Homeಮುಖಪುಟ2019-20ರಲ್ಲಿ ತಿರಸ್ಕರಿಸಿದ ಬೆಳೆ ವಿಮೆ ಹಕ್ಕುಗಳ ಸಂಖ್ಯೆ 9.28 ಲಕ್ಷ!

2019-20ರಲ್ಲಿ ತಿರಸ್ಕರಿಸಿದ ಬೆಳೆ ವಿಮೆ ಹಕ್ಕುಗಳ ಸಂಖ್ಯೆ 9.28 ಲಕ್ಷ!

ವಿಮಾ ಕಂಪೆನಿಗಳು ತಿರಸ್ಕರಿಸಿದ ರೈತರ ಬೆಳೆ ವಿಮೆ ಹಕ್ಕುಗಳ ಸಂಖ್ಯೆ ಕೇವಲ ಎರಡು ವರ್ಷಗಳಲ್ಲಿ 10 ಪಟ್ಟು ಹೆಚ್ಚಾಗಿದೆ

- Advertisement -
- Advertisement -

ಕೇಂದ್ರದ ಪ್ರಮುಖ ಪ್ರಧಾನ್ ಮಂತ್ರಿ ಫಸಲ್ ಬಿಮಾ ಯೋಜನೆ (ಪಿಎಂಎಫ್‌ಬಿವೈ) ಅಡಿಯಲ್ಲಿ ವಿಮಾ ಕಂಪೆನಿಗಳು ತಿರಸ್ಕರಿಸಿದ ರೈತರ ಬೆಳೆ ವಿಮೆ ಹಕ್ಕುಗಳ ಸಂಖ್ಯೆ ಕೇವಲ ಎರಡು ವರ್ಷಗಳಲ್ಲಿ 10 ಪಟ್ಟು ಹೆಚ್ಚಾಗಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ನೀಡಿದ ಶುಕ್ರವಾರ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ ತಿಳಿಸಿದ್ದಾರೆ.

2017-18ರಲ್ಲಿ, ತಿರಸ್ಕರಿಸಿದ ಹಕ್ಕುಗಳ ಸಂಖ್ಯೆ 92,869 ಆಗಿತ್ತು. ಮುಂದಿನ ವರ್ಷ, 2018-19ರಲ್ಲಿ ಈ ಸಂಖ್ಯೆ 2.04 ಲಕ್ಷಕ್ಕೆ ದ್ವಿಗುಣಗೊಂಡಿದೆ. 2019-20ರ ವೇಳೆಗೆ ಅದು 9.28 ಲಕ್ಷ ಆಗಿದ್ದು, ಇದು 900% ಹೆಚ್ಚಾಗಿದೆ.

ವಿಮೆ ಕಂಪೆನಿಗಳು ಬೆಳೆ ವಿಮೆ ಹಕ್ಕುಗಳನ್ನು ರೈತರಿಗೆ ನಿರಾಕರಿಸಿವೆಯೇ?

ಆ ನಿರ್ದಿಷ್ಟ ವರ್ಷಗಳಲ್ಲಿ ವಿವಿಧ ರಾಜ್ಯಗಳಿಂದ ವರದಿಯಾದ ಪ್ರಕರಣಗಳ ವಿವರಗಳು ಮತ್ತು ಈ ನಿಟ್ಟಿನಲ್ಲಿ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ತೃಣಮೂಲ ಕಾಂಗ್ರೆಸ್ ಸಂಸದ ಮನಸ್ ರಂಜನ್ ಭುನಿಯಾ ಪ್ರಶ್ನೆ ಎತ್ತಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ, ಕೃಷಿ ಸಚಿವ ತೋಮರ್ ಅವರು, ಪಿಎಂಎಫ್‌ಬಿವೈ ಅಡಿಯಲ್ಲಿ, ಬರ ಅಥವಾ ಪ್ರವಾಹದಂತಹ ವ್ಯಾಪಕವಾದ ನೈಸರ್ಗಿಕ ವಿಪತ್ತುಗಳ ಸಂದರ್ಭದಲ್ಲಿ ಬೆಳೆ ನಷ್ಟದ ಹಕ್ಕುಗಳನ್ನು ಸಲ್ಲಿಸುವ ಅಗತ್ಯವಿಲ್ಲ ಎಂದು ಗಮನಸೆಳೆದರು, ಏಕೆಂದರೆ ಇಡೀ ಘಟಕದ ಇಳುವರಿಯಲ್ಲಿನ ಕೊರತೆಯ ಆಧಾರದ ಮೇಲೆ ಹಕ್ಕುಗಳನ್ನು ಲೆಕ್ಕ ಹಾಕಲಾಗುತ್ತದೆ. ಋತುವಿನ (ಹಂಗಾಮಿನ) ಕೊನೆಯಲ್ಲಿ, ಮಾಡಲಾಗದ ಬಿತ್ತನೆ ಮತ್ತು ಮಧ್ಯಕಾಲೀನ ಪ್ರತಿಕೂಲ ಹಕ್ಕುಗಳನ್ನು ಪ್ರದೇಶದ ವಿಧಾನದ ಆಧಾರದ ಮೇಲೆ ಇತ್ಯರ್ಥಪಡಿಸಲಾಗಿದೆ. ಇದನ್ನು ಸಂಬಂಧಪಟ್ಟ ರಾಜ್ಯ ಸರ್ಕಾರಗಳು ಒದಗಿಸಿದ ಇಳುವರಿ ಡೇಟಾ ಮತ್ತು ಬೆಳೆ ಹಾನಿ ವರದಿಗಳನ್ನು ಪರಿಗಣಿಸಿ ನಿರ್ಣಯಿಸಲಾಗಿದೆ ಎಂದು ತೋಮರ್ ತಿಳಿಸಿದ್ದಾರೆ.

