Homeಮುಖಪುಟಹಿಡಿತವಿಲ್ಲದ ನಾಲಿಗೆಯಿಂದ ರಾಷ್ಟ್ರಕ್ಕೆ ಬೆಂಕಿ ಹಚ್ಚಿದೆ: ನೂಪುರ್ ಶರ್ಮಾ ಇಡೀ ದೇಶದ ಎದುರು ಕ್ಷಮೆ ಕೇಳಬೇಕು-...

ಹಿಡಿತವಿಲ್ಲದ ನಾಲಿಗೆಯಿಂದ ರಾಷ್ಟ್ರಕ್ಕೆ ಬೆಂಕಿ ಹಚ್ಚಿದೆ: ನೂಪುರ್ ಶರ್ಮಾ ಇಡೀ ದೇಶದ ಎದುರು ಕ್ಷಮೆ ಕೇಳಬೇಕು- ಸುಪ್ರೀಂ

ಟಿವಿ ಚಾನೆಲ್‌ ಡಿಬೇಟ್‌ನಲ್ಲಿನ ಅವರ ಹೇಳಿಕೆಗಳು ಅವರ ಹಠಮಾರಿ ಮತ್ತು ಸೊಕ್ಕಿನ ಸ್ವಭಾವವನ್ನು ತೋರಿಸುತ್ತವೆ ಎಂದು ನ್ಯಾಯಾಲಯ ಹೇಳಿದೆ.

- Advertisement -
- Advertisement -

ಪ್ರವಾದಿ ಮೊಹಮ್ಮದ್‌ರವರನ್ನು ನಿಂದಿಸಿದ್ದ ಬಿಜೆಪಿಯ ಉಚ್ಛಾಟಿತ ನಾಯಕಿ ನೂಪುರ್ ಶರ್ಮಾ ಇಡೀ ರಾಷ್ಟ್ರದ ಎದುರು ಕ್ಷಮೆ ಕೇಳಬೇಕೆಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.

ತನ್ನ ಮೇಲೆ ದೇಶಾದ್ಯಂತ ದಾಖಲಾಗಿರುವ ಪ್ರಕರಣಗಳನ್ನು ಒಂದೇ ಎಫ್‌ಐಆರ್‌ಗೆ ವರ್ಗಾಹಿಸುವಂತೆ ಆರೋಪಿ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ “ದೇಶದಲ್ಲಿ ಉಂಟಾದ ಉದ್ವಿಗ್ನ ವಾತಾವರಣಕ್ಕೆ ನೂಪುರ್ ಶರ್ಮಾ ಒಬ್ಬರೆ ಕಾರಣವಾಗಿದ್ದಾರೆ” ಎಂದು ಅಭಿಪ್ರಾಯಪಟ್ಟಿದೆ.

“ಅವರು ಹಾಗೆ ಮಾತನಾಡಲು ಹೇಗೆ ಪ್ರಚೋದಿಸಲಾಯಿತು ಎಂಬ ಚರ್ಚೆ ನಡೆಯುತ್ತಿದೆ. ಆದರೆ ಅವರು ಇದನ್ನೆಲ್ಲ ಹೇಳಿದ ರೀತಿ ಮತ್ತು ನಂತರ ತಾನು ವಕೀಲೆ ಎಂದು ಹೇಳುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಅವರು ಇಡೀ ದೇಶದ ಕ್ಷಮೆಯಾಚಿಸಬೇಕು” ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಹೇಳಿದ್ದಾರೆ.

ಅರ್ಜಿದಾರರು ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ ಎಂದು ವಕೀಲರು ವಾದಿಸಿದಾಗ, “ಅವರಿಗೆ ಬೆದರಿಕೆ ಇದೆಯೊ ಅಥವಾ ಅವರಿಂದ ದೇಶದ ಭದ್ರತೆಗೆ ಬೆದರಿಕೆಯಿದೆಯೊ? ಅವರು ದೇಶದಾದ್ಯಂತ ಶಾಂತಿ ಸುರಕ್ಷತೆಗೆ ಧಕ್ಕೆ ತಂದಿದ್ದಾರೆ. ಇಂದು ದೇಶದಲ್ಲಿ ಏನಾಗುತ್ತಿದೆಯೊ ಅದಕ್ಕೆ ಈ ಮಹಿಳೆ ಏಕಾಂಗಿಯಾಗಿ ಜವಾಬ್ದಾರಳು” ಎಂದು ಸೂರ್ಯ ಕಾಂತ್ ಹೇಳಿದ್ದಾರೆ.

