Homeಮುಖಪುಟಯಮನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾದ ಭಾರತೀಯ ನರ್ಸ್‌ನ್ನು ರಕ್ಷಿಸಲು ತಾಯಿಯ ಪರದಾಟ

ಯಮನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾದ ಭಾರತೀಯ ನರ್ಸ್‌ನ್ನು ರಕ್ಷಿಸಲು ತಾಯಿಯ ಪರದಾಟ

- Advertisement -
- Advertisement -

ಯೆಮನ್ ಪ್ರಜೆಯ ಹತ್ಯೆಗೆ ಸಂಬಂಧಿಸಿದಂತೆ ಮರಣದಂಡನೆಗೆ ಗುರಿಯಾಗಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಸಾವಿನ ದವಡೆಯಿಂದ ಪಾರು ಮಾಡಲು ತಾಯಿ ಹರಸಾಹಸ ಪಡುತ್ತಿದ್ದು, ಯಮನ್‌ಗೆ ತೆರಳಲು ಅನುಮತಿ ನೀಡುವ ವಿಷಯದಲ್ಲಿ ವಾರದೊಳಗೆ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ದೆಹಲಿ ಹೈಕೋರ್ಟ್ ಸೂಚಿಸಿದೆ.

ಯೆಮೆನ್ ದೇಶದಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಪ್ರಿಯಾ, ಯೆಮೆನ್ ಪ್ರಜೆಯ ಹತ್ಯೆಗೆ ಸಂಬಂಧಿಸಿದಂತೆ ಮರಣದಂಡನೆಗೆ ಗುರಿಯಾಗಿದ್ದಾರೆ. ನ.13ರಂದು ಯೆಮೆನ್ ಸುಪ್ರೀಂಕೋರ್ಟ್, ನರ್ಸ್‌ ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ಮೇಲ್ಮನವಿಯನ್ನು ವಜಾಗೊಳಿಸಿತ್ತು.

2017ರ ಜುಲೈನಲ್ಲಿ ತಲಾಲ್ ಅಬ್ದೋ ಮಹದಿಯನ್ನು ಹತ್ಯೆಗೈದಿದ್ದಕ್ಕಾಗಿ ನಿಮಿಷಾ ಪ್ರಿಯಾ ಶಿಕ್ಷೆಗೆ ಗುರಿಯಾಗಿದ್ದಾರೆ. ಆಕೆಯ ಪಾಸ್‌ಪೋರ್ಟ್‌ನ್ನು ಆತನ ಬಳಿಯಿಂದ ಪಡೆಯಲು ಆಕೆ ನಿದ್ರೆ ಬರುವ ಚುಚ್ಚುಮದ್ದನ್ನು ನೀಡಿದ್ದರು. ಪ್ರಿಯಾ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಆತನಿಂದ ಪಾಸ್‌ಪೋರ್ಟ್ ತೆಗೆದುಕೊಳ್ಳುವ ತಂತ್ರವನ್ನು ಮಾಡಿದ್ದರು. ಆದರೆ ತಲಾಲ್ ಅಬ್ದೋ ಮಹದಿ ಚುಚ್ಚುಮದ್ದು ನೀಡಿದ ಬಳಿಕ ಮೃತಪಟ್ಟಿದ್ದರು. ಪ್ರಕರಣದಲ್ಲಿ ದೋಷಿ ಎಂದು ಯಮನ್‌ ಸರಕಾರ ನಿಮಿಷಾ ಪ್ರಿಯಾಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು.

ಇದರ ಬೆನ್ನಲ್ಲೇ ಪ್ರಿಯಾ ಅವರ ತಾಯಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಯೆಮೆನ್‌ಗೆ ಪ್ರಯಾಣಿಸಲು ಅನುಮತಿ ಕೋರಿದ್ದಾರೆ. ಮಹಿಳೆ ತನ್ನ ಮಗಳನ್ನು ಉಳಿಸಲು ಬಲಿಪಶುವಿನ ಕುಟುಂಬಕ್ಕೆ ಪಾವತಿಸಬೇಕಾಗಿರುವ ಪರಿಹಾರದ ಕುರಿತು ಮಾತುಕತೆ ನಡೆಸಲು ಬಯಸುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ

ವಕೀಲ ಸುಭಾಷ್ ಕೆಆರ್ ಮಹಿಳೆಯನ್ನು ಕೋರ್ಟ್‌ನಲ್ಲಿ ಪ್ರತಿನಿಧಿಸಿದ್ದು, ನಿಮಿಷಾ ಅವರನ್ನು ಗಲ್ಲು ಶಿಕ್ಷೆಯಿಂದ ರಕ್ಷಿಸುವ ಏಕೈಕ ಮಾರ್ಗವೆಂದರೆ ಹಣವನ್ನು ಪಾವತಿಸುವ ಮೂಲಕ ಮೃತನ ಕುಟುಂಬದೊಂದಿಗೆ ಮಾತುಕತೆ ನಡೆಸುವುದಾಗಿದೆ. ಅದಕ್ಕಾಗಿ ಅವರು ಯೆಮೆನ್‌ಗೆ ಪ್ರಯಾಣಿಸಲು ಬಯಸಿದ್ದರು. ಆದರೆ ಪ್ರಯಾಣ ನಿಷೇಧದಿಂದಾಗಿ ಅವರು ಅಲ್ಲಿಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಇತ್ತೀಚೆಗೆ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಪ್ರಯಾಣ ನಿಷೇಧವನ್ನು ಸಡಿಲಿಸಬಹುದು ಮತ್ತು ನಿರ್ದಿಷ್ಟ ಕಾರಣಗಳು ಮತ್ತು ಅವಧಿಗಳಿಗಾಗಿ ಭಾರತೀಯ ಪ್ರಜೆಗಳಿಗೆ ಯೆಮೆನ್‌ಗೆ ಪ್ರಯಾಣಿಸಲು ಅನುಮತಿಸಬಹುದು ಎಂದು ಕೇಂದ್ರದ ಪರ ವಕೀಲರು ಕೋರ್ಟ್‌ಗೆ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಸುಬ್ರಮಣ್ಯ ಪ್ರಸಾದ್,  ಪ್ರಸ್ತುತ ಅರ್ಜಿಯನ್ನು ಪ್ರಾತಿನಿಧ್ಯವೆಂದು ಪರಿಗಣಿಸಲಿ. ಇಂದಿನಿಂದ ಒಂದು ವಾರದೊಳಗೆ ನಿರ್ಧಾರವನ್ನು ತಿಳಿಸುವಂತೆ ಸೂಚಿಸಿದ್ದಾರೆ.

ಈ ಮೊದಲು ಮೃತ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಹಣ ನೀಡುವ ವಿಷಯದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂಬ ಕೋರಿಕೆಯನ್ನು ಹೈಕೋರ್ಟ್ ನಿರಾಕರಿಸಿತ್ತು. ಆದರೆ ಮರಣದಂಡನೆಯಿಂದ ಪಾರು ಮಾಡಲು ಇರಬಹುದಾದ ಕಾನೂನಾತ್ಮಕ ಪರಿಹಾರವನ್ನು ಮುಂದುವರಿಸುವಂತೆ ಸೂಚಿಸಿತ್ತು.

ಇದನ್ನು ಓದಿ: ಬೆಂಗಳೂರು: ರಸ್ತೆ ಬದಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ತಾಯಿ-ಮಗು ದಾರುಣ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...