಷಗಳ ಅವಧಿಯಲ್ಲಿ 900% ಹೆಚ್ಚಳವನ್ನು ತೋರಿಸಿದೆ.


ಇದನ್ನೂ ಓದಿ: ರಾಜ್ಯಾದ್ಯಂತ ಯಶಸ್ವಿಯಾಗಿ ಜರುಗಿದ ಸಂಚಾರ ಸ್ಥಗಿತ ಹೋರಾಟ: ಹೆದ್ದಾರಿ ಬಂದ್ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...