Homeಮುಖಪುಟಹಿಡಿತವಿಲ್ಲದ ನಾಲಿಗೆಯಿಂದ ರಾಷ್ಟ್ರಕ್ಕೆ ಬೆಂಕಿ ಹಚ್ಚಿದೆ: ನೂಪುರ್ ಶರ್ಮಾ ಇಡೀ ದೇಶದ ಎದುರು ಕ್ಷಮೆ ಕೇಳಬೇಕು-...

ಹಿಡಿತವಿಲ್ಲದ ನಾಲಿಗೆಯಿಂದ ರಾಷ್ಟ್ರಕ್ಕೆ ಬೆಂಕಿ ಹಚ್ಚಿದೆ: ನೂಪುರ್ ಶರ್ಮಾ ಇಡೀ ದೇಶದ ಎದುರು ಕ್ಷಮೆ ಕೇಳಬೇಕು- ಸುಪ್ರೀಂ

ಟಿವಿ ಚಾನೆಲ್‌ ಡಿಬೇಟ್‌ನಲ್ಲಿನ ಅವರ ಹೇಳಿಕೆಗಳು ಅವರ ಹಠಮಾರಿ ಮತ್ತು ಸೊಕ್ಕಿನ ಸ್ವಭಾವವನ್ನು ತೋರಿಸುತ್ತವೆ ಎಂದು ನ್ಯಾಯಾಲಯ ಹೇಳಿದೆ.

- Advertisement -
- Advertisement -

ಪ್ರವಾದಿ ಮೊಹಮ್ಮದ್‌ರವರನ್ನು ನಿಂದಿಸಿದ್ದ ಬಿಜೆಪಿಯ ಉಚ್ಛಾಟಿತ ನಾಯಕಿ ನೂಪುರ್ ಶರ್ಮಾ ಇಡೀ ರಾಷ್ಟ್ರದ ಎದುರು ಕ್ಷಮೆ ಕೇಳಬೇಕೆಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.

ತನ್ನ ಮೇಲೆ ದೇಶಾದ್ಯಂತ ದಾಖಲಾಗಿರುವ ಪ್ರಕರಣಗಳನ್ನು ಒಂದೇ ಎಫ್‌ಐಆರ್‌ಗೆ ವರ್ಗಾಹಿಸುವಂತೆ ಆರೋಪಿ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ “ದೇಶದಲ್ಲಿ ಉಂಟಾದ ಉದ್ವಿಗ್ನ ವಾತಾವರಣಕ್ಕೆ ನೂಪುರ್ ಶರ್ಮಾ ಒಬ್ಬರೆ ಕಾರಣವಾಗಿದ್ದಾರೆ” ಎಂದು ಅಭಿಪ್ರಾಯಪಟ್ಟಿದೆ.

“ಅವರು ಹಾಗೆ ಮಾತನಾಡಲು ಹೇಗೆ ಪ್ರಚೋದಿಸಲಾಯಿತು ಎಂಬ ಚರ್ಚೆ ನಡೆಯುತ್ತಿದೆ. ಆದರೆ ಅವರು ಇದನ್ನೆಲ್ಲ ಹೇಳಿದ ರೀತಿ ಮತ್ತು ನಂತರ ತಾನು ವಕೀಲೆ ಎಂದು ಹೇಳುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಅವರು ಇಡೀ ದೇಶದ ಕ್ಷಮೆಯಾಚಿಸಬೇಕು” ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಹೇಳಿದ್ದಾರೆ.

ಅರ್ಜಿದಾರರು ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ ಎಂದು ವಕೀಲರು ವಾದಿಸಿದಾಗ, “ಅವರಿಗೆ ಬೆದರಿಕೆ ಇದೆಯೊ ಅಥವಾ ಅವರಿಂದ ದೇಶದ ಭದ್ರತೆಗೆ ಬೆದರಿಕೆಯಿದೆಯೊ? ಅವರು ದೇಶದಾದ್ಯಂತ ಶಾಂತಿ ಸುರಕ್ಷತೆಗೆ ಧಕ್ಕೆ ತಂದಿದ್ದಾರೆ. ಇಂದು ದೇಶದಲ್ಲಿ ಏನಾಗುತ್ತಿದೆಯೊ ಅದಕ್ಕೆ ಈ ಮಹಿಳೆ ಏಕಾಂಗಿಯಾಗಿ ಜವಾಬ್ದಾರಳು” ಎಂದು ಸೂರ್ಯ ಕಾಂತ್ ಹೇಳಿದ್ದಾರೆ.