ಹೇಗಾದರೂ, ಆಲಿಕಲ್ಲು ಮಳೆ, ಭೂಕುಸಿತಗಳು, ಪ್ರವಾಹ, ಮೋಡದ ಸಿಡಿತ ಅಥವಾ ನೈಸರ್ಗಿಕ ಬೆಂಕಿಯ ಸ್ಥಳೀಯ ಅಪಾಯಗಳಿಂದಾಗಿ ಸಣ್ಣ ಪ್ರದೇಶಗಳ ಮೇಲೆ ಪರಿಣಾಮ ಬೀರುವ ಅಪಾಯಗಳು ಬಂದಾಗ ವಿಭಿನ್ನ ಪ್ರಕ್ರಿಯೆ ಅನುಸರಿಸಲಾಗಿದೆ. ಅಂತಹ ನಷ್ಟಗಳನ್ನು ವೈಯಕ್ತಿಕ ವಿಮೆ ಮಾಡಿದ ಜಮೀನು ಪರಿಗಣಿಸಿ, ಬೆಳೆ ನಷ್ಟದ ಮೌಲ್ಯಮಾಪನದ ಆಧಾರದ ಮೇಲೆ ಲೆಕ್ಕ ಹಾಕಲಾಗಿದೆ. ರೈತರು ಅಂತಹ ಬೆಳೆ ನಷ್ಟವನ್ನು ಸಂಬಂಧಪಟ್ಟ ವಿಮಾ ಕಂಪನಿ, ರಾಜ್ಯ ಸರ್ಕಾರ ಅಥವಾ ಹಣಕಾಸು ಸಂಸ್ಥೆಗಳಿಗೆ ತಿಳಿಸಿದ್ದಾರೆ ಮತ್ತು ಅವರ ಹಕ್ಕುಗಳನ್ನು (ಕ್ಲೈಮ್) ರಾಜ್ಯ ಸರ್ಕಾರ ಮತ್ತು ವಿಮಾ ಕಂಪನಿಯ ಪ್ರತಿನಿಧಿಗಳ ಜಂಟಿ ಸಮಿತಿಯು ನಿರ್ಣಯಿಸಿದೆ ಎಂದು ವಿವರಿಸಿದ್ದಾರೆ.

“ಆದ್ದರಿಂದ, ಈ ಕೆಲವು ಹಕ್ಕುಗಳನ್ನು ರೈತರು ತಡವಾಗಿ ತಿಳಿಸುವುದು, ವಿಮೆ ಮಾಡದ ರೈತರಿಗೆ ಅಥವಾ ವಿಮೆ ಮಾಡದ ಬೆಳೆಗಳಿಗೆ ಮತ್ತು ಅಪಾಯ ಸಂಭವಿಸದಿರುವುದು ಮುಂತಾದ ವಿವಿಧ ಕಾರಣಗಳಿಗಾಗಿ ವಿಮಾ ಕಂಪನಿಗಳು ಹಕ್ಕುಗಳನ್ನು ತಿರಸ್ಕರಿಸಬಹುದು” ಎಂದು ತೋಮರ್ ಹೇಳಿದರು. ನಂತರ ಅವರು ಹಕ್ಕುಗಳ ನಿರಾಕರಣೆಯ ಡೇಟಾವನ್ನು ನೀಡಿದರು, ಇದು ಎರಡು ವರ್ಷಗಳ ಅವಧಿಯಲ್ಲಿ 900% ಹೆಚ್ಚಳವನ್ನು ತೋರಿಸಿದೆ.


ಇದನ್ನೂ ಓದಿ: ರಾಜ್ಯಾದ್ಯಂತ ಯಶಸ್ವಿಯಾಗಿ ಜರುಗಿದ ಸಂಚಾರ ಸ್ಥಗಿತ ಹೋರಾಟ: ಹೆದ್ದಾರಿ ಬಂದ್ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...