ಟಿವಿ ಚಾನೆಲ್‌ ಡಿಬೇಟ್‌ನಲ್ಲಿನ ಅವರ ಹೇಳಿಕೆಗಳು ಅವರ ಹಠಮಾರಿ ಮತ್ತು ಸೊಕ್ಕಿನ ಸ್ವಭಾವವನ್ನು ತೋರಿಸುತ್ತವೆ ಎಂದು ನ್ಯಾಯಾಲಯ ಹೇಳಿದೆ. ಅವರು ಒಂದು ಪಕ್ಷದ ವಕ್ತಾರರಾದರೆ ಮಾತ್ರಕ್ಕೆ ತನಗೆ ಅಧಿಕಾರವಿದೆ ಎಂದು ಭಾವಿಸಿ ದೇಶದ ಕಾನೂನನ್ನು ಗೌರವಿಸದೆ ಯಾವುದೇ ಹೇಳಿಕೆ ನೀಡಬಹುದೇ? ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಪ್ರಶ್ನಿಸಿದ್ದಾರೆ.

ಚಾನೆಲ್ ನಿರೂಪಕರ ಪ್ರಶ್ನೆಗಳಿಗೆ ಅವರು ಹಾಗೆ ಉತ್ತರಿಸಿದ್ದಾರೆ ಎಂಬ ವಕೀಲರ ವಾದಕ್ಕೆ ಉತ್ತರಿಸಿದ ನ್ಯಾಯಮೂರ್ತಿಗಳು ಹಾಗಾದರೆ ಚಾನೆಲ್ ನಿರೂಪಕರ ಮೇಲೂ ಪ್ರಕರಣ ದಾಖಲಿಸಿ ಎಂದಿದ್ದಾರೆ.

ದೆಹಲಿ ಪೊಲೀಸರು ಮತ್ತು ಚರ್ಚೆ ನಡೆಸುತ್ತಿದ್ದ ಟಿವಿ ಚಾನೆಲ್ ಅನ್ನು ತರಾಟೆಗೆ ತೆಗೆದುಕೊಂಡ ಪೀಠವು “ದೆಹಲಿ ಪೊಲೀಸರು ಏನು ಮಾಡಿದ್ದಾರೆ? ನಮ್ಮನ್ನು ಬಾಯಿ ತೆರೆಯುವಂತೆ ಮಾಡಬೇಡಿ, ಟಿವಿ ಚರ್ಚೆ ಏನು? ಕೇವಲ ಅಜೆಂಡಾವನ್ನು ರೂಪಿಸಲು ನಡೆಸಲಾಗುತ್ತದೆ ಎಂದು ಕಿಡಿಕಾರಿದೆ.

ಇದನ್ನೂ ಓದಿ; ಫಡ್ನವೀಸ್‌ಗೆ ದಕ್ಕದ ಸಿಎಂ ಪಟ್ಟ: ಬಿಜೆಪಿ ಹೈಕಮಾಂಡ್ ಎದುರು ಮಂಡಿಯೂರಿದ್ದೇಕೆ?

ಪ್ರಕರಣದಲ್ಲಿ ಪೊಲೀಸರ ಕ್ರಮವನ್ನು ಪ್ರಶ್ನಿಸಿದ ನ್ಯಾಯಾಲಯ, “ನೀವು ಇತರರ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಿದಾಗ, ಅವರನ್ನು ತಕ್ಷಣವೇ ಬಂಧಿಸಲಾಗುತ್ತದೆ ಆದರೆ ಅದು ನಿಮ್ಮ ವಿರುದ್ಧವೇ ಪ್ರಕರಣ ದಾಖಲಾದರೆ ಯಾರೂ ನಿಮ್ಮನ್ನು ಮುಟ್ಟಲು ಧೈರ್ಯ ಮಾಡಿಲ್ಲ ಅಲ್ಲವೇ” ಎಂದಿದೆ.

ಎಲ್ಲಾ ಎಫ್‌ಐಆರ್‌ಗಳನ್ನು ಒಂದೇ ಎಂದು ಪರಿಗಣಸಬೇಕೆಂಬ ನೂಪರ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...