ಟಿವಿ ಚಾನೆಲ್‌ ಡಿಬೇಟ್‌ನಲ್ಲಿನ ಅವರ ಹೇಳಿಕೆಗಳು ಅವರ ಹಠಮಾರಿ ಮತ್ತು ಸೊಕ್ಕಿನ ಸ್ವಭಾವವನ್ನು ತೋರಿಸುತ್ತವೆ ಎಂದು ನ್ಯಾಯಾಲಯ ಹೇಳಿದೆ. ಅವರು ಒಂದು ಪಕ್ಷದ ವಕ್ತಾರರಾದರೆ ಮಾತ್ರಕ್ಕೆ ತನಗೆ ಅಧಿಕಾರವಿದೆ ಎಂದು ಭಾವಿಸಿ ದೇಶದ ಕಾನೂನನ್ನು ಗೌರವಿಸದೆ ಯಾವುದೇ ಹೇಳಿಕೆ ನೀಡಬಹುದೇ? ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಪ್ರಶ್ನಿಸಿದ್ದಾರೆ.

ಚಾನೆಲ್ ನಿರೂಪಕರ ಪ್ರಶ್ನೆಗಳಿಗೆ ಅವರು ಹಾಗೆ ಉತ್ತರಿಸಿದ್ದಾರೆ ಎಂಬ ವಕೀಲರ ವಾದಕ್ಕೆ ಉತ್ತರಿಸಿದ ನ್ಯಾಯಮೂರ್ತಿಗಳು ಹಾಗಾದರೆ ಚಾನೆಲ್ ನಿರೂಪಕರ ಮೇಲೂ ಪ್ರಕರಣ ದಾಖಲಿಸಿ ಎಂದಿದ್ದಾರೆ.

ದೆಹಲಿ ಪೊಲೀಸರು ಮತ್ತು ಚರ್ಚೆ ನಡೆಸುತ್ತಿದ್ದ ಟಿವಿ ಚಾನೆಲ್ ಅನ್ನು ತರಾಟೆಗೆ ತೆಗೆದುಕೊಂಡ ಪೀಠವು “ದೆಹಲಿ ಪೊಲೀಸರು ಏನು ಮಾಡಿದ್ದಾರೆ? ನಮ್ಮನ್ನು ಬಾಯಿ ತೆರೆಯುವಂತೆ ಮಾಡಬೇಡಿ, ಟಿವಿ ಚರ್ಚೆ ಏನು? ಕೇವಲ ಅಜೆಂಡಾವನ್ನು ರೂಪಿಸಲು ನಡೆಸಲಾಗುತ್ತದೆ ಎಂದು ಕಿಡಿಕಾರಿದೆ.

ಇದನ್ನೂ ಓದಿ; ಫಡ್ನವೀಸ್‌ಗೆ ದಕ್ಕದ ಸಿಎಂ ಪಟ್ಟ: ಬಿಜೆಪಿ ಹೈಕಮಾಂಡ್ ಎದುರು ಮಂಡಿಯೂರಿದ್ದೇಕೆ?

ಪ್ರಕರಣದಲ್ಲಿ ಪೊಲೀಸರ ಕ್ರಮವನ್ನು ಪ್ರಶ್ನಿಸಿದ ನ್ಯಾಯಾಲಯ, “ನೀವು ಇತರರ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಿದಾಗ, ಅವರನ್ನು ತಕ್ಷಣವೇ ಬಂಧಿಸಲಾಗುತ್ತದೆ ಆದರೆ ಅದು ನಿಮ್ಮ ವಿರುದ್ಧವೇ ಪ್ರಕರಣ ದಾಖಲಾದರೆ ಯಾರೂ ನಿಮ್ಮನ್ನು ಮುಟ್ಟಲು ಧೈರ್ಯ ಮಾಡಿಲ್ಲ ಅಲ್ಲವೇ” ಎಂದಿದೆ.

ಎಲ್ಲಾ ಎಫ್‌ಐಆರ್‌ಗಳನ್ನು ಒಂದೇ ಎಂದು ಪರಿಗಣಸಬೇಕೆಂಬ ನೂಪರ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...